ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ವಾರ್ತಾ ಮತ್ತು ಸಂಪರ್ಕ ಇಲಾಖೆಯ ನಿರ್ದೇಶಕ ಎನ್. ಭೃಂಗೀಶ್ (ನಿವೃತ್ತ) ಅವರನ್ನು ನೇಮಕ ಮಾಡಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾಗಿದ್ದಾಗ ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಭೃಂಗೀಶ್ ಅವರು ಕೆಲಸ ಮಾಡಿದ್ದರು. ಅದೇ ಹಿನ್ನೆಲೆಯಲ್ಲಿ ಅವರನ್ನು ಇದೀಗ ನೂತನ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದ ಭೃಂಗೀಶ್, ತಮ್ಮ 30 ವರ್ಷಗಳ ಸೇವೆಯಲ್ಲಿ ಸುಧೀರ್ಘ 25 ವರ್ಷಗಳಷ್ಟು ಕಾಲ ಮುಖ್ಯಮಂತ್ರಿಗಳ ಸಚಿವಾಯಲದಲ್ಲಿಯೇ ಸೇವೆ ಸಲ್ಲಿಸಿದ್ದಾರೆ.
Also Read: ಊಹಾಪೋಹಗಳಿಗೆ ಕಾರಣವಾದ ಸಿಎಂ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ರಾಜೀನಾಮೆ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಮಹಾದೇವ್ ಪ್ರಕಾಶ್ ರಾಜಿನಾಮೆಯ ಹಿನ್ನೆಲೆಯಲ್ಲಿ ಭೃಂಗೀಶ್ ಅವರನ್ನು ಆಯ್ಕೆ ಮಾಡಲಾಗಿದೆ.