Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸಿಎಲ್‌ಪಿ ಬೇಡ, ಕೆಪಿಸಿಸಿ ಇರಲಿ ಎನ್ನುತ್ತಿದ್ದಾರೆ ಕಾಂಗ್ರೆಸ್ ನಾಯಕರು

ಸಿಎಲ್‌ಪಿ ಬೇಡ, ಕೆಪಿಸಿಸಿ ಇರಲಿ ಎನ್ನುತ್ತಿದ್ದಾರೆ ಕಾಂಗ್ರೆಸ್ ನಾಯಕರು.
ಸಿಎಲ್‌ಪಿ ಬೇಡ

December 12, 2019
Share on FacebookShare on Twitter

ಈ ಲೇಖನದ ಆಡಿಯೋ ಆವೃತ್ತಿ ಇಲ್ಲಿದೆ. ಕ್ಲಿಕ್‌ ಮಾಡಿ ಕೇಳಿ

ಹೆಚ್ಚು ಓದಿದ ಸ್ಟೋರಿಗಳು

10 ತಿಂಗಳ ನಂತ್ರ ನವಜೋತ್‌ ಸಿಂಗ್‌ ಸಿಧು ಜೈಲಿನಿಂದ ಬಿಡುಗಡೆ..!

ಚುನಾವಣೆ ಘೋಷಣೆ : ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..!

ಶ್ರೀಸಾಮಾನ್ಯನ ಸಮಸ್ಯೆಗಳೂ ಮಾರುಕಟ್ಟೆ ಆರ್ಥಿಕತೆಯೂ..ನಿತ್ಯ  ಬದುಕು ದುಸ್ತರವಾಗುತ್ತಿದ್ದರೂ ಸಾರ್ವಜನಿಕ ವಲಯದಲ್ಲಿ ಏಕೆ ಮೌನ ಆವರಿಸಿದೆ ?

ರಾಜ್ಯ ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರ ಅಸಹಾಕಾರ, ಉಪ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಬೇಸತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ನಿರಾಳರಾಗಿದ್ದಾರೆ. ಆ ರಾಜೀನಾಮೆ ಅಂಗೀಕರಿಸಬೇಕು ಎಂದು ಕೆಲವು ಹಿರಿಯ ನಾಯಕರು ಹೈಕಮಾಂಡ್ ಮೇಲೆ ಒತ್ತಡ ಹೇರಲಾರಂಭಿಸಿದರೆ, ಇನ್ನೊಂದೆಡೆ ಹೇಗಾದರೂ ಮಾಡಿ ಸಿದ್ದರಾಮಯ್ಯ ಅವರನ್ನು ಉಳಿಸಿಕೊಳ್ಳಬೇಕು ಎಂದು ಹಿಂದೆ ಆ ಹಿರಿಯ ನಾಯಕರ ಜತೆಗೆ ನಿಂತಿದ್ದ ಪಕ್ಷದ ಹಲವು ಮುಖಂಡರು ಪ್ರಯತ್ನಿಸುತ್ತಿದ್ದಾರೆ.

ಇದು ರಾಜ್ಯ ಕಾಂಗ್ರೆಸ್ ನಲ್ಲಿ ಗೊಂದಲವನ್ನು ಇನ್ನಷ್ಟು ಹೆಚ್ಚುವಂತೆ ಮಾಡಿದೆ. ಇದುವರೆಗೆ ಸಿದ್ದರಾಮಯ್ಯ ವಿರುದ್ಧ ಲಾಬಿ ನಡೆಸಲು ತಮ್ಮೊಂದಿಗೇ ನಿಂತಿದ್ದ ಕೆಲವು ಮುಖಂಡರು ಈಗ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡುತ್ತಿರುವುದು ಹಿರಿಯ ಮುಖಂಡರಿಗೆ ನುಂಗಲಾರದ ಬಿಸಿ ತುಪ್ಪವಾಗುತ್ತಿದೆ. ಹೀಗಾಗಿ ಸಿದ್ದರಾಮಯ್ಯ ಬೇಕಿದ್ದರೆ ಮುಂದುವರಿಯಲಿ. ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ದಿನೇಶ್ ಗುಂಡೂರಾವ್ ಬದಲು ಬೇರೆಯವರಿಗೆ ನೀಡಬೇಕು ಎಂಬ ವಾದವನ್ನು ಮುಂದಿಡುತ್ತಿದ್ದಾರೆ.

ಇಷ್ಟಕ್ಕೆಲ್ಲಾ ಕಾರಣ ಸಿದ್ದರಾಮಯ್ಯ ಅವರಿಗೆ ಇರುವ ಶಾಸಕರ ಬೆಂಬಲ. ಉಪ ಚುನಾವಣೆಯ ಹೀನಾಯ ಸೋಲಿನ ಹೊಣೆ ಹೊತ್ತು ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರು ಒಂದೇ ದಿನ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಆದರೆ, ಪಕ್ಷದಲ್ಲಿ ರಾಜೀನಾಮೆ ಹಿಂಪಡೆಯುವಂತೆ ಸಿದ್ದರಾಮಯ್ಯ ಮೇಲೆ ಒತ್ತಡ ಬಿತ್ತಾದರೂ ದಿನೇಶ್ ಗುಂಡೂರಾವ್ ಅವರ ವಿಚಾರದ ಬಗ್ಗೆ ಅಲ್ಲೊಂದು, ಇಲ್ಲೊಂದು ಮಾತು ಬಿಟ್ಟರೆ ಬಹುತೇಕರು ತಲೆಕೆಡಿಸಿಕೊಂಡಿರಲಿಲ್ಲ. ಏಕೆಂದರೆ, ಪ್ರಸ್ತುತ ಕಾಂಗ್ರೆಸ್ ಅಧಿಕೃತ ವಿರೋಧ ಪಕ್ಷವಾಗಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಿಂತ ಮಹತ್ವದ ಸ್ಥಾನ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನವಾಗಿದೆ.

ಸಂಕಷ್ಟದ ಸಮಯದಲ್ಲಿ ಜವಾಬ್ದಾರಿ ವಹಿಸಿಕೊಳ್ಳಲು ಹಿಂದೇಟು

ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪ ಚುನಾವಣೆಗಳ ಹೀನಾಯ ಸೋಲಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ. ಮೈತ್ರಿ ಸರ್ಕಾರ ಉರುಳಿದ್ದರಿಂದ ಆಡಳಿತಾರೂಢ ಬಿಜೆಪಿಯನ್ನು ಎದುರಿಸುವುದರ ಜತೆಗೆ ಹಿಂದೆ ಮಿತ್ರಪಕ್ಷವಾಗಿದ್ದ ಜೆಡಿಎಸ್ ಪಕ್ಷವನ್ನೂ ಎದುರಿಸಬೇಕಾಗುತ್ತದೆ. ವಿಧಾನಸಭೆಯ ಒಳಗೆ ಮತ್ತು ಹೊರಗೆ ಎರಡೂ ಕಡೆ ಈ ಕೆಲಸ ಮಾಡಬೇಕಾಗುತ್ತದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಈ ಕೆಲಸ ಮಾಡಿ ಯಶಸ್ಸು ಗಳಿಸುವುದು ಕಷ್ಟಸಾಧ್ಯ.

ಪ್ರಸ್ತುತ ಶಾಸಕಾಂಗ ಪಕ್ಷದ ನಾಯಕರೇ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನೂ ಹೊಂದಿದ್ದಾರೆ. ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಾದರೆ ಸಿದ್ದರಾಮಯ್ಯ ಅವರು ಈ ಸ್ಥಾನದಲ್ಲಿ ಮುಂದುವರಿಯುವ ಅವಶ್ಯಕತೆ ಇದೆ ಎಂಬುದು ಇದುವರೆಗೆ ಅವರೊಂದಿಗೆ ವಿಧಾನಸಭೆಯಲ್ಲಿ ಕುಳಿತಿದ್ದ ಶಾಸಕರಿಗೆ ಗೊತ್ತಿದೆ. ಈ ಕಾರಣಕ್ಕಾಗಿಯೇ ಅವರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉರುಳಿಸಲು ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಕಾಂಗ್ರೆಸ್ ಶಾಸಕರೇ ಕಾರಣ. ಹೀಗಾಗಿ ಸಿದ್ದರಾಮಯ್ಯ ಅವರಿಗೆ ನೀಡಿರುವ ಸ್ಥಾನಮಾನ ಹಿಂಪಡೆಯಬೇಕು ಎಂಬುದು ಅವರ ವಿರೋಧಿ ಬಣದ ವಾದ. ಆದರೆ, ರಾಜ್ಯ ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರು ಮತ್ತು ಸಿದ್ದರಾಮಯ್ಯ ಎಂಬ ಪ್ರತ್ಯೇಕ ಬಣ ಇದೆಯಾದರೂ ಶಾಸನಸಭೆಯಲ್ಲಿ ಸಿದ್ದರಾಮಯ್ಯ ಅವರ ಗುಂಪಿನ ಬಲ ಹೆಚ್ಚಾಗಿದೆ. ಪ್ರಸ್ತುತ ವಿಧಾನಸಭೆಯ 68 ಕಾಂಗ್ರೆಸ್ ಶಾಸಕರ ಪೈಕಿ 40ಕ್ಕೂ ಹೆಚ್ಚು ಶಾಸಕರು ಇತರರಿಗಿಂತ ಸಿದ್ದರಾಮಯ್ಯ ಅವರೇ ಶಾಸಕಾಂಗ ಪಕ್ಷದ ನಾಯಕ ಮತ್ತು ಪ್ರತಿಪಕ್ಷ ನಾಯಕರಾಗಿ ಮುಂದುವರಿಯಬೇಕು ಎಂದು ಬಯಸುತ್ತಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಬಳಿಕ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಪ್ರಯತ್ನಿಸುತ್ತಿರುವವರಿಗೆ ಈ ವಿಚಾರವೇ ಸಮಸ್ಯೆ ತಂದೊಡ್ಡಿದೆ.

ಇದಷ್ಟೇ ಅಲ್ಲ, ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿದರೆ ಕೇಳಿಬರುವ ಹೆಸರು ಡಿ.ಕೆ.ಶಿವಕುಮಾರ್ ಮತ್ತು ಡಾ.ಜಿ.ಪರಮೇಶ್ವರ್. ಈ ಪೈಕಿ ಶಿವಕುಮಾರ್ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಲ್ಲಿ ಪ್ರಕರಣ ಎದುರಿಸುತ್ತಿದ್ದರೆ, ಪರಮೇಶ್ವರ್ ಅವರ ವಿರುದ್ಧ ವೈದ್ಯಕೀಯ ಕಾಲೇಜು ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಇವರಿಬ್ಬರು ಪ್ರಕರಣ ಎದುರಿಸುತ್ತಿರುವಾಗ ಸರ್ಕಾರದ ವಿರುದ್ಧ ಗಟ್ಟಿ ದನಿಯಲ್ಲಿ ಆರೋಪಗಳನ್ನು ಮಾಡಲು ತೊಂದರೆಯಾಗಬಹುದು ಎಂಬ ಆತಂಕ ಕಾಂಗ್ರೆಸ್ ಪಕ್ಷವನ್ನು ಕಾಡುತ್ತಿದೆ.

ಉಳಿದಂತೆ ಎಚ್.ಕೆ.ಪಾಟೀಲ್, ಆರ್.ವಿ.ದೇಶಪಾಂಡೆ ಅವರ ಹೆಸರು ಕೇಳಿಬರುತ್ತಿದೆಯಾದರೂ ಅವರ ಬದಲು ನನಗೆ ಕೊಡಿ ಎಂದು ಎಂ.ಬಿ.ಪಾಟೀಲ್ ಲಾಬಿ ನಡೆಸಬಹುದು. ಈ ಪೈಕಿ ಯಾರೇ ಶಾಸಕಾಂಗ ಪಕ್ಷದ ನಾಯಕನಾದರೂ ಶಾಸಕರನ್ನು ಒಟ್ಟಾಗಿ ಇಟ್ಟುಕೊಳ್ಳುವುದು ಕಷ್ಟವಾಗಬಹುದು. ಜತೆಗೆ ಇವರೆಲ್ಲರೂ ಸಂಕಷ್ಟ ಬಂದಾಗ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬ ಅನುಮಾನವೂ ಪಕ್ಷದ ಇತರೆ ನಾಯಕರು ಮತ್ತು ಶಾಸಕರನ್ನು ಕಾಡುತ್ತಿದೆ. ಹೀಗಾಗಿ ಸಂಕಷ್ಟದ ಪರಿಸ್ಥಿತಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸ್ಥಾನವನ್ನು ಮನಪೂರ್ವಕವಾಗಿ ಒಪ್ಪಿಕೊಳ್ಳಲು ಯಾರೂ ಮುಂದೆ ಬರುತ್ತಿಲ್ಲ ಎಂಬ ಪರಿಸ್ಥಿತಿ ಕಾಣಿಸುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಮಸ್ಯೆ ಇಲ್ಲ

ಆದರೆ, ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾದರೆ ಅದನ್ನು ಪಡೆಯಲು ಯಾವುದೇ ಸಮಸ್ಯೆ ಇಲ್ಲ. ಏಕೆಂದರೆ, ಸದ್ಯ ಯಾವುದೇ ಚುನಾವಣೆ ಇಲ್ಲ. ಇದರಿಂದಾಗಿ ಶಾಸಕಾಂಗ ಪಕ್ಷದ ನಾಯಕರಾಗಲು ಯಾರೆಲ್ಲಾ ಆಸೆ ಪಟ್ಟುಕೊಂಡಿದ್ದರೋ ಅವರೆಲ್ಲರೂ ಕೆಪಿಸಿಸಿ ಅಧ್ಯಕ್ಷ ಸ್ಥಾನವೇ ಸರಿ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಈ ಕಾರಣಕ್ಕಾಗಿಯೇ ಅವರು ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿ ಸಿದ್ದರಾಮಯ್ಯ ಅವರೇ ಮುಂದುವರಿಯಲಿ ಎಂದು ಹೇಳುತ್ತಿದ್ದಾರೆ.

ಮುಂದಿನ ಸಾರ್ವತ್ರಿಕ ಚುನಾವಣೆಗೆ ಸಾಕಷ್ಟು ಸಮಯಾವಕಾಶವಿದೆ. ಅಷ್ಟರಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಭದ್ರವಾಗಿ ಚುನಾವಣೆ ಬಂದಾಗ ಪಕ್ಷವನ್ನು ಮುನ್ನಡೆಸಿಕೊಂಡು ಹೋಗುವುದು ಕಷ್ಟವೇನೂ ಆಗುವುದಿಲ್ಲ. ಏಕೆಂದರೆ, ಶಾಸಕರ ಉಸ್ತುವಾರಿಯನ್ನು ಶಾಸಕಾಂಗ ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ. ಶಾಸಕಾಂಗ ಪಕ್ಷದ ನಾಯಕರೊಂದಿಗೆ ಸ್ವಲ್ಪ ಮಟ್ಟಿನ ಹೊಂದಾಣಿಕೆ ಮಾಡಿಕೊಂಡು ಪಕ್ಷದ ವಿವಿಧ ಘಟಕಗಳನ್ನು ಸುಧಾರಿಸಿಕೊಂಡು ಹೋಗುವುದಷ್ಟೇ ಕೆಪಿಸಿಸಿ ಅಧ್ಯಕ್ಷರ ಕೆಲಸವಾಗಿರುತ್ತದೆ. ಇದು ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಲು ಕಾರಣ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಚುನಾವಣಾ ಹೊತ್ತಲ್ಲಿ ಭದ್ರಾವತಿ ಕಾರ್ಖಾನೆ ಬಿಸಿತುಪ್ಪ: ಅಮಿತ್ ಶಾ ಆಸಕ್ತಿ ಮೇರೆಗೆ ಕಾರ್ಖಾನೆ ಮುಂದುವರಿಕೆ; ಸಂಸದ ಬಿ.ವೈ.ರಾಘವೇಂದ್ರ
Top Story

ಚುನಾವಣಾ ಹೊತ್ತಲ್ಲಿ ಭದ್ರಾವತಿ ಕಾರ್ಖಾನೆ ಬಿಸಿತುಪ್ಪ: ಅಮಿತ್ ಶಾ ಆಸಕ್ತಿ ಮೇರೆಗೆ ಕಾರ್ಖಾನೆ ಮುಂದುವರಿಕೆ; ಸಂಸದ ಬಿ.ವೈ.ರಾಘವೇಂದ್ರ

by ಪ್ರತಿಧ್ವನಿ
March 30, 2023
ನಾನು ಯಾವ ಮಗನಿಗೂ ಹೆದರೋದಿಲ್ಲ, ತಾಕತ್ತಿದ್ರೆ ಚುನಾವಣೆ ಅಖಾಡಕ್ಕೆ ಬನ್ನಿ ; ಜೆಡಿಎಸ್‌, ಕಾಂಗ್ರೆಸ್‌ ವಿರುದ್ಧ ತೊಡೆ ತಟ್ಟಿದ ನಾರಾಯಣಗೌಡ..!
Top Story

ನಾನು ಯಾವ ಮಗನಿಗೂ ಹೆದರೋದಿಲ್ಲ, ತಾಕತ್ತಿದ್ರೆ ಚುನಾವಣೆ ಅಖಾಡಕ್ಕೆ ಬನ್ನಿ ; ಜೆಡಿಎಸ್‌, ಕಾಂಗ್ರೆಸ್‌ ವಿರುದ್ಧ ತೊಡೆ ತಟ್ಟಿದ ನಾರಾಯಣಗೌಡ..!

by ಪ್ರತಿಧ್ವನಿ
April 1, 2023
IPL ಉದ್ಘಾಟನಾ ಸಮಾರಂಭದಲ್ಲಿ ಸ್ಟಾರ್‌ ನಟಿಯರ ಭರ್ಜರಿ ಡ್ಯಾನ್ಸ್..!‌
ಸಿನಿಮಾ

IPL ಉದ್ಘಾಟನಾ ಸಮಾರಂಭದಲ್ಲಿ ಸ್ಟಾರ್‌ ನಟಿಯರ ಭರ್ಜರಿ ಡ್ಯಾನ್ಸ್..!‌

by ಪ್ರತಿಧ್ವನಿ
April 1, 2023
ನಾಳೆಯಿಂದ ʻಗುರುದೇವ್‌ ಹೊಯ್ಸಳʼನ ಆರ್ಭಟ ಶುರು
ಸಿನಿಮಾ

ನಾಳೆಯಿಂದ ʻಗುರುದೇವ್‌ ಹೊಯ್ಸಳʼನ ಆರ್ಭಟ ಶುರು

by ಪ್ರತಿಧ್ವನಿ
March 29, 2023
ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು : ಹೆಚ್.ಡಿ.ಕುಮಾರಸ್ವಾಮಿ
Top Story

ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು : ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
March 29, 2023
Next Post
ಪೌರತ್ವ ಕಾಯಿದೆ ತಿದ್ದುಪಡಿ ಮುಸ್ಲಿಮರ ಹಣಿಯುವ ಅಸ್ತ್ರವೇ?

ಪೌರತ್ವ ಕಾಯಿದೆ ತಿದ್ದುಪಡಿ ಮುಸ್ಲಿಮರ ಹಣಿಯುವ ಅಸ್ತ್ರವೇ?

ಈರುಳ್ಳಿ ಬೆಲೆಯಂತೆ ಎತ್ತರಕ್ಕೆ ಜಿಗಿದ ವಿತ್ತ ಸಚಿವೆ ನಿರ್ಮಲಾ  ಪ್ರಭಾವ!

ಈರುಳ್ಳಿ ಬೆಲೆಯಂತೆ ಎತ್ತರಕ್ಕೆ ಜಿಗಿದ ವಿತ್ತ ಸಚಿವೆ ನಿರ್ಮಲಾ ಪ್ರಭಾವ!

‘ಸಪ್ತ ಸುಂದರಿ‘ಯರ ನಾಡಿನ ಹಿಂಸಾಚಾರಕ್ಕೆ ‘ಸ್ವದೇಶಿ’ ಮದ್ದೇನು?

‘ಸಪ್ತ ಸುಂದರಿ‘ಯರ ನಾಡಿನ ಹಿಂಸಾಚಾರಕ್ಕೆ ‘ಸ್ವದೇಶಿ’ ಮದ್ದೇನು?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist