Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸಿ ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ಕೈ ತಪ್ಪಲು ಕಾರಣವೇನು?

ಸಿ ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ಕೈ ತಪ್ಪಲು ಕಾರಣವೇನು?
ಸಿ ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ಕೈ ತಪ್ಪಲು ಕಾರಣವೇನು?

February 25, 2020
Share on FacebookShare on Twitter

ಆಪರೇಷನ್‌ ಕಮಲದಲ್ಲಿ ಮುಂಚೂಣಿಯಲ್ಲಿದ್ದ ಸಿ.ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ಸಿಗುತ್ತದೆ ಎಂದೇ ನಂಬಲಾಗಿತ್ತು. ಆದರೆ ಮೊದಲ ಬಾರಿಗೆ ಸಚಿವ ಸಂಪುಟ ವಿಸ್ತರಣೆ ಆದಾಗ ಯೋಗೇಶ್ವರ್‌ ಹೆಸರು ಪಟ್ಟಿಯಲ್ಲಿ ಇರಲಿಲ್ಲ. ಆ ಬಳಿಕ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗುತ್ತೆ ಎನ್ನುವ ನಂಬಿಕೆ ಇಟ್ಟುಕೊಂಡಿದ್ದ ಯೋಗೇಶ್ವರ್‌ಗೆ ಆಶ್ಚರ್ಯ ಕಾದಿತ್ತು. ಆ ಬಳಿಕ ಸಿಎಂ ಯಡಿಯೂರಪ್ಪ ಬಳಿ ಜೋರಾಗಿಯೇ ಗುಡುಗಿದ್ದರು ಎನ್ನಲಾಗಿತ್ತು. ವಿಜಯೇಂದ್ರ ಆಪ್ತನಾಗಿದ್ದ ಯೋಗೇಶ್ವರ್‌ಗೆ ಸಚಿವ ಸ್ಥಾನ ಕೈ ತಪ್ಪಲು ಕಾರಣ ಏನು ಎನ್ನುವ ಬಗ್ಗೆಯೂ ಬಹಳ ಚರ್ಚೆ ನಡೆದಿತ್ತು. ಇದೀಗ ಯೋಗೇಶ್ವರ್‌ಗೆ ಸಚಿವ ಸ್ಥಾನ ಸಿಗದೇ ಇರಲು ಕಾರಣ ಏನು ಎನ್ನುವುದು ತಿಳಿದು ಬಂದಿದೆ.

ಹೆಚ್ಚು ಓದಿದ ಸ್ಟೋರಿಗಳು

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ

SIDDARAMAIAH VS DK SHIVAKUMAR | ಇನ್ನೂ ಮುಗಿಯದ ಸಿದ್ದರಾಮಯ್ಯ ಕ್ಷೇತ್ರ ಗೊಂದಲ #PRATIDHVANI

RAHUL GANDHI | ರಾಹುಲ್ ಗಾಂಧಿಗೋಸ್ಕರ ಬೀದಿಗಿಳಿದ ಯುವ ಕಾಂಗ್ರೆಸ್ #PRATIDHVANI

ಕನಕಪುರದ ಹಾರೋಬೆಲೆಯಲ್ಲಿ ಮಾಜಿ ಸಚಿವ ಡಿ.ಕೆ ಶಿವಕುಮಾರ್‌ ಏಸು ಕ್ರಿಸ್ತನ ಮೂರ್ತಿಯ ಪ್ರತಿಮೆ ಮಾಡಲು ಸಹಾಯ ಮಾಡಿದ್ದರು. ಕಳೆದ ಡಿಸೆಂಬರ್‌ 25ರಂದು ಕ್ರಿಸ್ತನ ಮೂರ್ತಿ ಸ್ಥಾಪನೆಗೆ ಭೂಮಿ ಪೂಜೆಯನ್ನೂ ನೆರವೇರಿಸಲಾಗಿತ್ತು. ಆ ಬಳಿಕ ರಾಜಕೀಯ ಜಿದ್ದಾಜಿದ್ದಿಗೆ ಬಿದ್ದ ರಾಜ್ಯ ಸರ್ಕಾರ, ಹಾರೋಬೆಲೆ ಬೆಟ್ಟ ಶಿವನಬೆಟ್ಟ, ಅಲ್ಲಿ ಕ್ರೈಸ್ತರು ಮತಾಂತರ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಲವು ಸಚಿವರು ಆರೋಪಿಸಿದ್ದರು. ಆ ಬಳಿಕ ಜಿಲ್ಲಾಧಿಕಾರಿಯಿಂದ ವರದಿಯನ್ನೂ ಕೇಳಲಾಗಿತ್ತು. ಏಕಾಏಕಿ ತಹಶೀಲ್ದಾರ್‌ ವರ್ಗಾವಣೆ ಮಾಡುವ ಮೂಲಕ ಅಚ್ಚರಿಯ ಘಟನೆಗಳೂ ನಡೆಯಿತು. ರಾಮನಗರ ಜಿಲ್ಲಾಧಿಕಾರಿ ಕಂದಾಯ ಸಚಿವರಿಗೆ ಇಂದು ವರದಿ ಸಲ್ಲಿಸಿದ್ದಾರೆ. ಇದನ್ನೇ ತನ್ನ ರಾಜಕೀಯ ಬೆಳವಣಿಗೆಗೆ ಮೆಟ್ಟಿಲು ಮಾಡಿಕೊಳ್ಳಲು ಮುಂದಾದ ಸಿ.ಪಿ ಯೇಗೇಶ್ವರ್‌ ಸಚಿವ ಸ್ಥಾನ ಕಳೆದುಕೊಂಡರು ಎನ್ನಲಾಗುತ್ತಾ ಇದೆ.

ಸರ್ಕಾರದಿಂದ ಹಾರೋಬೆಲೆಯಲ್ಲಿ ಕ್ರಿಸ್ತ ಮೂರ್ತಿ ಸ್ಥಾಪನೆಯನ್ನು ತಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಅರಿತ ಯೋಗೇಶ್ವರ್‌, ರಾಮನಗರಕ್ಕೆ ಸಂಘ ಪರಿವಾರವನ್ನು ತರುವಲ್ಲಿ ಯಶಸ್ವಿಯಾದರು. ಆರ್‌ಎಸ್‌ಎಸ್‌ ಸಂಘಟನೆ ಮೂಲಕ ಹೋರಾಟ ರೂಪಿಸಿದ ಸಿ.ಪಿ ಯೋಗೇಶ್ವರ್‌, ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಕನಕಪುರಕ್ಕೆ ಕರೆದುಕೊಂಡು ಬಂದು ದೊಡ್ಡ ಹೋರಾಟ ಮಾಡಲು ಯೋಜನೆ ರೂಪಿಸಿ ಭಾಗಶಃ ಯಶಸ್ಸನ್ನೂ ಕಂಡರು. ಆ ನಂತರ ಆರ್‌ಎಸ್‌ಎಸ್‌ ಪಥಸಂಚಲನ ಮಾಡುವ ಮೂಲಕ ಡಿ.ಕೆ ಶಿವಕುಮಾರ್‌ಅವರ ವಿರುದ್ಧ ಸಿ.ಪಿ ಯೋಗೇಶ್ವರ್‌ ತೊಡೆ ತಟ್ಟಿದ್ದರು.

ಡಿ.ಕೆ ಶಿವಕುಮಾರ್‌ ಕ್ರಿಸ್ತ ಮೂರ್ತಿ ಸ್ಥಾಪನೆಗೆ ಭೂಮಿ ಪೂಜೆ ಮಾಡುತ್ತಿದ್ದಂತೆ, ಆರ್‌. ಅಶೋಕ್‌, ಡಿಸಿಎಂ ಅಶ್ವತ್ಥ ನಾರಾಯಣ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅದು ದೊಡ್ಡ ವಿವಾದ ಸ್ವರೂಪ ಪಡೆಯುವ ಮುನ್ಸೂಚನೆ ಅರಿತಿದ್ದ ಸಿಎಂ ಯಡಿಯೂರಪ್ಪ, ಕ್ರಿಸ್ತ ಮೂರ್ತಿ ಸ್ಥಾಪನೆ ಬಗ್ಗೆ ಹೇಳಿಕೆ ಕೊಡುವುದು ಬೇಡ, ಅನಿವಾರ್ಯವಾದರೆ ಆಲೋಚನೆ ಮಾಡಿ ಮಾತನಾಡಿ ಎಂದ ಸಂದೇಶ ಕೊಟ್ಟಿದ್ದರು. ಆದರೂ ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್‌ ಸಂಘ ಪರಿವಾರವನ್ನು ಎಳೆದು ತಂದು ವಿವಾದಕ್ಕೆ ತುಪ್ಪ ಸುರಿದರು. ಈ ನಡೆ ಯಡಿಯೂರಪ್ಪ ಅವರ ಕಣ್ಣು ಕೆಂಪಾಗುವಂತೆ ಮಾಡಿತ್ತು ಎನ್ನಲಾಗಿದೆ. ಡಿ.ಕೆ ಶಿವಕುಮಾರ್‌ ಹಾಗು ಬಿಎಸ್‌ಯಡಿಯೂರಪ್ಪ, ರಾಜಕಾರಣ ಹೊರತುಪಡಿಸಿ ಉತ್ತಮ ಸಂಬಂಧಗಳನ್ನು ಇಟ್ಟುಕೊಂಡಿದ್ದಾರೆ. ಹೀಗಿದ್ದರೂ ಡಿ.ಕೆ ಶಿವಕುಮಾರ್‌ ಮೇಲೆ ಜಿದ್ದಾಜಿದ್ದಿನ ರಾಜಕಾರಣಕ್ಕೆ ಕೈ ಹಾಕಿದ್ದರಿಂದಲೇ ಸಚಿವ ಸ್ಥಾನ ತಪ್ಪಿಹೋಯ್ತು. ಇದೀಗ ಆರ್‌ಎಸ್‌ಎಸ್‌ ನಾಯಕರ ಮೂಲಕವೇ ಸಿ.ಪಿ ಯೋಗೇಶ್ವರ್‌ ಸಚಿವ ಸ್ಥಾನಕ್ಕಾಗಿ ದುಂಬಾಲು ಬಿದ್ದಿದ್ದಾರೆ ಎನ್ನಲಾಗ್ತಿದೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ತಂದೆ ಮಗನ ಜಗಳ ಇದ್ದೇ ಇರುತ್ತದೆ: ಖರ್ಗೆ ಜೊತೆಗಿನ ಜಗಳದ ಬಗ್ಗೆ ಬಾಬುರಾವ್ ಚಿಂಚನಸೂರು ಪ್ರತಿಕ್ರಿಯೆ
ರಾಜಕೀಯ

ತಂದೆ ಮಗನ ಜಗಳ ಇದ್ದೇ ಇರುತ್ತದೆ: ಖರ್ಗೆ ಜೊತೆಗಿನ ಜಗಳದ ಬಗ್ಗೆ ಬಾಬುರಾವ್ ಚಿಂಚನಸೂರು ಪ್ರತಿಕ್ರಿಯೆ

by ಪ್ರತಿಧ್ವನಿ
March 22, 2023
ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ
Top Story

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ

by ಪ್ರತಿಧ್ವನಿ
March 23, 2023
R. Ashoka ಕಾಂಗ್ರೆಸ್ ಪಕ್ಷವನ್ನು ನಿರ್ಮಾ ನಿರ್ಮಾ ಸರ್ಪ್ ಹಾಕಿ ತೊಳೆದು ಹಾಕಬೇಕು..!
ಇದೀಗ

R. Ashoka ಕಾಂಗ್ರೆಸ್ ಪಕ್ಷವನ್ನು ನಿರ್ಮಾ ನಿರ್ಮಾ ಸರ್ಪ್ ಹಾಕಿ ತೊಳೆದು ಹಾಕಬೇಕು..!

by ಪ್ರತಿಧ್ವನಿ
March 20, 2023
BIDAR POLICE | ₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು #pratidhavni
ಇದೀಗ

BIDAR POLICE | ₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು #pratidhavni

by ಪ್ರತಿಧ್ವನಿ
March 20, 2023
JDS Party was growing strong in Bangarpet : ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದೆ :
Top Story

JDS Party was growing strong in Bangarpet : ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದೆ :

by ಪ್ರತಿಧ್ವನಿ
March 17, 2023
Next Post
ಕರೋನಾ ವೈರಾಣುಗಳು ಹಬ್ಬಿದ್ದು ಚೀನಾದ ಟಾಪ್ ಪ್ರಯೋಗಾಲಯದಿಂದಲೇ?

ಕರೋನಾ ವೈರಾಣುಗಳು ಹಬ್ಬಿದ್ದು ಚೀನಾದ ಟಾಪ್ ಪ್ರಯೋಗಾಲಯದಿಂದಲೇ?

ನೆರೆ ಪರಿಹಾರದ ಹಣ ಸರ್ಕಾರಿ ಅಧಿಕಾರಿಗಳ ಜೇಬಿಗೆ 

ನೆರೆ ಪರಿಹಾರದ ಹಣ ಸರ್ಕಾರಿ ಅಧಿಕಾರಿಗಳ ಜೇಬಿಗೆ 

ಕೊನೇ ಕ್ಷಣದಲ್ಲಿ ಮನಸ್ಸು ಬದಲಿಸಿದ BSY

ಕೊನೇ ಕ್ಷಣದಲ್ಲಿ ಮನಸ್ಸು ಬದಲಿಸಿದ BSY, ಟ್ರಂಪ್‌  ಔತಣಕೂಟದಲ್ಲಿ ಪಾಲ್ಗೊಳ್ಳುತ್ತಿರುವುದೇಕೆ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist