ADVERTISEMENT
  • Home
  • About Us
  • ಕರ್ನಾಟಕ
Sunday, May 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸುಪ್ರೀಂಕೋರ್ಟ್‌ ಮುಂದೆ ಬಡವಾದ ಮಾಹಿತಿ ಹಕ್ಕು ಕಾಯ್ದೆ..!

by
March 11, 2020
in ದೇಶ
0
ಸುಪ್ರೀಂಕೋರ್ಟ್‌ ಮುಂದೆ ಬಡವಾದ ಮಾಹಿತಿ ಹಕ್ಕು ಕಾಯ್ದೆ..!
Share on WhatsAppShare on FacebookShare on Telegram

ಕಳೆದ ಬುಧವಾರ ಸುಪ್ರೀಂಕೋರ್ಟ್‌ಲ್ಲಿ ಮಹತ್ವದ ಪ್ರಕರಣವೊಂದು ಚರ್ಚೆಗೆ ಬಂತು. ಕೇಂದ್ರ ಹಾಗೂ ಗುಜರಾತ್‌ ಮಾಹಿತಿ ಹಕ್ಕು ಆಯೋಗ ವರ್ಸಸ್‌ ಗುಜರಾತ್ ಹೈಕೋರ್ಟ್‌ಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಯ ವಿಚಾರಣೆ ನಡೆಸಲಾಯ್ತು. ಕೋರ್ಟ್‌ಗಳಲ್ಲಿನ ದಾಖಲೆಗಳು, ವಿಚಾರಣೆಗೆ ಸಂಬಂಧಿಸಿದ ವಿಷಯಗಳನ್ನ ಸಂಬಂಧವಿಲ್ಲದ ಮೂರನೇ ವ್ಯಕ್ತಿ ಪಡೆದುಕೊಳ್ಳಬೇಕಾದರೆ ಆತ ಮಾಹಿತಿ ಕಾಯ್ದೆಯಡಿ ಪಡೆದುಕೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್‌ ನಿಯಮಗಳಿಗನುಗುಣವಾಗಿ ವಕೀಲರ ಮೂಲಕ ಬಾಂಡ್‌ ಪೇಪರ್‌ ಜೊತೆ ಪ್ರಮಾಣ ಪತ್ರವನ್ನ ಸಲ್ಲಿಸಬೇಕು, ಹಾಗೂ ಯಾವ ಕಾರಣಕ್ಕೆ ದಾಖಲೆಗಳನ್ನ ಪಡೆದುಕೊಳ್ಳುತ್ತೇವೆಂಬುದನ್ನ ಸ್ಪಷ್ಟವಾಗಿ ನಮೂದಿಸಬೇಕು ಎಂದು ಗುಜರಾತ್‌ ಹೈಕೋರ್ಟ್‌ ಸೂಚಿಸಿತ್ತು. ಮಾಹಿತಿ ಹಕ್ಕು ಆಯೋಗ ಸುಪ್ರೀಂಕೋರ್ಟ್‌ನಲ್ಲಿ ಈ ಕುರಿತು ಪ್ರಶ್ನಿಸಿತ್ತು. ಜಸ್ಟೀಸ್‌ ಭಾನುಮತಿ, ಎಎಸ್‌ ಬೋಪಣ್ಣ ಹಾಗೂ ಋಷಿಕೇಶ್‌ ರಾಯ್‌ ಒಳಗೊಂಡ ಪೀಠ ಈ ಪ್ರಕರಣವನ್ನ ವಿಚಾರಣೆ ನಡೆಸಿ ಕಾನೂನು ವ್ಯಾಜ್ಯೆಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಪ್ರತಿದೂರುದಾರಲ್ಲದ ಮೂರನೇ ವ್ಯಕ್ತಿ ಮಾಹಿತಿ ಕಾಯ್ದೆಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸುವಂತಿಲ್ಲ. ಹಾಗೇನಾದರೂ ಮಾಹಿತಿ ಅವಶ್ಯಕತೆ ಇದ್ದರೆ ಆತ ಕೆಲವು ನಿಯಮಗಳನ್ನ ಪಾಲಿಸಬೇಕು…!

ADVERTISEMENT

ಈ ಆದೇಶ ಮಾಹಿತಿ ಹಕ್ಕಿಗಷ್ಟೇ ಧಕ್ಕೆ ನೀಡಲ್ಲ, ಸಂವಿಧಾನದ ಮೂಲಭೂತ ಹಕ್ಕುಗಳನ್ನೂ ಪ್ರಶ್ನೆ ಮಾಡಿದೆ ಎಂಬುದು ತಜ್ಞರ ಅಭಿಪ್ರಾಯ. ಮಾಹಿತ ಹಕ್ಕು ಕಾಯ್ದೆ ಆರ್ಟಿಕಲ್‌ ೧೯(೧)(ಎ) ಅಂಶಗಳನ್ನ ಪರಿಗಣಿಸುತ್ತೆ. ವಾಕ್‌ ಸ್ವಾತಂತ್ರ್ಯ, ಮಾಹಿತಿ ಪಡೆಯುವ ಸ್ವಾತಂತ್ರ್ಯ ಹಾಗೂ ಪ್ರಕಟಿಸುವ ಸ್ವಾತಂತ್ರ್ಯವನ್ನ ಸಂವಿಧಾನದ ಈ ಅನುಸೂಚಿ ಒಳಗೊಂಡಿದೆ. ಆರ್ಟಿಕಲ್‌ ೧೯(೨)ರಲ್ಲಿ ಕೆಲವು ನಿಬಂಧನೆಗಳನ್ನ ಹಾಕಲಾಗಿದೆ. ಈ ನಿಬಂಧನೆಗಳು ಮಾಹಿತಿ ಹಕ್ಕು ಕಾಯ್ದೆಯ ಎಂಟನೇ ವಿಭಾಗದಲ್ಲಿ ಸೂಚಿಸಲಾಗಿದೆ. ಆದರೆ ಎಲ್ಲಾ ವಿಷಯಗಳಿಗೂ ನಿಬಂಧನೆಗಳನ್ನ ಹೇರಿಲ್ಲ ಹಾಗೂ ಕೋರ್ಟ್‌ಗೆ ಸಂಬಂಧಿಸಿದ ಮಾಹಿತಿಗಳನ್ನ ಪಡೆಯಲು ಯಾವುದೇ ಉಲ್ಲೇಖ ಇಲ್ಲ. ಆರ್‌ಟಿಐ ಅಡಿ ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಯನ್ನ ಮಾಹಿತಿ ಹಕ್ಕು ಕಾಯ್ದೆಯಲ್ಲಿನ ನಿಬಂಧನೆಗಳಿಗೆ ಅನುಗುಣವಾಗಿಯೇ ಪುರಸ್ಕರಿಸಬೇಕು ಅಥವಾ ತಿರಸ್ಕರಿಸಬೇಕು. ಆದರೆ ಸುಪ್ರೀಂಕೋರ್ಟ್‌ ಆದೇಶವೇ ಗೊಂದಲವಾಗಿದ್ದು ಕೋರ್ಟ್‌ ದಾಖಲೆಗಳು ಮಾಹಿತಿ ಹಕ್ಕಿನಡಿ ಬರುವುದಿಲ್ಲ ಎಂಬುದನ್ನ ಪುನರ್‌‌ ಪರಿಶೀಲನೆ ಮಾಡಬೇಕಿದೆ ಎಂಬುದು ಕಾನೂನು ತಜ್ಞರ ಅಭಿಮತ.

ಹಾಗಾದರೆ ಮಾಹಿತಿ ಹಕ್ಕು ಕಾಯ್ದೆ ಹಾಗೂ ನಿಬಂಧನೆಗಳೇನು..?

ಮಾಹಿತಿ ಎಂದರೆ, ಯಾವುದಾದರೂ ರೂಪದ್ದಾಗಿರಬಹುದು, ಉದಾಹರಣೆಗೆ ಇಮೇಲ್‌, ಸುತ್ತೋಲೆ, ಆದೇಶ ಪ್ರತಿಗಳು, ಅಭಿಪ್ರಾಯಗಳು, ಪತ್ರಿಕಾಪ್ರಕಟಣೆಗಳು, ಜ್ಞಾಪನಾಪತ್ರಗಳು, ದಾಖಲಾತಿ ಪುಸ್ತಕಗಳ ನಕಲು, ಎಲೆಕ್ಟ್ರಾನಿಕ್‌ ಉಪಕರಣಗಳ ದತ್ತಾಂಶಗಳು, ಮೈಕ್ರೋಚಿಪ್‌ ಅಥವಾ ಟೇಪ್‌ಗಳೂ ಸೇರಿಕೊಂಡಿವೆ. ಮಾಹಿತಿಯನ್ನೂ ಸಹ ಪೇಪರ್‌ ಅಥವಾ ಎಲೆಕ್ಟ್ರಾನಿಕ್‌ ಉಪಕರಣಗಳಾದ ಡಿಸ್ಕ್‌ ಅಥವಾ ಮೈಕ್ರೋ ಚಿಪ್‌ ಮೂಲಕ ಪಡೆಯಬದುದು. ಸಾಂವಿಧಾನಿಕವಾಗಿ ಅಥವಾ ಶಾಸನಗಳ ಮೂಲಕ ಸ್ಥಾಪಿಸಲ್ಪಟ್ಟ ಯಾವುದೇ ಸಂಸ್ಥೆಯೂ ಮಾಹಿತಿ ಹಕ್ಕು ಕಾಯ್ದೆಯಡಿ ಬರುತ್ತೆ. ಈ ಕಾಯ್ದೆಯಡಿ ಹತ್ತು ನಿಬಂಧನೆಗಳನ್ನೂ ಹಾಕಲಾಗಿದೆ. ನಾವು ಕೇಳುವ ಮಾಹಿತಿ ನಮ್ಮ ದೇಶದ ಸಾರ್ವಭೌಮತ್ವ ಹಾಗೂ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗಬಾರದು, ಕೋರ್ಟ್‌ಗಳು ಕೆಲವು ವಿಷಯಗಳನ್ನ ಪ್ರಕಟಿಸಬಾರದು ಎಂದು ಆದೇಶ ನೀಡಿರುತ್ತೆ ಅಂತಹ ವಿಷಯಗಳನ್ನ ಕೆದುಕುವಂತಿಲ್ಲ ಅದು ಕಾನೂನು ಉಲ್ಲಂಘನೆಯಾಗುತ್ತೆ. ಶಾಸನ ಸಭೆಗೆ ಧಕ್ಕೆ ತರುವಂತಹ ಮಾಹಿತಿ ಕೋರಿಕೆಯನ್ನ ಪುನರ್‌ಪರಿಶೀಲಿಸಬಹುದು. ವ್ಯಾಪಾರಿ ಒಡಂಬಡಿಕೆಗಳು, ವಾಣಿಜ್ಯ ಒಪ್ಪಂದಗಳು ಖಾಸಗಿ ಹಕ್ಕುಸ್ವಾಮ್ಯಕ್ಕೆ ಒಳಪಟ್ಟ ವಿಷಯಗಳನ್ನ ಅರ್ಜಿ ಸಲ್ಲಿಸಿ ಪಡೆಯುವಂತಿಲ್ಲ. ಖಾಸಗಿ ವ್ಯಕ್ತಿಯ ಜೊತೆಗಿನ ಸಂಬಂಧಗಳ ಕುರಿತು ಸಂಸ್ಥೆಗಳಿಂದ ಮಾಹಿತಿ ಕೋರುವಲ್ಲಿ ಕೆಲವು ನಿಯಮಗಳನ್ನ ಪಾಲಿಸಬೇಕು. ಅಂತರಾಷ್ಟ್ರೀಯ ಸಂಬಂಧಗಳ ಕುರಿತಾದ ಮಾಹಿತಿ ಪಡೆಯುವಲ್ಲಿ, ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಪ್ರಕರಣದ ಗತಿಯ ಬಗ್ಗೆ ಕೆಲವು ನಿಬಂಧನೆಗಳಿವೆ.

ಆದರೆ ಕೋರ್ಟ್‌ಗಳು ಈ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ, ಪ್ರತ್ಯೇಕ ಕಾನೂನುಗಳು ಅನ್ವಯವಾಗುತ್ತವೆ ಎಂಬುದು ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ನ್ಯಾಯಾಲಗಳು ಮಾಹಿತಿ ಹಕ್ಕು ಕಾಯ್ದೆಯನ್ನ ಸಡಿಲಗೊಳಿಸಿದರೆ ಸರ್ಕಾರಿ ಸಂಸ್ಥೆಗಳೂ ಸಹ ತಮ್ಮದೇ ಕಾನೂನನ್ನ ತಂದು ತೊಡಕುಂಟು ಮಾಡಬಹುದು ಹಾಗೂ ಕಾಯ್ದೆ ಅಪ್ರಸ್ತುತ ಎಂದು ಪರಿಗಣಿಸಬಹುದು. ಸುಪ್ರೀಂಕೋರ್ಟ್‌ ಕಾನೂನುಗಳನ್ನ ಪರಿಪಾಲನೆ ಮಾಡುವುದರ ಮುಖಾಂತರ ರೋಲ್‌ ಮಾಡೆಲ್‌ ಆಗಬೇಕಿರುವ ಸಂದರ್ಭದಲ್ಲಿ ಈ ಆದೇಶ ಆಘಾತವನ್ನುಂಟು ಮಾಡಿದೆ ಎಂಬುದು ಮಾಹಿತಿ ಅರ್ಜಿದಾರರ ಅಭಿಪ್ರಾಯ.

Tags: ಮಾಹಿತಿ ಹಕ್ಕು ಕಾಯ್ದೆಸುಪ್ರೀಂಕೋರ್ಟ್
Previous Post

ಮಧ್ಯಪ್ರದೇಶ ವಿದ್ಯಮಾನಕ್ಕೆ ಬೆಚ್ಚಿ ಕೆಪಿಸಿಸಿ ಸಾರಥ್ಯವನ್ನು ಡಿಕೆಶಿಗೆ ವಹಿಸಿದ ಕಾಂಗ್ರೆಸ್ ವರಿಷ್ಠರು!

Next Post

ವಿಚಿತ್ರ ತಿರುವುಗಳ ನಡುವೆ ಕ್ಲೈಮ್ಯಾಕ್ಸ್‌ನತ್ತ ಮಧ್ಯಪ್ರದೇಶ ರಾಜಕಾರಣ

Related Posts

ಕರ್ನಾಟಕ

ಅಧ್ಯಕ್ಷ ಸ್ಥಾನಕ್ಕೆ DKಸುರೇಶ್ ನಾಮಪತ್ರ ಸಲ್ಲಿಕೆ

by ಪ್ರತಿಧ್ವನಿ
May 17, 2025
0

https://youtu.be/1PWjkUhCOwo

Read moreDetails

ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಎಡವಿಬಿದ್ದ ಸಿಎಂ ಸಿದ್ದರಾಮಯ್ಯ

May 17, 2025

Operation Sindoora ಹಾಗೂ ಸೇನೆ ಬಗ್ಗೆ ಹಗುರವಾಗಿ ಮಾತನಾಡಿದಲ್ಲ

May 17, 2025

ಸಿಎಂಗೆ ಪತ್ರ ಬರೆದ ಸಂಸದ ಸಿಎನ್ ಮಂಜುನಾಥ

May 17, 2025
ಭಾರತ..ಪಾಕಿಸ್ತಾನ ನಡುವಿನ ಕದನ ವಿರಾಮ ನಾಳೆ ಅಂತ್ಯ…! ಮುಂದೇನು ..?! 

ಭಾರತ..ಪಾಕಿಸ್ತಾನ ನಡುವಿನ ಕದನ ವಿರಾಮ ನಾಳೆ ಅಂತ್ಯ…! ಮುಂದೇನು ..?! 

May 17, 2025
Next Post
ವಿಚಿತ್ರ ತಿರುವುಗಳ ನಡುವೆ ಕ್ಲೈಮ್ಯಾಕ್ಸ್‌ನತ್ತ ಮಧ್ಯಪ್ರದೇಶ ರಾಜಕಾರಣ

ವಿಚಿತ್ರ ತಿರುವುಗಳ ನಡುವೆ ಕ್ಲೈಮ್ಯಾಕ್ಸ್‌ನತ್ತ ಮಧ್ಯಪ್ರದೇಶ ರಾಜಕಾರಣ

Please login to join discussion

Recent News

ದೇವೇಗೌಡರಿಗೆ ಜನ್ಮದಿನದ ಶುಭ ಕೋರಿದ ಸಿಎಂ..! – ಹಳೆ ಫೋಟೋ ಪೋಸ್ಟ್ ಮಾಡಿ ಫ್ಲಾಶ್ ಬ್ಯಾಕ್ ನೆನಪಿಸಿಕೊಂಡ ಸಿದ್ದು 
Top Story

ದೇವೇಗೌಡರಿಗೆ ಜನ್ಮದಿನದ ಶುಭ ಕೋರಿದ ಸಿಎಂ..! – ಹಳೆ ಫೋಟೋ ಪೋಸ್ಟ್ ಮಾಡಿ ಫ್ಲಾಶ್ ಬ್ಯಾಕ್ ನೆನಪಿಸಿಕೊಂಡ ಸಿದ್ದು 

by Chetan
May 18, 2025
ಅಂಕಪಟ್ಟಿಯಲ್ಲಿ RCB ನೇ ನಂಬರ್.1 ..! ಕೋಲ್ಕತ್ತಾ ಪಾಲಿಗೆ ಖಳನಾಯಕನಾದ ಮಳೆರಾಯ ! 
Top Story

ಅಂಕಪಟ್ಟಿಯಲ್ಲಿ RCB ನೇ ನಂಬರ್.1 ..! ಕೋಲ್ಕತ್ತಾ ಪಾಲಿಗೆ ಖಳನಾಯಕನಾದ ಮಳೆರಾಯ ! 

by Chetan
May 18, 2025
ಸಚಿವ ಕೃಷ್ಣ ಬೈರೇಗೌಡ ಆಪ್ತರಿಂದ ಗೂಂಡಾಗಿರಿ..?! – ಸರ್ಕಾರಿ ಅಧಿಕಾರಿ ಮೇಲೆ ನಡು ರಸ್ತೆಯಲ್ಲಿ ಹಲ್ಲೆ ಮಾಡಿ ದರ್ಪ 
Top Story

ಸಚಿವ ಕೃಷ್ಣ ಬೈರೇಗೌಡ ಆಪ್ತರಿಂದ ಗೂಂಡಾಗಿರಿ..?! – ಸರ್ಕಾರಿ ಅಧಿಕಾರಿ ಮೇಲೆ ನಡು ರಸ್ತೆಯಲ್ಲಿ ಹಲ್ಲೆ ಮಾಡಿ ದರ್ಪ 

by Chetan
May 18, 2025
ಪಹಲ್ಗಾಮ್ ಭೀಕರ ದಾಳಿಯ ಎಫೆಕ್ಟ್..! – ಅಮರನಾಥ ಯಾತ್ರೆಗೆ ಯಾತ್ರಾರ್ಥಿಗಳ ಹಿಂದೇಟು..! 
Top Story

ಪಹಲ್ಗಾಮ್ ಭೀಕರ ದಾಳಿಯ ಎಫೆಕ್ಟ್..! – ಅಮರನಾಥ ಯಾತ್ರೆಗೆ ಯಾತ್ರಾರ್ಥಿಗಳ ಹಿಂದೇಟು..! 

by Chetan
May 18, 2025
ನನ್ನ ಕನ್ನಡಕದ ಬಗ್ಗೆ ಮಾತನಾಡಿದವರು ಮಣ್ಣು ಮುಕ್ಕಿದ್ದಾರೆ ಜೋಕೆ..
Top Story

ನನ್ನ ಕನ್ನಡಕದ ಬಗ್ಗೆ ಮಾತನಾಡಿದವರು ಮಣ್ಣು ಮುಕ್ಕಿದ್ದಾರೆ ಜೋಕೆ..

by ಕೃಷ್ಣ ಮಣಿ
May 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೇವೇಗೌಡರಿಗೆ ಜನ್ಮದಿನದ ಶುಭ ಕೋರಿದ ಸಿಎಂ..! – ಹಳೆ ಫೋಟೋ ಪೋಸ್ಟ್ ಮಾಡಿ ಫ್ಲಾಶ್ ಬ್ಯಾಕ್ ನೆನಪಿಸಿಕೊಂಡ ಸಿದ್ದು 

ದೇವೇಗೌಡರಿಗೆ ಜನ್ಮದಿನದ ಶುಭ ಕೋರಿದ ಸಿಎಂ..! – ಹಳೆ ಫೋಟೋ ಪೋಸ್ಟ್ ಮಾಡಿ ಫ್ಲಾಶ್ ಬ್ಯಾಕ್ ನೆನಪಿಸಿಕೊಂಡ ಸಿದ್ದು 

May 18, 2025
ಅಂಕಪಟ್ಟಿಯಲ್ಲಿ RCB ನೇ ನಂಬರ್.1 ..! ಕೋಲ್ಕತ್ತಾ ಪಾಲಿಗೆ ಖಳನಾಯಕನಾದ ಮಳೆರಾಯ ! 

ಅಂಕಪಟ್ಟಿಯಲ್ಲಿ RCB ನೇ ನಂಬರ್.1 ..! ಕೋಲ್ಕತ್ತಾ ಪಾಲಿಗೆ ಖಳನಾಯಕನಾದ ಮಳೆರಾಯ ! 

May 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada