• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹಿಂದೂ ಭಾವನೆಗಳಿಗೆ ಧಕ್ಕೆ ಆರೋಪ -ಮುನಾವರ್‌ ಫಾರೂಕಿ ಬಂಧನ; ಜಾಮೀನು ನಿರಾಕರಣೆ

by
January 6, 2021
in ದೇಶ
0
ಹಿಂದೂ ಭಾವನೆಗಳಿಗೆ ಧಕ್ಕೆ ಆರೋಪ -ಮುನಾವರ್‌ ಫಾರೂಕಿ ಬಂಧನ; ಜಾಮೀನು ನಿರಾಕರಣೆ
Share on WhatsAppShare on FacebookShare on Telegram

ಇದು ಸ್ಟ್ಯಾಂಡ್‌ ಅಪ್ ಕಾಮಿಡಿ ಯುಗ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವೈಫ್ಯಲ್ಯ, ಬಲಪಂಥೀಯರ ಮೂಲಭೂತವಾದ, ಪ್ರಚಲಿತ ವಿವಾದಗಳು, ಜಾತಿ ಪದ್ಧತಿ, ನೈತಿಕ ಪೋಲಿಸ್ ಗಿರಿ, ಕ್ರಿಮಿನಲ್ ಗೋ ರಕ್ಷಕರ ಅಟ್ಟಹಾಸದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಲು ಈ ಸ್ಟ್ಯಾಂಡ್‌ ಅಪ್‌ ಕಾಮಿಡಿ ಶೋಗಳೇ ಕಾರಣ ಎನ್ನಬಹುದು. ಆರ್‌ಎಸ್‌ಎಸ್‌, ವಿಎಚ್‌ಪಿ, ಶ್ರೀರಾಮ ಸೇನೆ ಮತ್ತಲವು ಸೋ ಕಾಲ್ಡ್‌ ಹಿಂದೂಪರ ಸಂಘಟನೆಗಳು ಅಮಾಯಕರನ್ನು ಹೇಗೆ ಬಳಸಿಕೊಳ್ಳುತ್ತಿವೆ ಎನ್ನುವುದರ ಕುರಿತು ಜನಸಾಮಾನ್ಯರಿಗೆ ಸ್ಟ್ಯಾಂಡ್‌ ಅಪ್‌ ಕಾಮಿಡಿಯನ್‌ ಕುನಾಲ್‌ ಕಮ್ರಾ ಸೇರಿದಂತೆ ಹಲವರು ತಮ್ಮ ಜನಪ್ರಿಯ ಹಾಸ್ಯದ ಮೂಲಕವೇ ಅರ್ಥ ಮಾಡಿಸುವಲ್ಲಿ ಸಫಲರಾಗಿದ್ದಾರೆ. ಸರ್ಕಾರ ಯಾರಪ್ಪನ ಮನೆಯ ಸ್ವತ್ತೂ ಅಲ್ಲ. ನಾವು ಸರ್ಕಾರವನ್ನು ಎಷ್ಟು ಬೇಕಾದ್ರೂ ಪ್ರಶ್ನಿಸಬಹುದು ಎಂದು ಜನರಲ್ಲಿ ಧೈರ್ಯ ತುಂಬುತ್ತಿದ್ದಾರೆ. ಇಂತವರನ್ನು ಈಗ ಬಿಜೆಪಿ ಟಾರ್ಗೆಟ್‌ ಮಾಡುತ್ತಿದೆ.

ADVERTISEMENT

ಹೌದು, ಸ್ಟ್ಯಾಂಡ್‌ ಅಪ್‌ ಕಾಮಿಡಿಯನ್‌ ಕುನಾಲ್‌ ಕಮ್ರಾ ಬೆನ್ನಲ್ಲೀಗ ಮುನಾವರ್ ಫಾರೂಕಿ ಅವರನ್ನು ಬಿಜೆಪಿಯವರು ಟಾರ್ಗೆಟ್‌ ಮಾಡಿದ್ದಾರೆ. ಆದ್ದರಿಂದಲೇ ಮುನಾವರ್ ಫಾರೂಕಿ ವಿರುದ್ಧ ಹಿಂದೂ ದೇವತೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಅವಹೇಳನಕಾರಿ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಜೈಲಿಗೆ ಕಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಗುಜರಾತ್ ಮೂಲದ ಮುನಾವರ್ ಫಾರೂಕಿ ಮಧ್ಯಪ್ರದೇಶದ ಇಂದೋರ್‌ನಲ್ಲಿ ಸ್ಟ್ಯಾಂಡ್‌ ಅಪ್‌ ಕಾಮಿಡಿ ಶೋ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಫಾರೂಕಿ, ಗೋಧ್ರಾ ಪ್ರಕರಣದ ವಿಚಾರದಲ್ಲಿ ಗೃಹ ಸಚಿವ ಅಮಿತ್ ಶಾರ ಪಾತ್ರದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಆದರೀಗ, ಈ ವಿಚಾರದ ಜತೆಗೆ ಹಿಂದೂ ದೇವತೆಗಳು, ದೇವರುಗಳ ಬಗ್ಗೆ ಅಪಹಾಸ್ಯ ಮಾಡಿದ್ದಾರೆ ಎಂದು ಆರೋಪಿಸಿ ಮುನಾವರ್‌ ಫಾರೂಕಿ ವಿರುದ್ಧ ಬಿಜೆಪಿ ಶಾಸಕನ ಪುತ್ರ ಏಕಲವ್ಯ ಸಿಂಗ್ ಗೌರ್ ದೂರು ನೀಡಿದ್ದರು. ಇವರ ವಿರುದ್ಧ ಐಪಿಸಿ ಸೆಕ್ಷನ್ 295-ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ), 298, 269 , 188 ಮತ್ತು 34 ಈ ಸೆಕ್ಷನ್ಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಗೌರ್‌ ದೂರಿನ ಅನ್ವಯ ಕ್ರಮ ಕೈಗೊಂಡಿರುವ ಪೊಲೀಸರು ಮುನಾವರ್ ಫಾರೂಕಿ ಸೇರಿದಂತೆ 5 ಮಂದಿಯನ್ನು ಬಂಧಿಸಿದ್ದಾರೆ. ಮುನಾವರ್ ಫಾರೂಕಿ, ಎಡ್ವಿನ್ ಆಂಟೋನಿ, ಪ್ರಖರ್ ವ್ಯಾಸ್, ಪ್ರಿಯಂ ವ್ಯಾಸ್, ನಳಿನ್ ಯಾದವ್ ಅವರು ಬಂಧಿತರು.

ಬಿಜೆಪಿಯನ್ನು ಬೈಯ್ಯುವ ಹಂತದಲ್ಲಿ ಗೋಮಾತೆಯ ಚಾರಿತ್ರ್ಯ ವಧೆ ಮಾಡಲಾಗಿದೆ. ಸುಖಾಸುಮ್ಮನೇ ಶ್ರೀರಾಮನನ್ನು ಎಳೆದು ತರಲಾಗಿದೆ. ಎಲ್ಲಾ ಹಿಂದೂ ದೇವತೆಗಳ ಸಾದ್ಯಂತ ಅವಹೇಳನವಾಗಿದೆ. ಇದನ್ನು ಜನ ಹಾಸ್ಯ ಎಂದು ಸ್ವೀಕರಿಸಿ ನಕ್ಕು ಹಗುರಾವಾಗಿ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ಶಾಸಕನ ಪುತ್ರ ಏಕಲವ್ಯ ಸಿಂಗ್ ಗೌರ್ ನೀಡಿದ ದೂರಿನಲ್ಲಿ ಆರೋಪಿಸಿದ್ದರು.

Also Read: ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಕುನಾಲ್‌ ಕಮ್ರಾ ಬೆಂಬಲಕ್ಕೆ ನಿಂತ ಕಣ್ಣನ್‌ ಗೋಪಿನಾಥನ್‌

ಈಗ ಪ್ರಕರಣದ ವಿಚಾರಣೆ ನಡೆಸಿದ ಇಂದೋರ್ ನಗರದ ಇನ್ಸ್ಪೆಕ್ಟರ್ ಕಮಲೇಶ್ ಶರ್ಮಾ, ಹಿಂದೂ ದೇವತೆಗಳನ್ನು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಅವಮಾನಿಸಿದ್ದಾರೆ ಎಂದು ಹೇಳುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಗೌರ್‌ ಆರೋಪಗಳಿಗೆ ತೆರೆ ಎಳೆದಿದ್ದಾರೆ. ಫಾರೂಕಿ ತನ್ನ ಸ್ವಂತ ವಿಷಯಗಳ ಬಗ್ಗೆ ಹೇಳಿದ್ದಾರೆಯೇ ವಿನಃ ಹಿಂದೂ ಧರ್ಮದ ಭಾವನೆಗಳನ್ನು ಅವಹೇಳನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸದ್ಯ ಮುನಾವರ್‌ ಫಾರೂಕಿ ಬಂಧನಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುನಾಲ್‌ ಕಮ್ರಾ ಸೇರಿದಂತೆ ಫಾರೂಕಿ ಬೆನ್ನಿಗೆ ನಿಲ್ಲುವುದಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಅದಾಗ್ಯೂ, ಮುನಾವರ್‌ ಫಾರೂಕಿಗೆ ಮಧ್ಯಪ್ರದೇಶದ ಇಂದೋರ್‌ನ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಯತೀಂದ್ರ ಕುಮಾರ್ ಗುರು ಅವರು ಮುನವಾರ್ ಫಾರೂಕಿ ಮತ್ತು ನಳಿನ್ ಯಾದವ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

Tags: munawar faruquiಮುನಾವರ್‌ ಫಾರೂಕಿ
Previous Post

ಬಿಎಸ್‌ವೈ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿ; ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ

Next Post

ಲವ್‌ ಜಿಹಾದ್‌ ಕಾನೂನಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಲವ್‌ ಜಿಹಾದ್‌ ಕಾನೂನಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಲವ್‌ ಜಿಹಾದ್‌ ಕಾನೂನಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

Please login to join discussion

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada