• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ʼಸೇವಾ ಸಿಂಧುʼವಿನಲ್ಲಿ ಅರ್ಜಿ ಸಲ್ಲಿಸಿದವರಲ್ಲೂ ವಲಸೆ ಕಾರ್ಮಿಕರದ್ದೇ ಬಹುಪಾಲು!

by
May 31, 2020
in ಕರ್ನಾಟಕ
0
ʼಸೇವಾ ಸಿಂಧುʼವಿನಲ್ಲಿ ಅರ್ಜಿ ಸಲ್ಲಿಸಿದವರಲ್ಲೂ ವಲಸೆ ಕಾರ್ಮಿಕರದ್ದೇ ಬಹುಪಾಲು!
Share on WhatsAppShare on FacebookShare on Telegram

ಮಾರ್ಚ್‌ 23 ರಿಂದ ಜಾರಿಯಾದ ಲಾಕ್‌ಡೌನ್‌ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದವರೇ ವಲಸೆ ಕಾರ್ಮಿಕರು. ಈ ಕುರಿತು ಈಗಾಗಲೇ ಹತ್ತು ಹಲವು ಸಮಗ್ರ ವರದಿಗಳನ್ನ ʼಪ್ರತಿಧ್ವನಿʼ ಕೂಡಾ ಪ್ರಕಟಿಸಿತ್ತು. ಈ ಮೂಲಕ ನಾಡಿನ ಜನತೆಗೆ ವಲಸೆ ಕಾರ್ಮಿಕರ ಬವಣೆ ಏನೆನ್ನುವುದು ತಿಳಿಯುವಂತಾಗಿತ್ತು. ಕಾಲ್ನಡಿಗೆಯಲ್ಲಿಯೇ ನೂರಾರು ಕಿಲೋ ಮೀಟರ್‌ ನಡೆದುಕೊಂಡು ಹೋದ ವಲಸೆ ಕಾರ್ಮಿಕರಿಂದ ಹಿಡಿದು, ಮನೆ ಸೇರುವ ಮುನ್ನವೇ ಇಹಲೋಕ ತ್ಯಜಿಸಿದ ಅದೆಷ್ಟೋ ಕಾರ್ಮಿಕರ ಕರುಣಾಜನಕ ಕಥೆಯೇ ಇದೆ.

ADVERTISEMENT

ಈ ರೀತಿ ತಂಡೋಪತಂಡವಾಗಿ ತವರು ರಾಜ್ಯಗಳಿಗೆ ಹೊರಟ ವಲಸೆ ಕಾರ್ಮಿಕರಿಗೆ ರಾಜಕೀಯ ನಾಯಕರು, ಬಾಲಿವುಡ್‌ ನಟರು ಹಾಗೂ ಸರಕಾರೇತರ ಸಂಘ ಸಂಸ್ಥೆಗಳು, ದಾನಿಗಳು ಹಸಿವು ನೀಗಿಸಿದ್ದಾರೆ. ದೇಶದಲ್ಲಿ ಲಾಕ್‌ಡೌನ್‌ ಬಳಿಕ, ಕರೋನಾ ಆತಂಕದ ನಡುವೆಯೂ ತಾವಾಯಿತು, ತಮ್ಮ ಪಾಡಾಯಿತು ಎಂದು ಬೀದಿಗಿಳಿದವರೇ ತಮ್ಮ ಊರಿನತ್ತ ಹೆಜ್ಜೆ ಹಾಕಿದ್ದರು. ಇದೀಗ ʼಟೈಮ್ಸ್‌ ಆಫ್‌ ಇಂಡಿಯಾʼ ತಯಾರಿಸಿದ ವರದಿಯಲ್ಲೂ ಲಾಕ್‌ಡೌನ್‌ ನಿಂದ ತವರಿನತ್ತ ಹಿಂತಿರುಗಲು ಸಂಕಷ್ಟಪಡುವವರು ವಲಸೆ ಕಾರ್ಮಿಕರೇ ಅನ್ನೋದು ಸಾಬೀತಾಗಿದೆ. ಅಂಕಿಅಂಶಗಳೂ ಅದನ್ನ ದೃಢೀಕರಿಸುತ್ತಿದ್ದು, ʼಸೇವಾ ಸಿಂಧುʼ ಮೂಲಕ ತವರು ರಾಜ್ಯಕ್ಕೆ ಹಿಂತಿರುಗಿ ಹೋಗಲು ಅರ್ಜಿ ಸಲ್ಲಿಸಿದವರಲ್ಲಿ ಶೇಕಡಾ 80ರಷ್ಟು ಮಂದಿ ವಲಸೆ ಕಾರ್ಮಿಕರೇ ಆಗಿದ್ದಾರೆ ಎಂದು ʼಟೈಮ್ಸ್‌ ಆಫ್‌ ಇಂಡಿಯಾʼ ವರದಿಯೂ ತಿಳಿಸಿದೆ.

ಕರ್ನಾಟಕ ಸರಕಾರದ ʼಸೇವಾ ಸಿಂಧುʼ ವೆಬ್‌ಸೈಟ್‌ ನಲ್ಲಿ ದಾಖಲಾದ ಮಾಹಿತಿ ಆಧರಿಸಿ ತಯಾರಿಸಿದ ವರದಿಯಲ್ಲಿ ಮೇ 27ರ ಬುಧವಾರ ರಾತ್ರಿವರೆಗೂ ಒಟ್ಟು 11.6 ಲಕ್ಷ ಮಂದಿ ಕರ್ನಾಟಕ ಬಿಟ್ಟು ತೆರಳಲು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಶೇಕಡಾ 80 ರಷ್ಟು ಮಂದಿ ವಲಸೆ ಕಾರ್ಮಿಕರೇ ಇರುವುದಾಗಿ ವರದಿ ತಿಳಿಸಿದೆ. ಅವರ ಒಟ್ಟು ಸಂಖ್ಯೆ 9.1 ಲಕ್ಷ ಆಗಿದೆ. ಅಂತಹ 9.1 ಲಕ್ಷ ವಲಸೆ ಕಾರ್ಮಿಕರಲ್ಲಿ 6.8 ಲಕ್ಷ ಕಾರ್ಮಿಕರಿಗೆ ಅನುಮತಿ ನೀಡಲಾಗಿದೆ. ಅದರಲ್ಲೂ 1.4 ಲಕ್ಷ ಜನ ಸಂಸಾರವನ್ನೂ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಅದರಲ್ಲೂ ಶೇಕಡಾ 60 ರಷ್ಟು ವಲಸೆ ಕಾರ್ಮಿಕರು ಬಿಹಾರ, ಪಶ್ಚಿಮ ಬಂಗಾಳ, ರಾಜಸ್ತಾನ, ಝಾರ್ಖಂಡ್‌ ಹಾಗೂ ಒಡಿಶಾ ರಾಜ್ಯಗಳಿಗೇ ಸೀಮಿತರಾದ ಕಾರ್ಮಿಕರಾಗಿದ್ದಾರೆ. ಅದರಲ್ಲೂ ಶೇಕಡಾ 55 ರಷ್ಟು ಜನರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಬದುಕು ಕಟ್ಟಿಕೊಂಡವರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 5 ಲಕ್ಷ ಕಾರ್ಮಿಕರಿದ್ದರೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೋಲಾರ, ಬಳ್ಳಾರಿ ಮುಂತಾದೆಡೆಯೂ ಸಾವಿರಾರು ಸಂಖ್ಯೆಯ ಕಾರ್ಮಿಕರು ಸಿಲುಕಿ ಹಾಕಿಕೊಂಡಿದ್ದರು.

ಈ ರೀತಿ ರಾಜ್ಯದಲ್ಲಿ ಬೀಡು ಬಿಟ್ಟಿರುವ ವಲಸೆ ಕಾರ್ಮಿಕರು ಬಹುತೇಕ ಮಂದಿ ಇಲ್ಲಿ ಕೈಗಾರಿಕೆ, ಕಾರ್ಖಾನೆ ಹಾಗೂ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಸಿಕೊಂಡವರಾಗಿದ್ದಾರೆ. ಇದರಲ್ಲಿ ಈಗಾಗಲೇ 2.9 ಲಕ್ಷ ಕಾರ್ಮಿಕರು ನಗರ ಬಿಟ್ಟು ತೆರಳಿದ್ದಾರೆ. ಅದರಲ್ಲೂ 2.6 ಲಕ್ಷ ಮಂದಿ ಕಾರ್ಮಿಕರು ಶ್ರಮಿಕ್‌ ವಿಶೇಷ ರೈಲಿನಲ್ಲಿಯೇ ತವರು ರಾಜ್ಯ ಸೇರಿದ್ದಾರೆ. ಇನ್ನುಳಿದಂತೆ 2.5 ಲಕ್ಷ ಅರ್ಜಿದಾರರಲ್ಲಿ ಯಾತ್ರಿಕರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳೂ ಸೇರಿದ್ದು ಕರ್ನಾಟಕ ಬಿಟ್ಟು ತಮ್ಮ ತವರು ರಾಜ್ಯಗಳಿಗೆ ತೆರಳಲು ಸಿದ್ಧರಾಗಿದ್ದಾರೆ. ಇನ್ನೂ ಕೆಲವರು ಈಗಾಗಲೇ ಬಿಟ್ಟು ತೆರಳಿದವರೂ ಇದ್ದಾರೆ. ಅದಲ್ಲದೇ ಇನ್ನು ಹಲವರು ನಗರಗಳಲ್ಲಿಯೇ ಉಳಿದಿದ್ದು, ಅದ್ಯಾವಾಗ ಕೆಲಸ ಕಾರ್ಯ ಆರಂಭವಾಗುತ್ತೆ ಅನ್ನೋ ಕಾತರದಲ್ಲಿದ್ದಾರೆ. ಆದರೆ ಹೀಗೆ ಉಳಿದ ವಲಸೆ ಕಾರ್ಮಿಕರ ಸಂಖ್ಯೆ ಶೇಕಡಾ 10ಕ್ಕಿಂತಲೂ ಕಡಿಮೆ ಅಂತಾ ಬಿಲ್ಡರ್ಸ್‌ಗಳು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ʼಪ್ರತಿಧ್ವನಿʼ ವೆಬ್‌ ಜಾಲತಾಣವು ನಡೆಸಿದ ವಿಶೇಷ ಸಂದರ್ಶನದಲ್ಲಿ ಬಿಲ್ಡರ್ಸ್‌ ಅಸೋಸಿಯೇಷನ್‌ ಇಂಡಿಯಾ (ಬೆಂಗಳೂರು ಕೇಂದ್ರ) ಇದರ ಛೇರ್ಮನ್‌ ಜಿಎಂ ರವೀಂದ್ರ ಕಾರ್ಮಿಕರ ಸಂಖ್ಯೆ ಕಡಿಮೆ ಇರುವುದರಿಂದ ನಿರ್ಮಾಣ ಕಾಮಗಾರಿಗೆ ಅಡ್ಡಿಯಾಗಿದೆ ಎಂದು ಹೇಳಿದ್ದರು.

ಒಟ್ಟಿನಲ್ಲಿ ವಲಸೆ ಕಾರ್ಮಿಕರ ಹಿಂತಿರುಗುವಿಕೆಯಿಂದ ರಾಜ್ಯದ ಬಹುತೇಕ ಕೈಗಾರಿಕೆ, ಕಟ್ಟಡ ನಿರ್ಮಾಣ ಹಾಗೂ ಇನ್ನಿತರ ಕಾಮಗಾರಿಗಳ ಅಭಿವೃದ್ಧಿಗೆ ತಡೆಯಾಗಿದೆ. ಹೀಗೆ ಲಕ್ಷ ಸಂಖ್ಯೆಯಲ್ಲಿ ಊರಿಗೆ ಹೊರಟ ಕಾರ್ಮಿಕರು ಕರೋನಾ ಅವಧಿ ಮುಗಿಯುವುದನ್ನ ಕಾಯುವ ಬದಲು ತಮ್ಮ ಊರಲ್ಲಿಯೇ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಇನ್ನು ಕೆಲವರು ಮತ್ತೆ ಕರುನಾಡಿಗೆ ವಾಪಾಸ್‌ ಆಗಲಿದ್ದಾರೆ ಅನ್ನೋದರಲ್ಲಿ ಸಂಶಯವಿಲ್ಲ. ಆದರೆ ಇದರ ಹೊರತಾಗಿ ಸರಕಾರ ಯಾವುದೇ ರೀತಿಯಲ್ಲೂ ವಲಸೆ ಕಾರ್ಮಿಕರ ಬದುಕಿಗೊಂದು ಭದ್ರ ಬುನಾದಿ ಹಾಕಿಕೊಡುವಲ್ಲಿ ವಿಫಲ ಆಗಿದೆ ಅನ್ನೋದರಲ್ಲಿ ಅನುಮಾನವಿಲ್ಲ.

Tags: ‌ ಲಾಕ್‌ಡೌನ್Covid 19LockdownMigrant Workersseva sindhuಕೋವಿಡ್-19ವಲಸೆ ಕಾರ್ಮಿಕರುಸೇವಾ ಸಿಂಧು
Previous Post

ಲಾಕ್‌ಡೌನ್ 5.0: ಬದಲಾವಣೆ ಬಯಸಿದ್ದರೇ ಜನ..?

Next Post

ಅಮೇರಿಕಾಕ್ಕೆ ಕರೋನಾಕ್ಕಿಂತ ಕ್ರೂರಿಯಾಗಿರುವ ಡೊನಾಲ್ಡ್ ಟ್ರಂಪ್

Related Posts

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
0

ಅಂಕಗಳೊಂದಿಗೆ ಕೌಶಲವಿದ್ದರೆ ಉದ್ಯೋಗಾವಕಾಶ ಬೆಂಗಳೂರು, ಜೂನ್‌ 20: ಯಾವುದೇ ಕೆಲಸದಲ್ಲಿ ಕೌಶಲ್ಯವಿಲ್ಲದಿದ್ದರೆ ಪ್ರಯೋಜನಕ್ಕೆ ಬರುವುದಿಲ್ಲ. ಕಟ್ಟಡ ಕಾರ್ಮಿಕರಿಂದ ಹಿಡಿದು ಎಂಜಿನಿಯರಿಂಗ್‌ ವರೆಗೆ ಎಲ್ಲರಿಗೂ ಕೌಶಲ್ಯ ಅಗತ್ಯ ಎಂದು...

Read moreDetails
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
Next Post
ಅಮೇರಿಕಾಕ್ಕೆ ಕರೋನಾಕ್ಕಿಂತ ಕ್ರೂರಿಯಾಗಿರುವ ಡೊನಾಲ್ಡ್ ಟ್ರಂಪ್

ಅಮೇರಿಕಾಕ್ಕೆ ಕರೋನಾಕ್ಕಿಂತ ಕ್ರೂರಿಯಾಗಿರುವ ಡೊನಾಲ್ಡ್ ಟ್ರಂಪ್

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada