• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ʼPM-CARES ನಿಧಿಗೆ ದೇಣಿಗೆ ನೀಡಿದ್ದೇವೆ ಹಾಗಾಗಿ ಪಾನ್‌ಮಸಾಲ ನಿಷೇಧಿಸಬೇಡಿʼ

by
June 24, 2020
in ದೇಶ
0
ʼPM-CARES ನಿಧಿಗೆ ದೇಣಿಗೆ ನೀಡಿದ್ದೇವೆ ಹಾಗಾಗಿ ಪಾನ್‌ಮಸಾಲ ನಿಷೇಧಿಸಬೇಡಿʼ
Share on WhatsAppShare on FacebookShare on Telegram

ದೇಶದಾದ್ಯಂತ ಕರೋನಾ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ. ಈ ನಡುವೆ ಕರೋನಾ ಹರಡಲು ಕಾರಣವಾಗಬಹುದು ಎಂಬ ವಿಷಯವನ್ನಿಟ್ಟುಕೊಂಡು ಪಾನ್‌ಮಸಾಲ ಉತ್ಪನ್ನಗಳನ್ನು ನಿಷೇಧಿಸಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಾಗ, ಪಾನ್‌ಮಸಾಲ ಕಂಪೆನಿಯೊಂದು ನೀಡಿರುವ ಉತ್ತರ ನಿಜಕ್ಕೂ ಹುಬ್ಬೇರಿಸುವಂತೆ ಮಾಡಿದೆ.

ADVERTISEMENT

ಪಾನ್‌ಮಸಾಲ ಜಗಿಯುವವರು ಅತೀ ಹೆಚ್ಚಾಗಿ ಉಗುಳುವುದರಿಂದ ಕರೋನಾ ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆಯಿದೆ ಎಂದು ಅಲಹಾಬಾದ್‌ ಹೈಕೋರ್ಟ್‌ನಲ್ಲಿ PIL ದಾಖಲಾಗಿತ್ತು. ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಅಲಹಾಬಾದ್‌ ನ್ಯಾಯಪೀಠಕ್ಕೆ ಅಫಿಡವಿಟ್‌ ಸಲ್ಲಿಸಿರುವ ʼರಜನೀಗಂಧʼ ಪಾನ್‌ ಮಸಾಲೆಯನ್ನು ತಯಾರಿಸುವ ಕಂಪೆನಿಯಾದ ಧರ್ಮಪಾಲ್‌ ಸತ್ಯಪಾಲ್‌ “ನಾವು PM-CARES ನಿಧಿಗೆ 10 ಕೋಟಿ ರೂ.ಗಳನ್ನು ದೇನಿಗೆಯಾಗಿ ನೀಡಿದ್ದೇವೆ ಮತ್ತು ಇನ್ನೂ ಹತ್ತು ಕೋಟಿ ರೂ. ಗಳನ್ನು ಕರೋನಾ ವಿರುದ್ದ ಹೋರಾಟದಲ್ಲಿ ತೊಡಗಿರುವ ಸಂಸ್ಥೆಗಳಿಗೆ ದಾನವಾಗಿ ನೀಡಿದ್ದೇವೆ” ಎಂದು ಹೇಳಿದೆ.

“ನೋಯ್ಡಾದಲ್ಲಿ ವೈದ್ಯರಿಗೆ ಹೊಟೇಲ್‌ ಬೆಡ್‌ಗಳ ವ್ಯವಸ್ಥೆ, ಬಡವರಿಗೆ ಊಟ ಮತ್ತು ರೇಷನ್‌ ಕೂಡ ನಾವು ದಾನವಾಗಿ ನೀಡಿದ್ದೇವೆ,” ಎಂದು ಅಫಿಡವಿಟ್‌ನಲ್ಲಿ ಹೇಳಿಕೊಂಡಿದೆ.

ಈ ಅಫಿಡವಿಟ್‌ ನ್ಯಾಯಾಲಯಕ್ಕೆ ಸಲ್ಲಿಸಿದ ನಂತರ ಹುಟ್ಟಿಕೊಂಡಿರುವ ಪ್ರಶ್ನೆಯೇನೆಂದರೆ, PM-CARES ನಿಧಿಗೆ ದೇಣಿಗೆ ನೀಡಿದರೆ ಪಾನ್‌ಮಸಾಲ ಉಗುಳುವುದರಿಂದ ಕರೋನಾ ಹಬ್ಬುವುದಿಲ್ಲವೇ? ಈ ಪ್ರಶ್ನೆ ಈಗಾಗಲೇ ಬಹಳಷ್ಟು ಚರ್ಚೆ ಹುಟ್ಟುಹಾಕಿದೆ. ಯಾಕೆಂದರೆ, ದೇಶಾದ್ಯಂತ ಲಾಕ್‌ಡೌನ್‌ ಜಾರಿಯಾದ ಮರುದಿನವೇ, ಉತ್ತರ ಪ್ರದೇಶದ ಯೋಗ ಸರ್ಕಾರವು ʼಜನಹಿತದ ದೃಷ್ಟಿಯಿಂದʼ ಪಾನ್‌ಮಸಾಲ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಪಾನ್‌ಮಸಾಳ ತಿಂದು ಉಗುಳುವುದರಿಂದ ಕರೋನಾ ಹಬ್ಬುವ ವೇಗ ಮತ್ತು ಅಪಾಯ ಹೆಚ್ಚಾಗುತ್ತದೆ ಎಂದು ಉ.ಪ್ರ. ಸರ್ಕಾರ ತಿಳಿಸಿತ್ತು.

ಮೇ 6ರಂದು ತನ್ನ ಆದೇಶವನ್ನು ವಾಪಾಸ್ಸು ಪಡೆದ ಯೋಗಿ ಸರ್ಕಾರ ತಂಬಾಕು ಮತ್ತು ನಿಕೋಟಿನ್‌ ಇಲ್ಲದ ಪಾನ್‌ ಮಸಾಲವನ್ನು ಮಾರಲು ಅವಕಾಶ ಮಾಡಿಕೊಟ್ಟಿತು. ಸರ್ಕಾರದ ಈ ನಿರ್ಧಾರದ ವಿರುದ್ದ ಕೋರ್ಟ್‌ ಮೆಟ್ಟಿಲೇರಿದ್ದ ಪತ್ರಕರ್ತ ಸಂಜಯ್‌ ಶರ್ಮ, ತಜ್ಞರ ವರದಿಯನ್ನು ನ್ಯಾಯಾಲಯದ ಮುಂದಿಟ್ಟಿದ್ದರು. ಉಗುಳುವುದರಿಂದ ಕರೋನಾ ಸೋಂಕು ಹರಡುವ ಭೀತಿ ಹೆಚ್ಚಿದೆ ಎಂದು ವಾದ ಮಂಡಿಸಿದ್ದರು.

ಪರಿಸ್ಥಿತಿ ಹೀಗಿರುವಾಗ, ನಾವು PM-CARES ಗೆ ದೇಣಿಗೆ ನೀಡಿದ್ದೀವಿ ಹಾಗಾಗಿ ಪಾನ್‌ಮಸಾಲೆಯ ಮೇಲೆ ನಿಷೇಧ ಹೇರಬಾರದು ಎನ್ನುವ ವಾದ ಎಷ್ಟರಮಟ್ಟಿಗೆ ಸರಿ? ಇನ್ನು ಮೇ 21, 2020ರಂದು ಕೇಂದ್ರ ಆರೋಗ್ಯ ಸಚಿವಾಲಯವು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕರೋನಾ ಸೋಂಕು ಹರಡುವ ಅಪಾಯವನ್ನು ತಂದೊಡ್ಡುತ್ತದೆ ಎಂದು ಹೇಳಿದೆ.

ಇನ್ನು ಕರ್ನಾಟಕದಲ್ಲಿಯೂ ಈ ವಿಚಾರದ ಕುರಿತು ಬಹಳಷ್ಟು ಚರ್ಚೆಯಾಗಿದೆ. ಕರ್ನಾಟಕದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಂಡು ಬಂದಲ್ಲಿ IPCಯ ಸೆಕ್ಷನ್‌ 188, 268, 269 ಮತ್ತು 270ರ ಅಡಿಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸುವ ಕುರಿತು ಆದೇಶವನ್ನೂ ಹೊರಡಿಸಿತ್ತು.

ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನೋಡಿದಾಗ ಧರ್ಮಪಾಲ್‌ ಸತ್ಯಪಾಲ್‌ ಕಂಪೆನಿಯು ಅಫಿಡವಿಟ್‌ನಲ್ಲಿ ನೀಡಿದ ಹೇಳಿಕೆ ನಿಜಕ್ಕೂ ಹಾಸ್ಯಾಸ್ಪದವೆಂದು ಅನ್ನಿಸುತ್ತದೆ. ರಾಷ್ಟ್ರದಲ್ಲಿ ಕರೋನಾ ಸೋಂಕಿನ ಪರಿಸ್ಥಿತಿ ಕೈಮೀರಿ ಹೋಗುತ್ತಿರುವ ಸಂದರ್ಭದಲ್ಲಿ ಸರ್ಕಾರಗಳು ಕಠಿಣ ನಿರ್ಣಯಗಳನ್ನು ತೆಗೆದುಕೊಳ್ಳಬೇಕಿದೆ. ಕೇವಲ ಉಗುಳುವವರ ಮೇಲೆ ನಿರ್ಬಂಧ ಹೇರಿದರೆ ಸಾಕೇ? ಮಾರಾಟ ಮಾಡುವವರು ಇರುವವರೆಗೂ ಖರೀದಿಸುವವರು ಖಂಡಿತವಾಗಿಯೂ ಇರುತ್ತಾರೆ. ಹಾಗಾಗಿ, ಮಾರುಕಟ್ಟೆಯಲ್ಲಿ ಪಾನ್‌ಮಸಾಲಗಳು ದೊರೆಯದಿದ್ದರೆ ಉಗುಳುವ ಪ್ರಶ್ನೆ ಎಲ್ಲಿಂದ ಬರುತ್ತದೆ?

Tags: coronaviruspanmasalaPM-CARESrajanigandhaಕರೋನಾ ಭೀತಿಪಾನ್ ಮಸಾಲ
Previous Post

ವಿಜಯ ಶಂಕರ್ ಸಾವು ಪ್ರಕರಣ: ಶಂಕರ್ ಬಿದರಿ ಹೇಳಿದ್ದೇನು ಗೊತ್ತೆ?

Next Post

SSLC ಪರೀಕ್ಷೆ ಪ್ರತಿಷ್ಠೆಯಲ್ಲ.. ರಾಜ್ಯಕ್ಕೆ ಶಾಕ್‌ ಕೊಟ್ಟ ಸಚಿವ..!

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
SSLC ಪರೀಕ್ಷೆ ಪ್ರತಿಷ್ಠೆಯಲ್ಲ.. ರಾಜ್ಯಕ್ಕೆ ಶಾಕ್‌ ಕೊಟ್ಟ ಸಚಿವ..!

SSLC ಪರೀಕ್ಷೆ ಪ್ರತಿಷ್ಠೆಯಲ್ಲ.. ರಾಜ್ಯಕ್ಕೆ ಶಾಕ್‌ ಕೊಟ್ಟ ಸಚಿವ..!

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada