• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅಂದಿನ ಚುನಾವಣಾ ಚಾಣಕ್ಯ ಇಂದಿನ ಕೊರೊನಾ ವೈರಸ್

by
January 29, 2020
in ದೇಶ
0
ಅಂದಿನ ಚುನಾವಣಾ ಚಾಣಕ್ಯ ಇಂದಿನ ಕೊರೊನಾ ವೈರಸ್
Share on WhatsAppShare on FacebookShare on Telegram

ಎನ್‌ಡಿಎ ಮಿತ್ರ ಪಕ್ಷವಾದ ಜೆಡಿ(ಯು) ತನ್ನ ಪಕ್ಷದಿಂದ ಇಬ್ಬರನ್ನು ಹೊರದಬ್ಬಿದೆ. ಚುನಾವಣಾ ಚಾಣಕ್ಯ ಎಂದೇ ಪ್ರಸಿದ್ದರಾಗಿದ್ದ ಜೆಡಿ(ಯು) ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್‌ ಕಿಶೋರ್‌ ಹಾಗೂ ಪಕ್ಷದ ಹಿರಿಯ ನಾಯಕ ಪವನ್‌ ಕುಮಾರ್‌ ಅವರನ್ನು ಪಕ್ಷದಿಂದ ಉಚ್ಚಾಟಿಸಿ ನಿತೀಶ್‌ ಕುಮಾರ್‌ ಆದೇಶ ನೀಡಿದ್ದಾರೆ. ಒಂದು ಕಾಲದಲ್ಲಿ ಜೆಡಿ(ಯು) ಹಾಗೂ ಬಿಜೆಪಿಯ ಚುನಾವಣಾ ತಂತ್ರಗಾರಿಕೆಯನ್ನು ಯಶಸ್ವಿಯಾಗಿ ರೂಪಿಸಿದ್ದ ಪ್ರಶಾಂತ್‌ ಕಿಶೋರ್‌ ಈಗ ಪಕ್ಷಕ್ಕೆ ಬೇಡವಾಗಿದ್ದಾರೆ. ಪಕ್ಷದಲ್ಲಿದ್ದುಕೊಂಡು ಪಕ್ಷದ ವಿರುದ್ದ ಕೆಲಸ ಮಾಡಿದ ಆರೋಪದ ಮೇಲೆ ಇವರಿಬ್ಬರನ್ನು ಅಮಾನತುಗೊಳಿಸಲಾಗಿದೆ.

ADVERTISEMENT

ಜೆಡಿ(ಯು) CAA ಪರ ನಿಲುವು ಹೊಂದಿದ್ದನ್ನು ಖಂಡಿಸಿ ಪ್ರಶಾಂತ್‌ ಹಾಗೂ ಪವನ್‌ ಇಬ್ಬರೂ ಮತ್ತೆ ಮತ್ತೆ ಜೆಡಿ(ಯು) ನಾಯಕರನ್ನು ತಿವಿಯುತ್ತಿದ್ದದ್ದು ಪಕ್ಷವನ್ನು ಮುಜುಗರಕ್ಕೀಡು ಮಾಡಿತ್ತು. CAA ಸಂವಿಧಾನ ವಿರೋಧಿ ಎಂದು ಪ್ರಶಾಂತ್‌ ಕಿಶೋರ್‌ ಪಕ್ಷ ನಾಯಕರನ್ನು ಎಚ್ಚರಿಸುತ್ತಲೇ ಬಂದಿದ್ದರು. ಇದು, ನಿತೀಶ್‌ ಕುಮಾರ್‌ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಬಿಜೆಪಿಯೊಂದಿಗಿನ ಸಂಬಂಧ ಕಳೆದುಕೊಳ್ಳಲು ಇಷ್ಟವಿಲ್ಲದ ನಿತೀಶ್‌ ಕುಮಾರ್‌ಗೆ ಪ್ರಶಾಂತ್‌ ಕಿಶೋರ್‌ ಅವರನ್ನು ಪಕ್ಷದಿಂದ ಉಚ್ಚಾಟಿಸದೇ ಬೇರೆ ವಿಧಿಯಿರಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೂಚನೆಯ ಮೇರೆಗೆ ಪ್ರಶಾಂತ್‌ ಕಿಶೋರ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿತ್ತು ಎಂದು ನಿತೀಶ್‌ ಕುಮಾರ್‌ ಅವರು ನಿನ್ನೆ ಹೇಳಿದ್ದರು. ಅವರು ಪಕ್ಷದಲ್ಲಿದ್ದರೂ ಇಲ್ಲದಿದ್ದರೂ ನನಗೇನೂ ತೊಂದರೆಯಿಲ್ಲ. ಒಂದು ವೇಳೆ ಪಕ್ಷದಲ್ಲಿ ಇರುವುದಾದರೆ, ಪಕ್ಷದ ಮೂಲ ತತ್ವಗಳನ್ನು ಒಪ್ಪಿಕೊಂಡು ಇರಬೇಕು, ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಹೇಳಿಕೆ ನೀಡಿದ್ದರು.

“ಈಗ ಕಿಶೋರ್‌ ಕುಮಾರ್‌ ಅವರು ಬೇರೆ ಬೇರೆ ಪಕ್ಷಗಳಿಗೆ ಚುನಾವಣಾ ತಂತ್ರಗಾರಿಕೆ ರೂಪಿಸಿಕೊಡುವಲ್ಲಿ ನಿಯತರಾಗಿದ್ದಾರೆ. ಸದ್ಯಕ್ಕೆ ಆಮ್‌ ಆದ್ಮಿ ಪಾರ್ಟಿ ಜೊತೆ ಕೈ ಜೋಡಿಸಿದ್ದಾರೆ. ಅವರಿಗೆ ಬೇರೆ ಬೇರೆ ಸ್ಥಳಗಳಿಗೆ ಹೋಗುವ ಆಸೆಯಿದ್ದರೆ ಅವರು ಹೋಗಲಿ,” ಎಂದು ನಿತೀಶ್‌ ಹೇಳಿದರು.

ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದ ಪ್ರಶಾಂತ್‌ ಕಿಶೋರ್‌, ನಿತೀಶ್‌ ಕುಮಾರ್‌ ಒಬ್ಬ ಸುಳ್ಳುಗಾರ ಎಂದು ಜರಿದಿದ್ದರು. ಒಂದು ವೇಳೆ ನಿತೀಶ್‌ ಕುಮಾರ್‌ ಸತ್ಯವನ್ನೇ ಹೇಳಿದ್ದರೆ ಅಮಿತ್‌ ಶಾ ಸೂಚಿಸಿದಂತಹ ವ್ಯಕ್ತಿಯ ಮಾತುಗಳನ್ನು ಕೇಳದಷ್ಟು ತಾಕತ್ತು ಅವರಲ್ಲಿದೆ ಎಂದು ಯಾರು ನಂಬುತ್ತಾರೆ? ಎಂದು ಟ್ವೀಟ್‌ ಮೂಲಕ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದರು.

ಪ್ರಶಾಂತ್‌ ಕಿಶೋರ್‌ ಒಬ್ಬ ಕೊರೊನಾ ವೈರಸ್‌

ದೇಶದಲ್ಲಿ ಸತತ ಹತ್ತು ವರ್ಷಗಳ ಕಾಲ ಯುಪಿಎ ಆಡಳಿತ ನಡೆಸಿದ ನಂತರ ಬಿಜೆಪಿಯನ್ನು ಅಧಿಕಾರಕ್ಕೆ ತರಲು ತಂತ್ರಗಾರಿಕೆ ರೂಪಿಸಿದಂತಹ ವ್ಯಕ್ತಿಯನ್ನು ಜೆಡಿ(ಯು) ನಾಯಕ ಅಜಯ್‌ ಅಲೋಕ್‌ ಅವರು ಕೊರೊನಾ ವೈರಸ್‌ ಎಂಧು ಕರೆದಿದ್ದಾರೆ. “ಪ್ರಶಾಂತ್‌ ಕಿಶೋರ್‌ ನಂಬಿಕೆಗೆ ಅರ್ಹರಲ್ಲದ ವ್ಯಕ್ತಿ. ಅವರು ಆಪ್‌ ಜೊತೆ ಕೆಲಸ ಮಾಡುತ್ತಾರೆ, ರಾಹುಲ್‌ ಗಾಂಧೀಯನ್ನು ಭೇಟಿಯಾಗುತ್ತಾರೆ, ಮಮತ ಬ್ಯಾನರ್ಜಿ ಜೊತೆ ವೇದಿಕೆ ಹಂಚಿಕೊಳ್ಳುತ್ತಾರೆ. ಇಂತಹ ವ್ಯಕ್ತಿಯನ್ನು ಹೇಗೆ ನಂಬುವುದು? ಇಂತಹ ಕೊರೊನಾ ವೈರಸ್‌ ನಮ್ಮ ಪಕ್ಷವನ್ನು ಬಿಡುತ್ತಿರುವುದು ಸಂತಸದ ವಿಷಯ,” ಎಂದು ಅವರು ಹೇಳಿದ್ದಾರೆ.

CAA ವಿರುದ್ದದ ನಿಲುವು ಪ್ರಶಾಂತ್‌ಗೆ ಕಂಟಕವಾಯಿತೇ?

ಇತ್ತೀಚಿಗೆ ಲಕ್ನೋದ ರ್ಯಾಲಿಯೊಂದರಲ್ಲಿ CAA ಹಾಗೂ ಎನ್‌ಆರ್‌ಸಿಯನ್ನು ಜಾರಿಗೆ ತರುವುದು ಶತಸಿದ್ದ ಎಂದು ಹೇಳಿದ್ದ ಅಮಿತ್‌ ಶಾ ಅವರಿಗೆ ಬಹಿರಂಗವಾಗಿ ಸವಾಲು ಎಸೆದ ಪ್ರಶಾಂತ್‌ ಅವರು, ದೇಶದಲ್ಲಿ ನಡೆಯುತ್ತಿರುವ CAA ವಿರೋಧಿ ಪ್ರತಿಭಟನೆಗಳನ್ನು ನಿರ್ಲಕ್ಷಿಸಿ ನಿಮ್ಮಿಂದ ಸಾಧ್ಯವಾದರೆ ನೀವು ಹೇಳಿರುವ ಕ್ರೊನೋಲೊಜಿಯ ಪ್ರಕಾರ CAA ಹಾಗೂ NRCಯನ್ನು ಜಾರಿಗೊಳಿಸಿ, ಎಂದಿದ್ದರು. ನಂತರ CAA ವಿರೋಧಿ ಹೋರಾಟಗಳನ್ನು ತೀಕ್ಷ್ಣಗೊಳಿಸುವಲ್ಲಿ ಕಾಂಗ್ರೆಸ್‌ ಪ್ರಮುಖ ಪಾತ್ರ ವಹಿಸಿದೆ. ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರ ಅವರು ಒಳ್ಳೇಯ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದು, ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿತ್ತು.

ಬಿಹಾರದ ಬಿಜೆಪಿ ವಕ್ತಾರ ನಿಖಿಲ್‌ ಆನಂದ್‌ ಅವರು ಪ್ರಶಾಂತ್‌ ಕಿಶೋರನ್ನು ಉದ್ದೇಶಿಸಿ “ಕೆಲವು ಅತೀ ಬುದ್ದಿವಂತರು, ಕೇಂದ್ರ ಸರ್ಕಾರದ ಮಿತಿಯೊಳಗೆ ಬರುವಂತಹ ಕಾಯ್ದೆ ಮತ್ತು ಯೋಜನೆಗಳನ್ನು ರಾಜ್ಯದ ವ್ಯಾಪ್ತಿಗೆ ತರಲು ಪ್ರಯತ್ನಿಸುತ್ತಿದ್ದಾರೆ. ಪೌರತ್ವ ನೀಡುವುದು ಹಾಗೂ ಜನಗಣತಿ ನಡೆಸುವುದು ಕೇಂದ್ರ ಸರ್ಕಾರದ ಮಿತಿಯೊಳಗೆ ಬರುವಂತಹ ವಿಚಾರಗಳು. ರಾಜ್ಯ ಸರ್ಕಾರಗಳು ಇದನ್ನು ವಿರೋಧಿಸುವಂತಿಲ್ಲ. ಅಲೌಕಿಕ ಬುದ್ದಮತ್ತೆ ಉಳ್ಳಂತಹ ಕೆಲವರು NRCಯ ಕುರಿತು ಅಪಪ್ರಚಾರ ನಡೆಸುತ್ತಿದ್ದಾರೆ,” ಎಂದು ಪರೋಕ್ಷವಾಗಿ ಪ್ರಶಾಂತ್‌ ಕಿಶೋರ್‌ ಅವರಿಗೆ ಟಾಂಗ್‌ ನೀಡಿದ್ದಾರೆ.

ಒಟ್ಟಿನಲ್ಲಿ, ಜೆಡಿ(ಯು) ಜೊತೆಗಿನ ಪ್ರಶಾಂತ್‌ ಕಿಶೋರ್‌ ಅವರ ಸಂಬಂಧ ಕೇವಲ ಒಂದೂವರೆ ವರ್ಷದಲ್ಲಿ ಕಡಿದು ಹೋಗಿದೆ. ಹಲವು ವರ್ಷಗಳ ಕಾಲ ಬಿಜೆಪಿಯೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಂಡು ಬಂದು ಅಪ್ರತಿಮ ಚುನಾವಣಾ ತಂತ್ರಗಾರಿಕೆ ರೂಪಿಸಿ ರಾಷ್ಟ್ರದೆಲ್ಲೆಡೆ ಹೆಸರುವಾಸಿಯಾಗಿದ್ದ ಪ್ರಶಾಂತ್‌ ಕಿಶೋರ್‌ ಈಗ ನೆಲೆ ಕಳೆದುಕೊಂಡಿದ್ದಾರೆ. ಮುಂದೆ ಯಾವುದಾದರೂ ಪಕ್ಷವನ್ನು ಸೇರಿಕೊಳ್ಳಲಿದ್ದಾರೋ? ಅಥವಾ ಸಕ್ರೀಯ ರಾಜಕಾರಣದಿಂದ ಬೇಸತ್ತು ಮತ್ತೆ ಚುನಾವಣಾ ತಂತ್ರಗಾರಿಕೆ ಮಾಡುವಲ್ಲಿ ಗಮನ ಹರಿಸಲಿದ್ದಾರೋ? ಎಂಬುದು ಇನ್ನೂ ಅವರು ಬಹಿರಂಗಗೊಳಿಸಿಲ್ಲ.

Tags: Amit ShahChanakyacoronavirusJD(U)Nitish KumarPrashant Kishorಕೊರೊನಾ ವೈರಸ್ಚಾಣಕ್ಯಜೆಡಿಯುನಿತೀಶ್ ಕುಮಾರ್ಪ್ರಶಾಂತ್ ಕಿಶೋರ್
Previous Post

ಹಾಲಿ ಡಿಸಿಎಂ ರದ್ದು ಇಲ್ಲ: ಹೆಚ್ಚುವರಿ ಹುದ್ದೆ ಸೃಷ್ಟಿಗೆ ಅವಕಾಶ ಇಲ್ಲ

Next Post

ಬಿಜೆಪಿಗೇ ಸೆಡ್ಡು ಹೊಡೆದ ಮಧ್ಯಪ್ರದೇಶದ ಬಿಜೆಪಿ ಶಾಸಕ! 

Related Posts

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
0

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಕರ್ತರಿಂದ...

Read moreDetails
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
Next Post
ಬಿಜೆಪಿಗೇ ಸೆಡ್ಡು ಹೊಡೆದ ಮಧ್ಯಪ್ರದೇಶದ ಬಿಜೆಪಿ ಶಾಸಕ! 

ಬಿಜೆಪಿಗೇ ಸೆಡ್ಡು ಹೊಡೆದ ಮಧ್ಯಪ್ರದೇಶದ ಬಿಜೆಪಿ ಶಾಸಕ! 

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada