• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅಧಿಕಾರದ ಅಮಲಿನಲ್ಲಿ ನವ ನಿರ್ಮಾಣ ಆಂದೋಲನ ಮರೆತರೇ ಮೋದಿ?

by
January 23, 2020
in ದೇಶ
0
ಅಧಿಕಾರದ ಅಮಲಿನಲ್ಲಿ ನವ ನಿರ್ಮಾಣ ಆಂದೋಲನ ಮರೆತರೇ ಮೋದಿ?
Share on WhatsAppShare on FacebookShare on Telegram

“ಅಟ್ಟ ಹೇರಿದ ಮೇಲೆ ಏಣಿ ಒದೆಯುವುದು” ಎಂಬ ನಾಣ್ಣುಡಿ ಗ್ರಾಮೀಣ ಭಾಗದಲ್ಲಿ ಜನಜನಿತವಾಗಿದೆ. ಈ ಮಾತು ಅಕ್ಷರಶಃ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಅವರು ಪ್ರತಿನಿಧಿಸುವ ಬಿಜೆಪಿಗೆ ಅನ್ವಯಿಸುತ್ತದೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಹಾಗೂ ಜನ ಸಂಘಟನೆಗಳನ್ನು ದೇಶ ವಿರೋಧಿ ಎಂದು ಬಿಂಬಿಸುವ ಕೆಲಸವನ್ನು ಪ್ರಜ್ಙಾಪೂರ್ವಕವಾಗಿ ಮಾಡುತ್ತಿರುವ ಬಿಜೆಪಿಯು 1973ರಲ್ಲಿ ಗುಜರಾತ್‌ನಲ್ಲಿ ನಡೆದ ಅತ್ಯಂತ ಯಶಸ್ವಿ ನವನಿರ್ಮಾಣ ಆಂದೋಲವನ್ನು ಅವಮಾನಿಸುವ ಪ್ರಯತ್ನ ಮಾಡುತ್ತಿದೆ.

ADVERTISEMENT

ಗುಜರಾತಿನ ಅಹಮದಾಬಾದ್ ನ ಎಲ್ ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 1972ರಲ್ಲಿ ಹಾಸ್ಟೆಲ್ ಹಾಗೂ ಊಟದ ಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳಿಂದ ಆರಂಭವಾದ ಹೋರಾಟವು ದೇಶಾದ್ಯಂತ ವ್ಯಾಪಿಸಿತ್ತು. ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ದುರಾಡಳಿತ ಹಾಗೂ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಸರ್ವಾಧಿಕಾರದಿಂದ ಇಡೀ ವ್ಯವಸ್ಥೆ ನಲುಗಿತ್ತು. ಆ ಸಂದರ್ಭದಲ್ಲಿ ಗುಜರಾತಿನ ನವನಿರ್ಮಾಣ ಆಂದೋಲನದ ಯಶಸ್ಸಿನಿಂದ ಪ್ರೇರಿತರಾದ ಜಯಪ್ರಕಾಶ್ ನಾರಾಯಣ್ ಅವರು ಸಂಪೂರ್ಣ ಕ್ರಾಂತಿಗೆ ಕರೆಕೊಟ್ಟು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರನ್ನು ಅಧಿಕಾರದಿಂದ ಕಿತ್ತೊಗೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರಲ್ಲದೇ ಭಾರತದ ರಾಜಕೀಯ ದಿಕ್ಕು-ದಿಸೆಯನ್ನೇ ಬದಲಿಸಿದ್ದರು.

ಈ ನವನಿರ್ಮಾಣ ಹೋರಾಟವು ಗುಜರಾತ್ ನಲ್ಲಿ ಯಶಸ್ವಿಯಾಗುವಲ್ಲಿ ಅಂದಿನ ಆರ್‌ ಎಸ್ ಎಸ್ ಕಾರ್ಯಕರ್ತ ಹಾಗೂ ಇಂದಿನ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರ ಗಮನಾರ್ಹವಾಗಿತ್ತು. ಭಾರತೀಯ ಜನ ಸಂಘ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ವಿರೋಧ ಪಕ್ಷಗಳನ್ನು ಒಗ್ಗೂಡಿಸಿ ಹೋರಾಟ ಸಂಘಟಿಸುವಲ್ಲಿ 24 ವರ್ಷದ ನರೇಂದ್ರ ಮೋದಿ ಯಶಸ್ವಿಯಾಗಿದ್ದರು. ಇದು ಮೋದಿಯವರಿಗೆ ಸಾಮಾಜಿಕ ಬದುಕಿನಲ್ಲಿ ದೊರೆತ ಮೊದಲ ಜಯ ಎಂದು ಅವರ ವೆಬ್ ಸೈಟ್ (www.narendramodi.in) ನಲ್ಲಿ ಉಲ್ಲೇಖಿಸಲಾಗಿದೆ. ಈಗ ಅದೇ ನರೇಂದ್ರ ಮೋದಿಯವರು “ಸಿಎಎ ವಿರೋಧಿಸುತ್ತಿರುವವರನ್ನು ಅವರ ದಿರಿಸಿನಿಂದ ಪತ್ತೆಹಚ್ಚಬಹುದು” ಎನ್ನುವ ಮೂಲಕ ತಾನೊಬ್ಬ ಅಧಿಕಾರದಾಹಿ ಹಾಗೂ ಕಪಟ ರಾಜಕಾರಣಿ ಎಂಬುದನ್ನು ಸಾಬೀತುಪಡಿಸಿದ್ದಾರೆ.

1972ರಲ್ಲಿ ತೀವ್ರ ಬರದ ಹಿನ್ನೆಲೆಯಲ್ಲಿ ದೇಶದಲ್ಲೆಡೆ ಬಡತನ ಹಾಗೂ ನಿರುದ್ಯೋಗ ವ್ಯಾಪಕವಾಗಿತ್ತು. ಇಂಥ ವಿಷಮ ಪರಿಸ್ಥಿತಿಯಲ್ಲಿ ಚಿಮನ್ ಭಾಯ್ ಪಟೇಲ್ ನೇತೃತ್ವದ ಅಂದಿನ ಕಾಂಗ್ರೆಸ್‌ ಸರ್ಕಾರವು ಗುಜರಾತಿನಲ್ಲಿ ಹಾಸ್ಟೆಲ್‌ ಹಾಗೂ ಆಹಾರದ ಶುಲ್ಕ ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದನ್ನು ವಿರೋಧಿಸಿ ಬೀದಿಗಿಳಿದ ವಿದ್ಯಾರ್ಥಿಗಳಿಗೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ), ಆರ್ ಎಸ್ ಎಸ್ ಬೆಂಬಲ ನೀಡಿದ್ದವು. ವಿರೋಧ ಪಕ್ಷಗಳು ಹೋರಾಟದಲ್ಲಿ ಭಾಗಿಯಾಗಿದ್ದರಿಂದ ಆಂದೋಲನ ರಾಜ್ಯಾದ್ಯಾಂತ ವ್ಯಾಪಿಸಿತ್ತು. ಹೋರಾಟಕ್ಕೆ ಮಣಿದ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರವು ಗುಜರಾತಿನಲ್ಲಿ ರಾಷ್ಟ್ರಪತಿ ಆಡಳಿತ ಹೇರಿತ್ತು. ಬಳಿಕ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗುವ ನಿರ್ಧಾರ ಪ್ರಕಟಿಸಿತ್ತು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಹೋಗಿತ್ತು. 1975ರಲ್ಲಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಈ ಬಳಿಕ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋತಿತ್ತು.

ಇಂದಿರಾ ಕಾಲದಲ್ಲಿ ಆದಂತೆ ಈಗ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಜನ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಉತ್ತರ ಪ್ರದೇಶ, ಕರ್ನಾಟಕ ಹಾಗೂ ಅಸ್ಸಾಂನಲ್ಲಿ ಹೋರಾಟ ನಿರತ 30 ಜನರನ್ನು ಪೊಲೀಸರು ಗುಂಡಿಟ್ಟು ಕೊಂದಿದ್ದಾರೆ. ಜಾಮೀಯಾ ಮಿಲಿಯಾ, ಅಲಿಘಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಿರ್ದಯವಾಗಿ ದಾಳಿ ನಡೆಸಿದ್ದಾರೆ. ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ನಡೆಸಿದ ದಾಳಿಗೆ ಪೊಲೀಸರೇ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪ ಪ್ರಬಲವಾಗಿ ಕೇಳಿಬಂದಿದೆ.

ಹೋರಾಟದಲ್ಲಿ ಭಾಗಿಯಾದ ಕಾರಣಕ್ಕೆ ಹಲವು ಅಮಾಯಕರ ವಿರುದ್ಧ ಗಂಭೀರ ಪ್ರಕರಣ ದಾಖಲಿಸಲಾಗಿದೆ. ಅಸ್ಸಾಂನ ರೈತ ನಾಯಕ ಅಖಿಲ್ ಗೊಗೊಯ್ ಅವರನ್ನು ರಾಷ್ಟ್ರೀಯ ಭದ್ರತಾ ಸಂಸ್ಥೆ (ಎನ್‌ ಐಎ) ಬಂಧಿಸಿದೆ. ಭೀಮ ಸೇನೆ ಮುಖಂಡ ಚಂದ್ರಶೇಖರ್ ಆಜಾದ್ ಅವರನ್ನು ಬಂಧಿಸಿ, ಜೈಲಿಗಟ್ಟಲಾಗಿತ್ತು. ಆಜಾದ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ದೆಹಲಿಯ ಶಹೀನ್ ಬಾಗ್ ನಲ್ಲಿ ಕಳೆದ 40 ದಿನಗಳಿಂದ ಮಹಿಳೆಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ದೆಹಲಿಯ ಕೊರೆಯುವ ಚಳಿಯಲ್ಲಿ ಪುಟಾಣಿ ಮಕ್ಕಳನ್ನು ಹೊತ್ತು ಮಹಿಳೆಯರು ನಡೆಸುತ್ತಿರುವ ಧರಣಿಯ ಸ್ಥಳಕ್ಕೆ ಮೋದಿ ಸರ್ಕಾರದ ಯಾವೊಬ್ಬ ಪ್ರತಿನಿಧಿಯೂ ಭೇಟಿ ನೀಡಿಲ್ಲ. ಬದಲಾಗಿ ಶಹೀನ್ ಬಾಗ್‌ ನಲ್ಲಿ ಪ್ರತಿಭಟನಾ ನಿರತ ಮಹಿಳೆಯರಿಗೆ ತಲಾ 500 ರುಪಾಯಿ ಹಣ ಪಾವತಿಸಲಾಗುತ್ತಿದೆ. ಆ ಕಾರಣದಿಂದ ಅವರು ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು ದೇಶ ವಿರೋಧಿ ಘೋಷಣೆ ಕೂಗುತ್ತಿದ್ದಾರೆ ಎನ್ನುವುದರ ಜೊತೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಭಟನಾಕಾರರಿಗೆ ಮಸಿ ಬಳಿಯುವ ಕೆಲಸವನ್ನು ಮೋದಿಯವರ ಬಿಜೆಪಿ ಮಾಡುತ್ತಿದೆ. ಮಹಿಳೆಯರು ಹಣ ಪಡೆದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಹೀನ್ ಬಾಗ್ ಹೋರಾಟಗಾರರು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್‌ ಮಾಳವಿಯಾ ಹಾಗೂ ಆಯ್ದ ಸುದ್ದಿ ವಾಹಿನಿಗಳ ಸಂಪಾದಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಹೀಗೆ ಆಡಳಿತ ಪಕ್ಷವು ನಾನಾ ಥರದಲ್ಲಿ ಹೋರಾಟಗಾರರನ್ನು ದಿಕ್ಕು ತಪ್ಪಿಸುವ ಕಾರ್ಯದಲ್ಲಿ ನಿರತವಾಗಿದೆ.

1973ರ ನವ ನಿರ್ಮಾಣ ಹೋರಾಟದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ಮೋದಿಯವರು ಇಂದಿನ ಹೋರಾಟವನ್ನು ಅವಮಾನಿಸುತ್ತಿರುವುದೇಕೆ? ಜನ ಹೋರಾಟದ ಮೂಲಕ ರಾಜಕೀಯ ಬದುಕು ಆರಂಭಿಸಿದ ಮೋದಿಯವರಿಗೆ ಜನರು ಹಾಗೂ ವಿದ್ಯಾರ್ಥಿಗಳ ಕೂಗು ಕೇಳುತ್ತಿಲ್ಲವೇಕೆ? ಜನ ಹೋರಾಟಗಳನ್ನು ನಿರ್ಲಕ್ಷಿಸಿದ ಯಾವ ಸರ್ಕಾರಗಳು ಜಗತ್ತಿನಲ್ಲಿ ನಿಂತಿಲ್ಲ. ಈ ಸತ್ಯವನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅರ್ಥಮಾಡಿಕೊಳ್ಳಬೇಕು. ಮಾತುಕತೆ ಹಾಗೂ ಸಂಧಾನದ ಮೂಲಕ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ತೋರಬೇಕಿದೆ, ಹೋರಾಟಗಳು ನಿರಂತರವಾಗಿ ನಡೆದರೆ ಅಲ್ಲಿನ ಅಭಿವೃದ್ಧಿಗೆ ಪೂರಕವಾದ ವಾತಾವರಣ ಇರುವುದಿಲ್ಲ. ದೇಶದ ಆರ್ಥಿಕ ಸ್ಥಿತಿ ಕೆಟ್ಟಿರುವ ಸಂದರ್ಭದಲ್ಲಿ ಜನ ಹೋರಾಟಗಳನ್ನು ನಿರ್ಲಕ್ಷಿಸುವುದು ಸರ್ಕಾರಕ್ಕೆ ಹೊಡೆತ ನೀಡುವುದು ನಿಶ್ಚಿತ. ಈ ಸೂಕ್ಷ್ಮವನ್ನು ಮೋದಿ ಹಾಗೂ ಅವರ ಬೆಂಬಲಿಗರು ಅರಿಯಬೇಕಿದೆ.

Tags: Ahmedabadcampus grievancescanteen chargesGujaratLD Engineering CollegePoliceStudentsಅಹ್ಮದಾಬಾದ್ಎಲ್ ಡಿ ಇಂಜಿನಿಯರಿಂಗ್ ಕಾಲೇಜುಕ್ಯಾಂಟೀನ್ ಶುಲ್ಕಗಳುಕ್ಯಾಂಪಸ್ ಸಮಸ್ಯೆಗಳುಗುಜರಾತ್ಪೊಲೀಸ್ಪ್ರತಿಭಟನೆವಿದ್ಯಾರ್ಥಿಗಳು
Previous Post

ಫ್ಯಾಸಿಸ್ಟ್ ಕಾಲದಲ್ಲಿ ಜೀವಂತ ದಹನವಾದ ಗ್ರಹಾಂ ಸ್ಟೈನ್ಸ್, ಮಕ್ಕಳಿಬ್ಬರ ನೆನಪು

Next Post

ದೆಹಲಿ ಚುನಾವಣೆ ಗೆಲ್ಲಲು ಕೋಮು ಪ್ರಚೋದನೆಗೆ ಮುಂದಾದ ಬಿಜೆಪಿ

Related Posts

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ...

Read moreDetails
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Next Post
ದೆಹಲಿ ಚುನಾವಣೆ ಗೆಲ್ಲಲು ಕೋಮು ಪ್ರಚೋದನೆಗೆ ಮುಂದಾದ ಬಿಜೆಪಿ

ದೆಹಲಿ ಚುನಾವಣೆ ಗೆಲ್ಲಲು ಕೋಮು ಪ್ರಚೋದನೆಗೆ ಮುಂದಾದ ಬಿಜೆಪಿ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada