• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅಧಿಕಾರವಿಲ್ಲದಿದ್ದರೂ ಪೌರತ್ವ ಸಾಬೀತು ಪಡಿಸಲು ನೋಟಿಸ್‌ ನೀಡಿದ UIDAI 

by
February 23, 2020
in ದೇಶ
0
ಅಧಿಕಾರವಿಲ್ಲದಿದ್ದರೂ ಪೌರತ್ವ ಸಾಬೀತು ಪಡಿಸಲು ನೋಟಿಸ್‌ ನೀಡಿದ UIDAI 
Share on WhatsAppShare on FacebookShare on Telegram

ಭಾರತದ ವಿಶಿಷ್ಟ ಗುರುತು ಚೀಟಿ ನೀಡಿಕೆ ಪ್ರಾಧಿಕಾರ (UIDAI)ಯು ಹೈದರಾಬಾದ್‌ನ ಮೂವರಿಗೆ ತಮ್ಮ ಪೌರತ್ವವನ್ನು ಸಾಬೀತು ಪಡಿಸುವಂತೆ ನೋಟಿಸ್‌ ಜಾರಿ ಮಾಡಿದೆ. ಹೈದರಾಬಾದ್‌ನ ಮೂವರು ಮುಸ್ಲಿಂ ವ್ಯಕ್ತಿಗಳಿಗೆ ನೋಟಿಸ್‌ ನೀಡಿ ತಾವು ಮೋಸದಿಂದ ಆಧಾರ್‌ ಕಾರ್ಡ್‌ನ್ನು ಪಡೆದುಕೊಂಡಿದ್ದೀರ. ಆ ಕಾರಣಕ್ಕಾಗಿ ತಮ್ಮ ಪೌರತ್ವವನ್ನು ಸಾಬೀತು ಪಡಿಸಿ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ADVERTISEMENT

ಆ ಮೂವರು ವ್ಯಕ್ತಿಗಳನ್ನು ಸ್ಥಳಿಯ UIDAI ಕಚೇರಿಗೆ ಬರುವಂತೆ ಸಮನ್ಸ್‌ ಜಾರಿ ಮಾಡಿ, ಮೂವರು ಸುಳ್ಳು ಮಾಹಿತಿ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಆಧಾರ್‌ ಕಾರ್ಡ್‌ನ್ನು ಪಡೆದುಕೊಂಡಿದ್ದೀರೆಂದು ದೂರು ದಾಖಲಾಗಿರುವುದರಿಂದ ಈ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ತಿಳಿಸಲಾಗಿದೆ. ವಿಚಾರಣೆಗೆ ಹಾಜರಾಗುವಾಗ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರುಪಡಿಸಬೇಕೆಂದು ಹೇಳಿದೆ. ಒಂದು ವೇಳೆ ಮೂಲ ದಾಖಲೆಗಳನ್ನು ಹಾಜರು ಪಡಿಸದಿದ್ದಲ್ಲಿ ಅಥವಾ ಆಧಾರ್‌ ವಿಚಾರಣಾಧಿಕಾರಿಯೆದುರು ಹಾಜರಾಗದಿದ್ದಲ್ಲಿ ಅವರ ಆಧಾರ್‌ ಸಂಖ್ಯೆಗಳನ್ನು deactivate ಮಾಡಲಾಗುವುದು ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ. ಆದರೆ, ಪೌರತ್ವವನ್ನು ಸಾಬೀತು ಪಡಿಸಲು ಯಾವ ದಾಖಲೆಗಳನ್ನು ನೀಡಬೇಕೆಂದು ನೋಟಿಸ್‌ನಲ್ಲಿ ತಿಳಿಸಲಾಗಿಲ್ಲ.

ಮೊದಲಿಗೆ ಫ್ರಬ್ರುವರಿ 20ರಂದು ವಿಚಾರಣೆಗೆ ವಿಚಾರಣಾಧಿಕಾರಿ ಅಮಿತಾ ಬಿಂದ್ರೋ ಎದುರು ಹಾಜರಾಗಲು ತಿಳಿಸಿದ್ದು, ನಂತರ ದಾಖಲೆಗಳನ್ನು ಸಂಗ್ರಹಿಸಲು ಕಷ್ಟವಾಗಬಹುದೆಂಬ ಕಾರಣಕ್ಕೆ ವಿಚಾರಣೆಯನ್ನು ಮೇ ತಿಂಗಳಿಗೆ ಮುಂದೂಡಲಾಗಿದೆ.

UIDAIಗೆ ಪೌರತ್ವವನ್ನು ಪ್ರಶ್ನಿಸುವ ಅಧಿಕಾರವಿದೆಯೇ?

2016ರ ಆಧಾರ್‌ ಕಾಯ್ದೆಯ ಪ್ರಕಾರ ಆಧಾರ್‌ ಕಾರ್ಡ್‌ ನೀಡಲು ಬೇಕಾಗಿರುವುದು ವಾಸ್ತವ್ಯ ಧೃಢೀಕರಣವೇ ಹೊರತು ಪೌರತ್ವವಲ್ಲ. ವಿದೇಶಿಗರನ್ನೂ ಸೇರಿಸಿ, ಭಾರತದಲ್ಲಿ ವಾಸವಿರುವ ಎಲ್ಲರೂ ಆಧಾರ್‌ ಕಾರ್ಡ್‌ ಪಡೆಯಲು ಅರ್ಹರು. ಆಧಾರ್‌ ಕಾರ್ಡ್‌ ಪಡೆಯಲು ಅರ್ಜಿ ಸಲ್ಲಿಸುವ ಮೊದಲು 182 ದಿನಗಳ ಕಾಲ ಅವರು ಭಾರತದಲ್ಲಿ ವಾಸವಿರಬೇಕಾಗುತ್ತದೆ. ಈ ನಿಮಯಗಳು ಆಧಾರ್‌ ಕಾಯ್ದೆಯಲ್ಲಿ ಸ್ಪಷ್ಟವಾಗಿ ಉಲ್ಲೇಖಿವಾಗಿವೆ.

ಇನ್ನು ಒಂದು ವೇಳೆ ಯಾರಾದರೂ ಮೋಸದಿಂದ ಸುಳ್ಳು ಹೇಳಿ ಆಧಾರ್‌ ಕಾರ್ಡ್‌ನ್ನು ಪಡೆದುಕೊಂಡದ್ದು UIDAIಗೆ ತಿಳಿದು ಬಂದಲ್ಲಿ ಅಂಥಹವರ ಆಧಾರ್‌ ಸಂಖ್ಯೆಯನ್ನು ರದ್ದುಗೊಳಿಸಿ ವಾಸ್ತವ್ಯದ ಮೂಲ ದಾಖಲೆಗಳನ್ನು ಸಲ್ಲಿಸಲು ಹೇಳಬೇಕೇ ವಿನಃ, ಪೌರತ್ವದ ದಾಖಲೆಗಳನ್ನು ಕೇಳುವ ಹಾಗಿಲ್ಲ.

ಈ ಕುರಿತು ಪ್ರತಿಕ್ರಿಯೆ ನೀಡಿರುವಂತಹ UIDAI ನೋಟಿಸ್‌ ನೀಡಿರುವುದು UIDAIಯ ಗುಣಮಟ್ಟ ಉತ್ತಮ ಪಡಿಸುವ ಕಾರ್ಯ ಯೋಜನೆಗಳಲ್ಲಿ ಒಂದಾಗಿದೆ. ಇದಕ್ಕೂ ಪೌರತ್ವವನ್ನು ಸಾಬೀತು ಪಡಿಸುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತೇಪೆ ಹಚ್ಚುವ ಕಾರ್ಯ ಮಾಡಿದೆ. ಇನ್ನು ಆಧಾರ್‌ ಕಾರ್ಡ್‌ ಪೌರತ್ವವನ್ನು ಧೃಢೀಕರಿಸುವ ಆಧಾರವಲ್ಲ ಎಂದು UIDAI ಸ್ಪಷ್ಟಪಡಿಸಿದೆ.

ಆದರೂ, ಸಿಎಎ ಹಾಗೂ ಎನ್‌ಆರ್‌ಸಿಯ ವಿರುದ್ದ ದೇಶದಾದ್ಯಂತ ಕಾವೇರಿದ ಸಂದರ್ಭದಲ್ಲಿ UIDAI ನೀಡಿರುವ ನೋಟಿಸ್‌ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಅಧಿಕಾರದ ವ್ಯಾಪ್ತಿಗೆ ಬರದಿದ್ದರೂ, ಪೌರತ್ವವನ್ನು ಸಾಬೀತು ಪಡಿಸಲು ನೋಟಿಸ್‌ ನೀಡಿರುವುದು ನಿಜಕ್ಕೂ ಆಶ್ಚರ್ಯವೇ ಸರಿ.

ಕೃಪೆ: ಸ್ಕ್ರಾಲ್‌.ಇನ್‌

Tags: Aadhar CardUIDAIಆಧಾರ್‌ ಕಾರ್ಡ್‌ಪೌರತ್ವ
Previous Post

ಡೊನಾಲ್ಡ್ ಟ್ರಂಪ್ ಭೇಟಿಯಿಂದ ಭಾರತಕ್ಕೆ ಏನು ಲಾಭ?

Next Post

ಸರ್ಕಾರ ಉಳಿಸುವ ಧಾವಂತದಲ್ಲಿ ನೆರೆ ಸಂತ್ರಸ್ತರನ್ನು ಮರೆತ ಸರ್ಕಾರ

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಸರ್ಕಾರ ಉಳಿಸುವ ಧಾವಂತದಲ್ಲಿ ನೆರೆ ಸಂತ್ರಸ್ತರನ್ನು ಮರೆತ ಸರ್ಕಾರ

ಸರ್ಕಾರ ಉಳಿಸುವ ಧಾವಂತದಲ್ಲಿ ನೆರೆ ಸಂತ್ರಸ್ತರನ್ನು ಮರೆತ ಸರ್ಕಾರ

Please login to join discussion

Recent News

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada