• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಪಾಯಕಾರಿ ಕರೋನಾಗೆ ಯುನಾನಿ, ಹೊಮಿಯೋಪತಿ ಮದ್ದು

by
January 31, 2020
in ದೇಶ
0
ಅಪಾಯಕಾರಿ ಕರೋನಾಗೆ ಯುನಾನಿ
Share on WhatsAppShare on FacebookShare on Telegram

ಚೀನಾದಲ್ಲಿ ಮರಣ ಮೃದಂಗ ಬಾರಿಸ್ತಿರುವ ಕರೊನಾ ವೈರಸ್ ಭಾರತಕ್ಕೂ ಕಾಲಿಟಿದೆ. ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ. ಕೇರಳದಿಂದ ಚೀನಾದ ವುಹಾನ್‌ಗೆ ತೆರಳಿದ್ದ ವಿದ್ಯಾರ್ಥಿ, ಅನಾರೋಗ್ಯಕ್ಕೆ ತುತ್ತಾಗಿದ್ದ. ಕೂಡಲೇ ತಾಯ್ನಾಡಿಗೆ ಮರಳಿದ್ದ. ಇಲ್ಲಿಗೆ ಬಂದ ಕೂಡಲೆ ಅನಾರೋಗ್ಯ ಪೀಡಿತರಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಲ್ಲಾ ರೀತಿಯ ತಪಾಸಣೆಗಳನ್ನು ನಡೆಸಿದಾಗ ಕರೊನಾ ವೈರಸ್ ಪತ್ತೆಯಾಗಿರುವುದು ಖಚಿತವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ರೋಗ ಪೀಡಿತ ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ರೋಗಿಯ ಸ್ಥಿತಿ ಸ್ಥಿರವಾಗಿದೆ. ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ. ಕೇರಳದಲ್ಲಿ ಈ ಪ್ರಕರಣ ಪತ್ತೆಯಾಗಿರುವುದರಿಂದ ಕರ್ನಾಟಕದ ಗಡಿ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕೇರಳ ಹಾಗೂ ಕರ್ನಾಟಕದ ನಡುವೆ ಸಂಚರಿಸುವ ಬಸ್‌ಗಳು ಹಾಗೂ ವಿಮಾನಗಳಲ್ಲಿ ತೀವ್ರ ಎಚ್ಚರಿಕೆ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಚೀನಾದಲ್ಲಿ ಇದುವರೆಗೂ 170 ಮಂದಿ ಮೃತಪಟ್ಟಿದ್ದು, 7711 ಮಂದಿಗೆ ಸೋಂಕು ತಗುಲಿ ಆಸ್ಪತ್ರೆ ಸೇರಿದ್ದಾರೆ.6

ADVERTISEMENT

ಕರೋನಾ ವೈರಸ್ ವಿಶ್ವದೆಲ್ಲೆಡೆ ಮರಣ ಮೃದಂಗ ಬಾರಿಸುತ್ತಾ ಇದೆ. ಮಹಾಮಾರಿ ಕರೋನಾಗೆ ಚೀನಾ ಅಕ್ಷರಶಃ ತತ್ತರಿಸಿ ಹೋಗಿದೆ. ಮಕ್ಕಳು, ವಯಸ್ಕರು, ವೃದ್ಧರು ಎನ್ನದೆ 18ಕ್ಕೂ ಹೆಚ್ಚು ನಗರಗಳು ಹಾಸಿಗೆ ಮೇಲೆ ಮಲಗಿವೆ. ಎಲ್ಲಾ ಆಸ್ಪತ್ರೆಗಳಲ್ಲೂ ಮುಖಕ್ಕೆ ಮಾಸ್ಕ್ ಹಾಕಿದ ಕೊರೋನಾ ಸೋಂಕಿತರು ಕಣ್ಣಿಗೆ ಕಾಣಿಸುತ್ತಾರೆ. ಕೊರೋನಾ ವೈರಸ್ ವಿಶ್ವವನ್ನೇ ಅಲುಗಾಡಿಸುತ್ತಿದ್ದರೂ ಭಾರತ ಮಾತ್ರ ಹೋಮಿಯೋಪತಿ ಹಾಗೂ ಯುನಾನಿ ಔಷಧಿ ಬಳಸಿ, ಕೊರೋನಾದಿಂದಲೇ ದೂರ ಇರಿ ಎಂದು ಸರ್ಕಾರವೇ ಸುತ್ತೋಲೆ ಹೊರಡಿಸಿದೆ.

ಅಲೋಪಥಿ ಮೆಡಿಸಿನ್‌ಗಿಂತ ಆಯುರ್ವೇದ ಮದ್ದು ಬಹಳಷ್ಟು ಪರಿಣಾಮಕಾರಿ ಎನ್ನುವುದು ಖಚಿತ. ಕೇಂದ್ರ ಸರ್ಕಾರ ಕೂಡ ಹೋಮಿಯೋಪತಿ ಮತ್ತು ಯುನಾನಿ ಔಷಧಿ ಮೊರೆ ಹೋಗಿದ್ದು, ಕಾಯಿಲೆ ಬರುವ ಮುಂಚೆಯೇ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ವೈರಸ್ ಸೋಂಕು ನಿಮ್ಮ ಮೇಲೆ ದಾಳಿ ಮಾಡದಂತೆ ಹೇಗೆ ಮುಂಜಾಗ್ರತೆ ವಹಿಸಬಹುದು ಎನ್ನುವ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.

ಕರೋನಾ ಮಾರಿಗೆ ಮದ್ದು ಏನು?

* 2 ದಿನಕ್ಕೊಮ್ಮೆ ಉಗುರು ಬೆಚ್ಚನೆ ನೀರಲ್ಲಿ 5 ಗ್ರಾಂ ಅಗಸ್ತ್ಯ ಹರಿತ್ಯಾಕಿ ಕುಡಿಯಿರಿ
* ಎರಡು ದಿನಕ್ಕೊಮ್ಮೆ ಸಂಶಮನಿ ವಾಟಿ 500 ಮಿ.ಗ್ರಾಂ ಬಳಸಿ
* ಕಾಳುಮೆಣಸು, ಶುಂಠಿ ಜೊತೆ ನೀರಲ್ಲಿ 5 ತುಳಸಿ ಎಲೆ ಕುದಿಸಿ ಸೇವಿಸಿ
* 1 ಲೀ. ನೀರನ್ನ ಅರ್ಧ ಲೀಟರ್ಗೆ ಬರುವಂತೆ ಕುದಿಸಿ ಕುಡಿಯಬೇಕು
* ಬೇರು ಹಣ್ಣನ್ನ ಹೆಚ್ಚಾಗಿ ತಿನ್ನೋದ್ರಿಂದ ವೈರಸ್ ತಡೆಗಟ್ಟಬಹುದು
* ನಿತ್ಯ 3 ಗ್ರಾಂ ದಾಲ್ಚಿನ್ನಿ, 12 ಗ್ರಾಂ ಗಸಗಸೆ ಸೇವಿಸುವುದು ಸೂಕ್ತ

ಪ್ರತಿಯೊಬ್ಬರು ಶುಚಿತ್ವಕ್ಕೆ ತುಂಬಾ ಮಹತ್ವ ಕೊಡಬೇಕು. ಕರೋನಾ ಒಬ್ಬರಿಂದ ಒಬ್ಬರಿಗೆ ಹರಡೋ ಅಂಟು ರೋಗ. ಕೈಗಳನ್ನ ಆಗಿಂದಾಗೆ ಸೋಪ್‌ನಿಂದ ತೊಳೆಯಬೇಕು. ಕೈ ತೊಳೆಯದೆ ಯಾವುದೇ ಕಾರಣಕ್ಕೂ ಮೂಗು, ಕಣ್ಣು, ಬಾಯಿಯನ್ನ ಮುಟ್ಟಿಕೊಳ್ಳಬಾರದು. ಅಲ್ಲದೆ ಸೋಂಕಿತರು ಎಂದು ಕಂಡು ಬಂದರೆ ಅವರಿಂದ ಆದಷ್ಟು ದೂರ ಇರುವುದು ಒಳ್ಳೆಯದ್ದು. ಜೊತೆಗೆ ಅನಾರೋಗ್ಯಕ್ಕೀಡಾದವರು ಹೊರಗಡೆ ಅಡ್ಡಾಡುವ ಬದಲು ಮನೆಯಲ್ಲೇ ಇದ್ದು ಚಿಕಿತ್ಸೆ ತೆಗೆದುಕೊಳ್ಳುವುದು ಒಳ್ಳೆಯದ್ದು. ಕೆಮ್ಮು ಇದ್ದವರು ಮುಖಕ್ಕೆ ಕರ್ಚೀಫ್ ಇಟ್ಟುಕೊಳ್ಳಬೇಕು. ಒಂದು ವೇಳೆ ಪ್ರವಾಸ ಹೋಗುವ ಅನಿವಾರ್ಯತೆ ಇದ್ದರೆ N95 ಮಾಸ್ಕನ್ನೇ ಬಳಸಬೇಕು ಎಂದು ಸ್ವತಃ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಈಗಾಗಲೇ ಭಾರತದಲ್ಲಿ ಕರೋನಾ ವೈರಸ್ ಪತ್ತೆಯಾಗಿರುವ ಕಾರಣ ಹರುಡುವಿಕೆ ದಿನದಿಂದ ದಿನಕ್ಕೆ ಏರಿಕೆಯಾಗಿವುದು ಕಟ್ಟಿಟ್ಟ ಬುತ್ತಿ. ಅದರಲ್ಲೂ ಕರ್ನಾಟಕದ ಪಕ್ಕದ ಕೇರಳದಲ್ಲೇ ಪತ್ತೆಯಾಗಿರೋದು ಕರ್ನಾಟಕದಲ್ಲಿ ಮತ್ತಷ್ಟು ಭಯದ ವಾತಾವರಣ ಸೃಷ್ಟಿ ಮಾಡಿದೆ. ಇಂತಹ ಸಂಧರ್ಭದಲ್ಲಿ ನಾವು ಎಚ್ಚರಿಕೆ ವಹಿಸದಿದ್ದಲ್ಲಿ, ಮುಂದೆ ಅತೀ ದೊಡ್ಡ ಸಂಕಷ್ಟ ಎದುರಿಸಬೇಕಾಗುವ ಸಾಧ್ಯತೆಗಳಿವೆ.

Tags: Central GovernmentCorona VirusGovernment of KeralaHomeopathyUnaniಕೇಂದ್ರ ಸರ್ಕಾರಕೊರೋನಾ ವೈರಸ್ಯುನಾನಿಹೊಮಿಯೋಪತಿ
Previous Post

ದೆಹಲಿಯಲ್ಲಿ ಕೇಜ್ರಿವಾಲ್ ಬೆನ್ನಿಗೆ ದೀದಿ..! ಮೋದಿಗೆ ಭೀತಿ..!

Next Post

ಬಜೆಟ್ 2020: ಯುವಜನರ ಹಾಗೂ ಕೃಷಿಕರ ಆದ್ಯತೆಗಳೇನು?

Related Posts

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..
Top Story

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

by ಪ್ರತಿಧ್ವನಿ
February 6, 2026
0

ವೈಭವ್ ಸೂರ್ಯವಂಶಿ (Vaibhav Suryavanshi) 14 ವರ್ಷದ ವೈಭವ್ ಸೂರ್ಯವಂಶಿ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 80 ಎಸೆತಗಳಲ್ಲಿ 175ರನ್‌ಗಳ ಸಿಡಿಲಬ್ಬರದ ಶತಕ ಸಿಡಿಸಿ...

Read moreDetails
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

February 5, 2026
Next Post
ಬಜೆಟ್ 2020: ಯುವಜನರ ಹಾಗೂ ಕೃಷಿಕರ ಆದ್ಯತೆಗಳೇನು?

ಬಜೆಟ್ 2020: ಯುವಜನರ ಹಾಗೂ ಕೃಷಿಕರ ಆದ್ಯತೆಗಳೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada