• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಶೋಧ

ಅಪೆಕ್ಸ್ ಅಕ್ರಮ-5: ರಿಯಲ್‌ ಎಸ್ಟೇಟ್‌ಗೂ ಬೇಕಾಬಿಟ್ಟಿ ಸಾಲ; ದುಸ್ಥಿತಿಗೆ ತಲುಪಿತೇ ಅಪೆಕ್ಸ್‌ ಬ್ಯಾಂಕ್‌?

by
August 9, 2020
in ಶೋಧ
0
ಅಪೆಕ್ಸ್ ಅಕ್ರಮ-5: ರಿಯಲ್‌ ಎಸ್ಟೇಟ್‌ಗೂ ಬೇಕಾಬಿಟ್ಟಿ ಸಾಲ; ದುಸ್ಥಿತಿಗೆ ತಲುಪಿತೇ ಅಪೆಕ್ಸ್‌ ಬ್ಯಾಂಕ್‌?
Share on WhatsAppShare on FacebookShare on Telegram

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರೈತ ಸಹಕಾರಿ ಸಂಸ್ಥೆಗಳು, ಸಹಕಾರಿ ಸಂಘ ಮತ್ತು ಸಹಕಾಅರ ಬ್ಯಾಂಕ್‍ಗಳಿಗೆ ಆರ್ಥಿಕ ನೆರವು ನೀಡಬೇಕಿದ್ದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಮತ್ತು ಆಡಳಿತ ಮಂಡಳಿಯ ಇನ್ನಿತರೆ ನಿರ್ದೇಶಕರು ಅನಗತ್ಯವಾಗಿ ಮತ್ತು ವ್ಯವಧಾನವಿಲ್ಲದೆ ಸಹಕಾರಿ ನಿಯಮಾವಳಿಗಳು, ಬ್ಯಾಂಕ್‌ನ ಉಪ ನಿಯಮಗಳ ಉಲ್ಲಂಘಿಸಿದ್ದಾರೆ.

ADVERTISEMENT

ಖಾಸಗಿ ವ್ಯಕ್ತಿಗಳು, ವಾಣಿಜ್ಯ ಸಂಸ್ಥೆಗಳು, ಟ್ರಸ್ಟ್‌ಗಳಿಗೆ ಯಾವುದೇ ಜಾಮೀನು ಮತ್ತು ಭದ್ರತೆಯನ್ನು ಪಡೆಯದೇ ಕಟ್ಟಡ ನಿರ್ಮಾಣ ಕಂಪನಿ, ಸಕ್ಕರೆ ಕಾರ್ಖಾನೆ, ಚಿನ್ನದ ಅಂಗಡಿಗಳಿಗೂ ಬೇಕಾಬಿಟ್ಟಿಯಾಗಿ ನೂರಾರು ಕೋಟಿಗಳಷ್ಟು ಸಾಲ ನೀಡಿರುವುದನ್ನು ತನಿಖಾ ತಂಡ ಬಹಿರಂಗಗೊಳಿಸಿದೆ.

Also Read: ಅಪೆಕ್ಸ್ ಅಕ್ರಮ 4- ಭದ್ರತಾ ಹೂಡಿಕೆಗಳ ಖರೀದಿಯಲ್ಲಿ ಅವ್ಯವಹಾರ

ಈ ರೀತಿ ಸಾಲ ಪಡೆದ ಪಡೆದ ಖಾಸಗಿ ವ್ಯಕ್ತಿಗಳು, ವಾಣಿಜ್ಯ ಸಂಸ್ಥೆಗಳು, ಟ್ರಸ್ಟ್‌ಗಳು, ಖಾಸಗಿ ಮತ್ತು ಸಹಕಾರಿ ಸಕ್ಕರೆ ಕಾರ್ಖಾನೆಗಳು ಯಾವ ಉದ್ದೇಶಕ್ಕೆ ಸಾಲ ಪಡೆದಿದ್ದವೋ ಆ ಉದ್ದೇಶಕ್ಕೆ ಸಾಲವನ್ನು ಉಪಯೋಗಿಸಿಲ್ಲ. ಬದಲಿಗೆ ಸ್ವಂತಕ್ಕೆ ಮತ್ತು ಇತರೆ ವ್ಯವಹಾರಗಳಿಗೆ ದುರುಪಯೋಗಪಡಿಸಿಕೊಂಡು ನಿಗದಿಪಡಿಸಿದ ಕಾಲಾವಧಿಯಲ್ಲಿ ಅಸಲು ಮತ್ತು ಬಡ್ಡಿಯನ್ನು ಬ್ಯಾಂಕ್‌ಗೆ ಪಾವತಿಸಿಲ್ಲ ಎಂದು ಸಹಕಾರ ಸಂಘಗಳ ಜಂಟಿ ನಿಬಂಧಕ ಎಂ ಡಿ ನರಸಿಂಹಮೂರ್ತಿ ನೇತೃತ್ವದ ತನಿಖಾ ತಂಡ ಹೊರಗೆಡವಿದೆ.

ಅಷ್ಟೇ ಅಲ್ಲ, ಸಹಕಾರ ಮತ್ತು ಸಹಕಾರೇತರ ಸಕ್ಕರೆ ಕಾರ್ಖಾನೆಗಳು ಅಪೆಕ್ಸ್ ಬ್ಯಾಂಕ್‍ನಿಂದ ಕೋಟ್ಯಂತರ ರೂ.ಗಳನ್ನು ಸಾಲ ಪಡೆದಿವೆಯಾದರೂ ನಿಗದಿತ ಸಮಯಕ್ಕೆ ಸಾಲ ಮರುಪಾವತಿಸಿಲ್ಲ. ಬದಲಿಗೆ ಸಾಲ ಕೊಟ್ಟಿರುವ ಅಪೆಕ್ಸ್ ಬ್ಯಾಂಕ್‍ನ್ನು ನ್ಯಾಯಾಲಯದ ಮೆಟ್ಟಿಲೇರಿಸಿವೆ. ಸಕ್ಕರೆ ಕಾರ್ಖಾನೆಗಳಿಗೆ ಸಾಲ ನೀಡುವ ಮುನ್ನ ಕಾರ್ಖಾನೆಗಳ ಸ್ಥಿರಾಸ್ತಿ, ಚರಾಸ್ತಿ ಮೌಲ್ಯವನ್ನು ಪರಿಗಣಿಸದೆಯೇ ಸಾಲ ನೀಡಿರುವ ಅಪೆಕ್ಸ್ ಬ್ಯಾಂಕ್, ಇದೀಗ ಆ ಕಂಪನಿಗಳಿಂದ ಸಾಲ ಮರುಪಾವತಿಯಾಗುವುದು ಅನುಮಾನ ವ್ಯಕ್ತಪಡಿಸಿದೆ.

Also Read: ಅಪೆಕ್ಸ್‌ ಅಕ್ರಮ-3: ಮಾಲೀಕರು ಆಡಿದ್ದೇ ಆಟ; 358 ಕೋಟಿ ರೂ. ಪಂಗನಾಮ?

ಮಾಜಿ ಕೈಗಾರಿಕೆ ಸಚಿವ ಹಾಲಿ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ , ವಿಧಾನ ಪರಿಷತ್‌ ಸದಸ್ಯ ಕೆ ಪಿ ನಂಜುಂಡಿ, ಮಾಜಿ ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ, ಮಾಜಿ ಶಾಸಕ ಪ್ರಕಾಶ್ ಖಂಡ್ರೆ, ಲಕ್ಷ್ಮಿ ಹೆಬ್ಬಾಳಕರ್, ಮಾಜಿ ಶಾಸಕ ಜಿ ಟಿ ಪಾಟೀಲ್, ಆನಂದ್ ಎಸ್ ನ್ಯಾಮಗೌಡ, ಶಾಸಕ ಶ್ರೀಮಂತ ಪಾಟೀಲ್ ಅವರ ಒಡೆತನದ ಸಕ್ಕರೆ ಕಾರ್ಖಾನೆಗಳು ಮತ್ತು ಚಿನ್ನದ ಅಂಗಡಿಯೂ ಸಾಲ ಪಡೆದ ಫಲಾನುಭವಿಗಳ ಪಟ್ಟಿಯಲ್ಲಿವೆ.

ಇದಲ್ಲದೆ ಅಪೆಕ್ಸ್ ಬ್ಯಾಂಕ್‍ನ ಕಾರ್ಯಚಟುವಟಿಕೆಗಳಿಗೆ ಸಂಬಂಧವೇ ಇಲ್ಲದ ರಿಯಲ್ ಎಸ್ಟೇಟ್ ಕಟ್ಟಡ ನಿರ್ಮಾಣ ಕಂಪನಿ, ಟೆಕ್ಸ್‍ಟೈಲ್ಸ್ ಕಂಪನಿಗಳಿಗೂ ಕೋಟ್ಯಂತರ ರೂ.ಸಾಲ ಮಂಜೂರು ಮಾಡಿರುವುದು ದಾಖಲೆಯಿಂದ ತಿಳಿದು ಬಂದಿದೆ.ಮುರುಗೇಶ್ ನಿರಾಣಿ ಒಡೆತನದ ನಿರಾಣಿ ಶುಗರ್ಸ್‍ಗೆ ಒಟ್ಟು 8500.00 ಲಕ್ಷ ರು, ಶ್ರೀ ಸಾಯಿ ಪ್ರಿಯಾ ಶುಗರ್ಸ್‍ಗೆ 3400.00 ಲಕ್ಷ ಎಂ ಆರ್ ಎನ್ ಕೇನ್ ಪವರ್ ಇಂಡಿಯಾ ಲಿಮಿಟೆಡ್‍ಗೆ 3500.00 ಲಕ್ಷ ರು ಸಾಲ ನೀಡಿದೆ. ನಿರಾಣಿ ಶುಗರ್ಸ್‍ನಿಂದ 2020ರ ಜನವರಿ 31ರ ಅಂತ್ಯಕ್ಕೆ ಸಾಲ ಅಸಲು, ಬಡ್ಡಿ ಸೇರಿ 186.35 ಲಕ್ಷ ರೂ. ಇದೆ. ಮಾಜಿ ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಅವರು ಪ್ರತಿನಿದಿಸುವ ಭವಾನಿ ಖಂಡಸಾರಿ ಕಂಪನಿಗೆ 500.00 ಲಕ್ಷ ರೂ. ನೀಡಿದೆ. ಮಾಜಿ ಶಾಸಕ ಪ್ರಕಾಶ್ ಬಿ ಖಂಡ್ರೆ ಪ್ರತಿನಿಧಿಸುವ ಭಾಲ್ಕೇಶ್ವರ್ ಶುಗರ್ಸ ಲಿಮಿಟೆಡ್‍ಗೆ ಒಟ್ಟು 19015.0 ಲಕ್ಷ ರೂ. ಸಾಲ ನೀಡಿದೆ. ಈ ಕಂಪಣಿಯ ಅಸಲು ಮತ್ತು ಬಡ್ಡಿ ಸೇರಿ ಒಟ್ಟು 487.33 ಲಕ್ಷ ರು ಇರುವುದು ವರದಿಯಿಂದ ಗೊತ್ತಾಗಿದೆ.

Also Read: ಅಪೆಕ್ಸ್‌ ಅಕ್ರಮ-2: ವಸೂಲಾಗದ ಸಾಲ ಸಚಿವ ರಮೇಶ್‌ ಜಾರಕಿಹೊಳಿ ಒಡೆತನದ ಕಂಪನಿಯಲ್ಲೇ ಹೆಚ್ಚು

ಕಾಂಗ್ರೆಸ್ ಶಾಸಕ ಆನಂದ್ ಎಸ್ ನ್ಯಾಮಗೌಡ ಪ್ರತಿನಿಧಿಸುವ ಜಮಖಂಡಿ ಶುಗರ್ಸ್‍ಗೆ 8500.00 ಲಕ್ಷ ರೂ., ಶ್ರೀಮಂತ ಪಾಟೀಲ್ ಒಡೆತನದ ಅಥಣಿ ಶುಗರ್ಸ್‍ಗೆ 8500.00 ಲಕ್ಷ ರೂ., ಸಾಲ ನೀಡಿದೆ. ಇದರ ಬಡ್ಡಿ ಮೊತ್ತ ಸೇರಿ ಒಟ್ಟು 11.16 ಲಕ್ಷ ರೂ. ಇದೆ.

ಹಾಗೆಯೇ ಕೆ ಪಿ ನಂಜುಂಡಿ ಒಡೆತನದ ಲಕ್ಷ್ಮಿ ಗೋಲ್ಡ್ ಖಜಾನ ಗೆ 2800.00 ಲಕ್ಷ ರೂ. ಸಾಲ ನೀಡಿದೆ. ಇದರ ಅಸಲು ಮತ್ತು ಬಡ್ಡಿ ಸೇರಿ 24.48 ಲಕ್ಷ ರೂ. ಇದೆ. ಈಗಾಗಲೇ ಬ್ಯಾಂಕ್ ಸಾಲಕ್ಕೆ ಸಂಬಂಧಿಸಿದಂತೆ ನೋಟೀಸ್ ನೀಡಿದ್ದು, 2020ರ ಮಾರ್ಚ್ ಅಂತ್ಯದೊಳಗೆ ಸಾಲದ ಖಾತೆಯನ್ನು ಮುಕ್ತಾಯಗೊಳಿಸಲಾಗುವುದು ಬ್ಯಾಂಕ್‍ಗೆ ಭರವಸೆ ನೀಡಿರುವುದು ವರದಿಯಿಂದ ತಿಳಿದು ಬಂದಿದೆ.

ಇನ್ನು, ಸನ್‍ಸ್ಮಿತ್ ಟೆಕ್ಸ್‍ಟೈಲ್ಸ್ ಇಂಡಿಯಾ ಪ್ರೈವೈಟ್ ಲಿಮಿಟೆಡ್‍ಗೆ 2011ರ ಫೆ.3ರಂದು ಸಾಲ ನೀಡಿದ್ದು ಓವರ್ ಡ್ಯೂ ರೂಪದಲ್ಲಿ ಒಟ್ಟು 5601.47 ಲಕ್ಷ ರೂ. ಬಾಕಿ ಉಳಿಸಿಕೊಂಡಿದೆ. ಹೊರಬಾಕಿಯನ್ನು ವಸೂಲಿ ಮಾಡಿಕೊಳ್ಳಲು ಬ್ಯಾಂಕ್ ನ್ಯಾಯಾಲಯದ ಮೆಟ್ಟಿಲೇರಿದೆ. ಅಲ್ಲದೆ ಸರ್‍ಫೇಸಿಯಾ ಕಾಯ್ದೆ ಅನುಸಾರ ಕಂಪನಿಗೆ ನೋಟೀಸ್ ನೀಡಿರುವುದು ಗೊತ್ತಾಗಿದೆ.ಅದೇ ರೀತಿ ಖುಷ್ಬೂ ಎಲೆಕ್ಟ್ರಿಕಲ್ಸ್ ಆಟೋಮೇಷನ್ ಪ್ರೈವೈಟ್ ಲಿಮಿಟೆಡ್‍ಗೆ ಎರಡು ಸಾಲದ ಖಾತೆಗಳಲ್ಲಿ ಒಟ್ಟು ಪಡೆದಿರುವ ಸಾಲದ ಪೈಕಿ ಅಸಲು ಮತ್ತು ಬಡ್ಡಿ 2563.91 ಲಕ್ಷ ರೂ. ಇದೆ.ಕನ್ಸಟ್ರಕ್ಷನ್ಸ್ ಸೊಲ್ಯೂಷನ್ಸ್ ಪ್ರೈವೈಟ್ ಲಿಮಿಟೆಡ್ ಪಡೆದಿರುವ ಸಾಲದ ಮೇಲಿನ ಅಸಲು ಮತ್ತು ಬಡ್ಡಿ ಸೇರಿ ಒಟ್ಟು 2,544.57 ಲಕ್ಷ ರೂ. ಇದೆ. ಪೂನಂ ಪವರ್ಸ್ ಪ್ರೈವೈಟ್ ಲಿಮಿಟೆಡ್ ಪಡೆದಿರುವ ಸಾಲದ ಮೇಲಿನ ಅಸಲು ಮತ್ತು ಬಡ್ಡಿ ಸೇರಿ 449.03 ಲಕ್ಷ ರೂ., ವೈಷ್ಣಿ ಇನ್ಫ್ರಾಸ್ಟಕ್ಚರ್ಸ ಪ್ರೈವೈಟ್ ಲಿಮಿಟೆಡ್ 9699,96 ಲಕ್ಷ ರು, ನಂದನವನ ಹೋಟೆಲ್ ರೆಸಾಟ್ರ್ಸ್ ಲಿಮಿಟೆಡ್ 190.00 ಲಕ್ಷ ರೂ. ಇದೆ.

ಕೆಎನ್‍ಎಸ್ ಇನ್ಫ್ರಾಸ್ಟಕ್ಚರ್ಸ್ ಲಿಮಿಟೆಡ್ 2477.26 ಲಕ್ಷ ರೂ., ಕೆಎನ್‍ಎಸ್ ಓವರ್‍ಸೀಸ್ ಲಿಮಿಟೆಡ್ ಅಸಲು ಮತ್ತು ಬಡ್ಡಿ ರೂಪದಲ್ಲಿ 2538.99 ಲಕ್ಷ ರು ಇದೆ. ಬ್ಯಾಂಕ್ ಈಗಾಗಲೇ ಈ ಎರಡೂ ಕಂಪನಿಗಳಿಗೆ ಸರ್‍ಫೇಸಿಯಾ ಕಾಯ್ದೆ ಪ್ರಕಾರ ನೋಟೀಸ್ ನೀಡಿದೆ.

Also Read: ಅಪೆಕ್ಸ್‌ ಅಕ್ರಮ-1: ಅಪೆಕ್ಸ್ ಬ್ಯಾಂಕ್ ಅವ್ಯವಹಾರದ ವರದಿಯ ಬೆನ್ನಲ್ಲೇ ಹೊರಬಿದ್ದ ಒಳ ವ್ಯವಹಾರಗಳು

ಸ್ಕೈರೀಚ್ ಬಿಲ್ಡರ್ಸ್ ಪ್ರೈವೈಟ್ ಲಿಮಿಟೆಡ್ 3631.00 ಲಕ್ಷ ರೂ., ಶಾಂತರಾವ್ ಸೆಂಟರ್ ಫಾರ್ ಫೈನ್ ಆಟ್ರ್ಸ 1.11 ಲಕ್ಷ ರು, ಕಣ್ವ ಗಾರ್ಮೆಂಟ್ಸ್ ಪ್ರೈವೈಟ್ ಲಿಮಿಟೆಡ್ 17.72 ಲಕ್ಷ ರೂ., ಎಸ್ ಅರ್ ಎಸ್ ಟ್ರಾವೆಲ್ಸ್ ಲಾಜಿಸ್ಟಿಕ್ಸ್ ಪ್ರೈ ಲಿ 60.22 ಲಕ್ಷ ರೂ. ಅಸಲು ಬಡ್ಡಿ ಹೊಂದಿರುವುದು ವರದಿಯಿಂದ ಗೊತ್ತಾಗಿದೆ.

Tags: Apex bankReal Estate Businessಅಪೆಕ್ಸ್‌ ಬ್ಯಾಂಕ್ರಿಯಲ್‌ ಎಸ್ಟೇಟ್‌ ಕಂಪನಿ
Previous Post

ಕರೋನಾ ಕಾಲದಲ್ಲಿ ಬಹುತೇಕ ಮಹಿಳೆಯರ ಋತುಚಕ್ರದಲ್ಲಿ ವ್ಯತ್ಯಯ

Next Post

ದೇಶದ ಖಾಸಗೀ ಆಸ್ಪತ್ರೆಗಳಲ್ಲಿ ಹೆಚ್ಚಿದ ಆಯುಷ್ಮಾನ್ ಭಾರತ್ ವಿಮೆ ಕ್ಲೇಮ್‌ಗಳ ಸಂಖ್ಯೆ

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025

DK Shivakumar: ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್

June 30, 2025
Next Post
ದೇಶದ ಖಾಸಗೀ ಆಸ್ಪತ್ರೆಗಳಲ್ಲಿ ಹೆಚ್ಚಿದ ಆಯುಷ್ಮಾನ್ ಭಾರತ್ ವಿಮೆ ಕ್ಲೇಮ್‌ಗಳ ಸಂಖ್ಯೆ

ದೇಶದ ಖಾಸಗೀ ಆಸ್ಪತ್ರೆಗಳಲ್ಲಿ ಹೆಚ್ಚಿದ ಆಯುಷ್ಮಾನ್ ಭಾರತ್ ವಿಮೆ ಕ್ಲೇಮ್‌ಗಳ ಸಂಖ್ಯೆ

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada