• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅಯೋಧ್ಯ ತೀರ್ಪು: ಮುಸ್ಲಿಂ ಸಮುದಾಯ ಇಬ್ಭಾಗವಾಗಿದ್ದು ಏಕೆ?

by
November 22, 2019
in ದೇಶ
0
ಅಯೋಧ್ಯ ತೀರ್ಪು: ಮುಸ್ಲಿಂ ಸಮುದಾಯ ಇಬ್ಭಾಗವಾಗಿದ್ದು ಏಕೆ?
Share on WhatsAppShare on FacebookShare on Telegram

ದೇಶದ ಸುಪ್ರೀಂ ಕೋರ್ಟು ಐತಿಹಾಸಿಕವಾದ ಬಾಬ್ರಿ ಮಸೀದಿ -ರಾಮ ಜನ್ಮಭೂಮಿಯ ಕುರಿತ ತೀರ್ಪನ್ನು ಪ್ರಕಟಿಸಿ ರಾಮ ಮಂದಿರ ನಿರ್ಮಾಣಕ್ಕೆ ಅನುವು ಮಾಡಿ ಕೊಟ್ಟಿದೆ. ತೀರ್ಪು ಹೊರ ಬಿದ್ದ ನಂತರ ಮೂಲ ಕಕ್ಷಿದಾರರು ಹಾಗೂ ಅನೇಕ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ದ ಪುನರ್ವಿಮರ್ಶೆ ಅರ್ಜಿ ಸಲ್ಲಿಸುವುದಿಲ್ಲ ಎಂದೂ ಹೇಳಿದ್ದವು. ಆದರೆ ಎರಡು ವಾರಗಳ ನಂತರ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತೀರ್ಪಿನ ವಿರುದ್ದ ಪುನರ್ವಿಮರ್ಶಾ ಅರ್ಜಿಯನ್ನು ಸಲ್ಲಿಸುವುದಾಗಿ ಪ್ರಕಟಿಸಿದೆ.

ADVERTISEMENT

ಕಳೆದ ಭಾನುವಾರ ಸಭೆ ಸೇರಿದ್ದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸಮಿತಿ ಈ ಪ್ರಕರಣದಲ್ಲಿ ತಾನು ಕಕ್ಷಿದಾರ ಆಲ್ಲದಿದಿದ್ದರೂ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿರುವುದು ಅಚ್ಚರಿ ಮೂಡಿಸಿದೆ. ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಮೂಲ ಅರ್ಜಿದಾರರಾದ ಉತ್ತರ ಪ್ರದೇಶದ ಸುನ್ನಿ ವಕ್ಫ್‌ ಬೋರ್ಡ್‌ ಮತ್ತು ಇಕ್ಬಾಲ್‌ ಅನ್ಸಾರಿ ಅವರು ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸುವುದಿಲ್ಲ ಎಂಬ ಘೋಷಣೆಯ ನಂತರ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಈ ತೀರ್ಮಾನ ತೆಗೆದುಕೊಂಡಿದೆ.

ಮಂಡಳಿಯು ಮೇಲ್ಮನವಿ ಸಲ್ಲಿಸುವ ತೀರ್ಮಾನ ತೆಗೆದುಕೊಳ್ಳುವ ಸಮಯದಲ್ಲೇ ಮಂಡಳಿಯ ಸದಸ್ಯರ ನಡುವೆ ಭಿನ್ನಾಭಿಪ್ರಾಯವೂ ಸೃಷ್ಟಿಯಾಗಿದೆ. ಮಂಡಳಿಯ ಬಹಳಷ್ಟು ಸದಸ್ಯರು ಈ ಮೇಲ್ಮನವಿ ಸಲ್ಲಿಸುವಿಕೆಯಿಂದ ತೀರ್ಪಿನ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂಬ ಅಭಿಪ್ರಾಯವನ್ನು ಹೊಂದಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಮಂಡಳಿಯ ಹಿರಿಯ ಸದಸ್ಯ ಕಮಲ್‌ ಫರೂಕಿ ಅವರು ಮಂಡಳಿಯ ಸದಸ್ಯರ ನಡುವೆ ಭಿನ್ನಮತ ಇದ್ದರೂ ಕೂಡ ಇದೆಲ್ಲ ಪ್ರಜಾತಂತ್ರ ವ್ಯವಸ್ಥೆಯ ಒಳಗಿರುವ ಸಹಜ ಕ್ರಿಯೆ ಎಂದು ಹೇಳಿದ್ದಾರೆ. ತೀರ್ಪಿನ ಪ್ರಕಾರ 5 ಎಕರೆ ಭೂಮಿಯನ್ನು ಸರ್ಕಾರದಿಂದ ಪಡೆದುಕೊಳ್ಳುವುದನ್ನು ಮಂಡಳಿಯ ಸದಸ್ಯರು ಸರ್ವನುಮತದಿಂದ ವಿರೋಧಿಸಿದ್ದಾರೆ ಅದರೆ ಮೇಲ್ಮನವಿ ಸಲ್ಲಿಸುವ ಕುರಿತು ಪರ -ವಿರೋಧ ಇದೆ ನಂತರ ಮೇಲ್ಮನವಿ ಸಲ್ಲಿಸುವುದಕ್ಕೆ ಬಹುಮತದಿಂದ ತೀರ್ಮಾನಿಸಲಾಗಿದೆ ಎಂದು ಫರೂಕಿ ಹೇಳಿದರು.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ತೀರ್ಮಾನಕ್ಕೆ ಜಮಾತ್‌ ಉಲೇಮಾ ಎ ಹಿಂದ್‌ ಹೊರತು ಪಡಿಸಿದರೆ ದೇಶದ ಇನ್ಯಾವುದೇ ಮುಸ್ಲಿಂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿಲ್ಲ ಎಂಬುದು ಗಮನಾರ್ಹ ವಿಚಾರ ವಾಗಿದೆ. ಉತ್ತರ ಪ್ರದೇಶದ ಸುನ್ನಿ ಮತ್ತು ಶಿಯಾ ವಕ್ಫ್‌ ಮಂಡಳಿಗಳು ಮೇಲ್ಮನವಿಯ ವಿರುದ್ದವಾಗಿವೆ. ತೀರ್ಪು ಹೊರಬಿದ್ದ ಕೂಡಲೇ

ಉತ್ತರ ಪ್ರದೇಶದ ಸುನ್ನಿ ವಕ್ಫ್‌ ಮಂಡಳಿಯ ಅದ್ಯಕ್ಷ ಜಫಾರ್‌ ಫಾರೂಕಿ ವಿನಮ್ರವಾಗಿ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಳ್ಳುವುದಾಗಿ ಹೇಳಿದ್ದರು. ಇವರ ಈ ಹೇಳಿಕೆಯಿಂದ ಯಾರಿಗೂ ಆಶ್ಚರ್ಯ ಆಗಲಿಲ್ಲ ಏಕೆಂದರೆ ಬಹಳ ವರ್ಷಗಳಿಂದಲೂ ಬಾಬ್ರಿ ಮಸೀದಿ ಪರ ಕೋರ್ಟಿನಲ್ಲಿ ಹೋರಾಟ ನಡೆಸುತಿದ್ದ ಬೋರ್ಡ್‌ ವಿಚಾರಣೆಯ ಕೊನೆಯ ವಾರ ತಾನು ಪ್ರಕರಣದಿಂದ ಹಿಂದೆ ಸರಿಯಲು ಬಯಸುವುದಾಗಿಯೂ ಹೇಳಿತ್ತು.

ಉತ್ತರ ಪ್ರದೇಶದ ಶಿಯಾ ವಕ್ಫ್‌ ಬೋರ್ಡ್‌ ಅದ್ಯಕ್ಷ ವಸೀಂ ರಿಜ್ವಿ ಅವರು ತೀರ್ಪನ್ನು ತಾವು ಸ್ವಗತಿಸುವುದಾಗಿ ಹೇಳಿದ್ದು ತಾವು ರಾಮ ಮಂದಿರ ನಿರ್ಮಾಣಕ್ಕೆ ವೈಯಕ್ತಿಕವಾಗಿ 51,000 ರೂಪಾಯಿಗಳನ್ನು ವಂತಿಗೆ ನೀಡುವುದಾಗಿಯೂ ಹೇಳಿದ್ದರು. ಸುನ್ನಿ ವಕ್ಫ್‌ ಮಂಡಳಿಯ ನ್ಯಾಯಾಲಯದಿಂದ ಅರ್ಜಿಯನ್ನು ಹಿಂಪಡೆಯುವ ತೀರ್ಮಾನಕ್ಕೆ ಸಮುದಾಯದಲ್ಲೇ ಟೀಕೆ ವ್ಯಕ್ತವಾಗಿದ್ದು ಮಂಡಳಿಯು ಒತ್ತಡಕ್ಕೆ ಮಣಿದಿದೆ ಎಂದು ಆರೋಪಿಸಲಾಗಿತ್ತು.

ಕಳೆದ ತಿಂಗಳು ಸುಪ್ರೀಂ ಕೋರ್ಟು ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸುವುದಕ್ಕೂ ಮುನ್ನವೇ ಮುಖ್ಯ ಮಂತ್ರಿ ಯೋಗಿ ಅದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ರಾಜ್ಯ ಸರ್ಕಾರ ಫಾರೂಕಿ ಅವರು ಅಕ್ರಮವಾಗಿ ವಕ್ಫ್‌ ಮಂಡಳಿಗೆ ಭೂಮಿಯನ್ನು ಖರೀದಿಸಿದ್ದು ಮತ್ತು ಮಾರಾಟ ಮಾಡಿದ ವಿಷಯದಲ್ಲಿ ಫಾರೂಕಿ ಅವರ ಮೇಲೆ ಆರೋಪ ಇರುವ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಫಾರೂಕಿ ಅವರ ವಿರುದ್ದ ದಾಖಲಾಗಿರುವ ಎಫ್‌ ಐ ಆರ್‌ ನ ಕಾರಣದಿಂದಾಗಿ ಉತ್ತರ ಪ್ರದೇಶದ ಜಮಅತ್‌ ಉಲೇಮಾ ಹಿಂದ್‌ ಫಾರೂಕಿ ಅವರ ನಡೆ ಸಂಶಯಾಸ್ಪದ ಎಂದೂ ಆರೋಪಿಸಿತ್ತು.

ಲಕ್ನೋದ ಸಾಮಾಜಿಕ ಕಾರ್ಯಕರ್ತ ಅನೀಸ್‌ ಅಹ್ಮದ್‌ ಅವರು ಫಾರೂಕಿ ಅವರು ಮೊಕದ್ದಮೆಗಳನ್ನು ಎದುರಿಸುತಿದ್ದು , ಇವರು ಸರ್ಕಾರೀ ಉದ್ಯೋಗಿಯೂ ಅಗಿರುವುದರಿಂದ ಇವರ ತೀರ್ಮಾನವನ್ನು ಆ ಹಿನ್ನೆಲೆಯಲ್ಲೇ ನೋಡಬೇಕು ಎಂದೂ ಹೇಳುತ್ತಾರೆ. ಸುನ್ನಿ ಹಾಗೂ ಶಿಯಾ ವಕ್ಫ್‌ ಬೋರ್ಡ್‌ ಗಳೆರಡೂ ಕೇಂದ್ರ ಸರ್ಕಾರದ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವಾಲಯದ ಶಾಸನಬದ್ದ ಸಂಸ್ಥೆಗಳಾಗಿವೆ. ಅಹ್ಮದ್‌ ಅವರ ಪ್ರಕಾರ ಸ್ಥಳೀಯ ಒತ್ತಡ ಮತ್ತು ಕೆಲವು ಸ್ವಹಿತಾಸಕ್ತಿಯ ಕಾರಣಗಳೂ ಈ ಬೋರ್ಡ್‌ ಗಳ ತೀರ್ಮಾನದ ಮೇಲೆ ಪ್ರಭಾವ ಬೀರಿರಬಹುದು. ಸುನ್ನಿ ವಕ್ಫ್‌ ಬೋರ್ಡ್‌ ಒತ್ತಡದಿಂದ ಈ ತೀರ್ಮಾನ ತೆಗೆದುಕೊಂಡಿರುವುದು ಸ್ಪಷ್ಟವಾಗೇ ಗೋಚರಿಸುತ್ತಿದೆ ಎಂದು ಹೇಳುತ್ತಾರೆ.

ಉತ್ತರ ಪ್ರದೇಶದಲ್ಲಿ ರಾಜ್ಯ ಸರ್ಕಾರ ಬದಲಾದರೂ ಕೂಡ ಎರಡೂ ವಕ್ಫ್‌ ಮಂಡಳಿಗಳ ಅದ್ಯಕ್ಷರು ಇನ್ನೂ ಬದಲಾಗದಿರುವುದಕ್ಕೆ ಅನೇಕರು ಆಶ್ಚರ್ಯ ವ್ಯಕ್ತಪಡಿಸುತ್ತಾರೆ. ಕಳೆದ ಏಪ್ರಿಲ್‌ 2010 ರಿಂದ ಫಾರುಕಿ ಅವರು ಸುನ್ನಿ ವಕ್ಫ್‌ ಬೋರ್ಡ್‌ ಅದ್ಯಕ್ಷರಾಗಿದ್ದರೆ , ರಿಜ್ವಿ ಅವರು 2006 ರಿಂದಲೇ ಶಿಯಾ ವಕ್ಫ್‌ ಬೋರ್ಡ್‌ ಅದ್ಯಕ್ಷ ಹುದ್ದೆಯಲ್ಲಿದ್ದಾರೆ. ಕಳೆದ ವರ್ಷ ರಾಮನು ನನ್ನ ಕನಸಿನಲ್ಲಿ ಬಂದಿದ್ದ ಎಂದು ಹೇಳುವ ಮೂಲಕ ರಿಜ್ವಿ ವಿವಾದ ಸೃಷ್ಟಿಸಿದ್ದರು. ತಮ್ಮ ಅಧಿಕಾರಕ್ಕಾಗಿ ಇವರಿಬ್ಬರೂ ಮೌಲ್ಯಗಳ ಜತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಅಹ್ಮದ್‌ ಅರೋಪಿಸುತ್ತಾರೆ.

ಆದರೆ ಫರೂಕಿ ಅವರು ಆರೋಪವನ್ನು ಸ್ಪಷ್ಟವಾಗಿ ನಿರಾಕರಿಸಿದ್ದು ತಾವು ತೀರ್ಪು ಬರುವುದಕ್ಕೂ ಅನೇಕ ವರ್ಷಗಳ ಮೊದಲೇ ತೀರ್ಪನ್ನು ಒಪ್ಪಿಕೊಳ್ಳುವುದಾಗಿ ಹೇಳಿದ್ದನ್ನು ಉಲ್ಲೇಖಿಸುತ್ತಾರೆ. ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ ಎಂದೂ ನಮಗೆ ಗೊತ್ತಿತ್ತು ಆದರೆ ಮೊದಲೇ ತೀರ್ಮಾನಿಸಿದ ನಿಲುವಿಗೆ ಬದ್ದ ಎಂದೂ ಫಾರೂಕಿ ತಿಳಿಸಿದರು. ಸರ್ಕಾರದ ಪ್ರಭಾವ ಮತ್ತು ಯಾವುದೇ ಬಾಹ್ಯ ಒತ್ತಡ ಇದ್ದಿದ್ದರೆ ಕೊನೆತನಕ ಇಷ್ಟು ವರ್ಷ ಮೊಕದ್ದಮೆ ನಡೆಸುವ ಅಗತ್ಯ ಏನಿತ್ತು ? ಮೊದಲೇ ಹಿಂದೆ ಸರಿಯಬಹುದಿತ್ತಲ್ಲವೇ ಎಂದೂ ಅವರು ಪ್ರಶ್ನಿಸಿದರು.

ತಮ್ಮ ಮೇಲಿನ ಅರೋಪವನ್ನು ಸರ್ಕಾರ ಸಿಬಿಐ ಗೆ ಒಪ್ಪಿಸುವುದಕ್ಕೂ ಮೊದಲು ಫೆಬ್ರುವರಿ 2018 ರಂದು ಫಾರೂಕಿ ತಮ್ಮ ತಂಡದೊಂದಿಗೆ ಬೆಂಗಲೂರಿಗೆ ಬಂದು ಆಧ್ಯಾತ್ಮ ಗುರು ಶ್ರೀ ರವಿಶಂಕರ್‌ ಗುರೂಜಿ ಅವರನ್ನು ಭೇಟಿಯಾಗಿದ್ದರು. ನಂತರ ರವಿಶಂಕರ್‌ ಅವರು ಈ ಭೇಟಿಯನ್ನು ನ್ಯಾಯಾಲಯದ ಹೊರಗೆ ವಿವಾದ ಬಗೆಹರಿಸುವುದಕ್ಕೆ ಬೆಂಬಲವಾಗಲಿದೆ ಎಂದಿದ್ದರು.

ಈ ಭೇಟಿಯಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಸಲ್ಮಾನ್‌ ನದ್ವಿ ಅವರೂ ಇದ್ದು ನಂತರ ಮಸೀದಿಯನ್ನು ವಿವಾದಿತ ಭೂಮಿಯಿಂದ ಹೊರಗೆ ಸ್ಥಳಾಂತರಿಸುವ ಇಂಗಿತ ವ್ಯಕ್ತಪಡಿಸಿದ್ದರು. ಇದಾದ ನಂತರ ನದ್ವಿ ಅವರನ್ನು ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯತ್ವ ಸ್ಥಾನದಿಂದ ವಜಾ ಮಾಡಲಾಗಿತ್ತು.

ಒಟ್ಟಿನಲ್ಲಿ ಮೊಕದ್ದಮೆ ಮುಂದುವರೆಸುವ ವಿಚಾರದಲ್ಲಿ ಮುಸ್ಲಿಂ ಸಮುದಾಯದಲ್ಲೇ ಪರ -ವಿರೋಧ ಅಭಿಪ್ರಾಯಗಳು ದಿನೇ ದಿನೇ ಹೆಚ್ಚಳವಾಗುತ್ತಿವೆ.

Tags: All india muslim personal law boardASIAyodhya VerdictBabri MasjidHindhu TempleRama MandirSunni Waqf Boardsupreme courtಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಅಯೋಧ್ಯ ವಿವಾದಅಯೋಧ್ಯೆಅಯೋಧ್ಯೆ ವಿವಾದಬಾಬರಿ ಮಸೀದಿಬಾಬರಿ ಮಸೀದಿ ಧ್ವಂಸ ಪ್ರಕರಣರಾಮಮಂದಿರಸುನ್ನಿ ವಕ್ಫ್‌ ಬೋರ್ಡ್‌ಸುಪ್ರೀಂ ಕೋರ್ಟ್ಹಿಂದೂ ದೇವಾಲಯ
Previous Post

ಎಲೆಕ್ಟೊರಲ್ ಬಾಂಡ್: ಊರ್ಜಿತ್ ಎಚ್ಚರಿಕೆಗೆ ಸೊಪ್ಪು ಹಾಕದ ಸರ್ಕಾರ

Next Post

ಉಗ್ರರಿಗೆ ದುಡ್ಡು ಕೊಟ್ಟ ಕಂಪನಿಯಿಂದಲೇ ಚಂದಾ ಎತ್ತಿದ ಬಿಜೆಪಿ!

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಉಗ್ರರಿಗೆ ದುಡ್ಡು ಕೊಟ್ಟ ಕಂಪನಿಯಿಂದಲೇ ಚಂದಾ ಎತ್ತಿದ ಬಿಜೆಪಿ!

ಉಗ್ರರಿಗೆ ದುಡ್ಡು ಕೊಟ್ಟ ಕಂಪನಿಯಿಂದಲೇ ಚಂದಾ ಎತ್ತಿದ ಬಿಜೆಪಿ!

Please login to join discussion

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada