• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅರ್ನಾಬ್ ಗೋಸ್ವಾಮಿಗೆ ಸಮನ್ಸ್ ನೀಡುವಂತೆ ಬಾಂಬೆ ಹೈಕೋರ್ಟ್ ನಿರ್ದೇಶನ

by
October 19, 2020
in ದೇಶ
0
ಅರ್ನಾಬ್ ಗೋಸ್ವಾಮಿಗೆ ಸಮನ್ಸ್ ನೀಡುವಂತೆ ಬಾಂಬೆ ಹೈಕೋರ್ಟ್ ನಿರ್ದೇಶನ
Share on WhatsAppShare on FacebookShare on Telegram

ಟಿಆರ್‌ಪಿ ತಿರುಚುವಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯವಿದ್ದರೆ ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಾಬ್‌ ಗೋಸ್ವಾಮಿಗೆ ಸಮನ್ಸ್‌ ನೀಡುವಂತೆ ಮುಂಬೈ ಪೊಲೀಸರಿಗೆ ಬಾಂಬೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ADVERTISEMENT

ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈಯ ಕಾಂಡಿವಿಲಿ ಠಾಣೆಯಲ್ಲಿ ನಂಬಿಕೆ ದ್ರೋಹ, ಮೋಸ ಮತ್ತು ಕ್ರಿಮಿನಲ್‌ ಪಿತೂರಿಯ ಅಡಿಯಲ್ಲಿ ದಾಖಲಾದ ಎಫ್‌ಐಆರ್‌ ಅನ್ನು ವಜಾಗೊಳಿಸುವಂತೆ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎಂ.ಎಸ್. ಕಾರ್ನಿಕ್ ಅವರನ್ನೊಳಗೊಂಡ ನ್ಯಾಯಪೀಠವು ಈ ನಿರ್ದೇಶನವನ್ನು ನೀಡಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಅರ್ಜಿಯ ಅಂತಿಮ ವಿಚಾರಣೆಯನ್ನು ನವೆಂಬರ್ 5 ರ ಮಧ್ಯಾಹ್ನ 3 ಗಂಟೆಗೆ ಪ್ರಾರಂಭಿಸುವುದಾಗಿ ನ್ಯಾಯಪೀಠ ಹೇಳಿದೆ. ಹಾಗೂ ನವೆಂಬರ್ 4 ರಂದು ಮೊಹರು ಮಾಡಿದ ಕವರ್‌ನಲ್ಲಿ ತನಿಖಾ ಪತ್ರಗಳನ್ನು ಹಾಜರುಪಡಿಸುವಂತೆ ನ್ಯಾಯಾಲಯ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.

Also Read: ದ್ವೇಷ ಹರಡುವ ಮಾಧ್ಯಮಗಳಿಗೆ ಜಾಹಿರಾತು ನೀಡದಿರಲು ಪಾರ್ಲೆ ನಿರ್ಧಾರ

ಬಂಧನದಿಂದ ಮಧ್ಯಂತರ ರಕ್ಷಣೆಗಾಗಿ ಅರ್ನಾಬ್‌ ಗೋಸ್ವಾಮಿ ವಕೀಲ ಹರೀಶ್‌ ಸಾಲ್ವೆ ಒತ್ತಾಯಿಸಿದರೂ, ಗೋಸ್ವಾಮಿಯನ್ನು ಇನ್ನೂ ಆರೋಪಿಯನ್ನಾಗಿ ಹೆಸರಿಸದಿರುವುದರಿಂದ, ಪ್ರಸ್ತುತ ಹಂತದಲ್ಲಿ ಅಂತಹ ಆದೇಶವನ್ನು ರವಾನಿಸುವುದು ಕಷ್ಟ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ರಿಪಬ್ಲಿಕ್ ಟಿವಿಯ ಏಳು ಉದ್ಯೋಗಿಗಳಿಗೆ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ ಮತ್ತು ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತರಲಾಗಿದೆ.

Also Read: ಮತ್ತೆ ಸಂಕಷ್ಟದಲ್ಲಿ Republic Tv ಮುಖ್ಯಸ್ಥ ಅರ್ನಬ್ ಗೋಸ್ವಾಮಿ.!

ಎಫ್‌ಐಆರ್‌ನಲ್ಲಿ ಆರೋಪಿಗಳೆಂದು ಹೆಸರಿಸದಿದ್ದರೂ ಮುಂಬೈ ಪೊಲೀಸ್ ಆಯುಕ್ತರು ರಿಪಬ್ಲಿಕ್ ಟಿವಿ ಮತ್ತು ಗೋಸ್ವಾಮಿ ವಿರುದ್ಧ ಪತ್ರಿಕಾ ಹೇಳಿಕೆಗಳನ್ನು ನೀಡುವ ಮೂಲಕ ಪ್ರತೀಕಾರ ತೀರಿಸುತ್ತಿದ್ದಾರೆ ಎಂದು ಸಾಲ್ವೆ ಆರೋಪಿಸಿದ್ದಾರೆ. ಪಾಲ್ಘರ್ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಮತ್ತು ಸರ್ಕಾರದ ವಿರುದ್ಧ ಮಾಡಿದ ವಿಮರ್ಶಾತ್ಮಕ ವರದಿಗಳಿಗೆ ಪ್ರತೀಕಾರವಾಗಿ ರಿಪಬ್ಲಿಕ್‌ ಟಿವಿ ಮೇಲೆ ಹಗೆ ಸಾಧಿಸಲಾಗುತ್ತಿದೆಯೆಂದು ಅವರು ಆರೋಪಿಸಿದ್ದಾರೆ.

ರಿಪಬ್ಲಿಕ್ ಟಿವಿಯ ಪತ್ರಿಕೋದ್ಯಮ ಸ್ವಾತಂತ್ರ್ಯವನ್ನು ನಿಗ್ರಹಿಸಲು ಮಹಾರಾಷ್ಟ್ರ ಸರ್ಕಾರವು ಕೈಗೊಂಡ ಕ್ರಮಗಳ ಸರಣಿಯಲ್ಲಿ ಪ್ರಸ್ತುತ ಎಫ್‌ಐಆರ್ ಇತ್ತೀಚಿನದು ಎಂದು ಸಾಲ್ವೆ ವಾದಿಸಿದ್ದಾರೆ.

Also Read: ಟಿಆರ್‌ಪಿ ತಿರುಚಿದ ಆರೋಪ: ಅರ್ನಾಬ್‌ ಗೋಸ್ವಾಮಿ ನೇತೃತ್ವದ Republic TV ವಿರುದ್ದ ವಿಚಾರಣೆ

ಅರ್ನಾಬ್‌ ಗೋಸ್ವಾಮಿ ನೇತೃತ್ವದ ರಿಪಬ್ಲಿಕ್‌ ಟಿವಿ ಸೇರಿದಂತೆ ಕೆಲವು ಖಾಸಗಿ ಟಿವಿ ಚಾನೆಲ್‌ಗಳು ಟಿಆರ್‌ಪಿ ತಿರುಚುವಿಕೆಯಲ್ಲಿ ಭಾಗಿಯಾಗಿದೆ ಎಂಬ ಸುದ್ದಿ ಕಳೆದೆರಡು ವಾರದ ಹಿಂದೆ ಸಾಕಷ್ಟು ಕೋಲಾಹಲವನ್ನೆಬ್ಬಿಸಿತ್ತು.

“ಅರ್ನಾಬ್‌ ಗೋಸ್ವಾಮಿ ನೇತೃತ್ವದ ರಿಪಬ್ಲಿಕ್‌ ಟಿವಿ, ಫಕ್ತ್‌ ಮರಾಠಿ ಮತ್ತು ಬಾಕ್ಸ್‌ ಸಿನಿಮಾ ಚಾನೆಲ್‌ಗಳ ವಿರುದ್ದ ತನಿಖೆಯನ್ನು ಆರಂಭಿಸಲಾಗಿದೆ. ಈ ಮೂರು ಚಾನೆಲ್‌ಗಳು ಟಿಆರ್‌ಪಿ ರೇಟಿಂಗ್‌ ಅನ್ನು ತಿರುಚಿ, ತಮ್ಮ ಚಾನೆಲ್‌ಗೆ ಒಳ್ಳೆಯ ರೇಟಿಂಗ್‌ ಬರುವ ರೀತಿ ಮಾಡುತ್ತಿದ್ದರು,” ಎಂದು ಮುಂಬೈ ಕಮಿಷನರ್‌ ಪರಮ್‌ಬೀರ್‌ ಸಿಂಗ್‌ ಹೇಳಿ ಹೇಳಿದ್ದರು.

Also Read: TRP ಹಗರಣ: ವಿಚಾರಣೆಗೆ ಹಾಜರಾದ Republic TV ಮುಖ್ಯಸ್ಥರು

Tags: Arnab Goswamibombay highcourtmumbai policeಅರ್ನಾಬ್ ಗೋಸ್ವಾಮಿಟಿಆರ್‌ಪಿ ಹಗರಣರಿಪಬ್ಲಿಕ್ ಟಿವಿ
Previous Post

ಇನ್ನು ಮುಂದೆ ಹೆಲ್ಮೆಟ್ ಧರಿಸದಿದ್ದರೆ ದಂಡದ ಜೊತೆಗೆ ಚಾಲನಾ ಪರವಾನಿಗೆ ಅಮಾನತು

Next Post

ಪ್ರವಾಹ ಪೀಡಿತ ಜನರಿಗೆ ಸಹಾನುಭೂತಿ ವ್ಯಕ್ತಪಡಿಸಿದ ಪ್ರಧಾನಿ ಮೋದಿ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಪ್ರವಾಹ ಪೀಡಿತ ಜನರಿಗೆ ಸಹಾನುಭೂತಿ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಪ್ರವಾಹ ಪೀಡಿತ ಜನರಿಗೆ ಸಹಾನುಭೂತಿ ವ್ಯಕ್ತಪಡಿಸಿದ ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada