• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 92 ಕ್ಕೇರಿಕೆ, ವನ್ಯಜೀವಿ ಧಾಮದಲ್ಲಿ 66 ಪ್ರಾಣಿಗಳ ಸಾವು

by
July 16, 2020
in ದೇಶ
0
ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 92 ಕ್ಕೇರಿಕೆ
Share on WhatsAppShare on FacebookShare on Telegram

ಅಸ್ಸಾಮಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಭಾಗಶ ರಾಜ್ಯ ತುತ್ತಾಗಿದೆ. ಬ್ರಹ್ಮಪುತ್ರ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ರಾಜ್ಯದಲ್ಲಿ ಉಂಟಾದ ಪ್ರವಾಹ ಸಂಬಂಧಿತ ಅಪಘಾತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 92 ಕ್ಕೆ ಏರಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ದೈನಂದಿನ ಬುಲೆಟಿನ್ ಪ್ರಕಾರ, 26 ಜಿಲ್ಲೆಗಳಲ್ಲಿ ಸುಮಾರು 36 ಲಕ್ಷ ಜನರು ಈವರೆಗೆ ಪ್ರವಾಹ ಹಾಗೂ ಪ್ರವಾಹದಿಂದ ಉಂಟಾದ ಭೂಕುಸಿತಕ್ಕೆ ಬಾಧಿತರಾಗಿದ್ದಾರೆ.

ಬುಧವಾರ ಏಳು ಸಾವುಗಳು ವರದಿಯಾಗಿದ್ದು, ಮೂವರು ಮೊರಿಗಾಂವ್ ಜಿಲ್ಲೆಯಲ್ಲಿ, ಇಬ್ಬರು ಬಾರ್‌ಪೆಟಾದಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಸೋನಿತ್‌ಪುರ ಮತ್ತು ಗೋಲಘಾಟ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಿಳಿಸಿದೆ. ರಾಜ್ಯದಲ್ಲಿ ಪ್ರವಾಹದಿಂದ 66 ಜನರು ಮೃತಪಟ್ಟಿದ್ದರೆ, ಭೂಕುಸಿತದಿಂದಾಗಿ 26 ಮಂದಿ ಕೊನೆಯುಸಿರೆಳೆದಿದ್ದಾರೆ

https://pages.razorpay.com/pl_ELm1SpwajvYePk/view

ರಾಷ್ಟ್ರೀಯ ತುರ್ತು ವಿಪತ್ತು ಪ್ರತಿಕ್ರಿಯೆ ಪಡೆ, ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ಜಿಲ್ಲಾಡಳಿತಗಳು ರಾಜ್ಯದಾದ್ಯಂತ 180 ದೋಣಿಗಳನ್ನು ನಿಯೋಜಿಸಿ ಬುಧವಾರ 24 ಗಂಟೆಗಳಲ್ಲಿ 3,991 ಜನರನ್ನು ರಕ್ಷಿಸಿವೆ. ಪ್ರಸ್ತುತ, ಅಸ್ಸಾಂನಾದ್ಯಂತ 3,376 ಗ್ರಾಮಗಳು ಜಲಾವೃತಗೊಂಡಿದೆ ಮತ್ತು 1,27,647.25 ಹೆಕ್ಟೇರ್ ಕೃಷಿ ಪ್ರದೇಶ ಪ್ರವಾಹಕ್ಕೆ ತುತ್ತಾಗಿದ್ದು ಬೆಳೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಪ್ರವಾಹಕ್ಕೆ ತುತ್ತಾದ 23 ಜಿಲ್ಲೆಗಳಲ್ಲಿ ಅಧಿಕಾರಿಗಳು 629 ಪರಿಹಾರ ಶಿಬಿರಗಳು ಮತ್ತು ವಿತರಣಾ ಕೇಂದ್ರಗಳನ್ನು ನಡೆಸುತ್ತಿದ್ದಾರೆ, ಅಲ್ಲಿ ಪ್ರಸ್ತುತ 36,320 ಜನರು ಆಶ್ರಯ ಪಡೆದಿದ್ದಾರೆ.

ಸತತ ಮಳೆಯಿಂದಾಗಿ ಬ್ರಹ್ಮಪುತ್ರ ನದಿ ಅಪಾಯ ಮಟ್ಟದ ಗುರುತುಗಿಂತ ಮೇಲಕ್ಕೆ ಹರಿಯುತ್ತಿದೆ. ಈಗಾಗಲೇ ಪ್ರವಾಹಕ್ಕೆ ಸಿಲುಕಿ ರಸ್ತೆ, ಸೇತುವೆಗಳು ಸೇರಿದಂತೆ ಮೂಲಭೂತ ಸೌಕರ್ಯಗಳು ಹಾನಿಗೊಂಡಿದ್ದು, ರಕ್ಷಣಾ ಕಾರ್ಯಕ್ಕೆ ಇದು ತೊಡಕಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೀವ್ರ ಪ್ರವಾಹದಿಂದ ಕಾಝಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿರುವ ವನ್ಯ ಪ್ರಾಣಿಗಳು ಗಂಭೀರ ಅಪಾಯದಲ್ಲಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬುಧವಾರ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ಕಾಝಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ 66 ಪ್ರಾಣಿಗಳು ಸಾವನ್ನಪ್ಪಿದೆ. 117 ಪ್ರಾಣಿಗಳನ್ನು ರಕ್ಷಿಸಲಾಗಿದೆ.

A female rhino calf was separated from her mother due to high flood in the Agartoli range yesterday. As we could not locate the mother, team CWRC along with @kaziranga_ staffs rescued it and currently under care at our rescue centre-CWRC. @ParimalSuklaba1 @wti_org_India pic.twitter.com/LLPHrDPQ8Z

— Kaziranga National Park & Tiger Reserve (@kaziranga_) July 15, 2020


ವಿಶ್ವ ವನ್ಯಜೀವಿ ನಿಧಿಯ ಪ್ರಕಾರ ಈ ಉದ್ಯಾನವನದಲ್ಲಿ ಆನೆಗಳು, ಭಾರತೀಯ ಹಾಗ್ ಜಿಂಕೆ, ಕಾಡೆಮ್ಮೆ ಮತ್ತು ಒಂದು ಕೊಂಬಿನ ಖಡ್ಗಮೃಗಗಳು ಸೇರಿದಂತೆ ಹಲವು ಅಳಿವಿನಂಚಿನಲ್ಲಿರುವ ಪ್ರಾಣಿಗಳಿತ್ತು.

ಉದ್ಯಾನವನದಲ್ಲಿ ಎರಡು ಖಡ್ಗಮೃಗಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಉದ್ಯಾನದ ಕೇಂದ್ರ ವ್ಯಾಪ್ತಿಯ ತಿನಿಮುಖುನಿ ನಲ್ಲಾ ಮತ್ತು ಮಿಕ್ರ್ಜನ್ ಟೋಂಗಿ ಪ್ರದೇಶಗಳಲ್ಲಿ ಮಂಗಳವಾರ ಗಂಡು ಮತ್ತು ಹೆಣ್ಣು ಖಡ್ಗಮೃಗದ ಶವಗಳು ಪತ್ತೆಯಾಗಿವೆ ಎಂದು ರಾಷ್ಟ್ರೀಯ ಉದ್ಯಾನದ ಅಧಿಕಾರಿಗಳು ತಿಳಿಸಿದ್ದಾರೆ. ತನ್ನ ತಾಯಿಯಿಂದ ಬೇರ್ಪಟ್ಟ ಒಂದು ವರ್ಷದ ಪ್ರಾಯದ ಖಡ್ಗಮೃಗವನ್ನು ಬುಧವಾರ ಬೆಳಿಗ್ಗೆ ಸೆಂಟರ್ ಫಾರ್ ವನ್ಯಜೀವಿ ಪುನರ್ವಸತಿ ಹಾಗೂ ಕಾಝಿರಂಗಾ ಸಿಬ್ಬಂದಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಹೆಣ್ಣು ಮರಿಯನ್ನು ಈಗ CWRC ರಕ್ಷಣಾ ಕೇಂದ್ರದಲ್ಲಿ ಆರೈಕೆಯಲ್ಲಿ ಇರಿಸಲಾಗಿದೆ. ರಕ್ಷಣಾ ತಂಡಕ್ಕೆ ಇದುವರೆಗೂ ಅದರ ತಾಯಿಯನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ.

A female rhino calf was separated from her mother due to high flood in the Agartoli range yesterday. As we could not locate the mother, team CWRC along with @kaziranga_ staffs rescued it and currently under care at our rescue centre-CWRC. @ParimalSuklaba1 @wti_org_India pic.twitter.com/LLPHrDPQ8Z

— Kaziranga National Park & Tiger Reserve (@kaziranga_) July 15, 2020


ADVERTISEMENT
Tags: ಅಸ್ಸಾಮ್ ರಾಜ್ಯಪ್ರವಾಹವನ್ಯಜೀವಿಗಳು
Previous Post

ಮಧ್ಯಪ್ರದೇಶ ದಲಿತ ದಂಪತಿ ಮೇಲೆ ‘ಜಂಗಲ್ ರಾಜ್’ ಆಡಳಿತದ ಅಟ್ಟಹಾಸ!

Next Post

ಆರ್ಥಿಕತೆ ಪುನರುಜ್ಜೀವನಗೊಳಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪ್ರಧಾನಿ

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ಆರ್ಥಿಕತೆ ಪುನರುಜ್ಜೀವನಗೊಳಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪ್ರಧಾನಿ

ಆರ್ಥಿಕತೆ ಪುನರುಜ್ಜೀವನಗೊಳಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪ್ರಧಾನಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada