• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ಇನ್ನೆಷ್ಟು ಕಾಲ?

by
April 2, 2020
in ಕರ್ನಾಟಕ
0
ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ಇನ್ನೆಷ್ಟು ಕಾಲ?
Share on WhatsAppShare on FacebookShare on Telegram

ಕರೋನಾ ಸೋಂಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಮಾಹಿತಿ ಸಂಗ್ರಹಿಸಲು ಬಂದಿದ್ದ ಆಶಾ ಕಾರ್ಯಕರ್ತೆಯರನ್ನು NRC ಮಾಹಿತಿ ಪಡೆಯಲು ಬಂದವರೆಂದು ತಪ್ಪಾಗಿ ಅರ್ಥೈಸಿ ಬೆಂಗಳೂರಿನ ಸಾದಿಕ್ ಲೇಔಟ್ ನಲ್ಲಿ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.

ADVERTISEMENT

ಕರೋನಾ ನಿಯಂತ್ರಣದ ಕುರಿತು ಮಾಹಿತಿ ಸಂಗ್ರಹಿಸುವುದನ್ನೇ NRC_NPR ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದುಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಹರಡಿದ್ದೇ ಹಲ್ಲೆಗೆ ಕಾರಣವೆಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಹಲ್ಲೆಗೊಳಗಾದ ಆಶಾಕಾರ್ಯಕರ್ತೆಯರನ್ನು ಭೇಟಿಮಾಡಿದ ಡಿಸಿಎಂ ಅಶ್ವಥ್ ನಾರಾಯಣ್ ಹಲ್ಲೆಗೊಳಗಾದವರನ್ನು ಸಾಂತ್ವನಿಸಿ ಹಲ್ಲೆಯನ್ನು ಖಂಡಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

NRC – CAA ಕುರಿತಾದ ಪ್ರತಿಭಟನೆಗಳು ಕೊರೊನಾ ಸೋಂಕಿನ ದೆಸೆಯಿಂದಾಗಿ ಸ್ವಲ್ಪ ಮಟ್ಟಿಗೆ ತಣ್ಣಗಾಗಿದೆ ಹೊರತು ಅದರ ಕುರಿತು ಜನರಲ್ಲಿರುವ ಸಂಶಯಗಳು ಇನ್ನೂ ಮಾಸಿಲ್ಲ. ಈ ಕಾಯ್ದೆಯ ಕುರಿತಾಗಿ ಜನರು ಇನ್ನೂ ಗೊಂದಲದಲ್ಲಿದ್ದಾರೆ ಹಾಗೂ ಪ್ರತಿಭಟನಕಾರರು ಯಾವುದೇ ದಾಖಲೆ ನೀಡುವುದಿಲ್ಲವೆಂದು ಖಡಾಖಂಡಿತವಾಗಿ ಹೇಳಿದ್ದಾರೆ. ವಿಷಯ ಇಷ್ಟು ಸೂಕ್ಷ್ಮವಾಗಿರುವಾಗ ಜನರಿಗೆ ಯಾವುದೇ ಮಾಹಿತಿ ನೀಡದೆ ಆಶಾ ಕಾರ್ಯಕರ್ತರನ್ನು ಮಾಹಿತಿ ಸಂಗ್ರಹಕ್ಕೆ ಕಳಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಎದ್ದಿದೆ. CAA – NRC ಕುರಿತಾಗಿ ಮೊದಲೇ ಉದ್ರಿಕ್ತವಾಗಿರುವ ಜನರ ಬಳಿಗೆ ಮಾಹಿತಿ ಸಂಗ್ರಹಕ್ಕೆಂದು ಆಶಾ ಕಾರ್ಯಕರ್ತರನ್ನು ಕಳುಹಿಸುವಾಗ ಸರಕಾರ ಸಾರ್ವಜನಿಕರಿಗೆ ಮಾಹಿತಿ ಸಂಗ್ರಹಣೆಯ ಉದ್ದೇಶದ ಬಗ್ಗೆ ಸಾಕಷ್ಟು ಮಾಹಿತಿ ನೀಡಬೇಕಿತ್ತು, ಕನಿಷ್ಟ ಪಕ್ಷ ಆಶಾ ಕಾರ್ಯಕರ್ತರ ಭದ್ರತೆಗಾಗಿ ಪೋಲಿಸರನ್ನು ನಿಯೋಜಿಸಬೇಕಾಗಿತ್ತು.

ಇದ್ಯಾವುದನ್ನು ಮಾಡದೆ ಏಕಾಏಕಿ ಮಾಹಿತಿ ಸಂಗ್ರಹಕ್ಕೆ ಆಶಾ ಕಾರ್ಯಕರ್ತರನ್ನು ಕಳುಹಿಸಿರುವುದೇ ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾಗಿದೆ. ಆರೋಗ್ಯ ವಿಮೆ, ಪ್ರೋತ್ಸಾಹ ಧನ ಮುಂತಾದ ಅಗತ್ಯ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಲೇ ಬಂದಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಗಣನೆಗೆ ತೆಗದುಕೊಳ್ಳುತ್ತಿಲ್ಲ.

ಕರೋನಾ ಸೋಂಕಿನಿಂದ ಇಡೀ ದೇಶ ತತ್ತರಿಸುತ್ತಿರುವಾಗ ಈ ಸೋಂಕಿನ ವಿರುದ್ಧದ ಹೋರಾಟದಲ್ಲಿ ಆಶಾ ಕಾರ್ಯಕರ್ತರು, ಶುಶ್ರೂಕರ ಪಾಲು ಬಹಳ ದೊಡ್ಡದು. ಇಂತಹಾ ಸಂಧರ್ಭಗಳಲ್ಲಿ ತಳಮಟ್ಟದಲ್ಲಿ ನಿಂತು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಶುಶ್ರೂಕರು ಕರೋನಾ ಸೋಂಕಿನ ವಿರುದ್ಧದ ಹೋರಾಟದ ಕಾಲಾಳುಗಳು. ಇಂತಹ ಆಶಾ ಕಾರ್ಯಕರ್ತರ ಕುರಿತು ಸರ್ಕಾರ ಅಥವಾ ಸಂಬಂಧಿಸಿದ ಆರೋಗ್ಯ ಇಲಾಖೆ ಕಾಳಜಿ ವಹಿಸದಿದ್ದರೆ ದೇಶದ ಮುಂದಿರುವ ಇಷ್ಟು ದೊಡ್ಡ ಸವಾಲನ್ನು ಎದುರಿಸುವುದಾದರೂ ಹೇಗೆ?

Tags: Asha Workersಆಶಾ ಕಾರ್ಯಕರ್ತೆ
Previous Post

ಉತ್ತರ ಪ್ರದೇಶ ರಕ್ಷಣೆಗೆ ಧಾವಿಸಿದ ಕರುನಾಡ ಶ್ರೀರಾಮ!

Next Post

ಉದ್ದನೆ ದಾಡಿ, ಪೈಜಾಮ ಮತ್ತು ಮಾಧ್ಯಮಗಳ ʼಇಸ್ಲಾಮೋಫೋಬಿಯಾʼ!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಉದ್ದನೆ ದಾಡಿ

ಉದ್ದನೆ ದಾಡಿ, ಪೈಜಾಮ ಮತ್ತು ಮಾಧ್ಯಮಗಳ ʼಇಸ್ಲಾಮೋಫೋಬಿಯಾʼ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada