• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಉಗ್ರಗಾಮಿ ಸಂಪರ್ಕ: MS ರಾಮಯ್ಯ ವೈದ್ಯ NIA ವಶಕ್ಕೆ

by
August 19, 2020
in ಕರ್ನಾಟಕ
0
ಉಗ್ರಗಾಮಿ ಸಂಪರ್ಕ: MS ರಾಮಯ್ಯ ವೈದ್ಯ NIA ವಶಕ್ಕೆ
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರ ಸಂಪರ್ಕದಲ್ಲಿದ್ದ ಎನ್ನಲಾಗಿರುವ ವೈದ್ಯನನ್ನು ರಾಷ್ಟ್ರೀಯ ತನಿಖಾ ತಂಡವು ಮಂಗಳವಾರ ಬಂಧನ ಮಾಡಿದೆ. ಅಬ್ದು‌ಲ್‌ ರೆಹಮಾನ್ ಬಂಧಿತ ಶಂಕಿತ ಉಗ್ರನಾಗಿದ್ದು, ಬೆಂಗಳೂರಿನ ಬಸವನಗುಡಿಯ ನಿವಾಸದಲ್ಲಿ ಬಂಧಿಸಲಾಗಿದೆ. ದೆಹಲಿಯಿಂದ ಆಗಮಿಸಿದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಸ್ಲಾಮಿಕ್ ಸ್ಟೇಟ್ ಕೊರೋಸನ್ ಪ್ರೋವಿನ್ಸ್ (ISKP) ಸಂಘಟನೆಗೆ ಸೇರಿದ ವೈದ್ಯನನ್ನು ಬಂಧಿಸಿದ್ದಾರೆ. ಭಾರತ ಹಾಗೂ ಇತರ ದೇಶಗಳಲ್ಲಿ ಸಿಎಎ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಗಲಭೆ ಸೃಷ್ಟಿಸಲು ಸಂಚು ಮಾಡಿದ್ದ ಆರೋಪದ ಮೇಲೆ ಬಂಧನ ಮಾಡಲಾಗಿದೆ.

ADVERTISEMENT

ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಎಂಬ ಆರೋಪ ಹೊತ್ತಿರುವ ಈತ ಬಾಂಗ್ಲಾ ಮೂಲದ ನಿಷೇಧಿತ ಇಸ್ಲಾಮಿಕ್ ಸ್ಟೇಟ್ ಕೊರೋಸನ್ ಪ್ರೋವಿನ್ಸ್ ಸಂಘಟನೆಯ ಸದಸ್ಯನಾಗಿದ್ದ. ತಿಹಾರ್ ಜೈಲಿನಲ್ಲಿ ಅಬ್ದುಲ್ ಬಸೀತ್ ಎಂಬ ಉಗ್ರನ ಜೊತೆ ಸಂಪರ್ಕ ಬೆಳೆದಿತ್ತು. ಪೂನಾ ಮೂಲದ ಸಾದಿಯಾ ಅನ್ವರ್, ನಬೀಲ್ ಸಿದ್ದಿಕಿ ಖತ್ರಿ ಜೊತೆ ಸೇರಿ ಐಸಿಸ್ ಜೊತೆ ಸಂಪರ್ಕ ಸಾಧಿಸಿದ್ದ ಎನ್ನಲಾಗಿದೆ. ವಿಚಾರಣೆ ವೇಳೆ ಬಂಧಿತ ಅಬ್ದುಲ್‌ ರೆಹಮಾನ್, ಸತ್ಯ ಒಪ್ಪಿಕೊಂಡಿದ್ದು, ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾಗಿ ಹೇಳಿದ್ದಾನೆ ಎನ್ನಲಾಗಿದೆ. 2014ರಲ್ಲಿ ಸಿರಿಯಾದ ಐಸಿಸ್ ಕ್ಯಾಂಪ್‌ಗೆ ಭೇಟಿ ಕೊಟ್ಟಿದ್ದ ಈತ ಐಸಿಸ್ ಕ್ಯಾಂಪ್‌ನಲ್ಲಿ ಗಾಯಗೊಂಡ ಉಗ್ರರಿಗೆ ಚಿಕಿತ್ಸೆ ನೀಡುವ ಕೆಲಸಕೂಡ ಮಾಡುತ್ತಿದ್ದ ಎನ್ನಲಾಗಿದೆ. 10 ದಿನಗಳ ಕಾಲ ಸಿರಿಯಾದ ಐಸಿಸ್ ಕ್ಯಾಂಪ್‌ನಲ್ಲಿದ್ದು ಆ ಬಳಿಕ ವಾಪಸ್ ಆಗಿದ್ದ ಎನ್ನಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರಿನ ಎಂ.ಎಸ್ ರಾಮಯ್ಯ ಅಸ್ಪತ್ರೆಯಲ್ಲಿ ಎರಡು ದಿನಗಳ ಹಿಂದಷ್ಟೇ ಪಿಜಿ ಪದವಿ ಮುಗಿಸಿದ್ದ ಶಂಕಿತ ಉಗ್ರ, Opthalmology ವಿಭಾಗದಲ್ಲಿ ( ಪಿಜಿ ) Postgraduate ಮಾಡುತ್ತಿದ್ದ ಅಬ್ದುಲ್ ರೆಹಮಾನ್, 2 ದಿನಗಳ ಹಿಂದಷ್ಟೇ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದ. ಬಂಧಿತ ಅಬ್ದುಲ್ ರೆಹಮಾನ್, ಉಗ್ರರ ಹಲವು ಸೆಮಿನಾರ್‌ಗಳಲ್ಲಿ ಭಾಗವಹಿಸಿದ್ದ ಎನ್ನುವ ಮಾಹಿತಿಯೂ ಸಿಕ್ಕಿದೆ. ವಿದ್ಯಾವಂತ ಕುಟುಂಬದಿಂದ ಬಂದಿದ್ದ ಅಬ್ದುಲ್ ರೆಹಮಾನ್. ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ, ಪ್ರತಿಭಾವಂತ ವಿದ್ಯಾರ್ಥಿ. ಅಬ್ದುಲ್ ರೆಹಮಾನ್, ಬಂಧನಧ ವಿಚಾರ ತಿಳಿದು ಎಂ.ಎಸ್‌ ರಾಮಯ್ಯ ಕಾಲೇಜು ಆಡಳಿತ ಮಂಡಳಿ ದಿಗ್ಬ್ರಾಂತರಾಗಿದ್ದಾರೆ. ಅದರಲ್ಲೂ ಅಬ್ದುಲ್ ರೆಹಮಾನ್‌ಗೆ ಐಸಿಸ್ ಲಿಂಕ್ ಇರುವ ಬಗ್ಗೆ ಮಾಹಿತಿ ಸಿಕ್ಕ ಬಳಿಕ ಆತಂಕದಲ್ಲಿದ್ದಾರೆ.

ಡಾ. ಅಬ್ದುಲ್‌ ರೆಹಮಾನ್ ಬಗ್ಗೆ ಎಂ.ಎಸ್ ರಾಮಯ್ಯ ಮೆಡಿಕಲ್ ಕಾಲೇಜ್ ಸ್ಪಷ್ಟನೆ ಕೊಟ್ಟಿದ್ದು, ನಮ್ಮ ಕಾಲೇಜಿನಲ್ಲಿ ಇವರು ಆಪ್ತಮಾಲಜಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2014ರಲ್ಲಿ ಸರ್ಕಾರಿ ಕೋಟಾದಲ್ಲಿ BMCRI ನಲ್ಲಿ ಎಂಬಿಬಿಎಸ್‌ಗೆ ಪ್ರವೇಶ ಪಡೆದಿದ್ದರು. ಆ ಬಳಿಕ ಎಂಎಸ್‌ ರಾಮಯ್ಯ ಕಾಲೇಜಿನಲ್ಲಿ ಎಂಎಸ್‌ ಮುಗಿಸಿದ್ದಾರೆ. ಕಾಲೇಜಿನ ಹೊರಗಿನ ಚಟಿವಟಿಕೆಗಳ ಬಗ್ಗೆ ತಮಗೆ ಅರಿವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ ಕೊಟ್ಟಿದೆ. ಜೊತೆಗೆ ಸರ್ಕಾರಿ ಕೋಟಾದಲ್ಲಿ ಎಂಎಸ್‌ ಸೀಟು ಪಡೆದ ಡಾ ಅಬ್ದುಲ್ ರೆಹಮಾನ್ ಪ್ರತಿಭಾವಂತ ಎಂದು ಕೂಡ ಹೇಳಿದೆ.

ಬಸವನಗುಡಿಯ ಎಂಡಿ ಬ್ಲಾಕ್‌ನ ಯುನೈಟೆಡ್ ಡಿಸೈರ್ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದ ಅಬ್ದುಲ್‌ ರೆಹಮಾನ್, ಅಪಾರ್ಟ್ಮೆಂಟ್ ಎಫ್1 ಫ್ಲಾಟ್‌ನಲ್ಲಿ ವಾಸವಾಗಿದ್ದ. ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ದಾಳಿ ಮಾಡಿದ National Investigation Agency ಅಧಿಕಾರಿಗಳ ತಂಡ. ಸತತ 4 ಗಂಟೆಗಳ ಕಾಲ ಮನೆಯಲ್ಲಿ ಕಾರ್ಯಾಚರಣೆ ನಡೆಸಿ, ಆತನ ಲ್ಯಾಪ್ ಟಾಪ್, ಮೊಬೈಲ್, ಪೆನ್ ಡ್ರೈವ್ ಸೇರಿ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ನಂತರ ಸಂಜೆ 5.30 ಕ್ಕೆ ದಾಳಿ ಮುಗಿಸಿ ಶಂಕಿತ ಅಬ್ದುಲ್ ರೆಹಮಾನ್ ವಶಕ್ಕೆ ಪಡೆದಿದ್ದಾರೆ.

ಯುದ್ಧ ಭೂಮಿಯಲ್ಲಿ ಗಾಯಗೊಳ್ಳುವ ಐಸಿಸ್ ಉಗ್ರ ಸಂಘಟನೆಯ ಕಾರ್ಯಕರ್ತರಿಗೆ ಸಹಾಯ ಮಾಡಲು ವೈದ್ಯಕೀಯ ತಂತ್ರಾಂಶವನ್ನು ಅಭಿವೃದ್ಧಿಪಡಿಸುತ್ತಿದ್ದ ಮತ್ತು ಐಸಿಸ್ ಉಗ್ರರ ಅನುಕೂಲಕ್ಕಾಗಿ ಶಸ್ತ್ರಾಸ್ತ್ರ ಸಂಬಂಧಿತ ತಂತ್ರಾಂಶವನ್ನೂ ಅಭಿವೃದ್ಧಿಪಡಿಸುತ್ತಿದ್ದ ಎಂದು ರಾಷ್ಟ್ರೀಯ ತನಿಖಾ ದಳದ ಮೂಲಗಳು ತಿಳಿಸಿವೆ.

Tags: ಎಂ ಎಸ್‌ ರಾಮಯ್ಯ ಆಸ್ಪತ್ರೆಶಂಕಿತ ಉಗ್ರ
Previous Post

ಬೆಂಗಳೂರು ಗಲಭೆ: ತನಿಖೆಗೆ ಕಾಂಗ್ರೆಸ್‌ ಹಿಂಜರಿಯುತ್ತಿದೆಯಾ?

Next Post

ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada