• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉತ್ತರ ಪ್ರದೇಶ: ರಾಜ್ಯಸಭಾ ಚುನಾವಣೆಯಲ್ಲಿ ದಲಿತ ವಿರೋಧಿ ಹಣೆಪಟ್ಟಿ ಕಳಚಲು ಬಿಜೆಪಿ ಯತ್ನ

by
November 3, 2020
in ದೇಶ
0
ಉತ್ತರ ಪ್ರದೇಶ: ರಾಜ್ಯಸಭಾ ಚುನಾವಣೆಯಲ್ಲಿ ದಲಿತ ವಿರೋಧಿ ಹಣೆಪಟ್ಟಿ ಕಳಚಲು ಬಿಜೆಪಿ ಯತ್ನ
Share on WhatsAppShare on FacebookShare on Telegram

ಸೋಮವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ 10 ಜನ ಸಂಸದರು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಎಂಟು, ಸಮಾಜವಾದಿ ಪಾರ್ಟಿ ಮತ್ತು ಬಹುಜನ ಸಮಾಜ ಪಾರ್ಟಿಯಿಂದ ತಲಾ ಒಬ್ಬರು ಸಂಸದರು ಆಯ್ಕೆಯಾಗಿದ್ದಾರೆ. ಇದರಲ್ಲಿ ಆಶ್ಚರ್ಯಕರ ವಿಚಾರವೇನೆಂದರೆ, ಬಿಜೆಪಿಯಿಂದ ಇನ್ನೊಬ್ಬ ಸದಸ್ಯರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಅವಕಾಶವಿದ್ದರೂ, ಆ ಸ್ಥಾನವನ್ನು ಬಿಎಸ್‌ಪಿಗೆ ಬಿಟ್ಟುಕೊಡುವ ಮೂಲಕ ರಾಜಕೀಯ ತಂತ್ರಗಾರಿಕೆ ಹೆಣೆದಿದೆ.

ADVERTISEMENT

ಕಳೆದ ವಾರ ಮಾಧ್ಯಮದವರೊಂದಿಗೆ ಮಾತನಾಡಿದ್ದ ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು, ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿಯನ್ನು ಸೋಲಿಸಲು ಬಿಜೆಪಿಯೊಂದಿಗೂ ಕೈಜೋಡಿಸಲು ಸಿದ್ದ ಎಂದು ಹೇಳಿದ್ದರು. ಸಮಾಜವಾದಿ ಪಾರ್ಟಿಗೆ ಬೆಂಬಲ ನೀಡಿದ್ದ ಏಳು ಶಾಸಕರನ್ನು ಪಕ್ಷದಿಂದ ಅಮಾನತುಗೊಳಿಸಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಬೆಳವಣಿಗೆಯ ನಂತರ ಬಿಜೆಪಿಯು ರಾಜ್ಯಸಭೆಯಲ್ಲಿ ಹೆಚ್ಚುವರಿ ಒಂದು ಸ್ಥಾನವನ್ನು ಗಳಿಸುವ ಅವಕಾಶವಿದ್ದರೂ, ಅದನ್ನು ಬಿಎಸ್‌ಪಿಗೆ ಬಿಟ್ಟುಕೊಡುವ ಮೂಲಕ, ʼದಲಿತ-ವಿರೋಧಿʼ ಎಂಬ ಹಣೆಪಟ್ಟಿಯನ್ನು ಕಳಚಲು ಪ್ರಯತ್ನಿಸುತ್ತಿದೆ. ಬಿಎಸ್‌ಪಿಯ ರಾಮ್‌ಜಿ ಲಾಲ್‌ ಗೌತಮ್‌ ಅವರು ಈಗ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯ ಬಳಿ 22 ಮತಗಳು ಹೆಚ್ಚುವರಿಯಾಗಿದ್ದರೂ, ಒಂಬತ್ತನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಮುಂದೆ ಬರಲಿಲ್ಲ. ಈ 22 ಮತಗಳೊಂದಿಗೆ ಮೈತ್ರಿ ಪಕ್ಷವಾಗಿರುವ ಅಪ್ನಾ ದಳದ ಒಂಬತ್ತು ಹಾಗೂ ಮೂವರು ಪಕ್ಷೇತರರ ಬೆಂಬಲವಿದ್ದರೂ, ಬಿಜೆಪಿ ಒಂದು ಸ್ಥಾನವನ್ನು ಬಿಎಸ್‌ಪಿಗೆ ಬಿಟ್ಟುಕೊಟ್ಟಿದೆ. ಗೌತಮ್‌ ಅವರು ಕೇವಲ ಒಂಬತ್ತು ಜನರ ಬೆಂಬಲದೊಂದಿಗೆ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

Also Read: ಹಥ್ರಾಸ್ ಪ್ರಕರಣ: ಸಿಬಿಐ ಭೀತಿಯ ಎದುರು ಉಡುಗಿಹೋಯ್ತೆ ದಲಿತ ನಾಯಕಿಯ ದನಿ?

ಚುನಾವಣೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಾಯಾವತಿ, ನಾನು ಬಿಜೆಪಿಯೊಂದಿಗೆ ಕೈಜೋಡಿಸುತ್ತೇನೆ ಎಂದು ಹೇಳಿರುವ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿಕೊಂಡಿವೆ, ಸಮಾಜವಾದಿ ಪಾರ್ಟಿಯನ್ನು ಸೋಲಿಸಲು ʼಬೇಕಾದರೆʼ ಬಿಜೆಪಿಗೆ ಬೆಂಬಲಿಸುತ್ತೇನೆ ಎಂದು ಹೇಳಿದ್ದೆ. ಅದರ ಹೊರತಾಗಿ ಕೋಮುವಾದಿ ಮತ್ತು ಜಾತಿವಾದಿ ಪಕ್ಷವಾದ ಬಿಜೆಪಿಯನ್ನು ಬೆಂಬಲಿಸುವ ಪ್ರಶ್ನೆಯಿಲ್ಲ ಎಂದು ಹೇಳಿದ್ದಾರೆ.

ಮಾಯಾವತಿ ಅವರು ಈ ರೀತಿಯ ಸ್ಪಷ್ಟಣೆ ನೀಡಿದ್ದರೂ, ಬಿಜೆಪಿಯಿಂದ ದಲಿತ ಮತದಾರರನ್ನು ಓಲೈಸುವ ರಾಜಕಾರಣ ಉತ್ತರಪ್ರದೇಶದಲ್ಲಿ ನಡೆಯುತ್ತಿದೆ ಎಂಬುದಕ್ಕೆ ಈ ರಾಜ್ಯಸಭಾ ಚುನಾವಣೆ ಸಾಕ್ಷಿ. ದಲಿತ ವಿರೋಧಿ ಪಟ್ಟವನ್ನು ಕಳಚಿಕೊಳ್ಳುವ ಮೂಲಕ ಮುಂಬರುವ ಚುನಾವಣೆಗಳಲ್ಲಿ, ಪಕ್ಷದ ಅಸ್ಥಿತ್ವವನ್ನು ಇನ್ನಷ್ಟು ಬಲಪಡಿಸುವುದು ಬಿಜೆಪಿಯ ಗುರಿ. ಈಗಾಗಲೇ, ಹಾಥ್ರಾಸ್‌ ಪ್ರಕರಣದಿಂದಾಗಿ ಉತ್ತರ ಪ್ರದೇಶದ ಯೋಗಿ ಸರ್ಕಾರ ಕಳೆದುಕೊಂಡಿರುವ ʼಇಮೇಜ್‌ʼ ಅನ್ನು ಬಿಎಸ್‌ಪಿಗೆ ಪರೋಕ್ಷವಾಗಿ ಬೆಂಬಲ ನೀಡುವ ಮೂಲಕ ತಾನೂ ದಲಿತ ಪರ ಎಂಬುವುದನ್ನು ನಿರೂಪಿಸಲು ಹೊರಟಿದೆ.

Tags: ಉತ್ತರ ಪ್ರದೇಶಉತ್ತರ ಪ್ರದೇಶ ಸರ್ಕಾರದಲಿತದಲಿತ ನಾಯಕಿ
Previous Post

ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆರೆಯಲ್ಲಿ ನಿಂತು ಪ್ರತಿಭಟಿಸಿದ ರೈತರು

Next Post

ನವೆಂಬರ್‌ 10ರ ನಂತರ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿರಲ್ಲ – ಚಿರಾಗ್‌ ಪಾಸ್ವಾನ್

Related Posts

Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
0

ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರೊಂದಿಗೆ  ಸಭೆ...

Read moreDetails
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

December 1, 2025
ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI

ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI

December 1, 2025
Next Post
ನವೆಂಬರ್‌ 10ರ ನಂತರ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿರಲ್ಲ – ಚಿರಾಗ್‌ ಪಾಸ್ವಾನ್

ನವೆಂಬರ್‌ 10ರ ನಂತರ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿರಲ್ಲ – ಚಿರಾಗ್‌ ಪಾಸ್ವಾನ್

Please login to join discussion

Recent News

Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada