• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉದ್ಧವ್‌ ಠಾಕ್ರೆಯ ವ್ಯಂಗ್ಯ ಚಿತ್ರ ಹಂಚಿದ ಆರೋಪ: ನಿವೃತ್ತ ನೌಕಾಪಡೆ ಅಧಿಕಾರಿ ಮೇಲೆ ಹಲ್ಲೆ

by
September 12, 2020
in ದೇಶ
0
ಉದ್ಧವ್‌ ಠಾಕ್ರೆಯ ವ್ಯಂಗ್ಯ ಚಿತ್ರ ಹಂಚಿದ ಆರೋಪ: ನಿವೃತ್ತ ನೌಕಾಪಡೆ ಅಧಿಕಾರಿ ಮೇಲೆ ಹಲ್ಲೆ
Share on WhatsAppShare on FacebookShare on Telegram

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಯ ಕುರಿತಾದ ವ್ಯಂಗ್ಯಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಿವೃತ್ತ ನೌಕಾಸೇನೆಯ ಅಧಿಕಾರಿ ಮೇಲೆ ಶಿವಸೇನೆ ಕಾರ್ಯಕರ್ತರು ಅಮಾನವೀಯವಾಗಿ ಥಳಿಸಿದ ಘಟನೆ ಮುಂಬೈಯಲ್ಲಿ ನಡೆದಿದೆ.

ಮುಂಬೈಯ ಕಂಡಿವಲಿ ಘಟಕದ ಶಿವಸೇನೆ ಮುಖ್ಯಸ್ಥ ಕಮಲೇಶ್‌ ಕದಮ್‌ ನೇತೃತ್ವದ ತಂಡವು ನಿವೃತ್ತ ಅಧಿಕಾರಿ ಮದನ್‌ ಶರ್ಮ ಅವರ ಮೇಲೆ ಹಲ್ಲೆ ನಡೆಸಿದೆ. ಮದನ್‌ ಶರ್ಮರ ಅಪಾರ್ಟ್‌ಮೆಂಟ್‌ ಮುಂದೆಯೇ ನಡೆದ ಘಟನೆ ಭದ್ರತಾ ವ್ಯವಸ್ಥೆಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಚಿತ್ರೀಕರಣಗೊಂಡಿದ್ದರು, ವೀಡಿಯೋ ವ್ಯಾಪಕ ವೈರಲ್‌ ಆಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಘಟನೆ ವಿವರ:

ಮುಂಬೈಯ ಪೂರ್ವ ಕಂಡಿವಲಿಯಲ್ಲಿ ತನ್ನ ಕುಟುಂಬದೊಂದಿಗೆ ವಾಸವಾಗಿರುವ ನಿವೃತ್ತ ನೌಕಪಡೆ ಅಧಿಕಾರಿ ಮದನ್‌ ಶರ್ಮ(65) ಬುಧವಾರದಂದು, ತಮಗೆ ವಾಟ್ಸಪ್‌ನಲ್ಲಿ ಬಂದಿದ್ದ ಉದ್ಧವ್‌ ಠಾಕ್ರೆಗೆ ಸಂಬಂಧಿಸಿದ ವ್ಯಂಗ್ಯ ಚಿತ್ರವೊಂದನ್ನು (NCP ಮುಖ್ಯಸ್ಥ ಶರದ್ ಪವಾರ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೈ ಮುಗಿಯುವ ಚಿತ್ರ) ತಾವು ವಾಸಿಸುತ್ತಿರುವ ಹೌಸಿಂಗ್ ಸೊಸೈಟಿ ವಾಟ್ಸಾಪಿಗೆ ಫಾರ್ವಡ್ ಮಾಡಿದ್ದರು. ಇದು ಶಿವಸೇನೆ ಕಾರ್ಯಕರ್ತರ ಗಮನಕ್ಕೆ ಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರೆನ್ನಲಾದ ವ್ಯಂಗ್ಯ ಚಿತ್ರ

ಶುಕ್ರವಾರ ಬೆಳಗ್ಗೆ 10 ಗಂಟೆ ವೇಳೆ ಮದನ್‌ ಶರ್ಮ ಅವರ ನಂಬರ್‌ ಗೆ ಕರೆ ಮಾಡಿ ತಮ್ಮಲ್ಲಿ ಮಾತಾಡುವುದಿದೆ, ಹೊರಗೆ ಬನ್ನಿ ಎಂದು ಹಲ್ಲೆಕೋರರು ಕರೆದಿದ್ದಾರೆ. ಮಾತನಾಡಲು ಬಂದ ಶರ್ಮ ಅವರ ಮೇಲೆ ಗುಂಪು ಹಿಗ್ಗಾಮುಗ್ಗಾ ದಾಳಿ ಮಾಡಿದೆ.

ದಾಳಿಕೋರರಿಂದ ತಪ್ಪಿಸಿಕೊಳ್ಳಲು ತಮ್ಮ ಅಪಾರ್ಟ್‌ಮೆಂಟ್‌ ಕಂಪೌಂಡ್‌ ಒಳಗೆ ಓಡಿ ಬಂದ 65 ವರ್ಷದ ಶರ್ಮ ಅವರನ್ನು ಬೆನ್ನಟ್ಟಿ ಅಟ್ಟಾಡಿಸಿ ಹಲ್ಲೆ ನಡೆಸಿರುವುದು ವೈರಲ್‌ ಆದ ವಿಡಿಯೋದಲ್ಲಿ ಕಾಣುತ್ತದೆ. ಹಲ್ಲೆಯ ತೀವ್ರತೆಗೆ ಶರ್ಮಾ ಅವರ ಕಣ್ಣುಗಳಿಗೆ ಹಾನಿಗೊಂಡಿದೆ. ಲಭ್ಯವಾಗಿರುವ ಶರ್ಮಾರ ಚಿತ್ರದಲ್ಲಿ, ಕಣ್ಣುಗಳೆರಡು ಊದಿಕೊಂಡು, ರಕ್ತ ಹೆಪ್ಪುಗಟ್ಟಿರುವುದು ಕಾಣಿಸುತ್ತದೆ.

अभिनेत्री कंगना राणावत के कार्यालय की तोड़फोड़ करके अपनी मर्दानगी दिखाने वाले सत्ताधारी शिवसेना ने अब सत्ता के मद में एक बुजुर्ग भूतपूर्व नौसेना अधिकारी मदन शर्मा को मारपीट करते हुए उनकी आंख को जबरदस्त चोट पहुंचाई है। मुख्यमंत्री घरबैठे तानाशाही चला रहे है। pic.twitter.com/qF2NVcIN55

— Atul Bhatkhalkar (@BhatkhalkarA) September 11, 2020


ಆರೋಪಿಗಳ ಬಂಧನ:

ಶುಕ್ರವಾರ ಸಂಜೆ ಮದನ್‌ ಶರ್ಮ ಸಮ್ತಾ ನಗರ್‌ ಪೊಲೀಸ್‌ ಠಾಣೆಯಲ್ಲಿ ಘಟನೆ ಸಂಬಂಧಿತ ಅಪರಿಚಿತ 8 ರಿಂದ 10 ಮಂದಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಕದಮ್‌ ಹಾಗೂ ಆತನ ಸಹಚರರ ಮೇಲೆ ಭಾರತೀಯ ದಂಡ ಸಂಹಿತೆ ಪ್ರಕಾರ ಗಲಭೆ, ಹಲ್ಲೆಗೆ ಸಂಚು, ಹಲ್ಲೆ ಪ್ರಕರಣ ದಾಖಲಿಸಲಾಗಿದೆಯೆಂದು ಹೆಚ್ಚುವರಿ ಪೊಲೀಸ್‌ ಆಯುಕ್ತ ದಿಲೀಪ್‌ ಸಾವಂತ್‌ ತಿಳಿಸಿದ್ದಾರೆ. ಈಗಾಗಲೇ ಮುಖ್ಯ ಆರೋಪಿ ಕಮಲೇಶ್‌ ಕದಮ್‌ ಸಹಿತ ಒಟ್ಟು ಏಳು ಮಂದಿ ಶಿವಸೇನೆ ಕಾರ್ಯಕರ್ತರನ್ನು ಬಂಧಿಸಲಾಗಿದೆಯೆಂದು ವರದಿಯಾಗಿದೆ.

ಹಲ್ಲೆ ಬಳಿಕ ಮದನ್‌ ಶರ್ಮ

ಘಟನೆಗೆ ಖಂಡನೆ:

ನೌಕಪಡೆಯ ನಿವೃತ್ತ ಅಧಿಕಾರಿ, ಹಿರಿಯ ನಾಗರಿಕನ ಮೇಲೆ ಅಮಾನವೀಯವಾಗಿ ನಡೆದ ದಾಳಿಯನ್ನು ದೇವೇಂದ್ರ ಫಡ್ನವೀಸ್‌, ನಟಿ ಸ್ವರಾ ಭಾಸ್ಕರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಖಂಡಿಸಿದ್ದಾರೆ.

“ಅತ್ಯಂತ ದುಖಕರ ಹಾಗೂ ಆಘಾತಕಾರಿʼ ಎಂದು ಘಟನೆ ಕುರಿತು ಪ್ರತಿಕ್ರಿಯಿಸಿದ ಫಡ್ನವೀಸ್‌, ಅಪರಾಧಿಗಳಿಗೆ ಕಠಿಣ ಶಿಕೆ ವಿಧಿಸುವಂತೆ ಉದ್ಧವ್‌ ಠಾಕ್ರೆಯನ್ನು ಒತ್ತಾಯಿಸಿದ್ದಾರೆ.

“ಒಂದು ವ್ಯಂಗ್ಯಚಿತ್ರಕ್ಕಾಗಿ ಶಿವಸೇನೆಯವರಿಂದ ಹಿರಿಯ ಸಂಭಾವಿತ ವ್ಯಕ್ತಿಯ ಮೇಲೆ ದಾಳಿ ನಡೆದಿರುವುದು ಆಘಾತಕಾರಿ, ನಾಚಿಕೆಗೇಡು ಮತ್ತು ಸಂಪೂರ್ಣವಾಗಿ ಖಂಡನೀಯ. ಈ ರೀತಿಯ ಹಿಂಸಾಚಾರಕ್ಕೆ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳದಿದ್ದರೆ ನೀವು ಉತ್ತಮ ಆಡಳಿತವನ್ನು ಪಡೆಯಲು ಸಾಧ್ಯವಿಲ್ಲ. ನಾಚಿಕೆಗೇಡು!” ಎಂದು ನಟಿ ಸ್ವರಾ ಭಾಸ್ಕರ್‌ ಘಟನೆ ಕುರಿತು ಪ್ರತಿಕ್ರಿಯಿಸಿದ್ದಾರೆ.

The attack on an elderly gentleman by the #ShivSena for a joke on @CMOMaharashtra @OfficeofUT is shocking, shameful & utterly condemnable. Violence of this kind has no place in a civilised democracy & you cannot claim good governance if basic law & order isn’t maintained. Shame!

— Swara Bhasker (@ReallySwara) September 11, 2020


ADVERTISEMENT
Tags: ಉದ್ಧವ್ ಠಾಕ್ರೆನಿವೃತ್ತ ನೌಕಪಡೆ ಅಧಿಕಾರಿಮಹಾರಾಷ್ಟ್ರವ್ಯಂಗ್ಯ ಚಿತ್ರಶಿವಸೇನೆ
Previous Post

ಪ್ರತಿಭಟಿಸುವುದು ಸಾಂವಿಧಾನಿಕವಾಗಿ ಖಾತರೀಪಡಿಸಿದ ಹಕ್ಕು –ಕೊಚ್ಚಿ NIA ನ್ಯಾಯಾಲಯ

Next Post

ಅಗತ್ಯವಿದ್ದ ದಂಡನಾಯಕನನ್ನು ಆರಿಸುವ ಬದಲು ಸೇನಾಪತಿಗಳನ್ನು ನೇಮಿಸಿಕೊಂಡ ಕಾಂಗ್ರೆಸ್

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
Next Post
ಅಗತ್ಯವಿದ್ದ ದಂಡನಾಯಕನನ್ನು ಆರಿಸುವ ಬದಲು ಸೇನಾಪತಿಗಳನ್ನು ನೇಮಿಸಿಕೊಂಡ ಕಾಂಗ್ರೆಸ್

ಅಗತ್ಯವಿದ್ದ ದಂಡನಾಯಕನನ್ನು ಆರಿಸುವ ಬದಲು ಸೇನಾಪತಿಗಳನ್ನು ನೇಮಿಸಿಕೊಂಡ ಕಾಂಗ್ರೆಸ್

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada