• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉನ್ನತ ಹುದ್ದೆಗಳಿಗೆ  ಐಎಎಸ್‌ಯೇತರ ಅಧಿಕಾರಿಗಳನ್ನು ನೇಮಿಸುತ್ತಿರುವ ಕೇಂದ್ರ ಸರ್ಕಾರ

by
February 10, 2020
in ದೇಶ
0
ಉನ್ನತ ಹುದ್ದೆಗಳಿಗೆ  ಐಎಎಸ್‌ಯೇತರ ಅಧಿಕಾರಿಗಳನ್ನು ನೇಮಿಸುತ್ತಿರುವ ಕೇಂದ್ರ ಸರ್ಕಾರ
Share on WhatsAppShare on FacebookShare on Telegram

ಭಾರತ ಸರ್ಕಾರ ಆಡಳಿತದಲ್ಲಿ ದಕ್ಷತೆ ಹೆಚ್ಚಿಸಲು ಭಾರತೀಯ ಆಡಳಿತ , ಅರಣ್ಯ ಹಾಗೂ ಪೋಲೀಸ್‌ ಸೇವೆಯನ್ನು ಜಾರಿಗೊಳಿಸಿದೆ. ಹಿಂದೆ ಬ್ರಿಟಿಷರ ಕಾಲದಲ್ಲೇ ಇಂಡಿಯನ್‌ ಸಿವಿಲ್‌ ಸರ್ವೀಸ್‌ ಎಂಬ ಸೇವೆಯನ್ನು ಜಾರಿಗೆ ತರಲಾಗಿತ್ತು. ನಂತರ ಅದನ್ನು ಭಾರತೀಯ ಆಡಳಿತ ಸೇವೆ ಎಂದು ಬದಲಾವಣೆ ಮಾಡಲಾಯಿತು. ಈ ಉನ್ನತ ಹುದ್ದೆಗಳಿಗೆ ಸಂವಿಧಾನದ ರಕ್ಷಣೆ ಇದ್ದು ಹೆಚ್ಚಿನ ಅಧಿಕಾರವನ್ನೂ ಹೊಂದಿರುವುದರಿಂದ ಶಾಸಕಾಂಗವು ಈ ಅಧಿಕಾರಿಗಳನ್ನು ಸಕಾರಣವಿಲ್ಲದೆ ಸೇವೆಯಿಂದ ಹೊರಗೆ ಕಳಿಸುವುದು ಅಸಾದ್ಯ. ಹಾಗಾಗಿ ನಮ್ಮ ಯುವ ಪ್ರತಿಭಾವಂತರು ಐಎಎಸ್/ಐಪಿಎಸ್‌/ ಐಎಫ್‌ಎಸ್‌ ಅಧಿಕಾರಿಗಳಾಗಬೇಕೆಂಬ ಕನಸು ಕಾಣುವುದು ಸಹಜ.

ADVERTISEMENT

ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ಉನ್ನತ ಹುದ್ದೆಗಳಿಗೆ ಐಎಎಸ್‌ಯೇತರ ಅಧಿಕಾರಿಗಳನ್ನು ನೇಮಿಸುತ್ತಿದ್ದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

2014 ರಲ್ಲಿ ಮೋದಿ ಅವರು ಪ್ರಧಾನಿಯಾದ ನಂತರ ಕೆಲವು ಸಚಿವಾಲಯಗಳ ಕಾರ್ಯದರ್ಶಿಯಂತಹ ಉನ್ನತ ಹುದ್ದೆಗಳಿಗೆ ಐಎಎಸ್‌ಯೇತರ ಹಿರಿಯ ಅಧಿಕಾರಿಗಳನ್ನೇ ನೇಮಿಸಲಾಗುತ್ತಿದೆ. ಸಾಮಾನ್ಯವಾಗಿ ಎಲ್ಲ ಹಿರಿಯ ಐಎಎಸ್‌ ಅಧಿಕಾರಿಗಳೂ ಸರ್ಕಾರದ ಸಚಿವಾಲಯದ ಮುಖ್ಯಸ್ಥನ ಹುದ್ದೆಗೆ ಏರುವ ಕನಸು, ಗುರಿಯನ್ನು ಹೊಂದಿರುತ್ತಾರೆ. ಈ ಹುದ್ದೆಯಲ್ಲಿ ಸರ್ಕಾರದ ನಿರ್ಧಾರಗಳನ್ನು ತೆಗೆದುಕೊಳ್ಳುವ ಮತ್ತು ಯಶಸ್ವಿಯಾಗಿ ಜಾರಿಗೊಳಿಸುವ ಅಧಿಕಾರ ಇರುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಇಲಾಖೆಯೊಂದರ ಕಾರ್ಯಕ್ಷಮತೆ, ದಕ್ಷತೆ ಮತ್ತು ಚಟುವಟಿಕೆ ಯನ್ನು ನಿಯಂತ್ರಿಸುವ ಮತ್ತು ಚುರುಕುಗೊಳಿಸುವ ಅಧಿಕಾರವೂ ಇರುತ್ತದೆ.

ಈ ರೀತಿ ಐಎಎಸ್‌ಯೇತರ ಅಧಿಕಾರಿಗಳ ನೇಮಕದಿಂದಾಗಿ ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಇರಿಸು ಮುರಿಸೂ ಅಗಿದೆ. ಈ ತಿಂಗಳ ಮೊದಲ ವಾರದಲ್ಲಿ ಸಂಪುಟ ಸಮಿತಿಯು ನಾಲ್ವರು ಐಎಎಸ್‌ ಯೇತರ ಅಧಿಕಾರಿಗಳನ್ನು ಕಾರ್ಯದರ್ಶಿ ಹುದ್ದೆಗೆ ನೇಮಿಸಿತು. ಇದರಲ್ಲಿ ಇಂಡಿಯನ್‌ ರೆವಿನ್ಯೂ ಸರ್ವೀಸ್‌ ನ ಜಾರಿ ನಿರ್ದೇಶನಾಲಯದ ನಿರ್ದೆಶಕ ಸಂಜಯ್‌ ಕುಮಾರ್‌ ಮಿಶ್ರ ಅವರಿಗೆ ಪದೋನ್ನತಿ ನೀಡಿ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಇದಕ್ಕೂ ಮೊದಲು ಅನುರಾಧ ಮಿತ್ರ ಅವರನ್ನು ಅಧಿಕೃತ ಭಾಷಾ ವಿಭಾಗದ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿತ್ತು.

ಕೆಲವು ಸಚಿವಾಲಯಗಳಲ್ಲಿ ಐಎಎಸ್‌ಯೇತರ ಅಧಿಕಾರಿಗಳನ್ನು ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿದ್ದರೂ ಅಲ್ಲಿನ ಸಚಿವಾಲಯಗಳಲ್ಲಿನ ಮುಖ್ಯಸ್ಥರು ಹಿರಿಯ ತಜ್ಞರೇ ಆಗಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮುಖ್ಯಸ್ಥರಾಗಿ ಹಿರಿಯ ವಿದೇಶಾಂಗ ಸೇವೆಯ ಅಧಿಕಾರಿ ಇದ್ದಾರೆ. ಅದೇ ರೀತಿ ರೈಲ್ವೇ ಸಚಿವಾಲಯದಲ್ಲಿ ರೈಲ್ವೇ ಸೇವೆಯ ಹಿರಿಯ ಅಧಿಕಾರಿ ಮುಖ್ಯಸ್ಥರಾಗಿದ್ದಾರೆ. ಇತರ ಇಲಾಖೆಗಳಲ್ಲಿ ಸೇವೆ ಸಲ್ಲಿಸಿರುವ ಐಎಎಸ್‌ ಯೇತರ ಅಧಿಕಾರಿಗಳನ್ನು ಅವರು ಪಾಂಡಿತ್ಯ ಹೊಂದಿಲ್ಲದ ಇಲಾಖೆಗಳ ಕಾರ್ಯದರ್ಶಿಗಳನ್ನಾಗಿ ನೇಮಿಸುವುದರಿಂದ ಈ ಅಧಿಕಾರಿ ವೃಂದದಲ್ಲಿ ತಾವೂ ಉನ್ನತ ಹುದ್ದೆ ಅಲಂಕರಿಸುವ ಅವಕಾಶ ಹೆಚ್ಚಿದೆ ಎಂದು ಹಿರಿಯ ಅಧಿಕಾರಿಯೊಬ್ಬರ ಅಭಿಪ್ರಾಯ. ಏಕೆಂದರೆ ಇದಕ್ಕೂ ಮೊದಲು ಜೀವಮಾನವಿಡೀ ಅವರು ಐಎಎಸ್‌ ಅಧಿಕಾರಿಗಳ ಕೈ ಕೆಳಗೇ ಕೆಲಸ ಮಾಡಬೇಕಾಗಿತ್ತು.

2010 ರಿಂದ 2014 ರ ವರೆಗೆ ಯಾವುದೇ ಐಎಎಸ್‌ ಯೇತರ ಅಧಿಕಾರಿಯನ್ನು ಕಾರ್ಯದರ್ಶಿ ಹುದ್ದೆಗೆ ನೇಮಿಸಲಾಗಿಲ್ಲ. 2014 ರಲ್ಲಿ ಇಬ್ಬರು , 2015 ರಲ್ಲಿ ನಾಲ್ವರು, 2016 ರಲ್ಲಿ ಆರು, 2017 ರಲ್ಲಿ ಇಬ್ಬರು ಹಾಗೂ 2018 ರಲ್ಲಿ ಆರು ಮಂದಿಗೆ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಈ ರೀತಿ ನೇಮಕಾತಿ ಮಾಡುವುದರಲ್ಲಿ ತಪ್ಪೇನಿದೆ ? ಇದರಿಂದ ಬದಲಾವಣೆಗೆ ಅವಕಾಶವಾಗಿದೆ ಎಂಬ ಅಭಿಪ್ರಾಯ ನಾನ್‌ ಐಎಎಸ್‌ ಅಧಿಕಾರಿ ವೃಂದದಲ್ಲಿದೆ. ಏಕೆಂದರೆ ಕೆಲವು ವೇಳೆ ಸರ್ಕಾರ ಐಎಎಸ್‌ ಹಾಗೂ ಐಎಫ್‌ಎಸ್‌ ಅಧಿಕಾರಿಗಳನ್ನು ತಮಗೆ ಸಂಭಂಧವೇ ಪಡದ ಇಲಾಖೆಗಳಿಗೆ ಮುಖ್ಯಸ್ಥರನ್ನಾಗಿ ನೇಮಿಸುವುದಿಲ್ಲವೇ ಎಂದು ಒರ್ವರು ಹೇಳುತ್ತಾರೆ.

2014 ಕ್ಕೂ ಮೊದಲು ಐಎಎಸ್‌ ಯೇತರ ಅಧಿಕಾರಿಗಳನ್ನು ಉಪ ಕಾರ್ಯದರ್ಶಿ ಹುದ್ದೆಗಳ ವರೆಗೆ ಸೇವೆ ಸಲ್ಲಿಸಲು ಮಾತ್ರ ಅವಕಾಶ ನೀಡಲಾಗುತಿತ್ತು. ಈ ಬೆಳವಣಿಗೆಯಿಂದ ಐಎಎಸ್‌ ಅಧಿಕಾರಿಗಳು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ . .

ಇದು ನಿಷ್ಠಾವಂತ ಅಧಿಕಾರಶಾಹಿಯನ್ನು ಖಾತರಿಪಡಿಸುವ ಒಂದು ಖಚಿತವಾದ ಮಾರ್ಗವಾಗಿದೆ. ಇತರ ಸೇವೆಗಳ ಅಧಿಕಾರಿಗಳು ಇದ್ದಕ್ಕಿದ್ದಂತೆ ಬಡ್ತಿ ಪಡೆಯಲು ಪ್ರಾರಂಭಿಸಿದಾಗ, ಅವರು ರಾಜಕೀಯ ನಾಯಕರ ಇಚ್ಚೆಗೆ ಅನುಗುಣವಾಗಿ ವರ್ತಿಸಬೇಕಾಗುತ್ತದೆ . ಅದು ಅವರಿಗೆ ಬೆಳೆಯಲು ಅವಕಾಶ ಮಾಡಿಕೊಟ್ಟಿದೆ” ಎಂದು ಹಿರಿಯ ಐಎಎಸ್ ಅಧಿಕಾರಿಯೊಬ್ಬರ ಅಭಿಪ್ರಾಯವಾಗಿದೆ. ಮತ್ತೊಬ್ಬರ ಪ್ರಕಾರ ಇದೊಂದು ಹಳೆಯ ಚಿಂತನೆ ಆಗಿದ್ದು ಹಿಂದಿನ ಸರ್ಕಾರಗಳು ಇದಕ್ಕೆ ಅವಕಾಶ ಮಾಡಿಕೊಟ್ಟಿರಲಿಲ್ಲ ಎಂದರು.

ಸರ್ಕಾರ ಅರ್ಹತೆಯನ್ನು , ಕಾರ್ಯ ಕ್ಷಮತೆಯನ್ನು ಪರಿಗಣಿಸದೆ ಇತರ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಕಾರ್ಯದರ್ಶಿ ಮಟ್ಟದ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿರುವುದು ಆಡಳಿತ ವ್ಯವಸ್ಥೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾದ್ಯತೆ ಹೆಚ್ಚಿದೆ.

Tags: ಅಧಿಕಾರಿಉನ್ನತ ಹುದ್ದೆಐಎಎಸ್‌ಕೇಂದ್ರ ಸರ್ಕಾರ
Previous Post

ಕಪ್ಪತಗುಡ್ಡ ವನ್ಯಜೀವಿ ಧಾಮಕ್ಕೆ ಬಂದಿದೆಯಾ ಆಪತ್ತು? 

Next Post

ಕಾಶ್ಮೀರದಲ್ಲಿ ಮತದಾನ ಮಾಡಲು ಜನರ ಮನವೊಲಿಸಿದ್ದು ಬಂಧನಕ್ಕೆ ಕಾರಣ

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

December 1, 2025
Next Post
ಕಾಶ್ಮೀರದಲ್ಲಿ ಮತದಾನ ಮಾಡಲು ಜನರ ಮನವೊಲಿಸಿದ್ದು ಬಂಧನಕ್ಕೆ ಕಾರಣ

ಕಾಶ್ಮೀರದಲ್ಲಿ ಮತದಾನ ಮಾಡಲು ಜನರ ಮನವೊಲಿಸಿದ್ದು ಬಂಧನಕ್ಕೆ ಕಾರಣ

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada