• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಉಪಚುನಾವಣೆಗೇ ತಡೆಯಾಜ್ಞೆ ನೀಡಿತು ಅನರ್ಹತೆಯ ಜಟಿಲತೆ

by
September 26, 2019
in ಕರ್ನಾಟಕ
0
ಉಪಚುನಾವಣೆಗೇ ತಡೆಯಾಜ್ಞೆ ನೀಡಿತು ಅನರ್ಹತೆಯ ಜಟಿಲತೆ
Share on WhatsAppShare on FacebookShare on Telegram

ಶಾಸಕರ ಅನರ್ಹತೆ ಪ್ರಕರಣ ಇದೀಗ ವಿಧಾನಸಭೆ ಉಪ ಚುನಾವಣೆಯನ್ನೇ ಮುಂದೂಡಿದೆ. ಅನರ್ಹತೆ ಕುರಿತಂತೆ ಇತರೆ ಪ್ರಕರಣಗಳಿಗೂ ಈ ಪ್ರಕರಣಕ್ಕೂ ಸಾಕಷ್ಟು ಭಿನ್ನತೆ ಇರುವುದರಿಂದ ಈ ಕುರಿತು ಹೆಚ್ಚಿನ ವಿಚಾರಣೆ ನಡೆಸಬೇಕು ಎಂದು ಹೇಳಿರುವ ನ್ಯಾ. ಎನ್. ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠ ಅಕ್ಟೋಬರ್ 21ಕ್ಕೆ ನಿಗದಿಯಾಗಿದ್ದ ಉಪ ಚುನಾವಣೆಗೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ. ಅಲ್ಲಿಗೆ ಉಪ ಚುನಾವಣೆ ವಿಚಾರದಲ್ಲಿ ಅನರ್ಹ ಶಾಸಕರು ಮಾತ್ರವಲ್ಲ, ಆಡಳಿತಾರೂಢ ಬಿಜೆಪಿ ಕೂಡ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ADVERTISEMENT

ಈ ಪ್ರಕರಣದಲ್ಲಿ ನ್ಯಾಯಾಂಗ ಕೂಡ ಎಚ್ಚರಿಕೆಯ ಹೆಜ್ಜೆಯನ್ನೇ ಇಟ್ಟಿದೆ. ಪಕ್ಷಾಂತರ ನಿಷೇಧಕ್ಕೆ ಸಂಬಂಧಿಸಿದ ಸಂವಿಧಾನದ 10ನೇ ಷಡ್ಯೂಲ್ ಮತ್ತು ಸ್ಪೀಕರ್ ಅವರ ಪರಮಾಧಿಕಾರದ ವಿಚಾರದಲ್ಲಿ ನೀಡಿದ ತೀರ್ಪು ಮುಂದೆ ಸ್ಪೀಕರ್ ಹುದ್ದೆ ಮತ್ತು ಸಂವಿಧಾನಕ್ಕೆ ಅಪಚಾರವಾಗುವಂತಾಗಬಾರದು. ಹೇಗೂ ಚುನಾವಣೆ ನಡೆಸಲು ಆರು ತಿಂಗಳ ಕಾಲಾವಕಾಶವಿದೆ. ಅಂದರೆ, ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಿದರೆ ಸಾಕು. ಹೀಗಾಗಿ ಚುನಾವಣೆಗೆ ತಡೆಯಾಜ್ಞೆ ನೀಡಿದರೆ ಸಮಸ್ಯೆ ಏನೂ ಆಗುವುದಿಲ್ಲ. ಈ ಕಾರಣಕ್ಕಾಗಿಯೇ ಚುನಾವಣೆಗೆ ತಡೆಯಾಜ್ಞೆ ನೀಡಿರುವ ಸುಪ್ರೀಂ ಕೋರ್ಟ್ ವಿಚಾರಣೆ ಮುಂದೂಡಿದೆ.

ಈ ಪ್ರಕರಣದಲ್ಲಿ ಕೇವಲ ಶಾಸಕರ ಅನರ್ಹತೆ ವಿಚಾರ ಮಾತ್ರವಾಗಿದ್ದರೆ ತ್ರಿಸದಸ್ಯ ಪೀಠ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುತ್ತಿತ್ತು. ಸಾಂವಿಧಾನಿಕ ಪೀಠದ ಮುಂದೆ ಈಗಾಗಲೇ ಎರಡು ಅರ್ಜಿಗಳಿವೆ. ಅವುಗಳ ಜತೆ ಈ ಅರ್ಜಿಯನ್ನೂ ಇತ್ಯರ್ಥಗೊಳಿಸಬಹುದಿತ್ತು. ಆದರೆ, ಇಲ್ಲಿ 17 ಶಾಸಕರ ಅನರ್ಹತೆಗಿಂತ ಶಾಸಕರ ರಾಜಿನಾಮೆ ಮತ್ತು ಇಂತಿಷ್ಟು ಅವಧಿಗೆ (15ನೇ ವಿಧಾನಸಭೆ ಅವಧಿಗೆ ) ಅನರ್ಹತೆ ಮಾಡಿರುವ ಸ್ಪೀಕರ್ ಆದೇಶ ಕಾನೂನಾತ್ಮಕವಾಗಿ ಹೆಚ್ಚು ಜಟಿಲವಾಗಿದೆ. ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಕೋರ್ಟ್ ಹೇಳಲು ಇದುವೇ ಮುಖ್ಯ ಕಾರಣ.

ರಾಜಿನಾಮೆ ಮೊದಲೋ, ಅನರ್ಹತೆ ದೂರು ಮೊದಲೋ

ಅನರ್ಹಗೊಂಡಿರುವ 17 ಶಾಸಕರ ಪೈಕಿ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮುಟಳ್ಳಿ ವಿರುದ್ಧ ಅವರು ಶಾಸಕರ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವ ಮೊದಲೇ ಅನರ್ಹತೆ ದೂರು ದಾಖಲಾಗಿತ್ತು. ಆದರೆ, ನಂತರದಲ್ಲಿ ಆ ಕುರಿತು ವಿಚಾರಣೆ ನಡೆಸದೆ ಸ್ಪೀಕರ್ ಅದನ್ನು ಬದಿಗಿಟ್ಟಿದ್ದರು. ಇನ್ನುಳಿದಂತೆ 15 ಶಾಸಕರು ರಾಜಿನಾಮೆ ಸಲ್ಲಿಸಿದ ಬಳಿಕ ಅವರ ವಿರುದ್ಧ ಅನರ್ಹತೆ ದೂರು ದಾಖಲಾಗಿತ್ತು. ಈ ಪೈಕಿ 10 ಮಂದಿಯ ರಾಜಿನಾಮೆ ಸಮರ್ಪಕವಾಗಿಲ್ಲ ಎಂದು ಹೇಳಿದ್ದ ಸ್ಪೀಕರ್ ಸಮರ್ಪಕ ರೀತಿಯಲ್ಲಿ ರಾಜಿನಾಮೆ ಸಲ್ಲಿಸುವಂತೆ ಸೂಚಿಸಿದ್ದರು. ಹೀಗಾಗಿ ಅವರು ಮೊದಲು ಸಲ್ಲಿಸಿದ್ದ ರಾಜಿನಾಮೆ ಮತ್ತು ಎರಡನೇ ಬಾರಿ ರಾಜಿನಾಮೆ ಸಲ್ಲಿಸುವುದರ ಮಧ್ಯೆ ಶಾಸಕರನ್ನು ಅನರ್ಹಗೊಳಿಸುವಂತೆ ದೂರು ದಾಖಲಾಗಿತ್ತು.

Also Read: ಉಪಚುನಾವಣೆ: ಚುನಾವಣಾ ಆಯೋಗದ ನಿರ್ಧಾರ ಸರಿಯೇ?

ಈ ಕುರಿತು ಶಾಸಕರ ವಾದ ಏನೆಂದರೆ, ಸ್ಪೀಕರ್ ಇಲ್ಲದ ಕಾರಣ ನಾವು ರಾಜಿನಾಮೆ ಪತ್ರಗಳನ್ನು ಸ್ಪೀಕರ್ ಕಚೇರಿಯ ಕಾರ್ಯದರ್ಶಿಯವರಿಗೆ ಸಲ್ಲಿಸಿ ಅವರಿಂದ ಸ್ವೀಕೃತಿ ಪತ್ರ ಪಡೆದಿದ್ದೆವು. ಅಂದರೆ, ರಾಜಿನಾಮೆ ಪತ್ರ ಸ್ಪೀಕರ್ ಕಚೇರಿ ಸೇರಿದೆ. ಅದು ಕ್ರಮಬದ್ಧವಾಗಿಲ್ಲ ಎಂಬ ಕಾರಣಕ್ಕೆ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿ ಎಂದು ಸ್ಪೀಕರ್ ಸೂಚನೆ ಬಂದಿತ್ತೇ ಹೊರತು ಮೊದಲು ಸಲ್ಲಿಸಿದ್ದ ರಾಜಿನಾಮೆ ಪತ್ರಗಳನ್ನು ಅವರು ತಿರಸ್ಕರಿಸಿರಲಿಲ್ಲ. ಹೀಗಾಗಿ ರಾಜಿನಾಮೆ ಸಲ್ಲಿಸಿದ ಬಳಿಕ ನಮ್ಮ ವಿರುದ್ಧ ಅನರ್ಹತೆ ದೂರು ದಾಖಲಾಗಿದೆ. ಆದರೆ, ಸ್ಪೀಕರ್ ಅವರು ಮೊದಲು ನಾವು ನೀಡಿದ್ದ ರಾಜಿನಾಮೆ ಪತ್ರದ ಬಗ್ಗೆ ತೀರ್ಮಾನ ಕೈಗೊಳ್ಳದೆ ನಂತರ ಬಂದ ಅನರ್ಹತೆ ದೂರು ಆಧಾರದ ಮೇಲೆ ಕ್ರಮ ಕೈಗೊಂಡಿದ್ದಾರೆ. ಇದು ಸಾಮಾಜಿಕ ನ್ಯಾಯದ ಉಲ್ಲಂಘನೆ ಎಂಬುದು ಅನರ್ಹ ಶಾಸಕರ ವಾದ.

ಅದೇ ರೀತಿ ಅನರ್ಹತೆ ದೂರಿಗೆ ಸಂಬಂಧಿಸಿದಂತೆ ವಿವರಣೆ ನೀಡಲು ಏಳು ದಿನಗಳ ಕಾಲಾವಕಾಶ ಬೇಕು. ಆದರೆ, ಸ್ಪೀಕರ್ ಅವರು ನಮಗೆ ಮೂರು ದಿನ ಮಾತ್ರ ಕಾಲಾವಕಾಶ ನೀಡಿದ್ದಾರೆ. ಅದರ ಮಧ್ಯೆಯೇ ಹೆಚ್ಚು ದಿನ ಕಾಲಾವಕಾಶ ನೀಡುವಂತೆ ಕೋರಿದ್ದರೂ ಅದನ್ನು ಕೂಡ ಪರಿಗಣಿಸದೆ ನಮ್ಮನ್ನು ಅನರ್ಹಗೊಳಿಸಿದ್ದಾರೆ. ಇಲ್ಲೂ ಸಾಮಾಜಿಕ ನ್ಯಾಯ ಪಾಲಿಸದ ಸ್ಪೀಕರ್ ಉದ್ದೇಶಪೂರ್ವಕವಾಗಿ ನಮ್ಮನ್ನು ಅನರ್ಹಗೊಳಿಸಿದ್ದಾರೆ ಎಂಬುದು ಅವರ ಮತ್ತೊಂದು ವಾದ. ಹೀಗಾಗಿ ಇಲ್ಲಿ ಅನರ್ಹತೆ ಮತ್ತು ರಾಜಿನಾಮೆ ಕುರಿತು ಸಮಗ್ರ ವಿಚಾರಣೆ ಅಗತ್ಯವಿದೆ ಎಂಬುದು ನ್ಯಾಯಾಲಯದ ಅಭಿಪ್ರಾಯ.

ಸ್ಪೀಕರ್ ಅನರ್ಹತೆಗೆ ಕಾಲಮಿತಿ ನಿಗದಿಪಡಿಸಬಹುದೇ?

ಇದರ ಜತೆಗೆ ಶಾಸಕರನ್ನು 15ನೇ ವಿಧಾನಸಭೆ ಅವಧಿಗೆ ಅನರ್ಹಗೊಳಿಸಿರುವುದು ಕೂಡ ಇತ್ಯರ್ಥಗೊಳಿಸಲು ಜಟಿಲವಾದ ವಿಷಯವಾಗಿದೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕರನ್ನು ಅನರ್ಹಗೊಳಿಸುವ ಅಧಿಕಾರ ಸ್ಪೀಕರ್ ಅವರಿಗೆ ಇದೆಯಾದರೂ ಅದಕ್ಕೆ ಕಾಲಮಿತಿ ನಿಗದಿಪಡಿಸುವ ಬಗ್ಗೆ ಯಾವುದೇ ಉಲ್ಲೇಖ ಇಲ್ಲ. ಆದರೆ, 17 ಶಾಸಕರ ಅನರ್ಹತೆ ವಿಚಾರದಲ್ಲಿ ಸ್ಪೀಕರ್ ಒಂದು ಕಾಲಮಿತಿ ನಿಗದಿಪಡಿಸಿದ್ದಾರೆ. ಅರೆ ನ್ಯಾಯಾಂಗ ಅಧಿಕಾರ ಹೊಂದಿರುವವರು ವಿವೇಚನಾಧಿಕಾರ ಬಳಸಿ ನಿರ್ಧಾರ ಕೈಗೊಳ್ಳಬಹುದು. ಅದರಂತೆ ಸ್ಪೀಕರ್ ಇಂತಿಷ್ಟು ಅವಧಿಗೆ ಎಂದು ಅನರ್ಹತೆ ಆದೇಶ ಹೊರಡಿಸಿದ್ದಾರೆ.

ಸಮಸ್ಯೆ ಉದ್ಭವವಾಗಿದ್ದೇ ಇಲ್ಲಿ. ಸ್ಪೀಕರ್ ಅವರ ಆದೇಶದ ಪ್ರಕಾರ ಅನರ್ಹಗೊಂಡಿರುವ 17 ಮಂದಿ ಹಾಲಿ ಅಸ್ತಿತ್ವದಲ್ಲಿರುವ 15ನೇ ವಿಧಾನಸಭೆ ಪ್ರವೇಶಿಸುವಂತಿಲ್ಲ. ಚುನಾವಣಾ ಆಯೋಗದ ಪ್ರಕಾರ ಅನರ್ಹತೆಗೆ ಒಳಗಾದವರು ಉಪ ಚುನಾವಣೆಗೆ ಸ್ಪರ್ಧಿಸಬಹುದು. ಈ ವಿರೋಧಾಭಾಸದಿಂದಾಗಿ 17 ಶಾಸಕರು ಚುನಾವಣೆಗೆ ಸ್ಪರ್ಧಿಸಿ ಗೆಲ್ಲಬಹುದು. ಆದರೆ, ವಿಧಾನಸಭೆ ಪ್ರವೇಶಿಸುವಂತಿಲ್ಲ ಎನ್ನುವಂತಾಗುತ್ತದೆ. ಚುನಾವಣೆಗೆ ಸ್ಪರ್ಧಿಸಬಹುದು ಎಂದಾದರೆ ಗೆದ್ದು ವಿಧಾನಸಭೆ ಪ್ರವೇಶಿಸುವಂತಿಲ್ಲ ಎಂದು ನಿರ್ಬಂಧ ವಿಧಿಸಲು ಸಾಧ್ಯವೇ? ಇಲ್ಲಿ ಸ್ಪೀಕರ್ ಆದೇಶವನ್ನು ಪಾಲಿಸಬೇಕೋ? ಚುನಾವಣಾ ಆಯೋಗದ ನಿಯಮ ಪಾಲಿಸಬೇಕೋ? ಎಂಬ ಪ್ರಶ್ನೆ ಎದುರಾಗುತ್ತದೆ.

ಈ ಎಲ್ಲಾ ವಿಚಾರಗಳ ಬಗ್ಗೆ ಸ್ಪಷ್ಟತೆ ಸಿಕ್ಕಿದ ಬಳಿಕವೇ ಅನರ್ಹತೆ ಪ್ರಕರಣದ ಕುರಿತು ತೀರ್ಪು ನೀಡಬೇಕಾಗಿರುವುದರಿಂದಲೇ ಸುಪ್ರೀಂ ಕೋರ್ಟ್ ಉಪ ಚುನಾವಣೆಗೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ. ಅಕ್ಟೋಬರ್ 22ರಿಂದ ಮತ್ತೆ ವಿಚಾರಣೆ ನಡೆಯಲಿದ್ದು, ಅದು ಮುಗಿದು ಅಂತಿಮ ಆದೇಶ ಹೊರಬೀಳುವವರೆಗೆ 17 ಶಾಸಕರ ಕ್ಷೇತ್ರಗಳಿಗೆ ಚುನಾವಣೆ ನಡೆಸುವಂತಿಲ್ಲ. ಅಷ್ಟರ ಮಟ್ಟಿಗೆ ಅನರ್ಹ ಶಾಸಕರು ಬಚಾವ್. ಆದರೆ, ವಿಚಾರಣೆ, ಚುನಾವಣೆ ಮುಂದಕ್ಕೆ ಹೋಗುತ್ತಿದ್ದಂತೆ ಅವರ ಅಧಿಕಾರದ ಅವರ ಕನಸನ್ನು ಕೂಡ ಮುಂದೂಡುತ್ತಾ ಹೋಗಬೇಕಾಗುತ್ತದೆ.

Tags: B S YediyurappaBJPCentral Election CommissionCoalition GovernmentDisqualification of MLAsGovernment of Karnatakaoffice of the speakerSupreme Court of Indiaಕರ್ನಾಟಕ ಸರ್ಕಾರಕೇಂದ್ರ ಚುನಾವಣಾ ಆಯೋಗಬಿ ಎಸ್ ಯಡಿಯೂರಪ್ಪಬಿಜೆಪಿಶಾಸಕರ ಅನರ್ಹತೆಸಮ್ಮಿಶ್ರ ಸರ್ಕಾರಸುಪ್ರೀಂ ಕೋರ್ಟ್ಸ್ಪೀಕರ್ ಕಚೇರಿ
Previous Post

ಅರಿಂದಮ್ ಚೌಧರಿ ಎಂಬ ‘ಮೋಸದ ಬೆಕ್ಕಿಗೆ’ ಗಂಟೆ ಕಟ್ಟಿದ ಕತೆ

Next Post

ಮಣ್ಣುಗೂಡಿದ ಗಣಿ ಕಾರ್ಮಿಕರ ಜೀವನ, ನಿಂತಲ್ಲೇ ಇರುವ ಪುನರುಜ್ಜೀವನ

Related Posts

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
0

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ...

Read moreDetails
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
Next Post
ಮಣ್ಣುಗೂಡಿದ ಗಣಿ ಕಾರ್ಮಿಕರ ಜೀವನ

ಮಣ್ಣುಗೂಡಿದ ಗಣಿ ಕಾರ್ಮಿಕರ ಜೀವನ, ನಿಂತಲ್ಲೇ ಇರುವ ಪುನರುಜ್ಜೀವನ

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada