• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಉಪಚುನಾವಣೆ; ರಾಜ್ಯದಲ್ಲಿ ಕಾವೇರಿದ ರಾಜಕೀಯ ಚಟುವಟಿಕೆ

by
October 3, 2020
in ರಾಜಕೀಯ
0
ಉಪಚುನಾವಣೆ; ರಾಜ್ಯದಲ್ಲಿ ಕಾವೇರಿದ ರಾಜಕೀಯ ಚಟುವಟಿಕೆ
Share on WhatsAppShare on FacebookShare on Telegram

ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದ್ದು ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಆಡಳಿತರೂಢ ಬಿಜೆಪಿ ಪಕ್ಷಕ್ಕೆ ಯಡಿಯೂರಪ್ಪ ಪುತ್ರ ಹಗರಣ ಆರೋಪ, ಕೋವಿಡ್‌ ಹಗರಣಗಳು ಮುಳುವಾಗಲಿದೆಯೇ ಎಂಬ ಆತಂಕ ಶುರುವಾಗಿದೆ. ಪಕ್ಷ ಆಡಳಿತದಲ್ಲಿದ್ದರೂ ಬಿಜೆಪಿಗೆ ಕ್ಷೇತ್ರ ಗೆಲ್ಲಲು ಸಾಕಷ್ಟು ಅಡೆತಡೆಗಳಿವೆ. ಪಕ್ಷದೊಳಗೆ ಸ್ಪಷ್ಟವಾಗಿ ಎರಡು ಬಣಗಳಾಗಿದ್ದು ಅಭ್ಯರ್ಥಿ ಹೆಸರು ಅಂತಿಮಗೊಳಿಸಲೇ ಸಾಕಷ್ಟು ಸವಾಲು ಎದುರಾಗಿವೆ.

ADVERTISEMENT

ಭಾರತೀಯ ಜನತಾ ಪಕ್ಷದ ರಾಜ್ಯ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಪಕ್ಷದ ಕೋರ್ ಕಮಿಟಿ ಸಭೆ ನಡೆದಿದ್ದು ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವಲ್ಲಿ ಬಿಜೆಪಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ಗೂ ರಾಜ್ಯ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪರಿಗೂ ಒಮ್ಮತದ ನಿರ್ಧಾರ ಬರಲು ಸಾಧ್ಯವಾಗಿಲ್ಲ. ಆರ್‌ ಆರ್‌ ನಗರಕ್ಕೆ ಸಂಬಂಧಿಸಿದಂತೆ ನಳಿನ್‌ ಕುಮಾರ್‌ ಪಕ್ಷದ ಮೂಲ ಕಾರ್ಯಕರ್ತ ತುಳಸಿ ಮುನಿರಾಜು ಅವರನ್ನು ಶಿಫಾರಸ್ಸು ಮಾಡಿದರೆ, ಯಡಿಯೂರಪ್ಪ ಮಾಜಿ ಶಾಸಕ ಮುನಿರತ್ನ ಅವರಿಗೆ ಟಿಕೆಟ್‌ ನೀಡಲು ಉತ್ಸುಕರಾಗಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮಾಜಿ ಕಾಂಗ್ರೆಸ್‌ ಶಾಸಕ ಮುನಿರತ್ನ ಮೈತ್ರಿ ಸರ್ಕಾರ ಉರುಳಿಸುವಲ್ಲಿ ಪಾತ್ರ ವಹಿಸಿದವರು, ಆ ಮೂಲಕ ಬಿಜೆಪಿ ಸರ್ಕಾರ ನೆಲೆಕಂಡುಕೊಳ್ಳಲು ಕಾರಣಕರ್ತರಲ್ಲೊಬ್ಬರು. ಹಾಗಾಗಿ ಯಡಿಯೂರಪ್ಪ ಮುನಿರತ್ನ ಕಡೆಗೆ ವಾಲಿದ್ದಾರೆ. ಆದರೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಮುನಿರತ್ನ ವಿರುದ್ಧ ಸೋಲುಂಡಿದ್ದ ತುಳಸಿ ಮುನಿರಾಜು ತನ್ನ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ಧರಿಲ್ಲ. ಹಳೆಯ ಕಾರ್ಯಕರ್ತ ಎಂಬ ನೆಲೆಯಲ್ಲಿ ಸಂಘಪರಿವಾರಕ್ಕೆ ನಿಷ್ಟರಾಗಿರುವ ನಾಯಕರು ತುಳಸಿ ಮುನಿರಾಜು ಅವರಿಗೆ ಆದ್ಯತೆ ನೀಡಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿಯೇ ಸಭೆಯಲ್ಲಿ ನಳಿನ್‌ ಹಾಗೂ ಬಿಎಸ್‌ವೈಗೆ ಒಮ್ಮತದ ನಿರ್ಧಾರ ಬರಲು ಸಾಧ್ಯವಾಗದಿರುವುದು. ಇದೀಗ ಇಬ್ಬರ ಹೆಸರನ್ನು ಆಯ್ಕೆ ಮಾಡಿ ಪಕ್ಷದ ಹೈಕಮಾಂಡಿಗೆ ಕಳಿಸಲಾಗಿದೆ. ಮುನಿರತ್ನ ಅವರೇ ಪಕ್ಷದ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.

Also Read: ವ್ಯಕ್ತಿಗಳ ಪಾಲಿಗಲ್ಲದಿದ್ದರೂ ಈ ಉಪಚುನಾವಣೆ ಪಕ್ಷಗಳ ಪಾಲಿಗೆ ಪ್ರತಿಷ್ಠೆಯೇ!

ಶಿರಾ ಕ್ಷೇತ್ರದಲ್ಲಿ ಜೆಡಿಎಸ್‌ ಪ್ರಾಬಲ್ಯ ಸಾಕಷ್ಟಿದೆ, ಅಲ್ಲದೆ ಮೃತಪಟ್ಟ ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ್‌ ಅವರ ಕುಟುಂಬಸ್ಥರನ್ನೇ ಜೆಡಿಎಸ್‌ ಅಭ್ಯರ್ಥಿಯನ್ನಾಗಿಸಲು ಹೊರಟಿದ್ದು ಅನುಕಂಪದ ಮತವನ್ನು ಗಿಟ್ಟಿಸುವ ಹಣಾಹಣಿಯಲ್ಲಿದೆ. ಅದಾಗ್ಯೂ ಈ ಕ್ಷೇತ್ರದ ಟಿಕೆಟ್‌ ಪಡೆಯಲು ಬಿಜೆಪಿ ಪಾಳಯದಲ್ಲಿ ತೀವ್ರ ಪೈಪೋಟಿಯಿದ್ದು ಕೋರ್‌ ಕಮಿಟಿ ಸಭೆಯಲ್ಲಿ ಮೂವರ ಹೆಸರನ್ನು ಆಯ್ಕೆಗೊಳಿಸಿ ಹೈಕಮಾಂಡಿಗೆ ರವಾನಿಸಲಾಗಿದೆ.

ಆರ್‌ ಆರ್‌ ನಗರದಲ್ಲಿ ಬಿಜೆಪಿ ಸಾಕಷ್ಟು ಪ್ರಭಾವಿಯಾಗಿದೆ ಅಲ್ಲದೆ ಮುನಿರತ್ನ ಅವರೂ ಸಾಕಷ್ಟು ಪ್ರಭಾವಿ ಈ ಕ್ಷೇತ್ರದಲ್ಲಿ. ಹಾಗಾಗಿಯೇ ಕೈ ನಾಯಕರು ಮುನಿರತ್ನ ವಿರುದ್ಧ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದ್ದಾರೆ. ಕಾಂಗ್ರೆಸ್‌ಗೆ ಕರೋನಾ ಹಗರಣ ಹಾಗೂ ಸಿಎಂ ಪುತ್ರನ ಮೇಲಿರುವ ಹಗರಣಗಳ ಆರೋಪದ ಹೊರತು ಈ ಚುನಾವಣೆಗಳಲ್ಲಿ ಹೂಡಲು ಬಲವಾದ ಅಸ್ತ್ರಗಳು ಯಾವುದೂ ಇಲ್ಲ.

ಈ ನಡುವೆ ದಿವಂಗತ ಐಎಎಸ್‌ ಅಧಿಕಾರಿ ಡಿಕೆ ರವಿಯವರ ಪತ್ನಿ ಕುಸುಮಾ ಅವರು ಆರ್‌ ಆರ್‌ ನಗರದಿಂದ ಚುನಾವಣೆಗೆ ನಿಲ್ಲಲು ಉತ್ಸುಕರಾಗಿದ್ದಾರೆ. ಅವರ ತಂದೆ ಹನುಮಂತರಾಯಪ್ಪ ಈ ಕುರಿತು ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಮಗಳಿಗೆ ಬೆಂಬಲ ನೀಡಬೇಕೆಂದು ಕೋರಿದ್ದಾರೆ. ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಜೊತೆಗೆ ಈ ವಿಷಯದ ಬಗ್ಗೆ ಹನುಮಂತರಾಯಪ್ಪ ಚರ್ಚೆ ಮಾಡಿದ್ದರೂ ಡಿಕೆ ಸಹೋದರರಿಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎನ್ನಲಾಗಿದೆ.

ಈ ಮಧ್ಯೆ, ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಗುರುವಾರ ಭೇಟಿ ನೀಡಿದ ಕುಸುಮಾ ಅವರು, ನಿರ್ಮಲಾನಂದನಾಥ ಶ್ರೀಗಳಿಂದ ಆಶೀರ್ವಾದ ಪಡೆದಿದ್ದಾರೆ.

Also Read: ಶಿರಾ: ಉಪಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್‌ ಒಳಗೆ ಭಿನ್ನಮತದ ಹೊಗೆ..!

ಆರ್‌ ಆರ್‌ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಹಾಗೂ ಚುನಾವಣಾ ತಯಾರಿ ಕುರಿತಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ನಿವಾಸದಲ್ಲಿ ಶುಕ್ರವಾರ ಸಭೆ ನಡೆದ ಬಳಿಕ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಅಪ್ಪಾಜಿಗೌಡ, ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಿಗೆ ಈ ಬಾರಿ ಟಿಕೆಟ್ ಕೊಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಜೆಡಿಎಸ್ ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್, ಆರ್.ಆರ್.ನಗರ ಕ್ಷೇತ್ರದ ಅಧ್ಯಕ್ಷ ಬೆಟ್ಟಸ್ವಾಮಿ ಗೌಡ, ಜ್ಞಾನಭಾರತಿ ಕೃಷ್ಣಮೂರ್ತಿ ಹೆಸರು ಅಂತಿಮವಾಗಿದೆ. ಈ ಮೂವರ ಹೆಸರಲ್ಲಿ ಒಬ್ಬರನ್ನು ವರಿಷ್ಠರು ಆಯ್ಕೆಗೊಳಿಸಲಿದ್ದಾರೆ ಎಂದಿದ್ದಾರೆ. ‌

ಇನ್ನು ಶಿರಾ ಕಾಂಗ್ರೆಸ್ಸಿನಿಂದ ಟಿಕೇಟ್‌ ನಿರೀಕ್ಷೆಯಲ್ಲಿದ್ದ ಕೆ ಎನ್‌ ರಾಜಣ್ಣಾ ಬಂಡಾಯ ಸೂಚನೆ ನೀಡಿದ್ದರು, ಬಳಿಕ ಪಕ್ಷದ ವರಿಷ್ಟರೊಂದಿಗೆ ನಡೆದ ಸಂಧಾನದ ಫಲವಾಗಿ ಟಿ.ಬಿ ಜಯಚಂದ್ರ ಅವರನ್ನು ಕಣಕ್ಕಿಳಿಸಲು ತಮ್ಮ ಒಪ್ಪಿಗೆ ನೀಡಿದ್ದಾರೆ. ಕುತೂಹಲಕಾರಿಯಾಗಿ, ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕೆ ಎನ್‌ ರಾಜಣ್ಣಾ ಜಿ ಪರಮೇಶ್ವರ್‌ ಅವರೊಂದಿಗೆ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಆ ಮೂಲಕ ಸುದ್ದಿಗೋಷ್ಟಿ ನಡೆಸಿ ಒಗ್ಗಟ್ಟು ಪ್ರದರ್ಶನ ನಡೆಸಿದ್ದಾರೆ.

ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಕಾಂಗ್ರೆಸ್‌ ನ ಈ ಎರಡೂ ನಾಯಕರು ಒಂದೇ ವೇದಿಕೆ ಹಂಚಿಕೊಂಡಿರುವುದು ಶಿರಾ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ.

Tags: ಉಪಚುನಾವಣೆಶಿರಾ
Previous Post

ದೆಹಲಿ: ಮೊಂಬತ್ತಿ ಬೆಳಗಿಸಿ ಯುವ ಕಾಂಗ್ರೆಸ್‌ ಸತ್ಯಾಗ್ರಹ

Next Post

ಅತ್ಯಾಚಾರ ನಡೆದಿಲ್ಲ ಎನ್ನುವ ಮೂಲಕ ಉತ್ತರ ಪ್ರದೇಶ ಪೊಲೀಸರು ಸಾಧಿಸಹೊರಟಿರುವುದೇನು ?

Related Posts

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಇತ್ತೀಚೆಗೆ ಶಿಡ್ಲಘಟ್ಟದ(Sidlaghatta) ನೆಹರೂ ಮೈದಾನದಲ್ಲಿ ನಡೆದ ‘ಕಲ್ಟ್’(Cult )ಸಿನಿಮಾದ ಈವೆಂಟ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದ ಪ್ರಚಾರಕ್ಕಾಗಿ ಕೋಟೆ ವೃತ್ತದ ಸಮೀಪ ದಾರಿಗೆ ಅಡ್ಡಲಾಗಿ...

Read moreDetails
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
Next Post
ಅತ್ಯಾಚಾರ ನಡೆದಿಲ್ಲ ಎನ್ನುವ ಮೂಲಕ ಉತ್ತರ ಪ್ರದೇಶ ಪೊಲೀಸರು ಸಾಧಿಸಹೊರಟಿರುವುದೇನು ?

ಅತ್ಯಾಚಾರ ನಡೆದಿಲ್ಲ ಎನ್ನುವ ಮೂಲಕ ಉತ್ತರ ಪ್ರದೇಶ ಪೊಲೀಸರು ಸಾಧಿಸಹೊರಟಿರುವುದೇನು ?

Please login to join discussion

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada