• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಎನ್‌ಕೌಂಟರ್ ಪೊಲೀಸರ ವಿರುದ್ಧ ಕೇಸ್‌ ದಾಖಲಿಸಿದ ಸಂಘಟನೆಗಳು

by
December 7, 2019
in ದೇಶ
0
ಎನ್‌ಕೌಂಟರ್ ಪೊಲೀಸರ ವಿರುದ್ಧ ಕೇಸ್‌ ದಾಖಲಿಸಿದ ಸಂಘಟನೆಗಳು
Share on WhatsAppShare on FacebookShare on Telegram

ತೆಲಂಗಾಣದ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ನಡೆಸಿದ ಪೊಲೀಸರ ವಿರುದ್ಧ ನಿರೀಕ್ಷೆಯಂತೆ ಕೇಸು ದಾಖಲಾಗಿದೆ. ಇದೊಂದು ನಕಲಿ ಎನ್ ಕೌಂಟರ್ ಆಗಿದ್ದು ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಕೀಲರಾದ ಜಿ.ಎಸ್.ಮಣಿ ಮತ್ತು ಪ್ರದೀಪ್ ಕುಮಾರ್ ಯಾದವ್ ಹಾಗೂ ಮತ್ತೋರ್ವ ವಕೀಲರಾದ ಎಂ,ಎಲ್.ಶರ್ಮಾ ಅವರು ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶನಿವಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದಾರೆ.

ADVERTISEMENT

ಮತ್ತೊಂದೆಡೆ, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತನಿಖೆಯನ್ನು ಆರಂಭಿಸಿದೆ.

ಈ ಮಧ್ಯೆ, ಎನ್ ಕೌಂಟರ್ ಬಗ್ಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಕೆಲವು ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೇ, ಇದೊಂದು ನಕಲಿ ಎನ್ ಕೌಂಟರ್ ಆಗಿದ್ದು, ಪೊಲೀಸರು ಕಾನೂನನ್ನು ಉಲ್ಲಂಘನೆ ಮಾಡಿ ಆರೋಪಿಗಳನ್ನು ಉದ್ದೇಶಪೂರ್ವಕವಾಗಿ ಹತ್ಯೆ ಮಾಡಿದ್ದಾರೆ ಎಂಬ ಅನುಮಾನಗಳು ಬರತೊಡಗಿವೆ.

ವಕೀಲರು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯಲ್ಲಿ, ಪೊಲೀಸರು ಮಹಜರು ಮಾಡುವ ನೆಪದಲ್ಲಿ ಘಟನೆ ನಡೆದ ಸ್ಥಳಕ್ಕೆ ಆರೋಪಿಗಳನ್ನು ಕರೆದೊಯ್ದು ಹತ್ಯೆ ಮಾಡಿದ್ದಾರೆ. ಇದನ್ನು ಗಮನಿಸಿದರೆ ಇದೊಂದು ಪೂರ್ವನಿಯೋಜಿತವಾಗಿ ಕೃತ್ಯ ಎಂಬುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಆರೋಪಿಗಳು ವಿರುದ್ಧ ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾರೆ ಎಂಬುದು ಇನ್ನೂ ಸಾಬೀತಾಗದಿರುವ ಸಂದರ್ಭದಲ್ಲಿಯೇ ತೆಲಂಗಾಣ ಪೊಲೀಸರು ಕಾನೂನನ್ನು ಕೈಗೆತ್ತಿಕೊಂಡು ಕೊಲೆ ಮಾಡಿದ್ದಾರೆ ಎಂದು ಪಿಐಎಲ್ ನಲ್ಲಿ ವಕೀಲರು ದೂರಿದ್ದಾರೆ.

ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡುವುದನ್ನು ಯಾರೂ ಒಪ್ಪುವುದಿಲ್ಲ. ಆದರೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗಲೇ ಮತ್ತು ನ್ಯಾಯಾಲಯ ತೀರ್ಪು ಕೊಡುವ ಮುನ್ನವೇ ಕಾನೂನನ್ನು ಕೈಗೆತ್ತಿಕೊಂಡ ಪೊಲೀಸರು ನಾಲ್ವರನ್ನು ಹತ್ಯೆ ಮಾಡಿರುವುದು ಮಾತ್ರ ಖಂಡನೀಯ ಎಂದು ತಮ್ಮ ಪಿಐಎಲ್ ನಲ್ಲಿ ಪ್ರಸ್ತಾಪಿಸಿದ್ದಾರೆ.

ಮತ್ತೊಂದೆಡೆ, ಎನ್ ಕೌಂಟರ್ ವಿರುದ್ಧ ತೆಲಂಗಾಣ ಹೈಕೋರ್ಟಿನಲ್ಲಿ ರಿಟ್ ಅರ್ಜಿಯೊಂದು ಸಲ್ಲಿಕೆಯಾಗಿದ್ದು ಇದು ಇನ್ನೂ ವಿಚಾರಣೆಗೆ ಬರಬೇಕಿದೆ.

ಈ ಎನ್ ಕೌಂಟರ್ ಮೂಲಕ ಮಾನವಹಕ್ಕುಗಳ ಉಲ್ಲಂಘನೆಯಾಗಿದೆ ಎಂಬ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ದೂರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ದಾಖಲಿಸಿಕೊಂಡಿದೆ. ಇದರನ್ವಯ ಹೈದ್ರಾಬಾದ್ ಹೊರವಲಯದಲ್ಲಿರುವ ಚಟಾನ್ ಪಲ್ಲಿಯಲ್ಲಿ ನಡೆದ ಘಟನಾ ಸ್ಥಳಕ್ಕೆ ತೆರಳಿ ತನಿಖೆ ನಡೆಸಲಿದೆ. ಅಲ್ಲದೇ, ಎನ್ ಕೌಂಟರ್ ನಡೆದ ಸಂದರ್ಭದಲ್ಲಿ ಅಥವಾ ಘಟನೆಯನ್ನು ನೋಡಿದ ವ್ಯಕ್ತಿಗಳಿಂದ ಮಾಹಿತಿಗಳ ಸಂಗ್ರಹ ಆರಂಭಿಸಿದೆ. ಅದೇ ರೀತಿ, ಎನ್ ಕೌಂಟರ್ ನಲ್ಲಿ ಭಾಗಿಯಾಗಿದ್ದ ಪೊಲೀಸರನ್ನೂ ವಿಚಾರಣೆ ನಡೆಸಲಿದೆ.

ಎನ್ ಎಚ್ ಆರ್ ಸಿ ವಿರುದ್ಧ ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಕುಟುಂಬದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಮಗಳಿಗೆ ಚಿತ್ರಹಿಂಸೆ ನೀಡಿ ಕೊಲೆಗೈದಾಗ ಮಾನವ ಹಕ್ಕುಗಳ ಉಲ್ಲಂಘನೆಯಾಗಿರಲಿಲ್ಲವೇ? ಎನ್ ಕೌಂಟರ್ ಅನ್ನು ವಿರೋಧಿಸುತ್ತಿರುವವರು ನಮ್ಮ ಮಗಳ ಮೇಲೆ ಪೈಶಾಚಿಕ ಕೃತ್ಯ ಎಸಗಿದ್ದರ ವಿರುದ್ಧವೇಕೆ ಧ್ವನಿ ಎತ್ತಲಿಲ್ಲ? ಎಂಬಿತ್ಯಾದಿ ಪ್ರಶ್ನೆಗಳನ್ನು ಹಾಕತೊಡಗಿದ್ದಾರೆ. ಇವರಿಗೆ ಸಾರ್ವಜನಿಕ ವಲಯದಿಂದಲೂ ಬೆಂಬಲ ದೊರೆಯುತ್ತಿದೆ.

ಇಕ್ಕಟ್ಟಿನಲ್ಲಿ ಪೊಲೀಸರು

ಇನ್ನು ತೆಲಂಗಾಣ ಪೊಲೀಸರ ವಿರುದ್ಧ ಒಂದರ ಮೇಲೆ ಒಂದರಂತೆ ಕೇಸುಗಳು ಬೀಳತೊಡಗಿವೆ. ಸುಪ್ರೀಂಕೋರ್ಟಿನಲ್ಲಿ ಸಲ್ಲಿಕೆಯಾಗಿರುವ ಪಿಐಎಲ್ ಗಳ ವಿಚಾರಣೆ ನಡೆಸುವ ಸಂದರ್ಭದಲ್ಲಿ ಪೊಲೀಸರು ಎನ್ ಕೌಂಟರ್ ಮಾಡಲು ನಿಖರ ಕಾರಣವೇನಿತ್ತು ಎಂಬುದನ್ನು ಮನವರಿಕೆ ಮಾಡಿಕೊಡಬೇಕು. ಇದು ಅಷ್ಟು ಸುಲಭದ ಕೆಲಸವಲ್ಲ. ಏಕೆಂದರೆ, ದೇಶಾದ್ಯಂತ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆದ ಎನ್ ಕೌಂಟರ್ ಗಳಲ್ಲಿ ಬಹುತೇಕ ನಕಲಿ ಎನ್ ಕೌಂಟರ್ ಗಳು ಎಂಬುದು ಸಾಬೀತಾಗಿದೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಶಿಕ್ಷೆಯೂ ಆಗಿದೆ.

ಹೀಗಾಗಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಎಷ್ಟೇ ಗಂಭೀರ ವಿಚಾರವಾದರೂ ನೆಲದ ಕಾನೂನು ತನ್ನ ಕೆಲಸವನ್ನು ತಾನು ಮಾಡುತ್ತದೆ. ಈ ನೆಲೆಗಟ್ಟಿನಲ್ಲಿಯೇ ದೇಶದಲ್ಲಿ ನಡೆದ ಅದೆಷ್ಟೋ ಎನ್ ಕೌಂಟರ್ ಗಳಿಗೆ ಸಕಾರಣಗಳನ್ನು ನೀಡಲು ಸಾಧ್ಯವಾಗದ ಪೊಲೀಸರು ಶಿಕ್ಷೆಗೆ ಒಳಗಾಗಿದ್ದಾರೆ. ಏಕೆಂದರೆ, ಇವು ಯಾವುದೋ ಒತ್ತಡಕ್ಕೋ, ಪ್ರಭಾವಕ್ಕೋ ಅಥವಾ ಒತ್ತಾಯಪೂರ್ವಕವಾದ ಆದೇಶಗಳಿಂದಾಗಿ ನಡೆದಿರುತ್ತವೆ.

ಇಂತಹ ಆದೇಶಗಳಿಗೆ ಯಾವುದೇ ದಾಖಲಾತಿಗಳಿರುವುದಿಲ್ಲ. ಪ್ರಭಾವಿಗಳು ನೀಡುವ ಮೌಖಿಕ ಆದೇಶಗಳನ್ನು ಪಾಲಿಸಿ ಪೊಲೀಸರು ಎನ್ ಕೌಂಟರ್ ನಡೆಸಿರುತ್ತಾರೆ. ದಾಖಲೆಗಳು ಇಲ್ಲದಿರುವ ಕಾರಣ ಎನ್ ಕೌಂಟರ್ ಗಳನ್ನು ಸಮರ್ಥನೆ ಮಾಡಿಕೊಳ್ಳುವಲ್ಲಿ ವಿಫಲರಾಗುತ್ತಾರೆ.

ಒಂದು ವೇಳೆ, ತೆಲಂಗಾಣ ಎನ್ ಕೌಂಟರ್ ನಕಲಿ ಎಂಬುದು ಸಾಬೀತಾದರೆ ಗುಂಡಿಕ್ಕಿದ ಪೊಲೀಸರಿಗೆ ಜೀವಾವಧಿವರೆಗೆ ಶಿಕ್ಷೆ ಕಟ್ಟಿಟ್ಟ ಬುತ್ತಿಯಾಗಿರುತ್ತದೆ.

Tags: Justice for Priyanka Reddymurder accusedNational Human Rights CommissionobjectionPriyanka Reddy casePriyanka Reddy Murder casePublic Interest Litigationsupreme courtTelangana rapeಆಕ್ಷೇಪಣೆಕೊಲೆ ಆರೋಪಿಗಳುತೆಲಂಗಾಣ ಅತ್ಯಾಚಾರರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಸಾರ್ವಜನಿಕ ಹಿತಾಸಕ್ತಿ ಅರ್ಜಿಸುಪ್ರೀಂ ಕೋರ್ಟ್
Previous Post

ನಿತ್ಯಾನಂದನ `ಕೈಲಾಸ’ದ ಅಸಲಿಯತ್ತೇನು?

Next Post

ಜಿಎಸ್‌ಟಿ ಆದಾಯ ಹೆಚ್ಚಿಸಿಕೊಳ್ಳಲು ಹೊಸಮಾರ್ಗ ಹುಡುಕುತ್ತಿರುವ ಕೇಂದ್ರ ಸರ್ಕಾರ

Related Posts

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ...

Read moreDetails
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Next Post
ಜಿಎಸ್‌ಟಿ ಆದಾಯ ಹೆಚ್ಚಿಸಿಕೊಳ್ಳಲು ಹೊಸಮಾರ್ಗ ಹುಡುಕುತ್ತಿರುವ ಕೇಂದ್ರ ಸರ್ಕಾರ

ಜಿಎಸ್‌ಟಿ ಆದಾಯ ಹೆಚ್ಚಿಸಿಕೊಳ್ಳಲು ಹೊಸಮಾರ್ಗ ಹುಡುಕುತ್ತಿರುವ ಕೇಂದ್ರ ಸರ್ಕಾರ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada