• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಎಸ್ಒಪಿ(SOP) ಪಾಲಿಸಿದರೆ ರಾಮಮಂದಿರ ಭೂಮಿ ಪೂಜೆಗೆ ಸ್ವತಃ ಪ್ರಧಾನಿಯೇ ಹೋಗುವಂತಿಲ್ಲ!

by
August 1, 2020
in ದೇಶ
0
ಎಸ್ಒಪಿ(SOP) ಪಾಲಿಸಿದರೆ ರಾಮಮಂದಿರ ಭೂಮಿ ಪೂಜೆಗೆ ಸ್ವತಃ ಪ್ರಧಾನಿಯೇ ಹೋಗುವಂತಿಲ್ಲ!
Share on WhatsAppShare on FacebookShare on Telegram

ಮುಂದಿನ ವಾರ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮದ ಮೇಲೆ ಇಡೀ ದೇಶದ ಕಣ್ಣಿದೆ. ಸರಿಸುಮಾರು ಮೂರೂವರೆ ದಶಕದ ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಣಾಳಿಕೆಯ ಅತ್ಯಂತ ಪ್ರಮುಖ ಭರವಸೆ ಆ ಮೂಲಕ ನಿಜವಾಗುವ ಕ್ಷಣ ಅದು. ಜೊತೆಗೆ ರಾಜಕೀಯ ಹಿಂದುತ್ವದ ಕನಸು ನನಸಾಗುವ ಘಳಿಗೆ ಕೂಡ. ಹಾಗಾಗಿ ಸಹಜವಾಗೇ ಎಲ್ಲರ ಕುತೂಹಲ ಮತ್ತು ನಿರೀಕ್ಷೆಗಳು ಗರಿಗೆದರಿವೆ.

ADVERTISEMENT

ಆದರೆ, ಕರೋನಾ ಜಾಗತಿಕ ಸೋಂಕಿನ ನಿಯಂತ್ರಣದ ಭಾಗವಾಗಿ ಕೇಂದ್ರ ಸರ್ಕಾರ ಹೇರಿರುವ ಅನ್ ಲಾಕ್ 3.0ದ ಎಸ್ ಒಪಿ(ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್) ಜಾರಿಯಲ್ಲಿರುವುದರಿಂದ, ಈ ಭೂಮಿ ಪೂಜೆ ಕಾರ್ಯಕ್ರಮ ಕೂಡ ಆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಿದೆಯೇ? ಅಥವಾ ಇಲ್ಲವೇ? ಎಂಬ ಪ್ರಶ್ನೆ ಎದ್ದಿದೆ. ಏಕೆಂದರೆ; ದೇಶವ್ಯಾಪಿ ಅನ್ವಯವಾಗುವ ಈ ಎಸ್ ಒಪಿ ಪ್ರಕಾರವೇ ಕಾರ್ಯಕ್ರಮ ನಡೆದಲ್ಲಿ; ಸ್ವತಃ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ ಜೋಷಿ, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್, ಹಿರಿಯ ನಾಯಕ ಕಲ್ಯಾಣ್ ಸಿಂಗ್ ಸೇರಿದಂತೆ ಬಹುತೇಕ ವಿಶೇಷ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಾಗದು!

ಆಗಸ್ಟ್ 1ರಿಂದ ಜಾರಿಗೆ ಬರುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಾನೆ ಹೊರಡಿಸಿರುವ ಅನ್ ಲಾಕ್ 3.0 ಎಸ್ ಒಪಿ ಪ್ರಕಾರ, “65 ವರ್ಷ ಮೇಲ್ಪಟ್ಟವರು, ತೀವ್ರ ಆರೋಗ್ಯ ಸಮಸ್ಯೆ ಉಳ್ಳುವರು, ಗರ್ಭಿಣಿಯರು ಮತ್ತು 10 ವರ್ಷದ ಒಳಗಿನ ಮಕ್ಕಳು ಮನೆಯಿಂದ ಹೊರಬರುವಂತಿಲ್ಲ. ಈ ನಿಯಮ ಧಾರ್ಮಿಕ ಸಂಸ್ಥೆಗಳಿಗೂ, ದೇವಾಲಯಗಳಿಗೂ ಯಥಾ ಪ್ರಕಾರ ಅನ್ವಯವಾಗುತ್ತದೆ”.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆದರೆ, ಆಗಸ್ಟ್ 5ರಂದು ನಿಗದಿಯಾಗಿರುವ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಕಾರ್ಯಕ್ರಮಕ್ಕೆ 69 ವರ್ಷದ ಪ್ರಧಾನಿ ನರೇಂದ್ರ ಮೋದಿ, 92 ವರ್ಷದ ಹಿರಿಯ ನಾಯಕ ಹಾಗೂ ರಾಮಜನ್ಮಭೂಮಿ ಅಭಿಯಾನ ಮತ್ತು ರಥಯಾತ್ರೆಯ ರೂವಾರಿ ಎಲ್ ಕೆ ಅಡ್ವಾಣಿ, ಮತ್ತೊಬ್ಬ ಪ್ರಮುಖ ನಾಯಕ 86 ವರ್ಷದ ಮುರುಳಿ ಮನೋಹರ ಜೋಷಿ, ಆರ್ ಎಸ್ ಎಸ್ ನಾಯಕ, 69 ವರ್ಷದ ಮೋಹನ್ ಭಾಗ್ವತ್, ಆರ್ ಎಸ್ ಎಸ್ ಮತ್ತೊಬ್ಬ ಹಿರಿಯ ನಾಯಕ, 73 ವರ್ಷದ ಸುರೇಶ್ ಜೋಷಿ, ಉತ್ತರಪ್ರದೇಶದ ಮಾಜಿ ಸಿಎಂ, 88 ವರ್ಷದ ಕಲ್ಯಾಣ್ ಸಿಂಗ್ ಅವರನ್ನು ಆಹ್ವಾನಿಸಲಾಗಿದೆ. ಚಾಲ್ತಿಯಲ್ಲಿರುವ ಎಸ್ ಒಪಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದೇ ಆದರೆ, ಈ ಎಲ್ಲರೂ ತಮ್ಮ ಮನೆ ಬಿಟ್ಟು ಹೊರಬರುವಂತಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನಿತರಲ್ಲಿ ನಿಯಮದ ಪ್ರಕಾರ ಭಾಗವಹಿಸುವ ಅವಕಾಶ ಇರುವುದು ಕೆಲವೇ ಕೆಲವು ಮಂದಿಗೆ ಮಾತ್ರ. ಆ ಪೈಕಿ ವಿಎಚ್ ಪಿ ನಾಯಕ ವಿನಯ್ ಕಟಿಯಾರ್(65), ಉಮಾ ಭಾರತಿ(61) ಪ್ರಮುಖರು.

ಅಲ್ಲದೆ, ಧಾರ್ಮಿಕ ಕಾರ್ಯಕ್ರಮಗಳಿಗೆ, ಸಮಾರಂಭಗಳಿಗೆ ಕೂಡ ನಿಯಮಾವಳಿ ಪ್ರಕಾರ ಅವಕಾಶವಿಲ್ಲ.

ಈ ನಡುವೆ ಸರ್ಕಾರ ಕೂಡ, ಈಗಾಗಲೇ ಜಾರಿಯಲ್ಲಿರುವ ಎಸ್ ಒಪಿ ನಿಯಮಾವಳಿಗಳ ಪ್ರಕಾರವೇ ರಾಮಮಂದಿರ ಭೂಮಿ ಪೂಜೆ ಸಮಾರಂಭ ನಡೆಸುವುದಾಗಿ ಹೇಳಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಯಾವೆಲ್ಲಾ ನಿಯಮಗಳನ್ನು ಪಾಲಿಸಬೇಕು ಎಂಬುದನ್ನು ಅನ್ ಲಾಕ್ 2.0 ಎಸ್ ಒಪಿಯಲ್ಲಿಯೇ ಸ್ಪಷ್ಟಪಡಿಸಲಾಗಿದೆ. ಆ ಪ್ರಕಾರವೇ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವ ಅಗತ್ಯವಿಲ್ಲ ಎಂದೂ ಕೇಂದ್ರ ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿರುವುದಾಗಿ ‘ದ ಪ್ರಿಂಟ್’ ಹೇಳಿದೆ.

ಸಾಮಾಜಿಕ ಅಂತರ (ಪರಸ್ಪರ ಎರಡು ಮೀಟರ್ ಅಂತರ), ಸುತ್ತಮುತ್ತಲ ಪರಿಸರದ ಸ್ಯಾನಿಟೇಷನ್,(Sanitation) ಮಾಸ್ಕ ಧರಿಸುವಿಕೆ, ಕೈ ಸ್ವಚ್ಛತೆ, ಪ್ರವೇಶದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಮುಂತಾದ ಕ್ರಮಗಳನ್ನು ಖಾತರಿಪಡಿಸಲಾಗುವುದು. ಆ ಎಲ್ಲಾ ನಿಯಮಾವಳಿ ಪಾಲಿಸಿಕೊಂಡೇ ಕಾರ್ಯಕ್ರಮ ನಡೆಸಲು ಅವಕಾಶವಿದೆ ಎಂದೂ ಸಚಿವಾಲಯ ಹೇಳಿದೆ.

ಆದರೆ, ಅನ್ ಲಾಕ್ 3.0 (Unlock 3.0) ಎಸ್ ಒಪಿ ಪ್ರಕಾರ ಯಾವುದೇ ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಸಭೆ, ಸಮಾರಂಭಗಳಿಗೆ, ರ್ಯಾಲಿಗಳಿಗೆ ಅವಕಾಶವಿಲ್ಲ. ಕೋವಿಡ್-19 ಸೋಂಕು ನಿಯಂತ್ರಣದ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು, ಮಾರ್ಗದರ್ಶಿ ಸೂಚನೆಗಳನ್ನು ಪಾಲಿಸಿಕೊಂಡು, ಇಂತಹ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಲು ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದೂ ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಇನ್ನು ಕೇವಲ ಐದು ದಿನಗಳಲ್ಲಿ ನಡೆಯಲಿರುವ ಭೂಮಿ ಪೂಜಾ ಸಮಾರಂಭವನ್ನು ಹೇಗೆ ನಡೆಸಲಾಗುವುದು ? ಆಹ್ವಾನಿತ ಸುಮಾರು 200 ಮಂದಿ ಗಣ್ಯರಿಗೆ ಎಸ್ಒಪಿ(SOP) ಪಾಲನೆಯ ವಿಷಯದಲ್ಲಿ ಯಾವೆಲ್ಲಾ ರಿಯಾಯ್ತಿಗಳನ್ನು ನೀಡಲಾಗುವುದು? ಸಮಾರಂಭದಲ್ಲಿ ಎಸ್ ಒಪಿ ಪಾಲನೆಯ ವಿಷಯದಲ್ಲಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಅವರ ಸರ್ಕಾರ ಏನೆಲ್ಲಾ ಕ್ರಮ ಕೈಗೊಳ್ಳಲಿದೆ ಎಂಬುದು ಈಗ ಕುತೂಹಲ ಹುಟ್ಟಿಸಿದೆ.

Tags: ಅಯೋಧ್ಯೆನರೇಂದ್ರ ಮೋದಿರಾಮ ಜನ್ಮಭೂಮಿರಾಮ ಮಂದಿರ
Previous Post

ಸೂರ್ಯ ಮುಳುಗದ ಸಾಮ್ರಾಜ್ಯದಲ್ಲಿ ಗುಲಾಮಗಿರಿ ನಿಷೇಧ ಜಾರಿಗೊಳಿಸಿ 186 ವರ್ಷ

Next Post

ಆನ್‌ಲೈನ್ ತರಗತಿಗಾಗಿ ಅಡವಿಟ್ಟ ಮಾಂಗಲ್ಯ ವಾಪಸ್ ಬಂತು..!

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025
Next Post
ಆನ್‌ಲೈನ್ ತರಗತಿಗಾಗಿ ಅಡವಿಟ್ಟ ಮಾಂಗಲ್ಯ ವಾಪಸ್ ಬಂತು..!

ಆನ್‌ಲೈನ್ ತರಗತಿಗಾಗಿ ಅಡವಿಟ್ಟ ಮಾಂಗಲ್ಯ ವಾಪಸ್ ಬಂತು..!

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada