• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

‘ಏಪ್ರಿಲ್ 1’ ರಂದೇ ದೇಶದ ಜನರನ್ನು ‘ಮೂರ್ಖ’ರನ್ನಾಗಿ ಮಾಡಿದ ಪ್ರಧಾನಿ ನರೇಂದ್ರ ಮೋದಿ..!

by
April 1, 2020
in ದೇಶ
0
‘ಏಪ್ರಿಲ್ 1’ ರಂದೇ  ದೇಶದ ಜನರನ್ನು  ‘ಮೂರ್ಖ’ರನ್ನಾಗಿ ಮಾಡಿದ ಪ್ರಧಾನಿ ನರೇಂದ್ರ ಮೋದಿ..!
Share on WhatsAppShare on FacebookShare on Telegram

ಕರೋನಾ ಭೀತಿಯಿಂದಾಗಿ ಜನರು ತಮ್ಮ ತಮ್ಮ ಮನೆಗಳಲ್ಲಿ ತಾವೇ ಬಂಧಿಯಾಗಿರುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಡೀ ದೇಶದ ಜನರನ್ನು ಮೂರ್ಖರನ್ನಾಗಿ ಮಾಡಿದ್ದಾರೆ. ಜನತೆ ಮೂರ್ಖರಾಗುತ್ತಿರುವುದು ಇದು ಮೊದಲ ಬಾರಿಯೇನೂ ಅಲ್ಲ. ಹಿಂದೆಯೂ ಪ್ರಧಾನಿ ಮೋದಿ ಜನರನ್ನು ಮೂರ್ಖರನ್ನಾಗಿ ಮಾಡಿದ್ದಾರೆ. ಜನತೆಗೆ ಅದು ಅಭ್ಯಾಸವಾಗಿದೆ.

ADVERTISEMENT

ವಿಶೇಷ ಎಂದರೆ ಪ್ರಧಾನಿ ಮೋದಿ ಅವರು ಮೂರ್ಖರ ದಿನದಂದೇ ಅಂದರೆ ‘ಏಪ್ರಿಲ್ 1’ ರಂದೇ ಜನರನ್ನು ‘ಮೂರ್ಖ’ರನ್ನಾಗಿ ಮಾಡಿದ್ದಾರೆ. ಮೋದಿ ನಿಮ್ಮನ್ನು ಮೂರ್ಖರನ್ನಾಗಿ ಮಾಡಿದ್ದಾರೆ ಎಂದು ಜನರಿಗೆ ಹೇಳಿದರೆ, ಯಾರೋ ಮೂರ್ಖರ ದಿನ ಅದಕ್ಕಾಗಿ ತಮಾಷೆ ಮಾಡುತ್ತಿದ್ದಾರೆ ಎಂದುಕೊಳ್ಳುತ್ತಾರೆ. ಹೀಗಾಗಿ ಜನರಿಗೆ ತಾವು ಮೂರ್ಖರಾಗಿರುವುದು ಗೊತ್ತಾಗುವುದೇ ಇಲ್ಲ. ಅಷ್ಟರ ಮಟ್ಟಿಗೆ ಪ್ರಧಾನಿ ಮೋದಿ ಅವರ ಚಾಣಾಕ್ಷತನವನ್ನು ಮೆಚ್ಚಲೇಬೇಕು!

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ 18 ವರ್ಷಗಳಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಈ ನಡುವೆ ಪ್ರತಿ ಬ್ಯಾರೆಲ್ ಗೆ 20 ಡಾಲರ್ ಆಜುಬಾಜಿನಲ್ಲಿ ವಹಿವಾಟಾಗುತ್ತಿರುವ ಕಚ್ಚಾ ತೈಲ ಬೆಲೆಯು 10 ಡಾಲರ್ ಗೆ ಕುಸಿಯುವ ಸಾಧ್ಯತೆ ಬಗ್ಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ತಜ್ಞರು ಅಂದಾಜಿಸುತ್ತಿದ್ದಾರೆ. ಅಂದರೆ ಜನವರಿ ಆರಂಭದಲ್ಲಿ ಪ್ರತಿ ಬ್ಯಾರೆಲ್ ಗೆ 60 ಡಾಲರ್ ಇದ್ದ ಕಚ್ಚಾ ತೈಲವು ಈಗಾಗಲೇ 20 ಡಾಲರ್ ಗೆ ಕುಸಿದಿದೆ. ಬರುವ ದಿನಗಳಲ್ಲಿ 10 ಡಾಲರ್ ಗೆ ಕುಸಿಯಲೂಬಹುದು.

ಇಂತಹ ಸಂದರ್ಭದಲ್ಲಿ ಇಡೀ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿನ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ದರ ಗಣನೀಯವಾಗಿ ಕುಸಿದಿದೆ, ಕುಸಿಯುತ್ತಲೇ ಇದೆ. ಆದರೆ, ಕಚ್ಚಾ ತೈಲವು 60 ಡಾಲರ್ ಗಳಿಂದ 20 ಡಾಲರ್ ಗಳಿಗೆ ಕುಸಿದರೂ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಯದೇ ಇರುವುದು ಭಾರತದಲ್ಲಿ ಮಾತ್ರ!

ಭಾರತದ ಬಡಪಾಯಿ ಗ್ರಾಹಕನ ದುರಾದೃಷ್ಟ ನೋಡಿ. ಪ್ರಧಾನಿ ನರೇಂದ್ರ ಮೋದಿ ಅವರು ಮೂರ್ಖರ ದಿನದಂದೇ ಪೆಟ್ರೋಲ್ ಮತ್ತು ಡಿಸೇಲ್ ದರವನ್ನು ಏರಿಸಿದ್ದಾರೆ. ಏಪ್ರಿಲ್ 1 ರಿಂದ (ಮಾರ್ಚ್ 31ರ ಮಧ್ಯರಾತ್ರಿ 12ರ ನಂತರ) ಪೆಟ್ರೋಲ್ ಮತ್ತು ಡೀಸೆಲ್ ದರವು ಶೇ.2.30ರಷ್ಟು ಏರಿಕೆಯಾಗಿದೆ. ರೂಪಾಯಿ ಲೆಕ್ಕದಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 1.65 ರೂಪಾಯಿ ಏರಿಕೆಯಾಗಿದ್ದರೆ, ಡಿಸೇಲ್ 1.62 ರೂಪಾಯಿ ಜಿಗಿದಿದೆ.

ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ದರವು 73.62 ರೂಪಾಯಿಗೆ ಏರಿದೆ. ಮಾರ್ಚ್ 31 ರಂದು ಈ ದರ 71.97 ರೂಪಾಯಿಗಳಷ್ಟಿತ್ತು. ಡಿಸೇಲ್ ದರವು ಮಾರ್ಚ್ 31 ರಂದು 64.41 ರೂಪಾಯಿ ಇದ್ದದ್ದು 66.03 ರೂಪಾಯಿಗೆ ಏರಿದೆ. ನಾವು ಈ ಹಿಂದೆಯೇ ಹೇಳಿದಂತೆ- ಜಗತ್ತಿನಲ್ಲಿ ಕಚ್ಚಾ ತೈಲ ದರವು ಶೂನ್ಯಕ್ಕೆ ಇಳಿದರೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪೆಟ್ರೋಲ್ ದರವು 70 ರೂಪಾಯಿಗಿಂತ ಕೆಳಮಟ್ಟಕ್ಕೆ ಮತ್ತು ಡಿಸೇಲ್ ದರವು 60 ರೂಪಾಯಿಗಿಂತ ಕೆಳಮಟ್ಟಕ್ಕೆ ಇಳಿಯಲು ಬಿಡುವುದಿಲ್ಲ!

ಇಡೀ ದೇಶವೇ ಲಾಕ್ ಡೌನ್ ಆಗಿದೆ. ವಿವಿಧ ಮಹಾನಗರಗಳಲ್ಲಿ ಗೂಗಲ್ ನಡೆಸಿರುವ ಸಮೀಕ್ಷೆ ಪ್ರಕಾರ ಪೆಟ್ರೋಲ್ ಮತ್ತು ಡಿಸೇಲ್ ತುಂಬಿಸುವವರ ಸಂಖ್ಯೆ ಶೇ.75ರಷ್ಟು ತಗ್ಗಿದೆ. ಬೇಡಿಕೆಯೇ ಇಲ್ಲದ ಹೊತ್ತಿನಲ್ಲಿ, ಪ್ರಧಾನಿ ಮೋದಿ ಸರ್ಕಾರ ಏಕಾಏಕಿ 1.65 ರೂಪಾಯಿ ಏರಿಕೆ ಮಾಡಿದೆ. ಸಾಮಾನ್ಯ ದಿನಗಳಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರವು ನಿತ್ಯವೂ 5 ರಿಂದ 25 ಪೈಸೆಗಳವರೆಗೆ ಏರಿಕೆಯಾಗುತ್ತಿತ್ತು. ಈಗ ಧಿಡೀರ್ 1.65 ರೂಪಾಯಿ ಏರಿಕೆಯಾಗಿದೆ. ಲಾಕ್ ಡೌನ್ ಮುಗಿದ ನಂತರ ಗ್ರಾಹಕರು ಬಂಕ್ ಗೆ ತೆರಳಿ ಪೆಟ್ರೋಲ್ ಮತ್ತು ಡಿಸೇಲ್ ಹಾಕಿಸಿಕೊಂಡಾಗಲಷ್ಟೇ ಪ್ರಧಾನಿ ಮೋದಿ ಏಪ್ರಿಲ್ 1 ರಂದು ನೀಡಿದ ಕೊಡುಗೆ ಗೊತ್ತಾಗುತ್ತದೆ.

ಬೆಲೆ ಏರಿಕೆ ಇಷ್ಟಕ್ಕೆ ನಿಲ್ಲೊದಿಲ್ಲಾ..!

ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ಇಷ್ಟಕ್ಕೆ ಮುಗಿಯಿತೇ? ಖಂಡಿತಾ ಇಲ್ಲ. ಬರುವ ದಿನಗಳಲ್ಲಿ ಮೋದಿ ಸರ್ಕಾರವು ಇನ್ನೂ 6.35 ರೂಪಾಯಿ ಪೆಟ್ರೋಲ್ ದರ ಏರಿಕೆ ಮಾಡುವ ಸಾಧ್ಯತೆ ಇದೆ. ಹೇಗೆಂದರೆ ‘ಕೋವಿಡ್-19’ ಸೋಂಕು ತಡೆಯಲು ಲಾಕ್ ಡೌನ್ ಹೇರುವ ಮುನ್ನಾ ದಿನ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ತಾನು ಬಯಸಿದ ಯಾವುದೇ ಸಮಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಜ್ ಸುಂಕವನ್ನು ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ಅನುವು ಮಾಡಿಕೊಡುವ ನಿಬಂಧನೆಗೆ ಅನುಮೋದನೆ ಪಡೆದಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಅಬಕಾರಿ ಸುಂಕದ ಮಿತಿಯನ್ನು ಕ್ರಮವಾಗಿ ಲೀಟರ್‌ಗೆ 18 ಮತ್ತು 12 ರೂಪಾಯಿಗೆ ಏರಿಸಲು ಹಣಕಾಸು ಕಾಯ್ದೆ ಎಂಟನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡಲಾಗಿದೆ. ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಿದ 2020 ರ ಹಣಕಾಸು ಮಸೂದೆಗೆ ತಿದ್ದುಪಡಿ ಮಸೂದೆಯು ಯಾವುದೇ ಚರ್ಚೆಯಿಲ್ಲದೇ ಅಂಗೀಕಾರವಾಗಿದೆ. ಹಿಂದಿನ ಮಿತಿ ಪೆಟ್ರೋಲ್‌ಗೆ ಲೀಟರ್‌ಗೆ 10 ಮತ್ತು ಡೀಸೆಲ್‌ಗೆ 4 ರೂಪಾಯಿ ಇತ್ತು. ‘ಕೋವಿಡ್-19’ ನಿಂದ ಉದ್ಭವಿಸಿರುವ ಸಂಕಷ್ಟದಿಂದ ಏಕಾಏಕಿ ಬಂದ ಅನಿರೀಕ್ಷಿತ ವೆಚ್ಚಗಳನ್ನು ಭರಿಸಲು ಸುಂಕ ಹೇರುತ್ತಿರುವುದಾಗಿ ಮೋದಿ ಸರ್ಕಾರ ತನ್ನನ್ನು ತಾನು ಸಮರ್ಥಿಸಿಕೊಂಡಿದೆ. ಮಾರ್ಚ್ 14ರಂದು ಏರಿಸಿದ ಎಕ್ಸೈಜ್ ಸುಂಕ ತಲಾ 3 ರೂಪಾಯಿಗಳಿಂದ ವಾರ್ಷಿಕ 39,000 ಕೋಟಿ ಹೆಚ್ಚುವರಿ ಆದಾಯಗಳಿಸುವ ನಿರೀಕ್ಷೆ ಇದೆ. 3 ರೂಪಾಯಿ ಪೈಕಿ ವಿಶೇಷ ಹೆಚ್ಚುವರಿ ಎಕ್ಸೈಜ್ ಸುಂಕ 2 ರೂಪಾಯಿ ಮತ್ತು ರಸ್ತೆ ಮತ್ತು ಮೂಲಭೂತ ಸೌಕರ್ಯಗಳ ಮೇಲಿನ ಉಪಕರ (ಸೆಸ್) 1 ರೂಪಾಯಿ ಸೇರಿದೆ.

ಉದ್ದೇಶಿತ ತಿದ್ದುಪಡಿಯು ಕೇಂದ್ರ ಸರ್ಕಾರಕ್ಕೆ ಯಾವಾಗ ಬೇಕಾದರೂ 8 ರೂಪಾಯಿ ಏರಿಕೆ ಮಾಡುವ ಅಧಿಕಾರವನ್ನು ನೀಡಿದೆ. ಆ ಅಧಿಕಾರವನ್ನು ಬಳಸಿಕೊಂಡು ನರೇಂದ್ರ ಮೋದಿ ಸರ್ಕಾರವು ದೇಶವ್ಯಾಪಿ ಬೇಡಿಕೆಯೇ ಇಲ್ಲದ ಹೊತ್ತಿನಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರವನ್ನು ಕ್ರಮವಾಗಿ 1.65 ಮತ್ತು 1.62 ರೂಪಾಯಿ ಏರಿಕೆ ಮಾಡಿದೆ. ತನ್ನ ಬೊಕ್ಕಸ ತುಂಬಿಸಿಕೊಳ್ಳಲು ಬರುವ ದಿನಗಳಲ್ಲಿ ಇನ್ನೂ ಉಳಿದ ಮೊತ್ತವನ್ನು ಏರಿಕೆ ಮಾಡಲಿದೆ. ಅಂದರೆ, ಪೆಟ್ರೋಲ್ ದರ ಪ್ರಸ್ತುತ 73.62 ರೂಪಾಯಿ ಇದೆ. ಇದೇ ಗರಿಷ್ಠ ಮೊತ್ತವಲ್ಲ. ಈಗಾಗಲೇ ಸಂಸತ್ತಿನಲ್ಲಿ ಅನುಮೋದನೆ ಪಡೆದಿರುವ 8 ರೂಪಾಯಿಗಳಷ್ಟನ್ನೂ ಏರಿಕೆ ಮಾಡಿದರೆ ಪೆಟ್ರೋಲ್ ದರವು 80 ರೂಪಾಯಿಗೆ, ಡಿಸೇಲ್ ದರವು 73.50 ರ ಆಜುಬಾಜಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಅಂದರೆ ಪ್ರಧಾನಿ ನರೇಂದ್ರ ಮೋದಿ ಬಡಪಾಯಿ ಗ್ರಾಹಕರನ್ನು ಮತ್ತಷ್ಟು ಮೂರ್ಖರನ್ನಾಗಿ ಮಾಡಲಿದ್ದಾರೆ!

Tags: Corona Outbreakindia lockdownpetrol price hikePM Modiಕರೋನಾ ಭೀತಿಪೆಟ್ರೋಲ್‌ ಬೆಲೆ ಏರಿಕೆಪ್ರಧಾನಿ ಮೋದಿಭಾರತ ಲಾಕ್‌ಡೌನ್‌
Previous Post

ಗುಪ್ತಚರ ವೈಫಲ್ಯದಿಂದ ಕರ್ನಾಟಕಕ್ಕೆ ಕಾದಿದೆಯಾ ಗಂಡಾಂತರ..!?

Next Post

ಯುಟಿ ಖಾದರ್‌ ಮನೆ ವಾಚ್‌ ಮೆನ್‌ ಮೇಲೆ ಹಲ್ಲೆ ; ರೈತರ ಮೇಲೆ ದೌರ್ಜನ್ಯ ಸಹಿಸಲ್ಲ ಎಂದ ಸಿಎಂ

Related Posts

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
0

ವೃತ್ತಿ ಜೀವನದಲ್ಲಿ ವಿರಾಮದ ನಂತರ, ವಿಶೇಷವಾಗಿ ತಾಂತ್ರಿಕ ಕರ್ತವ್ಯಗಳಲ್ಲಿ ಮಹಿಳೆಯರು ಮತ್ತೆ ಕಾರ್ಯಪಡೆಗೆ ಸೇರಲು ಸಹಾಯ ಮಾಡುವಲ್ಲಿ ಮತ್ತು ಮಹಿಳೆಯರು ಮರುಕೌಶಲ್ಯ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಲು ಅಭ್ಯರ್ಥಿಗಳನ್ನು ಹುರಿದುಂಬಿಸುತ್ತಿರುವ...

Read moreDetails
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

September 4, 2025
ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

September 4, 2025
Next Post
ಯುಟಿ ಖಾದರ್‌ ಮನೆ ವಾಚ್‌ ಮೆನ್‌ ಮೇಲೆ ಹಲ್ಲೆ ; ರೈತರ ಮೇಲೆ ದೌರ್ಜನ್ಯ ಸಹಿಸಲ್ಲ ಎಂದ ಸಿಎಂ

ಯುಟಿ ಖಾದರ್‌ ಮನೆ ವಾಚ್‌ ಮೆನ್‌ ಮೇಲೆ ಹಲ್ಲೆ ; ರೈತರ ಮೇಲೆ ದೌರ್ಜನ್ಯ ಸಹಿಸಲ್ಲ ಎಂದ ಸಿಎಂ

Please login to join discussion

Recent News

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ
Top Story

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

by ನಾ ದಿವಾಕರ
September 4, 2025
Top Story

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

by ಪ್ರತಿಧ್ವನಿ
September 4, 2025
Top Story

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

by ಪ್ರತಿಧ್ವನಿ
September 4, 2025
Top Story

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

by ಪ್ರತಿಧ್ವನಿ
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada