• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಐಎಮ್ಎ ಹಗರಣ: 28 ಮಂದಿಯ ವಿರುದ್ಧ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ ಸಿಬಿಐ

by
October 18, 2020
in ಕರ್ನಾಟಕ
0
ಐಎಮ್ಎ ಹಗರಣ: 28 ಮಂದಿಯ ವಿರುದ್ಧ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ ಸಿಬಿಐ
Share on WhatsAppShare on FacebookShare on Telegram

4,000 ಕೋಟಿ ರೂ. ಅಕ್ರಮದ ಐಎಂಎ ಹಗರಣದ ತನಿಖೆಗೆ ಸಂಬಂಧಿಸಿದಂತೆ ಸಂಸ್ಥೆಯ ಎಂಡಿ ಮತ್ತು ಸಿಇಒ ಮೊಹಮ್ಮದ್ ಮನ್ಸೂರ್ ಖಾನ್, ಹಲವಾರು ಹಿರಿಯ ಅಧಿಕಾರಿಗಳು ಸೇರಿದಂತೆ ಒಟ್ಟು 28 ಜನರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಬೆಂಗಳೂರಿನ ನ್ಯಾಯಾಲಯದಲ್ಲಿ ಪೂರಕ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹೆಮಂತ್ ನಿಂಬಲ್ಕರ್, (ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ), ಬೆಂಗಳೂರು ನಗರ ಪೊಲೀಸ್), ಅಜಯ್ ಹಿಲೋರಿ (ಪೊಲೀಸ್ ವರಿಷ್ಠಾಧಿಕಾರಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್), ಇ.ಬಿ. ಶ್ರೀಧರ ಡೆಪ್ಯೂಟಿ ಎಸ್‌ಪಿ (ಸಿಐಡಿ), ಕಮರ್ಷಿಯಲ್ ಸ್ಟ್ರೀಟ್ ನ ಆಗಿನ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸ್ಟೇಷನ್ ಹೌಸ್ ಆಫೀಸರ್ ಎಂ ರಮೇಶ್ , ಕಮರ್ಷಿಯಲ್ ಸ್ಟ್ರೀಟ್‌ ನ ಆಗಿನ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪಿ.ಗೌರಿಶಂಕರ್, ಮತ್ತು ಬೆಂಗಳೂರು ಉತ್ತರ ಉಪವಿಭಾಗದ ಆಗಿನ ಸಹಾಯಕ ಆಯುಕ್ತರಾದ ಎಲ್.ಸಿ. ನಾಗರಾಜ್ ಮೊದಲಾದ ಅಧಿಕಾರಿಗಳ ಹೆಸರನ್ನು ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿದೆ.

Also Read: ಐಎಂಎ ಪ್ರಕರಣ ಸಿಬಿಐಗೆ: ಕರ್ನಾಟಕದ `ಶಾರದಾ ಚಿಟ್ ಫಂಡ್’ ಆರಂಭ?

ಐಎಂಎ ನಿರ್ದೇಶಕರಾದ ನಿಜಾಮುದ್ದೀನ್, ನಸೀರ್ ಹುಸೇನ್, ನವೀದ್ ಅಹ್ಮದ್ ನಟ್ಟಮ್ಕರ್, ವಸೀಮ್, ಅರ್ಷದ್ ಖಾನ್, ಮತ್ತು ಅಫ್ಸರ್ ಪಾಷಾ ಅವರ ಹೆಸರನ್ನೂ ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿದೆ.

ಐಎಂಎ ವಿರುದ್ಧ ಬಂದ ದೂರುಗಳು ಮತ್ತು ಮಾಹಿತಿಯ ಬಗ್ಗೆ ಆಗಿನ ಕಂದಾಯ ಅಧಿಕಾರಿ ಮತ್ತು ಬೆಂಗಳೂರಿನ ಇತರ ಪೊಲೀಸ್ ಅಧಿಕಾರಿಗಳು ಸೇರಿ ವಿಚಾರಣೆ/ಪರಿಶೀಲನೆಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಆರೋಪಿಗಳ ವಿರುದ್ಧ ಕೆಪಿಐಡಿಎಫ್‌ಇ ಕಾಯ್ದೆ 2004 ಸೇರಿದಂತೆ ಕಾನೂನಿನಡಿಯಲ್ಲಿ ಅಗತ್ಯ ಕ್ರಮ ಕೈಗೊಂಡಿಲ್ಲ. ಬದಲಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಮತ್ತು ಈ ಖಾಸಗಿ ಕಂಪನಿಯು ಯಾವುದೇ ಅಕ್ರಮ ಕೃತ್ಯಗಳಲ್ಲಿ ಭಾಗಿಯಾಗಿಲ್ಲ ಎಂದು ತಿಳಿಸಿ ದೂರುಗಳನ್ನು ಮುಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.

ಮಾಸಿಕ ಯೋಜನೆ, ಶಿಕ್ಷಣ ಯೋಜನೆ, ಮದುವೆ ಮುಂತಾದ ವಿವಿಧ ಯೋಜನೆಗಳ ಮೇಲೆ ಹೂಡಿಕೆ ರೂಪದಲ್ಲಿ ಜನರಿಂದ ಅಕ್ರಮವಾಗಿ ಹಣವನ್ನು ಸಂಗ್ರಹಿಸುವುದಕ್ಕೆ ಸಂಬಂಧಿಸಿದ ಐಎಂಎ ಹಗರಣವು 2018 ರಲ್ಲಿ ಬೆಳಕಿಗೆ ಬಂದಿತ್ತು.

Also Read: ಐಎಂಎ ಪ್ರಕರಣ: ಜನರ ಹಣ ಮರಳಿ ದೊರೆಯುವ ಹಾದಿ ಕಠಿಣ

ಐಎಂಎ ನಿರ್ದೇಶಕರು ಮತ್ತು ಪ್ರವರ್ತಕರ ವಿರುದ್ಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಅದನ್ನು ಸಿಬಿಐಗೆ ವರ್ಗಾಯಿಸಲಾಯಿತು. ಈ ಹಗರಣವನ್ನು ತನಿಖೆ ನಡೆಸಲು ಸಿಬಿಐ ತನ್ನ ತನಿಖಾಧಿಕಾರಿಗಳನ್ನು ಒಳಗೊಂಡ ಬಹು ಶಿಸ್ತಿನ ತನಿಖಾ ತಂಡವನ್ನು (MDIT) ರಚಿಸಿತ್ತು, ಈ ತಂಡವು ಚಾರ್ಟರ್ಡ್ ಅಕೌಂಟೆಂಟ್ಸ್, ಫೊರೆನ್ಸಿಕ್ ಆಡಿಟರ್, ಕಂಪ್ಯೂಟರ್ ಫೊರೆನ್ಸಿಕ್ ತಜ್ಞರು ಮತ್ತು ಬ್ಯಾಂಕರ್‌ಗಳ ಸಹಾಯ ಪಡೆಯುತ್ತಿದೆ.

ಈ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಾಲ್ಕು ಪ್ರಕರಣಗಳನ್ನು ದಾಖಲಿಸಿದೆ. ಐಎಂಎ ಹಗರಣ ಪ್ರಕರಣದಲ್ಲಿ ಸಿಬಿಐ ಈ ಹಿಂದೆಯೂ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದೆ.

ಐಎಮ್‌ಎ ಹಗರಣದ ಮುಖ್ಯ ಆರೋಪಿ ಮೊಹಮ್ಮದ್ ಮನ್ಸೂರ್ ಖಾನ್ ಅವರನ್ನು ಕಳೆದ ವರ್ಷ ಜುಲೈ 19 ರಂದು ನವದೆಹಲಿಗೆ ಆಗಮಿಸಿದಾಗ ಬಂಧಿಸಲಾಗಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

Also Read: ಐಎಂಎ ಕರಿನೆರಳಲ್ಲಿ ಐಪಿಎಸ್ ವರ್ಗಾವಣೆ!

Tags: CBIIMAIMA scamಐಎಮ್ಎಸಿಬಿಐ
Previous Post

ದೇಶದಲ್ಲಿ 53 ವರ್ಷಗಳಿಂದ ಇನ್ನೂ ಸ್ಥಾಪನೆ ಆಗದ ರಕ್ಷಣಾ ವಿಶ್ವವಿದ್ಯಾಲಯ

Next Post

ಜೆಡಿಎಸ್‌ ಮುಗಿಸುವುದೇ ಕಾಂಗ್ರೆಸ್‌ ನಾಯಕರ ಅಜೆಂಡಾ: ಎಚ್‌ ಡಿ ಕುಮಾರಸ್ವಾಮಿ

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಜೆಡಿಎಸ್‌ ಮುಗಿಸುವುದೇ ಕಾಂಗ್ರೆಸ್‌ ನಾಯಕರ ಅಜೆಂಡಾ:

ಜೆಡಿಎಸ್‌ ಮುಗಿಸುವುದೇ ಕಾಂಗ್ರೆಸ್‌ ನಾಯಕರ ಅಜೆಂಡಾ: ಎಚ್‌ ಡಿ ಕುಮಾರಸ್ವಾಮಿ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada