• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಐಪಿಎಲ್‌ನಲ್ಲಿ ಮಿಂಚುತ್ತಿರುವ ಭಾರತ ತಂಡದ ಭವಿಷ್ಯದ ವೇಗಿಗಳು

by
October 1, 2020
in Uncategorized
0
ಐಪಿಎಲ್‌ನಲ್ಲಿ ಮಿಂಚುತ್ತಿರುವ ಭಾರತ ತಂಡದ ಭವಿಷ್ಯದ ವೇಗಿಗಳು
Share on WhatsAppShare on FacebookShare on Telegram

ಐಪಿಎಲ್‌ ಕ್ರಿಕೆಟ್‌ ಪ್ರೇಮಿಗಳಿಗೆ ರಸದೌತನ ನೀಡುವ ಕ್ರೀಡಾಕೂಟವಾದರೆ, ಕ್ರಿಕೆಟ್‌ನಲ್ಲಿ ಸಾಧನೆ ಮಾಡಲು ಬಯಸುವ ಯುವ ಪ್ರತಿಭೆಗಳಿಗೆ ಇದೊಂದು ಸುವರ್ಣಾವಕಾಶ. ಈ ಅವಕಾಶವನ್ನು ಯಶಸ್ವಿಯಾಗಿ ಬಳಸಿಕೊಳ್ಳುವಲ್ಲಿ ಯುವ ಆಟಗಾರರು ಸಫಲರಾಗುತ್ತಿದ್ದಾರೆ. ಅದರಲ್ಲೂ ಅಂಡರ್‌-19 ಕ್ರಿಕೆಟ್‌ನಲ್ಲಿ ಆಡಿ ಮಿಂಚಿದಂತಹ ವೇಗದ ಬೌಲರ್‌ಗಳು ಐಪಿಎಲ್‌ನಲ್ಲಿಯೂ ತಮ್ಮ ಕರಾಮತ್ತು ಮುಂದುವರೆಸುತ್ತಿದ್ದಾರೆ.

ADVERTISEMENT

ಬುಧವಾರ ನಡೆದ ಕೊಲ್ಕತ್ತಾ ನೈಟ್‌ ರೈಡರ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ತಂಡದ ನಡುವಿನ ಪಂದ್ಯ, ಭಾರತದ ಭವಿಷ್ಯದ ವೇಗಿಗಳಿಗೆ ಉತ್ತಮ ವೇದಿಕೆಯಾಗಿತ್ತು. KKRನ ಶಿವಂ ಮವಿ ಮತ್ತು ಕಮಲೇಶ್‌ ನಾಗರಕೋಟಿ ಅವರಿಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿತ್ತು. ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಲ್ಲಿ ಇಬ್ಬರೂ ಸಫಲರಾಗಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ವೇಗಿಗಳಿಗೆ ತಮ್ಮ ಫಾರ್ಮ್‌ ಕಂಡುಕೊಳ್ಳುವುದು ಹಾಗೂ ಅದನ್ನು ಮುಂದುವರಸುವುದು ಕಷ್ಟದ ಕೆಲಸ. ಭಾರತ ಕ್ರಿಕೆಟ್‌ ತಂಡದಲ್ಲಿ ವೇಗಿಗಳದ್ದೇ ಸಮಸ್ಯೆ. ಸದ್ಯಕ್ಕಂತೂ, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಭುವನೇಶ್ವರ್‌ ಕುಮಾರ್‌ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಆದರೆ, ವೇಗಿಗಳು ಆಗಾಗ್ಗೆ ಗಾಯಗೊಂಡು ಪಂದ್ಯಗಳಿಂದ ಹೊರಗುಳಿಯುವುದು ಅವರ ಫಾರ್ಮ್‌ಗೆ ಧಕ್ಕೆ ಉಂಟುಮಾಡುತ್ತದೆ.

ಬುಮ್ರಾ, ಶಮಿ ಮತ್ತು ಭುವನೇಶ್ವರ್‌ ಹೊರತುಪಡಿಸಿ ಭಾರತದಲ್ಲಿ ಇತರ ವೇಗಿಗಳಿದ್ದರೂ, ಅವರಲ್ಲಿ ಬಹುತೇಕರು ಅತ್ಯಂತ ದುಬಾರಿ ಬೌಲರ್‌ಗಳು. ವಿಕೆಟ್‌ ಪಡೆದರೂ, ಅತೀ ಹೆಚ್ಚು ರನ್‌ಗಳನ್ನು ಕೈಚೆಲ್ಲುತ್ತಿರುವುದು ಭಾರತೀಯ ತಂಡಕ್ಕೆ ತಲೆನೋವಾಗಿ ಪರಿಣಮಿಸಿತ್ತು. ಇಂತಹ ಸಂದರ್ಭದಲ್ಲಿ ಮವಿ ಮತ್ತು ನಾಗರಕೋಟಿ ಭಾರತದ ಭವಿಷ್ಯದ ವೇಗಿಗಳಾಗಲು ನಾವೇನು ಕಮ್ಮಿಯಿಲ್ಲ ಎಂದು ತೋರಿಸಿಕೊಟ್ಟಿದ್ದಾರೆ.

ಶಿವಂ ಮವಿ ನಿನ್ನೆ ತಾವು ಎಸೆದ ನಾಲ್ಕು ಓವರ್‌ಗಳಲ್ಲಿ ಕೇವಲ 20 ರನ್‌ ನೀಡಿ ಎರಡು ವಿಕೆಟ್‌ ಕಬಳಿಸಿದ್ದಾರೆ. ಇನ್ನು ನಾಗರಕೋಟಿ ಎರಡು ಓವರ್‌ಗಳಲ್ಲಿ 13 ರನ್‌ ನೀಡಿ 2 ವಿಕೆಟ್‌ ಪಡೆದಿದ್ದಾರೆ. ಬೌಲಿಂಗ್‌ ಶೈಲಿ ಮತ್ತು ಸ್ವಿಂಗ್‌ ಇವರ ಪ್ರಮುಖ ಅಸ್ತ್ರಗಳು.

ಈವರೆಗೆ ಮವಿ ಐಪಿಎಲ್‌ನಲ್ಲಿ ಒಟ್ಟು 12 ಪಂದ್ಯಗಳಿಂದ 9 ವಿಕೆಟ್‌ ಪಡೆದಿದ್ದಾರೆ. ಸತತವಾಗಿ ಗಂಟೆಗೆ 140 ಕಿ.ಮೀ. ವೇಗದಲ್ಲಿ ಬೌಲಿಂಗ್‌ ಮಾಡುವ ಸಾಮರ್ಥ್ಯ ಹೊಂದಿರುವ ಇವರು ಭಾರತದ ಅಂಡರ್‌ 19 ತಂಡ 2018ರಲ್ಲಿ ವಿಶ್ವಕಪ್‌ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಂಪೂರ್ಣ ಟೂರ್ನಿಯಲ್ಲಿ 4.12ರ ಉತ್ತಮ ಎಕಾನಮಿ ರೇಟ್‌ ಹೊಂದಿದ್ದ ಮವಿ ಒಟ್ಟು ಒಂಬತ್ತು ವಿಕೆಟ್‌ ಪಡೆದಿದ್ದರು.

ಶಿವಂ ಮವಿ

ಇನ್ನು ಕಮಲೇಶ್‌ ನಾಗರಕೋಟಿ ಕೂಡಾಉತ್ತಮ ಫಾರ್ಮ್‌ನಲ್ಲಿದ್ದು, ಇವರೂ ಕೂಡಾ ಭಾರತದ ಭವಿಷ್ಯದ ವೇಗಿ ಎಂದೇ ಹೇಳಬಹುದು. ಸರಾಸರಿಯಾಗಿ ಗಂಟೆಗೆ 140 ಕಿ.ಮೀ. ವೇಗದಲ್ಲಿ ಬೌಲಿಂಗ್‌ ಮಾಡುವ ಇವರು ಕೂಡಾ ಅಂಡರ್‌ 19 ವಿಶ್ವಕಪ್‌ ತಂಡದಲ್ಲಿ ಆಡುವಾಗ 3.48ರ ಎಕಾನಮಿಯೊಂದಿಗೆ ಒಂಬತ್ತು ವಿಕೆಟ್‌ ಪಡೆದಿದ್ದರು.

ಕಮಲೇಶ್‌ ನಾಗರಕೋಟಿ

ಭಾರದಲ್ಲಿ ಮಧ್ಯಮ-ವೇಗಿಗಳ ಕೊರತೆಯಿಲ್ಲದಿದ್ದರೂ, ವೇಗಿಗಳ ಕೊರತೆ ಸದಾ ಕಾಡುತ್ತಲೇ ಇರುತ್ತದೆ. ಭಾರತೀಯ ಪಿಚ್‌ಗಳಲ್ಲಿ ಮಧ್ಯಮ ವೇಗಿಗಳು ಉತ್ತಮ ನಿರ್ವಹಣೆ ತೋರಿದರೂ, ಆಸ್ಟ್ರೇಲಿಯಾ, ಸೌತ್‌ ಆಫ್ರಿಕಾ ಮತ್ತು ಇಂಗ್ಲೆಂಡ್‌ನಂತಹ‌ ಪಿಚ್‌ಗಳಲ್ಲಿ ಮಧ್ಯಮ ವೇಗಿಗಳು ವಿಫಲರಾಗಿರುವ ಸಂದರ್ಭಗಳು ಸಾಕಷ್ಟಿವೆ. ಈ ನಿಟ್ಟಿನಲ್ಲಿ ಶಿವಂ ಮವಿ ಮತ್ತು ನಾಗರಕೋಟಿ ಅವರ ವೇಗವನ್ನು ಮತ್ತಷ್ಟು ಬೆಳೆಸಿದಲ್ಲಿ ಭಾರತದ ಭವಿಷ್ಯದ ಕ್ರಿಕೆಟ್‌ ತಂಡದ ಪ್ರಮುಖ ವೇಗಿಗಳಾಗುವುದರಲ್ಲಿ ಸಂಶಯವಿಲ್ಲ. ಇನ್ನು ಈಗಿರುವ ಪ್ರಮುಖ ವೇಗಿಗಳು ಗಾಯಾಳಾದಾಗ ಅವರ ಸ್ಥಾನವನ್ನು ಸಮರ್ಥವಾಗಿ ತುಂಬುವ ವಿಶ್ವಾಸವಿದೆ.

Tags: IPLkamalesh nagarakotiKKRshivam maviಐಪಿಎಲ್‌
Previous Post

ಹಾಥ್ರಸ್‌ ನಂತರ ಉತ್ತರ ಪ್ರದೇಶದಲ್ಲಿ ಮತ್ತೋರ್ವ ದಲಿತ ಯುವತಿಯ ಮೇಲೆ ಅತ್ಯಾಚಾರ

Next Post

ಅಧಿಕಾರ ಉಳಿಸಿಕೊಳ್ಳಲು ರಾಜಕೀಯ ಬಲಪ್ರದರ್ಶನಕ್ಕೆ ಮುಂದಾದ ಸಿಎಂ ಯಡಿಯೂರಪ್ಪ

Related Posts

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು
Uncategorized

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

by ಪ್ರತಿಧ್ವನಿ
November 17, 2025
0

ಬೆಂಗಳೂರು: ಸಿಲಿಕಾನ್ ಸಿಟಿಯ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಮಹಿಳೆ ಸೈಬರ್ ವಂಚನೆ ಬಲೆಗೆ ಬಿದ್ದಿದ್ದು, ಬರೋಬ್ಬರಿ 31.83 ಕೋಟಿ ಹಣ ಕಳೆದುಕೊಂಡಿದ್ದಾರೆ. ಇದು ದೇಶದಲ್ಲಿ ಅತಿದೊಡ್ಡ ಸೈಬರ್...

Read moreDetails

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

November 9, 2025
DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

November 6, 2025
ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

October 30, 2025
Next Post
ಅಧಿಕಾರ ಉಳಿಸಿಕೊಳ್ಳಲು ರಾಜಕೀಯ ಬಲಪ್ರದರ್ಶನಕ್ಕೆ ಮುಂದಾದ ಸಿಎಂ ಯಡಿಯೂರಪ್ಪ

ಅಧಿಕಾರ ಉಳಿಸಿಕೊಳ್ಳಲು ರಾಜಕೀಯ ಬಲಪ್ರದರ್ಶನಕ್ಕೆ ಮುಂದಾದ ಸಿಎಂ ಯಡಿಯೂರಪ್ಪ

Please login to join discussion

Recent News

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada