• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕರೋನಾ ಸೋಂಕು ಹೆಚ್ಚಳ: ಮತ್ತೆ ಲಾಕ್‌ಡೌನ್ ಮೊರೆ ಹೋಗುತ್ತಾ ಕೇಂದ್ರ

by
June 14, 2020
in ದೇಶ
0
ಕರೋನಾ ಸೋಂಕು ಹೆಚ್ಚಳ: ಮತ್ತೆ ಲಾಕ್‌ಡೌನ್ ಮೊರೆ ಹೋಗುತ್ತಾ ಕೇಂದ್ರ
Share on WhatsAppShare on FacebookShare on Telegram

ದೇಶದಲ್ಲಿ ಕರೋನಾ ಸೋಂಕು ಸತತ ಎರಡನೇ ದಿನ 11 ಸಾವಿರ ಜನರಿಗೆ ಹರಡಿದೆ. ಜೂನ್‌ ಮಧ್ಯಂತರದಲ್ಲಿ ಪ್ರತಿದಿನ 16 ಸಾವಿರಕ್ಕೆ ಹೋಗಲಿದೆ ಎಂದು ತಜ್ಞರು ಭಾರತವನ್ನು ಈಗಾಗಲೇ ಎಚ್ಚರಿಸಿದ್ದಾರೆ. ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ಒಂದು ಅಂದಾಜು ಸೋಂಕಿತರ ಲೆಕ್ಕಾಚಾರ ಈಗಾಗಲೇ ಲಭ್ಯವಾಗಿದ್ದು, ಪರಿಸ್ಥಿತಿ ನಿಭಾಯಿಸಲು ಸಜ್ಜಾಗುವಂತೆ ಕೇಂದ್ರ ಸರ್ಕಾರದಿಂದ ಸಂದೇಶ ರವಾನೆಯಾಗಿದೆ. ಜೊತೆಗೆ ಶನಿವಾರ ಕೇಂದ್ರ ಆರೋಗ್ಯ ಸಚಿವರು ಮತ್ತೊಂದು ಮಾಹಿತಿ ಹೊರ ಹಾಕಿದ್ದು, ವಾಸನೆಯನ್ನು ಗ್ರಹಿಸುವ ಶಕ್ತಿ ಹಾಗೂ ರುಚಿಯನ್ನು ಪತ್ತೆ ಮಾಡುವ ಶಕ್ತಿ ಕಳೆದುಕೊಂಡರೂ ಕರೋನಾ ಸೋಂಕು ಬಂದಿದೆ ಎಂದರ್ಥ ಎಂದಿದ್ದಾರೆ.

ADVERTISEMENT

ಸಚಿವರೊಂದಿಗೆ ಪ್ರಧಾನಿ ಮೋದಿ ತುರ್ತು ಸಭೆ..!

ಕರೋನಾ ನಿಯಂತ್ರಣ ಮಾಡಲಾದೆ ದೇಶದಲ್ಲಿ ಸೋಂಕಿತರ ಸಂಖ್ಯೆ ಮಿತಿಮೀರಿ ಹೋಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ನಡೆಸಿದ್ದಾರೆ. ದೇಶದಲ್ಲಿ ಕರೋನಾ ಸೋಂಕು ಉಲ್ಬಣವಾಗುತ್ತಿದ್ದು, ನಿಯಂತ್ರಣ ಮಾಡಲು ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎನ್ನುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರದ ಹಿರಿಯ ಸಚಿವರ ಜೊತೆಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಸಂಪುಟದ ಹಿರಿಯ ಸಚಿವರು ಮತ್ತು ಪ್ರಮುಖ ಅಧಿಕಾರಿಗಳು ಭಾಗಿಯಾಗಿದೆ. ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಮೋದಿ ಚರ್ಚೆ ನಡೆಸಿದ್ದಾರೆ. ಕರೋನಾ ಹರಡುವಿಕೆ ಬಗ್ಗೆ ಸಭೆಯಲ್ಲಿ ಪರಿಶೀಲನೆ ನಡೆಸಿದ್ದು, ರಾಜ್ಯಗಳ ಮಟ್ಟದಲ್ಲಿ ಈಗ ಏನೇನು ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗಿದೆ.

ದೇಶದ ಮೂರನೇ ಎರಡು ಭಾಗದಷ್ಟು ಕರೋನಾ ಸೋಂಕಿನ ಪ್ರಕರಣಗಳು ಕೇವಲ 5 ರಾಜ್ಯಗಳಲ್ಲಿವೆ. ದೊಡ್ಡ ದೊಡ್ಡ ನಗರಗಳಲ್ಲಿ ಹೆಚ್ಚು ಪ್ರಕರಣಗಳಿವೆ. ಈ ಸಮಸ್ಯೆ ಬಗೆಹರಿಸಲು ಏನು ಮಾಡಬೇಕು..? ಎನ್ನುವ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ. ಕರೋನಾ ಪರೀಕ್ಷೆಯನ್ನು ಹೆಚ್ಚಿಸಲು ಏನು ಮಾಡಬೇಕು..? ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಹೆಚ್ಚಳ ಮತ್ತು ಆರೋಗ್ಯ ಸೇವೆ ಹೆಚ್ಚಿಸಲು ಏನು ಕ್ರಮ ಕೈಗೊಳ್ಳಬೇಕು? ಎನ್ನುವ ಬಗ್ಗೆಯೂ ಮಾಹಿತಿ ಸಂಗ್ರಹ ಮಾಡಿಕೊಳ್ಳಲಾಗಿದೆ.

ದೆಹಲಿಯಲ್ಲಿ ಪ್ರತಿಯೊಬ್ಬರ ತಪಾಸಣೆಗೆ ನಿರ್ಧಾರ..!

ದೆಹಲಿಯಲ್ಲಿ ಜುಲೈ ಅಂತ್ಯದ ವೇಳೆಗೆ ಐದೂವರೆ ಲಕ್ಷ ಜನರಿಗೆ ಸೋಂಕು ಹರಡಲಿದೆ ಎನ್ನುವ ಲೆಕ್ಕಾಚಾರಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ ದೆಹಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ದೆಹಲಿಯ ಪ್ರತಿಯೊಬ್ಬ ಪ್ರಜೆಯನ್ನೂ ತಪಾಸಣೆಗೆ ಒಳಪಡಿಸಲು ನಿರ್ಧಾರ ಮಾಡಿದೆ. 60 ಸಾವಿರ ಹಾಸಿಗೆಗಳನ್ನು ಸಿದ್ಧ ಮಾಡಿಟ್ಟುಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ. ಇನ್ನೂ ಆಸ್ಪತ್ರೆಗಳಲ್ಲಿ ಹಾಸಿಗೆ ಇಲ್ಲದೆ ಚಿಕಿತ್ಸೆ ಸಿಗದೆ ಇರಬಹುದು ಎನ್ನುವ ಕಾರಣಕ್ಕೆ ಹಣವಂತರ ತಮ್ಮ ಮನೆಗಳಲ್ಲೇ ವೈದ್ಯಕೀಯ ಸೌಲಭ್ಯ ಸಿಗುವಂತೆ ಮಾಡಿಸಿಟ್ಟುಕೊಳ್ಳುತ್ತಿದ್ದಾರೆ ಎನ್ನುವುದು ಗಾಬರಿ ಹುಟ್ಟಿಸುವಂತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯಲ್ಲಿ ಚರ್ಚೆ ನಡೆದಿದ್ದು, ಮುಂದಿನ 2 ತಿಂಗಳ ಅವಧಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಜೊತೆಗೆ ತುರ್ತು ಸಭೆ ನಡೆಸಲು ಪ್ರಧಾನಮಂತ್ರಿ ಸೂಚನೆ ಕೊಟ್ಟಿದ್ದಾರೆ.

ಪ್ರಧಾನಿಯವರು ಮುಖ್ಯಮಂತ್ರಿಗಳ ಸಭೆ ಕರೆದಿದ್ದು ಯಾಕೆ..?

ಜೀವ ಹಾಗೂ ಜೀವನ ಎರಡು ಆಯ್ಕೆಯಲ್ಲಿ ನಮ್ಮ ಆಯ್ಕೆ ಜೀವ ಆಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ಆ ಬಳಿಕ ಜೀವ ಹೋದರೂ ಪರವಾಗಿಲ್ಲ ಎನ್ನುವಂತೆ ಜೀವನವನ್ನು ಆಯ್ಕೆ ಮಾಡಿಕೊಂಡರು. ವಿಡಿಯೋ ಕಾನ್ಫರೆನ್ಸ್ ಮೂಲಕ ಜೂನ್‌ 16 ಹಾಗೂ 17ರಂದು ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. ಜೂನ್‌ 16ರಂದು 21 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಹಾಗೂ ಜೂನ್‌ 17ರಂದು 15 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಸದ್ಯ ಕರೋನಾ ಹರಡುವಿಕೆಯ ಪ್ರಮಾಣ ಹಾಗೂ ಅನ್‌ಲಾಕ್‌ ಜಾರಿಯಾಗುತ್ತಿರುವ ರೀತಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಕರ್ನಾಟಕದ ಸಿಎಂ ಯಡಿಯೂರಪ್ಪ ಜೊತೆ 17ರಂದು ಮಧ್ಯಾಹ್ನ 3 ಗಂಟೆಗೆ ಚರ್ಚೆ ನಡೆಸಲಿದ್ದಾರೆ.

ಚೀನಾ ದೇಶವನ್ನೇ ಫಾಲೋ ಮಾಡುತ್ತಾ ಭಾರತ..!?

ಚೀನಾದಲ್ಲಿ ಮತ್ತೆ ಕರೋನಾ ಸೋಂಕು ಉಲ್ಬಣಿಸುತ್ತಿದೆ. ಹಾಗಾಗಿ ಚೀನಾ ಸರ್ಕಾರ ಲಾಕ್‌ಡೌನ್‌ ಮೊರೆ ಹೋಗಿದೆ. ಚೀನಾ ರಾಜಧಾನಿ ಬೀಜಿಂಗ್ ನಗರದ ಕೆಲವು ಪ್ರದೇಶಗಳನ್ನು ಲಾಕ್‌ಡೌನ್‌ ಮಾಡಲಾಗಿದೆ. ವುಹಾನ್‌ ನಗರದಲ್ಲಿ ಲಾಕ್‌ಡೌನ್‌ ಅಸ್ತ್ರ ಬಳಕೆ ಕರೋನಾ ಸೋಂಕು ನಿಯಂತ್ರಿಸಲು ಸಹಕಾರಿಯಾಗಿತ್ತು. ಇದೀಗ ಚೀನಾ ಮತ್ತೆ ಲಾಕ್‌ಡೌನ್‌ ಮೊರೆ ಹೋಗಿದೆ. ಚೀನಾ ದೇಶವನ್ನೇ ಭಾರತ ಫಾಲೋ ಮಾಡುತ್ತಾ ಎನ್ನುವ ಅಭಿಪ್ರಾಯ ಜನರಲ್ಲಿ ಮೂಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ನಡೆಸಿರುವುದು. ಮುಖ್ಯಮಂತ್ರಿಗಳ ಸಭೆ ನಿಗದಿ ಮಾಡಿರುವುದು ಎಲ್ಲವನ್ನು ಜನರು ನೋಡುತ್ತಿರುವ ಕಾರಣ ಲಾಕ್‌ಡೌನ್‌ ಜಾರಿ ಮಾಡಬಹುದಾ..? ಎನ್ನು ಊಹೆ ಮಾಡಲಾಗ್ತಿದೆ.

ಲಾಕ್‌ಡೌನ್‌ ಜಾರಿ ಮಾಡಿದರೂ ಅಚ್ಚರಿಯೇನಿಲ್ಲ..!?

ಭಾರತದಲ್ಲಿ ಮಾರ್ಚ್‌ 24ರಂದು ಏಕಾಏಕಿ ಲಾಕ್‌ಡೌನ್‌ ಜಾರಿ ಮಾಡಿದ್ದೇ ಕರೋನಾ ಸೋಂಕು ಇಷ್ಟು ಪ್ರಮಾಣದಲ್ಲಿ ಹರಡಲು ಕಾರಣವಾಯ್ತು ಎನ್ನುವ ಮಾತು ತಜ್ಞರ ವಯಲಯದಲ್ಲಿ ಕೇಳಿ ಬಂದಿದೆ. ಅದೂ ಸತ್ಯವೂ ಹೌದು. ವಲಸೆ ಕಾರ್ಮಿಕರನ್ನು ಹುಟ್ಟೂರುಗಳಿಗೆ ತೆರಳಲು ಅವಕಾಶ ಕೊಟ್ಟು ನಂತರ ಲಾಕ್‌ಡೌನ್‌ ಜಾರಿ ಮಾಡಿದ್ದರೆ, ಇಷ್ಟೊಂದು ಪ್ರಮಾಣದಲ್ಲಿ ಸೋಂಕು ಹರಡುತ್ತಿರಲಿಲ್ಲ. ಕೇವಲ 600ರ ಒಳಗೆ ಸೋಂಕಿತರು ಇದ್ದರು. ಅದರು 5 ಸಾವಿರಕ್ಕೆ ಏರಿಕೆ ಆದರೂ ಜನಸಾಂದ್ರತೆ ಹಾಗೂ ಕಾರ್ಮಿಕರ ಸಂಕಷ್ಟ ಕಡಿಮೆ ಆಗುತ್ತಿದ್ದ ಕಾರಣ ಜನರಿಗೆ ಹರಡುವುದನ್ನು ತಡೆಯಬಹುದಾಗಿತ್ತು. ಆದರೆ, ಪ್ರಧಾನಿ ಮೋದಿ ಯಾವುದಕ್ಕೂ ಅವಕಾಶ ಕೊಡದೆ ಕೇವಲ 4 ಗಂಟೆ ಅವಧಿಯಲ್ಲಿ ಲಾಕ್‌ಡೌನ್‌ ಜಾರಿ ಮಾಡಿದ್ದು, ಭಾರೀ ಪ್ರಮಾಣದ ಸೋಂಕಿಗೆ ಕಾರಣವಾಗಿದೆ. ಇದೀಗ ವಲಸೆ ಕಾರ್ಮಿಕರನ್ನು ತಮ್ಮ ಹುಟ್ಟೂರುಗಳಿಗೆ ಹೋಗಲು ಅವಕಾಶ ಕೊಡಲಾಗಿದೆ. ಜನರು ಅನಿವಾರ್ಯ ಇದ್ದವರು ಮಾತ್ರ ನಗರಗಳಲ್ಲಿ ಇದ್ದಾರೆ. ಇದೀಗ ಮತ್ತೊಮ್ಮೆ ಲಾಕ್‌ಡೌನ್‌ ಜಾರಿ ಮಾಡಿ ಕರೋನಾ ನಿಯಂತ್ರಣ ಮಾಡುತ್ತಾರಾ ಎನ್ನುವ ಆಶಾಭಾವನೆ ಜನರಲ್ಲಿದೆ. ಆದರೆ ಕೇಂದ್ರ ಸರ್ಕಾರ ಜೀವ ರಕ್ಷಣೆ ಬಿಟ್ಟು ಜೀವನದ ಕಡೆಗೆ ಮುಖ ಮಾಡಿ. ಹಾಗಾಗಿ ಮತ್ತೊಮ್ಮೆ ಲಾಕ್‌ಡೌನ್‌ ಮೊರೆ ಹೋಗುವುದು ಕಷ್ಟಸಾಧ್ಯ ಎನ್ನುತ್ತಿದ್ದಾರೆ ಆರ್ಥಿಕ ತಜ್ಞರು.

Tags: Central Govtcoronavirusindia lockdownಕರೋನಾ ಸೋಂಕುಕೇಂದ್ರ ಸರ್ಕಾರಲಾಕ್‌ಡೌನ್‌
Previous Post

ನೇಪಾಳ ಸಂಸತ್‌ ನಲ್ಲಿ ಭಾರತ ಪ್ರದೇಶಗಳನ್ನ ಒಳಗೊಂಡ ನೂತನ ಮಸೂದೆ ಮಂಡನೆ

Next Post

ನೇಪಾಳದಿಂದ ಗುಂಡಿನ ದಾಳಿ: ನೆಟ್ಟಿಗರಿಂದ ಪತಂಜಲಿ ಬಹಿಷ್ಕಾರಕ್ಕೆ ಟ್ವಿಟರ್ ಆಂದೋಲನ

Related Posts

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
0

ಬೆಂಗಳೂರು: ದೇಶದಲ್ಲೇ ಸಂಚಲನ ಮೂಡಿಸಿದ್ದ 400 ಕೋಟಿ ರೂಪಾಯಿ ಕಂಟೇನರ್ ದರೋಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಮುಖ ಆರೋಪಿ ಕಿಶೋರ್ ಸಾವ್ಲಾ ನಾಸಿಕ್ ಗ್ರಾಮೀಣ ಪೊಲೀಸರಿಗೆ...

Read moreDetails
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Next Post
ನೇಪಾಳದಿಂದ ಗುಂಡಿನ ದಾಳಿ: ನೆಟ್ಟಿಗರಿಂದ ಪತಂಜಲಿ ಬಹಿಷ್ಕಾರಕ್ಕೆ ಟ್ವಿಟರ್ ಆಂದೋಲನ

ನೇಪಾಳದಿಂದ ಗುಂಡಿನ ದಾಳಿ: ನೆಟ್ಟಿಗರಿಂದ ಪತಂಜಲಿ ಬಹಿಷ್ಕಾರಕ್ಕೆ ಟ್ವಿಟರ್ ಆಂದೋಲನ

Please login to join discussion

Recent News

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada