ಕರೋನಾ ವಿರುದ್ದದ ಹೋರಾಟದಲ್ಲಿ ಬೆಂಗಳೂರಿನ ನಾಗರಿಕರು ಪಾಲ್ಗೊಳ್ಳುವ ಅವಕಾಶವನ್ನು ಸಿಎಂ ಯಡಿಯೂರಪ್ಪನವರು ಘೋಷಿಸಿದ್ದಾರೆ. ಸದ್ಯದ ಮಟ್ಟಿಗೆ ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿರುವ ಸೋಂಕನ್ನು ತಡೆಗಟ್ಟಲು ಹಲವು ಪ್ರದೇಶಗಳಲ್ಲಿ ಸೀಲ್ಡೌನ್ ಮಾಡಲಾಗಿದೆ. ಅಂತಹ ಪ್ರದೇಶಗಳಲ್ಲಿ ಸೀಲ್ಡೌನ್ ಅಥವಾ ಹೋಮ್ ಕ್ವಾರೆಂಟೈನ್ ಅನ್ನು ಬಿಗಿಗೊಳಿಸಲು ಸ್ವಯಂ ಸೇವಕರಾಗಿ ಸರ್ಕಾರದೊಂದಿಗೆ ಕೈಜೋಡಿಸುವ ಅವಕಾಶವಿದೆ.
ಈ ವಿಚಾರವಾಗಿ ಗುರುವಾರ ಮುಂಜಾನೆ ಕ್ಯಾಬಿನೆಟ್ ಮೀಟಿಂಗ್ಗೂ ಮುಂಚೆ ಟ್ವೀಟ್ ಮಾಡಿರುವ ಸಿಎಂ ಬಿ ಎಸ್ ಯಡಿಯೂರಪ್ಪ,ನಾಗರಿಕರು ಸರ್ಕಾರದ ಹೋರಾಟದೊಂದಿಗೆ ಜತೆಯಾಗಲು ಸ್ವಯಂಪ್ರೇರಿತರಾಗಿ ನೋಂದಾಯಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೈಜೋಡಿಸಬಹುದು, ಎಂದು ಹೇಳಿದ್ದಾರೆ.
ಬೆಂಗಳೂರಿನ ಸಮಸ್ತ ನಾಗರಿಕ ಬಂಧುಗಳಲ್ಲಿ ಮನವಿ
ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಸಹ ಕಾರ್ಯ ನಿರ್ವಹಿಸಬಹುದು. 1/2
— CM of Karnataka (@CMofKarnataka) June 25, 2020
ಬಿಬಿಎಂಪಿ ಅಡಿಯಲ್ಲಿ ಕಾರ್ಯ ನಿರ್ವಹಿಸುವ ʼಕ್ವಾರೆಂಟೈನ್ ಸ್ಕ್ವಾಡ್ʼ ಗೆ ಸ್ವಯಂ ಸೇವಕರಾಗಿ ಬೆಂಗಳೂರಿನ ನಾಗರಿಕರು ಸೇರಬಹುದಾಗಿದೆ. ತಮ್ಮ ಹೆಸರನ್ನು ನೋದಾಯಿಕೊಳ್ಳಲು ಇಚ್ಚಿಸುವವರು ಈ ಲಿಂಕ್ ಗೆ ಕ್ಲಿಕ್ ಮಾಡಬಹುದು.
