• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದಲ್ಲಿ ಬಿಜೆಪಿ ಆಡಳಿತವಿದ್ದರೂ ಅನುದಾನ ಬಿಡುಗಡೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ

by
February 25, 2020
in ಕರ್ನಾಟಕ
0
ಕರ್ನಾಟಕದಲ್ಲಿ ಬಿಜೆಪಿ ಆಡಳಿತವಿದ್ದರೂ ಅನುದಾನ ಬಿಡುಗಡೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ
Share on WhatsAppShare on FacebookShare on Telegram

ಕೇಂದ್ರದಲ್ಲಿ ಒಂದು ಪಕ್ಷ ರಾಜ್ಯದಲ್ಲಿ ಒಂದು ಪಕ್ಷ ಅಧಿಕಾರದಲ್ಲಿ ಇದ್ದರೆ ಕೇಂದ್ರ ಸರ್ಕಾರ ನಮಗೆ ಅನುದಾನ ಕೊಡುವುದರಲ್ಲಿ ತಾರತಮ್ಯ ಮಾಡಿದರೆ ಕೇಂದ್ರದ ವಿರುದ್ಧ ನಿಯೋಗ ಕೊಂಡೊಯ್ಯಬಹುದು. ನಮಗೆ ನ್ಯಾಯಯುತವಾಗಿ ಬರಬೇಕಾದ ರಾಜ್ಯದ ಪಾಲನ್ನು ಕೊಡಲೇಬೇಕು ಎಂದು ಪಟ್ಟು ಹಿಡಿದು ಕುಳಿತುಕೊಳ್ಳಬಹುದು. ಆದರೆ ಕೇಂದ್ರ ಹಾಗು ರಾಜ್ಯದಲ್ಲಿ ಎರಡೂ ಕಡೆ ಒಂದೇ ಪಕ್ಷ ಅಧಿಕಾರಲ್ಲಿ ಇದ್ದರೆ, ಏನನ್ನೂ ಕೇಳುವಂತಿಲ್ಲ. ಸ್ವಲ್ಪ ಜೋರಾಗಿ ಕೇಳಿದರೂ ಮುಂದಿನ ದಿನಗಳಲ್ಲಿ ಸಂಕಷ್ಟ ಕಟ್ಟಿಟ್ಟ ಬುತ್ತಿ. ಇದೀಗ ರಾಜ್ಯ ಸರ್ಕಾರ ಕೂಡ ಇದೇ ಪರಿಸ್ಥಿತಿಗೆ ಸಿಲುಕಿ ವಿಲವಿಲನೆ ಒದ್ದಾಡುತ್ತಿದೆ.

ADVERTISEMENT

ಕೇಂದ್ರದಿಂದ ಸರಿಯಾಗಿ ರಾಜ್ಯಕ್ಕೆ ಅನುದಾನ ಬರ್ತಿಲ್ಲ. ಎಂದು ಮೊನ್ನೆ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದರು. ಸದನದಲ್ಲಿ ತೆರಿಗೆ ಹಣದ ಬಗ್ಗೆ ಪ್ರಸ್ತಾಪ ಮಾಡಿದ್ದ ಸಿದ್ದರಾಮಯ್ಯ, ಕೇಂದ್ರದಿಂದ ಬರಬೇಕಿದ್ದ ಜಿಎಸ್
ಟಿ ಪಾಲು ರಾಜ್ಯಕ್ಕೆ ಬರುತ್ತಿಲ್ಲ. ಪ್ರತೀ ವರ್ಷ ತೆರಿಗೆ ಪಾಲು ಬರೋದು ಕಡಿತವಾಗಿದೆ. ಕೇಂದ್ರ ಸರ್ಕಾರದ ನೆರವಿಲ್ಲದೇ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಪ್ರಶ್ನೆ ಮಾಡಿದ್ರು. ಕೇಂದ್ರ ಸರ್ಕಾರ ಕರ್ನಾಟಕವನ್ನು ಮರೆತಂತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕುಟುಕಿದರು. ಸಿಎಂ ಹಾಗೂ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಪ್ರಶ್ನೆ ಎದುರಾಗುತ್ತಿದ್ದಂತೆ, ಬಿಜೆಪಿ ನಾಯಕರು ಏನೂ ಆಗಿಯೇ ಇಲ್ಲವೇನೋ ಎಂಬಂತೆ ಕೇಂದ್ರ ಸರ್ಕಾರದ ಪರವಾಗಿ ಮಾತನಾಡಿದ್ದರು.

ಕೇಂದ್ರದಿಂದ ರಾಜ್ಯಕ್ಕೆ ಯಾವ ಯಾವ ರೀತಿ ಅನ್ಯಾಯವಾಗ್ತಿದೆ ಎನ್ನುವುದನ್ನು ಬಿಚ್ಚಿಟ್ಟಿದ್ದ ಸಿದ್ದರಾಮಯ್ಯ, ಕಳೆದ ಬಾರಿ 39 ಸಾವಿರದ 591 ಕೋಟಿ ಕೇಂದ್ರದಿಂದ ಅನುದಾನ ನಿಗದಿ ಆಗಿತ್ತು. ಆದ್ರೆ ಕೇಂದ್ರ ಸರ್ಕಾರ ಕೊಟ್ಟಿರುವುದು 28 ಸಾವಿರದ 591 ಕೋಟಿ ಹಣ ಮಾತ್ರ. ಬರೋಬ್ಬರಿ 11 ಸಾವಿರ ಕೋಟಿ ಅನುದಾನ ಬರುವುದು ವ್ಯತ್ಯಯ ಆಗಿದೆ. ಕಳೆದ ವರ್ಷ ಭಾರಿ ಪ್ರವಾಹದಿಂದ 35 ಸಾವಿರದ 165 ಕೋಟಿ ರೂಪಾಯಿ ಹಾನಿ ಸಂಭವಿಸಿತ್ತು. 35 ಸಾವಿರದ 891 ಕೋಟಿ ಪರಿಹಾರ ಕೊಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರದಿಂದ ಇಲ್ಲಿಯವರೆಗೆ ಬಿಡುಗಡೆ ಆಗಿರುವ ಹಣ ಕೇವಲ 1 ಸಾವಿರದ 652 ಕೋಟಿ ಮಾತ್ರ, ಎಂದು ಮಾಹಿತಿ ಕೊಟ್ಟಿದ್ದಾರೆ.

ರಾಜ್ಯಕ್ಕೆ ಬರಬೇಕಿದ್ದ ಜಿಎಸ್‌ಟಿ ಹಣಕ್ಕೂ ನರೇಂದ್ರ ಮೋದಿ ಸರ್ಕಾರ ಕಲ್ಲು ಹಾಕಿದೆ ಎನ್ನಲಾಗಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಹಲವು ರಾಜ್ಯಗಳಿಗಿಂತ ಬಹಳಷ್ಟು ಮುಂದಿದ್ದು, ಕರ್ನಾಟಕಕ್ಕೆ ಬರಬೇಕಿರುವ ತೆರಿಗೆ ಪಾಲಿನಲ್ಲಿ ಕೇಲವ ಶೇಕಡ 45 ರಷ್ಟು ಮಾತ್ರಿ ತೆರಿಗೆ ಹಣ ವಾಪಸ್‌ ಬರುತ್ತಿದೆ. ಆದರೆ ಗುಜರಾತ್‌ಗೆ ಶೇಕಡ 235 ರಷ್ಟು, ಬಿಹಾರಕ್ಕೆ ಶೇಕಡ 235 ರಷ್ಟು, ಉತ್ತರ ಪ್ರದೇಶಕ್ಕೆ ಶೇಕಡ 198ರಷ್ಟು ತೆರಿಗೆ ಹಣ ಹೋಗುತ್ತಿದೆ. ನಮ್ಮ ರಾಜ್ಯದಿಂದ ಸಂಗ್ರಹವಾದ ತೆರಿಗೆಯಲ್ಲೂ ರಾಜ್ಯಕ್ಕೆ ಕನಿಷ್ಠ ಪಕ್ಷ ಸಮಪಾಲು ವಾಪಸ್‌ ಆಗುತ್ತಿಲ್ಲ. ಉತ್ತರ ಭಾರತದ ರಾಜ್ಯಗಳಿಗೆ ದುಪ್ಪಟ್ಟು ಪ್ರಮಾಣಕ್ಕಿಂತಲು ಹೆಚ್ಚಾಗಿ ನೀಡಲಾಗ್ತಿದೆ ಎಂದು ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯ ಆರೋಪಕ್ಕೆ ಸದನದಿಂದ ಹೊರಗೆ ಉತ್ತರ ಕೊಟ್ಟಿರುವ ಸಿಎಂ ಬಿ.ಎಸ್‌ ಯಡಿಯೂರಪ್ಪ, ಅನುದಾನ ತಾರತಮ್ಯದ ಬಗೆ ಗಮನ ಹರಿಸಲಾಗುವುದು ಎಂದಿದ್ದಾರೆ. ಜೊತೆಗೆ ತಾರತಮ್ಯ ಆಗಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಹಣಕಾಸು ಇಲಾಖೆ ಆಯುಕ್ತರು ಪತ್ರ ಬರೆದಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಈ ಬಗ್ಗೆ ಮಾತನಾಡಿ 15ನೇ ಹಣಕಾಸು ಹಂಚಿಕೆಯಲ್ಲಿ ಕೇಂದ್ರ ತಾರತಮ್ಯ ವಿಚಾರ, ಮುಂದಿನ ದಿನಗಳಲ್ಲಿ ಇದು ಸರಿಯಾಗಲಿದೆ ಎನ್ನುವ ಮೂಲಕ ಸದ್ಯ ಆಗಿರುವುದು ಸತ್ಯ ಎನ್ನುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ತಾರತಮ್ಯವನ್ನು ಒಪ್ಪಿಕೊಂಡಿದ್ದಾರೆ. ಕಳೆದ 6 ವರ್ಷದಿಂದ ಕೇಂದ್ರ ಸರ್ಕಾರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಉತ್ತರ ಭಾರತದ ರಾಜ್ಯಗಳಿಗೆ ಮಣೆ ಹಾಕಿರುವುದು ಸಿದ್ದರಾಮಯ್ಯ ಹಾಗು ಉಳಿದ ನಾಯಕರ ಮಾತುಗಳಲ್ಲಿ ಸಾಬೀತಾಗಿದೆ.

Tags: ಕರ್ನಾಟಕಬಿಜೆಪಿ ಆಡಳಿತಮಲತಾಯಿ ಧೋರಣೆ
Previous Post

So called ʼಗುಜರಾತ್‌ ಮಾಡೆಲ್‌ʼನ ಹಿಂದಿನ ಅಸಲಿಯತ್ತು

Next Post

ದೆಹಲಿ ಹಿಂಸಾಚಾರ: ಸಿಎಎ ಪರ ಹೋರಾಟ ಎಂದರೆ ಏನು?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ದೆಹಲಿ ಹಿಂಸಾಚಾರ: ಸಿಎಎ ಪರ ಹೋರಾಟ ಎಂದರೆ ಏನು?

ದೆಹಲಿ ಹಿಂಸಾಚಾರ: ಸಿಎಎ ಪರ ಹೋರಾಟ ಎಂದರೆ ಏನು?

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada