• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್‌ನ ಸಮನ್ವಯ ಸೂತ್ರ ಪಾಲಿಸುತ್ತಾ ಸರ್ಕಾರ..?

by
April 20, 2020
in ಕರ್ನಾಟಕ
0
ಕಾಂಗ್ರೆಸ್‌ನ ಸಮನ್ವಯ ಸೂತ್ರ ಪಾಲಿಸುತ್ತಾ ಸರ್ಕಾರ..?
Share on WhatsAppShare on FacebookShare on Telegram

ಕರೋನಾ ಸೋಂಕಿನಿಂದ ಬಳಲುತ್ತಿರುವ ರಾಜ್ಯ ಸರ್ಕಾರಕ್ಕೆ ಸಮನ್ವಯ ಸೂತ್ರಗಳನ್ನು ಕಾಂಗ್ರೆಸ್‌ ನೀಡಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೊತೆಗಿನ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ರಾಜ್ಯ ಸರ್ಕಾರದ ಹುಳುಕು ಎತ್ತಿ ತೋರಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಿದ್ಧಪಡಿಸಿದ್ದ ವರದಿಯನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರ ಮಾಡಿದ್ದಾರೆ. ಆ ಬಳಿಕ ಮಾತನಾಡಿದ ಕಾಂಗ್ರೆಸ್ ಮುಖಂಡರು, ಕರೋನಾ ಸೋಂಕು ಹೋಗಲಾಡಿಸಲು ಒಗ್ಗಟ್ಟಿನ ಹೋರಾಟ ಅನಿವಾರ್ಯ. ನಾವು ಕಾಂಗ್ರೆಸ್ ಪಕ್ಷದವರಾದರೂ ರಾಜಕೀಯ ಮಾಡುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ ಸಮನ್ವಯತೆ ಇಲ್ಲದಂತಾಗಿದೆ. ಸಮನ್ವಯತೆ ಸಾಧಿಸಿ ಹೋರಾಟ ಮಾಡುವಂತೆ ಸಲಹೆ ನೀಡಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷ ನೀಡಿರುವ ಸಲಹೆಯನ್ನು ರಾಜ್ಯ ಸರ್ಕಾರ ಪಾಲಿಸುತ್ತಾ ಎನ್ನುವುದೇ ಇದೀಗ ಎದುರಾಗಿರುವ ಕೌತುಕ.ಕಾಂಗ್ರೆಸ್ ಕೊಟ್ಟ ವರದಿಯಲ್ಲಿ ಏನೇನಿದೆ..?

ADVERTISEMENT
  • ಕರೋನಾ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ

  • ಆರ್ಥಿಕ ಸಹಾಯ ನೀಡಲು ಕೇಂದ್ರಕ್ಕೆ ಒತ್ತಾಯಿಸಿ

  • ಪ್ರತಿ 10 ಲಕ್ಷ ಜನರಲ್ಲಿ 10 ಸಾವಿರ ಜನರಿಗೆ ಟೆಸ್ಟ್

  • ಪ್ರತಿ ಜಿಲ್ಲೆಗೊಂದರಂತೆ ಟೆಸ್ಟಿಂಗ್ ಲ್ಯಾಬ್ ನೀಡಿ

  • ರ‍್ಯಾಪಿಡ್ ಟೆಸ್ಟ್ ಕಿಟ್‌ಗಳನ್ನು ವೈದ್ಯರಿಗೆ ಒದಗಿಸಿ

  • ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ ಕೊಡಿ

  • ರೆಡ್ ಜೋನ್‌ಗಳಲ್ಲಿ ಸೀಲ್‌ಡೌನ್‌ ಕಟ್ಟುನಿಟ್ಟಾಗಲಿ

  • ಕರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು ವಿಮೆ ಶ್ಲಾಘನೀಯ

  • ಕರೋನಾ ವಿಚಾರದಲ್ಲಿ ಸಮುದಾಯವನ್ನು ಟಾರ್ಗೆಟ್ ಮಾಡಲಾಗುತ್ತಾ ಇದೆ

  • ನಿಮ್ಮ ಪಕ್ಷದ ಮುಖಂಡರ ಅಪಪ್ರಚಾರಕ್ಕೆ ಬ್ರೇಕ್ ಹಾಕಿ

  • ಸೋಶಿಯಲ್ ಮೀಡಿಯಾ ಪ್ರಚೋದನೆ ವಿರುದ್ಧ ಕ್ರಮ ಅಗತ್ಯ

  • ಪ್ರಚೋದನೆ ಆರೋಪಿ ವಿರುದ್ಧ ಕ್ರಮಕೈಗೊಂಡ ಅಧಿಕಾರಿಗೆ ರಜೆ ಕೊಟ್ಟಿದ್ದು ತಪ್ಪು

  • ಸರ್ಕಾರದ ಆಹಾರದ ಕಿಟ್ ಮೇಲೆ ತಮ್ಮ ಲೇಬಲ್ ಹಾಕಿದ್ದು ತಪ್ಪು

  • ಸರ್ಕಾರದ ಅನುದಾನದಲ್ಲಿ ತಾರತಮ್ಯ ಆಗುತ್ತಿದೆ ಸರಿಪಡಿಸಿ

  • ನರೇಗಾ ಯೋಜನೆಯಡಿಲ್ಲಿ ಕಾರ್ಮಿಕರಿಗೆ ಕೆಲಸ ಕಲ್ಪಿಸಿ

  • ಅಸಂಘಟಿತ ವಲಯ ಕಾರ್ಮಿಕರಿಗೆ ಮಾಸಿಕ ₹10,000 ಸಹಾಯ ಧನ ನೀಡಿ

ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು, ರೋಗ ಹರಡುವಿಕೆ ರಾಜ್ಯ ಹಾಗೂ ರಾಷ್ಟ್ರದಲ್ಲಿ ಏರುಮುಖವಾಗಿದೆಯೇ ಹೊರತು ನಿಯಂತ್ರಣಕ್ಕೆ ಬರುತ್ತಿರುವ ಲಕ್ಷಣ ಕಾಣಿಸುತ್ತಿಲ್ಲ. WHO ನೀಡಿರುವ ಮಾರ್ಗಸೂಚಿ ಪ್ರಕಾರ ಕರೋನಾ ರೋಗ ನಿಯಂತ್ರಣಕ್ಕೆ 10 ಲಕ್ಷ ಜನಸಂಖ್ಯೆಗೆ 10 ಸಾವಿರ ಜನರನ್ನು ಪರೀಕ್ಷೆ ಮಾಡಬೇಕು. ಆದರೆ ನಮ್ಮ ರಾಜ್ಯದಲ್ಲಿ ಪ್ರತಿ 10 ಲಕ್ಷ ಜನರಿಗೆ ಕೇವಲ 152 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕರೋನಾ ರೋಗ ಪರೀಕ್ಷೆಗೆ ರ‍್ಯಾಪಿಡ್ ಟೆಸ್ಟ್ ಕಿಟ್‍ಗಳು ಹಾಗೂ ಪಿ.ಸಿ.ಆರ್. ಮೆಷಿನ್‍ಗಳ ಕೊರತೆಯಾಗಿವೆ. ಮತ್ತೊಂದು ಕಡೆ ವೈದ್ಯರ, ನರ್ಸ್ ಹಾಗೂ ಇನ್ನಿತರ ವೈದ್ಯಕೀಯ ಸಿಬ್ಬಂದಿಗಳಿಗೆ ಅತ್ಯವಶ್ಯಕವಾಗಿರುವ ಮಾಸ್ಕ್, ಗ್ಲೌಸ್, ಸ್ಯಾನಿಟೈಜರ್, PPE ಕಿಟ್‌ಗಳ ಕೊರತೆಯಾಗಿದೆ. ರಾಜ್ಯಕ್ಕೆ ಒಟ್ಟು 12 ಲಕ್ಷ ಕಿಟ್‍ಗಳ ಅಗತ್ಯವಿದ್ದು ರಾಜ್ಯದಲ್ಲಿ 2,27,000 ಕಿಟ್‍ಗಳು ಮಾತ್ರ ಲಭ್ಯವಿವೆ. ಎನ್-95 ಮಾಸ್ಕ್ಗಳು ಕೇವಲ 5,46,721 ಮಾತ್ರ ಲಭ್ಯವಿವೆ. ಹೈಡ್ರಾಕ್ಸಿ ಕ್ಲೋರಾಕ್ಸಿನ್ ಮಾತ್ರೆಗಳು ಕೇವಲ 2,79,999 ರಷ್ಟು ಲಭ್ಯವಿವೆ. ಇವೆಲ್ಲವನ್ನೂ ಸರ್ಕಾರ ಸೂಕ್ತವಾಗಿ ನಿಭಾಯಿಸಬೇಕು ಎಂದು ಎಚ್ಚರಿಸಿದ್ದಾರೆ.

ಸಭೆ ಬಳಿಕ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಗ್ಯಕ್ಕೆ ಸಂಬಂಧಪಟ್ಟಂತೆ, ರೈತರು, ಅಲ್ಪಸಂಖ್ಯಾತರಿಗೆ ಆಗುತ್ತಿರೋ ನೋವಿನ ಬಗ್ಗೆ ಮುಖ್ಯಮಂತ್ರಿ ಗಮನ ಸೆಳೆದಿದ್ದೇವೆ. ಮಕ್ಕಳ ವಿದ್ಯಾಭ್ಯಾಸ, ಅನುದಾನ ತಾರತಮ್ಯ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಸಹಕಾರ ನೀಡುತ್ತೇವೆ. ಬ್ಯಾಂಕರ್ಸ್ ಜೊತೆಯೂ ಸಭೆಗೆ ಮನವಿ ಮಾಡಿದ್ದೇವೆ. ಸಿಎಂ ನಮ್ಮ ಮನವಿ ಆಲಿಸಿ, ಸಲಹೆ ಸ್ವೀಕರಿಸಿದ್ದಾರೆ. ಸರ್ಕಾರ ಹೇಗೆ ಮುನ್ನಡೆಯುತ್ತೋ ನೋಡೋಣ. ಈ ಸಮಯದಲ್ಲಿ ಸರ್ಕಾರ ರಾಜಕಾರಣ ಮಾಡುತ್ತಿದೆ. ಆದ್ರೆ ನಾವು ರಾಜಕಾರಣ ಮಾಡಲ್ಲ ಎಂದಿದ್ದಾರೆ.

ರಾಜ್ಯ ಸರ್ಕಾರದ ಸಚಿವರಲ್ಲಿ ಸಾಕಷ್ಟು ಗೊಂದಲಗಳಿವೆ. ಒಬ್ಬೊಬ್ಬರು ಒಂದೊಂದು ರೀತಿ ಹೇಳ್ತಿದ್ದಾರೆ. ಇದು ಗೊಂದಲ ಉಂಟು ಮಾಡಿದೆ. ಆರೋಗ್ಯ ಸಚಿವರು ಒಂದು ಹೇಳ್ತಾರೆ. ಮತ್ತೊಬ್ಬರು ಮತ್ತೊಂದು ರೀತಿ ಹೇಳ್ತಾರೆ ಎಂದು ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.ವ್ಯಾಪಾರಸ್ಥರು, ಕುಶಲ ಕರ್ಮಿಗಳು, ಅರ್ಚಕರು, ಹಮಾಲಿಗಳು, ಅಡುಗೆ ಕೆಲಸದವರು, ಆಟೋ ಡ್ರೈವರ್‌ಗಳು ಸೇರಿದಂತೆ ಬಡವರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ವೈದ್ಯಕೀಯ ಸಿಬ್ಬಂದಿಗೆ ಅಗತ್ಯ ಸಲಕರಣೆಗಳನ್ನು ಒದಗಿಸಬೇಕು. ಅದಕ್ಕಿಂತ ಮುಖ್ಯವಾಗಿ ರಾಜ್ಯ ಸರ್ಕಾರದ ಮಂತ್ರಿಗಳು ಕರೋನಾ ವಿಚಾರದಲ್ಲಿ ಕಚ್ಚಾಟ ನಡೆಸುತ್ತಿದ್ದು, ಕರೋನಾ ನಿಯಂತ್ರಣಕ್ಕೆ ಸರ್ಕಾರ ನಡೆಸುತ್ತಿರುವ ಹೋರಾಟ ಫಲಪ್ರದವಾಗುವುದಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡೋಣ ಎಂದೆಲ್ಲಾ ಸಲಹೆ ನೀಡಿದ್ದಾರೆ, ಇದೀಗ ರಾಜ್ಯ ಸರ್ಕಾರ ಕಾಂಗ್ರೆಸ್ ಕೊಟ್ಟ ಸಲಹೆಗಳನ್ನು ಯಾವ ರೀತಿ ಸ್ವೀಕಾರ ಮಾಡುತ್ತೆ ಎನ್ನುವುದನ್ನು ಕಾದು ನೋಡ್ಬೇಕು.

Tags: B S YediyurappaBJPD K Shivakumarಕಾಂಗ್ರೆಸ್ರಾಜ್ಯ ಸರ್ಕಾರ
Previous Post

ಕೋಟೆ ಕೊಳ್ಳೆ ಹೋದ ನಂತರ ಬಾಗಿಲು ಮುಚ್ಚಿದ ಕೇಂದ್ರ? 

Next Post

B.R. ಶೆಟ್ಟಿ ಕಂಪೆನಿಯ ವಿರುದ್ಧ ವಂಚನೆ ಪ್ರಕರಣ ದಾಖಲು; ಭಾರತದಲ್ಲಿ ತಲೆಮರೆಸಿಕೊಂಡರೇ ಉದ್ಯಮಿ!?

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
B.R. ಶೆಟ್ಟಿ ಕಂಪೆನಿಯ ವಿರುದ್ಧ ವಂಚನೆ ಪ್ರಕರಣ ದಾಖಲು; ಭಾರತದಲ್ಲಿ ತಲೆಮರೆಸಿಕೊಂಡರೇ ಉದ್ಯಮಿ!?

B.R. ಶೆಟ್ಟಿ ಕಂಪೆನಿಯ ವಿರುದ್ಧ ವಂಚನೆ ಪ್ರಕರಣ ದಾಖಲು; ಭಾರತದಲ್ಲಿ ತಲೆಮರೆಸಿಕೊಂಡರೇ ಉದ್ಯಮಿ!?

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada