• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾರ್ಮಿಕ ನಾಯಕ, ರೈತಪರ ಹೋರಾಟಗಾರ ಮಾರುತಿ ಮಾನ್ಪಡೆ ಇನ್ನಿಲ್ಲ

by
October 20, 2020
in ಕರ್ನಾಟಕ
0
ಕಾರ್ಮಿಕ ನಾಯಕ
Share on WhatsAppShare on FacebookShare on Telegram

ಕರ್ನಾಟಕದಲ್ಲಿ ರೈತ ಪರ ಚಳವಳಿಗಳಲ್ಲಿ ಸಕ್ರಿಯರಾಗಿದ್ದ ಸಿಪಿಎಂ ನಾಯಕ ಮಾರುತಿ ಮಾನ್ಪಡೆ ಇಂದು ಅಸುನೀಗಿದ್ದಾರೆ. ಕೋವಿಡ್‌-19 ಮತ್ತು ನ್ಯುಮೋನಿಯಾದಿಂದ ಸೋಲಾಪುರದ ಆಸ್ಪತ್ರೆಗೆ ದಾಖಲಾಗಿದ್ದ ಅವರು ತಮ್ಮ 67ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ.

ADVERTISEMENT

ರೈತ ಚಳವಳಿಗಳಿಂದಲೇ ಮುನ್ನೆಲೆಗೆ ಬಂದಿದ್ದ ಮಾನ್ಪಡೆ ಅವರು, ತಮ್ಮ ಕೊನೇಯ ದಿನಗಳಲ್ಲಿ ಕೂಡಾ ರೈತ ಪರ ಹೋರಾಟದಲ್ಲಿ ಸಕ್ರೀಯರಾಗಿದ್ದರು. ಲಾಕ್‌ಡೌನ್‌ನ ಹೊರತಾಗಿಯೂ ಸಾಮಾಜಿಕ ಅಂತರಗಲನ್ನು ಕಾಪಾಡಿಕೊಂಡು ಯಶಸ್ವಿ ಹೋರಾಟಗಳನ್ನು ಆಯೋಜಿಸುವತ್ತ ತಮ್ಮ ಗಮನವನ್ನು ಕೇಂದ್ರಿಕರಿಸಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ದ್ವಿದಳ ದಾನ್ಯಗಳನ್ನು ಸುಂಕ ರಹಿತವಾಗಿ ಭಾರತಕ್ಕೆ ಆಮದು ಮಾಡಿಕೊಳ್ಳುವುದನ್ನು ತೀವ್ರವಾಗಿ ವಿರೋಧಿಸಿದ್ದ ಮಾನ್ಪಡೆ ಅವರು, ದೇಸೀಯ ಧಾನ್ಯ ಬೆಳೆಗಾರರ ಅಭಿವೃದ್ದಿಗಾಗಿ ಅವಿರತವಾಗಿ ಶ್ರಮಿಸಿದರು. ಧಾನ್ಯಗಳನ್ನು ಆಮದು ಮಾಡಿಕೊಳ್ಳಲು ಕನಿಷ್ಟ ಪಕ್ಷ 30% ಸುಂಕ ವಿಧಿಸಬೇಕೆಂದು ಆಗ್ರಹಿಸಿದ್ದರು. ರೈತರ ಸಮಸ್ಯೆಗಳು ಹೆಚ್ಚಾಗಲು ಕೇಂದ್ರ ಸರ್ಕಾರದ ಆಮದು ನೀತಿಗಳೇ ಕಾರಣ ಎಂಬ ವಿಚಾರವನ್ನು ಮಾನ್ಪಡೆ ಅವರು ಬಲವಾಗಿ ನಂಬಿದ್ದರು.

ಕಲಬುರ್ಗಿಯಲ್ಲಿಯೇ ಹೆಚ್ಚಿನ ಸಮಯದಿಂದ ವಾಸವಿದ್ದ ಕಾರಣಕ್ಕೆ, ಅಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತಿದ್ದ ಧಾನ್ಯ ಬೆಳೆಗಾರರ ಪರವಾಗಿ ಅವರು ದನಿ ಎತ್ತಿದ್ದರು. ಅದಾನಿಯಂತಹ ಅತೀ ದೊಡ್ಡ ಕಂಪೆನಿಗಳಿಗೆ ಯಾವುದೇ ಸುಂಕವಿಲ್ಲದೇ ಧಾನ್ಯಗಳನ್ನು ಆಮದು ಮಾಡಿಕೊಳ್ಳಲು ಪರವಾನಿಗೆ ನೀಡಿದ್ದು ರೈತರ ಹಿತಕ್ಕೆ ಮಾರಕ ಎಂದು ಅವರು ಪ್ರತಿಪಾದಿಸಿದ್ದರು.

ಚುನಾವಣೆಯಲ್ಲಿಯೂ ತಮ್ಮ ಅದೃಷ್ಟ ಪರೀಕ್ಷೆ ಮಾಡಿದ್ದ ಮಾರುತಿ ಮಾನ್ಪಡೆ ಅವರು, ಸಫಲರಾಗಿರಲಿಲ್ಲ. ಬೀದರ್‌ ಲೋಕಸಭಾ ಕ್ಷೇತ್ರದಿಂದ ಒಮ್ಮೆ ಸ್ಪರ್ಧಿಸಿದ್ದ ಮಾನ್ಪಡೆ ಅವರು ಜೆಡಿಎಸ್‌ನೊಂಡಿದೆ ಮೈತ್ರಿ ಮಾಡಿಕೊಂಡಿದ್ದರೂ ಸೋಲು ಕಾಣಬೇಕಾಯಿತು. ನಂತರ ಮೂರು ಬಾರಿ ವಿಧಾನಸಭಾ ಚುನಾವಣೆಗೆ ಕಮಲಾಪುರ ಮತ್ತು ಗುಲ್ಬರ್ಗಾ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾನ್ಪಡೆಯವರಿಗೆ ಯಶಸ್ಸು ಸಿಗಲಿಲ್ಲ. ಸಂಸತ್ತಿನಲ್ಲಿ ಅಥವಾ ವಿಧಾನಸಭೆಯಲ್ಲಿ ರೈತರ ದನಿಯನ್ನು ಪ್ರತಿಧ್ವನಿಸಬೇಕೆಂಬ ಅವರ ಆಶಯ ಕೊನೆಗೂ ಈಡೇರಲಿಲ್ಲ.

ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾಗಿದ್ದ ಮಾನ್ಪಡೆ ಅವರು ರೈತ ವಿರೋಧಿ ನೀತಿಗಳ ಹಾಗೈ ಕಾಯ್ದೆಗಳ ವಿರೋಧಿಯಾಗಿದ್ದರು. ಇತ್ತೀಚಿಗೆ ನಡೆದ ರೈತ ಸಂಘದ ಪ್ರತಿಭಟನೆಗಳಲ್ಲಿಯೂ ಸಕ್ರೀಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಐಕ್ಯ ಸಮಿತಿಯ ಸದಸ್ಯರೂ ಆಗಿದ್ದ ಮಾನ್ಪಡೆ ಅವರು, ಇತ್ತೀಚಿಗೆ ಜಾರಿಗೆ ತರಲಾದ ಎಪಿಎಂಪಿ ತಿದ್ದಪಡಿ ಕಾಯ್ದೆ, ಕಾಂಟ್ರಾಕ್ಟ್‌ ಫಾರ್ಮಿಂಗ್‌ ಕಾಯ್ದೆ ಹಾಗೂ ಇತರ ರೈತ ವಿರೋಧಿ ಕಾಯ್ದೆಗಳ ವಿರುದ್ದದ ಹೋರಾಟದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಸಾಕಷ್ಟು ಜನರೊಂದಿಗೆ ಬೆರೆತು ಹೋರಾಟವನ್ನು ಸಂಘಟಿಸಿದ ನಂತರ ಕೋವಿಡ್‌ ಸೋಂಕು ಅವರನ್ನು ಮಂಕಾಗಿಸಿತ್ತು. ಮೊದಲು ಗುಲ್ಬರ್ಗಾ ಇನ್ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ನಲ್ಲಿ ದಾಖಲಾಗಿದ್ದ ಅವರನ್ನು ನಂತರ ಸೋಲಾಪುರಕ್ಕೆ ವರ್ಗಾಯಿಸಲಾಗಿತ್ತು.

ಸೋಲಾಪುರದಿಂದ ಅವರನ್ನು ಮುಂಬೈ ಅಥವಾ ಹೈದರಾಬಾದ್‌ಗೆ ಸ್ಥಳಾಂತರಿಸುವ ಯೋಚನೆ ಇತ್ತಾದರೂ, ಅದಕ್ಕೂ ಮುಂಚೆ ಅವರು ದೈವಾಧೀನರಾದರು. ಮರಣದ ನಂತರ ಅವರ ಮೃತದೇಹವನ್ನು ಕಲಬುರ್ಗಿಗೆ ತರಲು ಅಡಚೆನ ಉಂಟಾಗಿದೆ. ಕಲಬುರ್ಗಿ ಜಿಲ್ಲಾಡಳಿತ ನಿರಾಕ್ಷೇಪಣಾ ಪತ್ರ ನೀಡಿದಲ್ಲಿ ಮಾತ್ರ ಅವರ ದೇಹವನ್ನು ನೀಡುವುದಾಗಿ ಸೋಲಾಪುರದ ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯ ಕಂಡ ಓರ್ವ ಶ್ರೇಷ್ಟ ರೈತ ಪರ ಹಾಗೂ ಕಾರ್ಮಿಕಪರ ಹೋರಾಟಗಾರ ಇಂದು ನಮ್ಮೊಂದಿಗಿಲ್ಲ. ಸಂಘಟನೆ ಹಾಗೂ ಹೋರಾಟದಲ್ಲೇ ತಮ್ಮ ಜೀವನವನ್ನು ಮುಗಿಸಿದ ಮಾನ್ಪಡೆ ಅವರು ರಾಜ್ಯದ ಎಲ್ಲಾ ರೈತ ಚಳವಳಿಗೆ ಸ್ಪೂರ್ತಿಯ ಸೆಲೆಯಾಗಿ ನಿಂತಿದ್ದಾರೆ.

Tags: maruti manpadeಮಾರುತಿ ಮಾನ್ಪಡೆ
Previous Post

ಹಬ್ಬದ ವಾತಾವರಣವಿದ್ದರೂ ಎಚ್ಚರಿಕೆಯಿಂದಿರಿ- ದೇಶಕ್ಕೆ ಪ್ರಧಾನಿ ಮೋದಿ ಸಂದೇಶ

Next Post

ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡುವ ಪ್ರಧಾನಿ – ಸಿದ್ದರಾಮಯ್ಯ

Related Posts

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

by ಪ್ರತಿಧ್ವನಿ
January 18, 2026
0

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು...

Read moreDetails
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
Next Post
ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡುವ ಪ್ರಧಾನಿ - ಸಿದ್ದರಾಮಯ್ಯ

ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡುವ ಪ್ರಧಾನಿ - ಸಿದ್ದರಾಮಯ್ಯ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada