• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೆಪಿಸಿಸಿ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೆ ಆನ್‌ಲೈನ್‌ ಚುನಾವಣೆ ಸಾಧ್ಯತೆ!

by
December 26, 2020
in ಕರ್ನಾಟಕ
0
ಕೆಪಿಸಿಸಿ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೆ ಆನ್‌ಲೈನ್‌ ಚುನಾವಣೆ ಸಾಧ್ಯತೆ!
Share on WhatsAppShare on FacebookShare on Telegram

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ವರ್ಷದ ಕೆಪಿಸಿಸಿ ಯುವ ಘಟಕದ ಪದಾಧಿಕಾರಿಗಳ ಚುನಾವಣೆಯನ್ನು ಆನ್ ಲೈನ್ ನಲ್ಲಿ ನಡೆಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ. ಜನವರಿ ಎರಡನೇ ವಾರದ ಮುಂಚಿತವಾಗಿ ಚುನಾವಣೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ADVERTISEMENT

2017 ರಲ್ಲಿ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಸವನ ಗೌಡ ಬಾದರ್ಲಿ ಅವರ ಅಧಿಕಾರವಧಿ ಮಾರ್ಚ್ 2020 ರಲ್ಲಿ ಪೂರ್ಣಗೊಂಡ ಬಳಿಕ ಈ ಹುದ್ದೆ ಖಾಲಿಯಿದೆ. ಮಾರ್ಚ್ ತಿಂಗಳಲ್ಲಿ ಕೆಪಿಸಿಸಿಯ ಅಧ್ಯಕ್ಷರನ್ನಾಗಿ ಡಿಕೆ ಶಿವಕುಮಾರ್ ಅವರನ್ನು ಎಐಸಿಸಿ ನೇಮಕ ಮಾಡಿತ್ತು. ಆದರೆ, ಇತರ ಪದಾಧಿಕಾರಿಗಳನ್ನು ನೇಮಕ ಮಾಡಿರಲಿಲ್ಲ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇದೀಗ, ಈ ಖಾಲಿ ಇರುವ ಹುದ್ದೆಗಳಿಗೆ ಚುನಾವಣೆ ನಡೆಸಬೇಕೆ ಅಥವಾ ನಾಮನಿರ್ದೇಶನಗೊಳಿಸಬೇಕೆ ಎಂಬುವುದು ಕಾಂಗ್ರೆಸ್‌ ಉನ್ನತ ನಾಯಕರು ಚರ್ಚಿಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕೆಲವು ನಾಯಕರು ಕೆಪಿಸಿಸಿ ಯುವ ಅಧ್ಯಕ್ಷರನ್ನು ಚುನಾವಣೆಯ ಬದಲು ನಾಮನಿರ್ದೇಶನ ಮಾಡಲು ಬಯಸಿದರೆ, ರಾಹುಲ್ ಗಾಂಧಿ ಚುನಾವಣೆ ನಡೆಸಿ ಆಯ್ಕೆ ಮಾಡುವಲ್ಲಿ ಒಲವು ತೋರಿದ್ದಾರೆ.

ರಾಜ್ಯದಲ್ಲಿ ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲು 6.5 ಲಕ್ಷ ಕಾಂಗ್ರೆಸ್‌ ಕಾರ್ಯಕರ್ತ ಮತದಾರರು ಅರ್ಹರಿದ್ದಾರೆ ಎನ್ನಲಾಗಿದೆ. ಎನ್ ಎಸ್ ಯುಐ ರಾಜ್ಯಾಧ್ಯಕ್ಷ ಹೆಚ್. ಎಸ್. ಮಂಜುನಾಥ್, ಶಾಸಕ ಎನ್ ಎ ಹಾರಿಸ್ ಪುತ್ರ ಮಹಮ್ಮದ್‌ ನಲಪಾಡ್, ಮಾಜಿ ಸಚಿವ ಎಂಆರ್ ಸೀತಾರಾಮ್ ಅವರ ಪುತ್ರ ರಕ್ಷಾ ರಾಮಯ್ಯ, ದಕ್ಷಿಣ ಕನ್ನಡ‌ ಲೋಕಸಭಾ ಅಭ್ಯರ್ಥಿಯಾಗಿ 2019ರ ಚುನಾವಣೆ ಸ್ಪರ್ಧಿಸಿದ್ದ ಮಿಥುನ್ ರೈ ಮತ್ತಿತರರು ಕೆಪಿಸಿಸಿ ಯುವ ಘಟಕದ ಅಧ್ಯಕ್ಷ ಹುದ್ದೆಗೆ ಆಕಾಂಕ್ಷಿಗಳಾಗಿದ್ದಾರೆ. ಮಂಜುನಾಥ್ ಗೌಡ ಹಾಗೂ ಮಿಥುನ್‌ ರೈ ಡಿಕೆ ಶಿವಕುಮಾರ್ ಆಪ್ತರಾಗಿದ್ದರೆ, ಮಹಮ್ಮದ್‌ ನಲಪಾಡ್‌ ಹಾರಿಸ್‌ ಹಾಗೂ ರಕ್ಷಾ ರಾಮಯ್ಯರಿಗೆ ಕೌಟುಂಬಿಕ ರಾಜಕಾರಣದ ಹಿನ್ನೆಲೆಯಿದೆ.

ಆಕಾಂಕ್ಷಿಗಳನ್ನು ಡಿಸೆಂಬರ್ 28 ರಂದು ನವದೆಹಲಿಗೆ ಸಂದರ್ಶನಕ್ಕಾಗಿ ಕರೆಯಲಾಗಿದೆ. ಎಐಸಿಸಿ ಅಧ್ಯಕ್ಷ ಬಿ. ವಿ. ಶ್ರೀನಿವಾಸ್ ಅವರನ್ನೊಳಗೊಂಡ ಸಮಿತಿ ಎದುರು ಸಂದರ್ಶವನ್ನು ಎದುರಿಸಬೇಕಾಗಲಿದೆ. ಆಕಾಂಕ್ಷಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಚುನಾವಣೆ ನಡೆಸಬೇಕೆ ಅಥವಾ ನಾಮನಿರ್ದೇಶನ ಮಾಡಬಹುದೇ ಎಂಬುದರ ಬಗ್ಗೆ ನಿರ್ಧಾರವಾಗಲಿದೆ ಎಂದು ಮೂಲಗಳು ಹೇಳಿವೆ.

ಪಕ್ಷದ ಇತರೆ ಮೂಲಗಳ ಪ್ರಕಾರ, ಈಗಾಗಲೇ ಕೆಲವು ಅಭ್ಯರ್ಥಿಗಳ ಸಂದರ್ಶನ ನಡೆದಿದ್ದು ಚುನಾವಣೆ ಇಲ್ಲದೆ ನಾಮ ನಿರ್ದೇಶನಗೊಳ್ಳುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.

ಇನ್ನು ಚುನಾವಣೆಯ ಮುಖಾಂತರವೇ ಆಯ್ಕೆ ನಡೆಯಬೇಕಿದ್ದಲ್ಲಿ, ಎಐಸಿಸಿಯು ಚುನಾವಣೆಗೆ ಆನ್‌ಲೈನ್ ಮೊರೆ ಹೋಗಲಿದೆ.‌ ಇತ್ತೀಚಿಗೆ ತೆಲಂಗಾಣ ಯುವ ಕಾಂಗ್ರೆಸ್ ಗೂ ಆನ್‌ಲೈನ್‌ ಮೂಲಕ ಚುನಾವಣೆ ನಡೆದಿತ್ತು.

Tags: ಕೆಪಿಸಿಸಿಕೆಪಿಸಿಸಿ ಯುವ ಘಟಕಮಂಜುನಾಥ್‌ ಗೌಡಮಹಮ್ಮದ್‌ ನಲಪಾಡ್ಮಿಥುನ್‌ ರೈರಕ್ಷಾ ರಾಮಯ್ಯ
Previous Post

ರೈತ ಪ್ರತಿಭಟನೆಯ ಹಿಂದೆ ಸ್ವಾರ್ಥಿಗಳ ಕೈವಾಡವಿದೆ – ಬಿ ಎಸ್‌ ಯಡಿಯೂರಪ್ಪ

Next Post

ಕೆಲವರು ನನಗೆ ಪ್ರಜಾಪ್ರಭುತ್ವ ಪಾಠ ಕಲಿಸಲು ಪ್ರಯತ್ನಪಡುತ್ತಿದ್ದಾರೆ –ಮೋದಿ ವ್ಯಂಗ್ಯ

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
ಕೆಲವರು ನನಗೆ ಪ್ರಜಾಪ್ರಭುತ್ವ ಪಾಠ ಕಲಿಸಲು ಪ್ರಯತ್ನಪಡುತ್ತಿದ್ದಾರೆ –ಮೋದಿ ವ್ಯಂಗ್ಯ

ಕೆಲವರು ನನಗೆ ಪ್ರಜಾಪ್ರಭುತ್ವ ಪಾಠ ಕಲಿಸಲು ಪ್ರಯತ್ನಪಡುತ್ತಿದ್ದಾರೆ –ಮೋದಿ ವ್ಯಂಗ್ಯ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada