• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೆಲ ಧರ್ಮಗಳ ತುಷ್ಠೀಕರಣಕ್ಕೆ ಪೌರತ್ವ ಮಸೂದೆ ತಿದ್ದುಪಡಿ?

by
December 10, 2019
in ದೇಶ
0
ಕೆಲ ಧರ್ಮಗಳ ತುಷ್ಠೀಕರಣಕ್ಕೆ ಪೌರತ್ವ ಮಸೂದೆ ತಿದ್ದುಪಡಿ?
Share on WhatsAppShare on FacebookShare on Telegram

ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ದೇಶಾದ್ಯಂತ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇದು ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿಕೊಂಡು ಮಾಡುತ್ತಿರುವ ತಿದ್ದುಪಡಿ ಎಂದು ಒಂದು ವರ್ಗ ಹೇಳುತ್ತಿದ್ದರೆ, ವಲಸಿಗರು ಹೆಚ್ಚಿರುವ ಈಶಾನ್ಯ ರಾಜ್ಯಗಳ ಮೂಲನಿವಾಸಿಗಳು ಒಂದು ವೇಳೆ ಪೌರತ್ವ ನೀಡಿದ್ದೇ ಆದಲ್ಲಿ ನಮ್ಮ ಮೂಲ ಸಂಸ್ಕೃತಿಗೆ ಧಕ್ಕೆ ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ADVERTISEMENT

ಮತ್ತೊಂದೆಡೆ, ಆಡಳಿತಾರೂಢ ಬಿಜೆಪಿ ಮತ್ತು ಅದರ ಅಂಗಪಕ್ಷಗಳು ಹಾಗೂ ಆ ಪಕ್ಷಗಳ ಬೆಂಬಲಕ್ಕೆ ನಿಂತಿರುವ ಸಂಘಟನೆಗಳು ಪೌರತ್ವ ನೀಡುವುದು ಒಳಿತು. ಇಲ್ಲಿ ಯಾವೊಬ್ಬ ಮುಸ್ಲಿಂರನ್ನೂ ಗುರಿಯಾಗಿರಿಸಿಕೊಂಡು ಮಸೂದೆಗೆ ತಿದ್ದುಪಡಿ ತರುತ್ತಿಲ್ಲ. ಮುಸ್ಲಿಂರ ವಿಚಾರವನ್ನು ಮಸೂದೆಯಲ್ಲಿ ಎಲ್ಲಿಯೂ ಕೂಡ ಪ್ರಸ್ತಾಪವನ್ನೇ ಮಾಡಿಲ್ಲ. ಇದೊಂದು ಜಾತ್ಯತೀತ ನಿಲುವಾಗಿದ್ದು, ರಾಜಕೀಯ ನಿರ್ಧಾರಗಳಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿಕೊಳ್ಳುತ್ತಿವೆ.

ಹಾಗಾದರೆ, ಈ ಪೌರತ್ವ ಏನು? ಇದರ ಬಗ್ಗೆ ಏಕಿಷ್ಟು ಪರ-ವಿರೋಧಗಳು ವ್ಯಕ್ತವಾಗುತ್ತಿವೆ? ಇದರಿಂದ ಯಾರಿಗೇನು ಲಾಭ? ಎಂದು ನೋಡುವುದಾದರೆ:- ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಶಕಗಳ ಹಿಂದೆ ಭಾರತಕ್ಕೆ ಬಂದು ವಿವಿಧ ರಾಜ್ಯಗಳಲ್ಲಿ ನೆಲೆಸಿರುವ ಹಿಂದೂ, ಕ್ರಿಶ್ಚಿಯನ್ನರು, ಸಿಖ್ಖರು, ಜೈನರು, ಬೌದ್ಧರು ಮತ್ತು ಪಾರ್ಸಿಗಳಿಗೆ ಪೌರತ್ವವನ್ನು ಕಲ್ಪಿಸಿಕೊಟ್ಟು ಅವರಿಗೆ ಭಾರತೀಯ ನಾಗರಿಕರಿಗೆ ಲಭ್ಯವಿರುವ ಸೌಲತ್ತುಗಳನ್ನು ನೀಡುವುದಾಗಿದೆ.

ಕೇಂದ್ರ ಸರ್ಕಾರ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ತಂದು ಈ ಸಮುದಾಯಗಳ ವಲಸಿಗರಿಗೆ ಪೌರತ್ವ ನೀಡುವ ಅವಕಾಶವನ್ನು ಪಡೆದುಕೊಳ್ಳಲೆಂದು ತಿದ್ದುಪಡಿ ಮಸೂದೆಯನ್ನು ಮಂಡಿಸಿದೆ. ಆದರೆ, ಮುಸ್ಲಿಂ ಸೇರಿದಂತೆ ಇನ್ನಿತರೆ ಸಮುದಾಯಗಳಿಗೆ ಸೇರಿದ ವಲಸಿಗರೂ ನಮ್ಮ ದೇಶದ ವಿವಿಧ ರಾಜ್ಯಗಳಲ್ಲಿ ನೆಲೆಸಿದ್ದಾರೆ. ಅವರಿಗೂ ಈ ಅವಕಾಶವನ್ನು ಕಲ್ಪಿಸಿಕೊಡಬೇಕಿತ್ತು ಎಂಬ ವಾದ ಹಲವರಿಂದ ಕೇಳಿ ಬರುತ್ತಿದೆ.

ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾ ದೇಶಗಳಿಂದ ವಲಸೆ ಬಂದಿರುವ ಹಿಂದೂ, ಸಿಖ್, ಬೌದ್ಧ, ಪಾರ್ಸಿ, ಜೈನರು ಮತ್ತು ಕ್ರಿಶ್ಚಿಯನ್ನರಲ್ಲಿ ಬಹುತೇಕ ಮಂದಿ ದೆಹಲಿ, ರಾಜಸ್ಥಾನ ಮತ್ತು ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ನೆಲೆಸಿದ್ದಾರೆ. ಇವರಿಗೆ ಪೌರತ್ವ ಇಲ್ಲದೇ ಸರ್ಕಾರದ ಯಾವುದೇ ಸೌಲಭ್ಯಗಳು ದೊರೆಯದ ಕಾರಣ ಬದುಕು ಸಂಕಷ್ಟಕ್ಕೆ ದೂಡಲ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ತಮಗೊಂದು ಶಾಶ್ವತವಾದ ಭಾರತೀಯ ಪೌರತ್ವವನ್ನು ನೀಡಬೇಕೆಂದು ದಶಕಗಳಿಂದ ಈ ಸಮುದಾಯಗಳಿಗೆ ಸೇರಿದ ಜನರು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸುತ್ತಲೇ ಬಂದಿದ್ದರು.

ಆದರೆ, ಇವರಿಗೆ ಪೌರತ್ವ ನೀಡುವ ವಿಚಾರದಲ್ಲಿ ಸರ್ಕಾರಗಳು ಗೊಂದಲಕ್ಕೆ ಬಿದ್ದಿದ್ದವು. ಇದೀಗ ರಾಜಕೀಯ ಸೇರಿದಂತೆ ನಾನಾ ಕಾರಣಗಳಿಂದ ಬಿಜೆಪಿ ಸರ್ಕಾರ ಪೌರತ್ವ ನೀಡಲು ಮುಂದಾಗಿದ್ದು, ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿದೆ. ಅದರನ್ವಯ ಮುಸ್ಲಿಮೇತರ ಸಮುದಾಯಕ್ಕೆ ಸೇರಿದ ಅಕ್ರಮ ವಲಸಿಗರು ಭಾರತದಲ್ಲಿ ಹಲವಾರು ವರ್ಷಗಳಿಂದ ನೆಲೆಸಿದ್ದರೆ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತದೆ.

ಅಂದರೆ, ಈ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿ ರಾಷ್ಟ್ರಪತಿಗಳು ಅಂಕಿತ ಹಾಕಿದ ನಂತರ ಹೊಸ ಕಾಯ್ದೆಯಾಗಿ ರೂಪುಗೊಂಡ ನಂತರ ಈ ಸಮುದಾಯಗಳ ಕುಟುಂಬಗಳಿಗೆ ಭಾರತೀಯ ಪೌರತ್ವ ಸಿಗಲಿದೆ. ಭಾರತದಲ್ಲಿ ಕನಿಷ್ಠ ಆರು ವರ್ಷಗಳ ಕಾಲ ನೆಲೆಸಿರುವುದಕ್ಕೆ ದಾಖಲೆಗಳನ್ನು ಹೊಂದಿದ್ದವರು ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

2014 ರ ಡಿಸೆಂಬರ್ 31 ಕ್ಕೂ ಮುನ್ನ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರರು ಅರ್ಜಿ ಸಲ್ಲಿಸಬಹುದಾಗಿದೆ. ಇಲ್ಲಿ ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ಸಾಕಷ್ಟು ಕೆಲಸ ಮಾಡುತ್ತಿದೆ ಎಂದೇ ಹೇಳಬಹುದು. ಸರ್ಕಾರದ ವಿವಿಧ ಸಚಿವರೇ ಕಾಲಕಾಲಕ್ಕೆ ನೀಡಿರುವ ಹೇಳಿಕೆಗಳನ್ನು ಗಮನಿಸುವುದಾದರೆ ದೇಶದಲ್ಲಿ ವಾಸ ಮಾಡುತ್ತಿರುವ ಅಕ್ರಮ ವಲಸಿಗರಲ್ಲಿ ಬಹುಪಾಲು ಮುಸ್ಲಿಂರೇ ಇದ್ದಾರಂತೆ. ಇವರಲ್ಲಿ ಪ್ರಮುಖವಾಗಿ ಬಾಂಗ್ಲಾದೇಶದಿಂದ ಬಂದಿರುವ ವಲಸಿಗರ ಸಂಖ್ಯೆ 2 ಕೋಟಿ ತಲುಪಲಿದ್ದು, ಶೇ.60 ಕ್ಕೂ ಹೆಚ್ಚು ಮಂದಿ ಪಶ್ಚಿಮ ಬಂಗಾಳದಲ್ಲಿ ನೆಲೆಸಿದ್ದಾರೆ.

ಈ ಕಾರಣದಿಂದಲೇ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟು ಐದಾರು ಸಮುದಾಯ ಅಥವಾ ಧರ್ಮದವರಿಗೆ ಸೀಮಿತವಾಗಿ ಪೌರತ್ವ ನೀಡುವ ಅವಕಾಶವನ್ನು ಕಲ್ಪಿಸುವ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ ಎಂಬುದು ಮಾತ್ರ ಸ್ಪಷ್ಟವಾಗಿದೆ.

ಈಶಾನ್ಯ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರ್ಕಾರದ ಈ ನಿಲುವಿಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಭಾರತದಿಂದ ಹೊರಹೋಗಬೇಕೆಂಬ ಅನಿವಾರ್ಯಕ್ಕೆ ಸಿಲುಕಿರುವ ವಂಚಿತರಿಗೆ (ಮುಸ್ಲಿಮೇತರ) ಅನುಕೂಲವಾಗಲೆಂದೇ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದು ಅವರನ್ನು ದೇಶದಲ್ಲಿ ಉಳಿಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡುವ ಮೂಲಕ ಕೇಂದ್ರ ಸರ್ಕಾರದ ನಿಲುವನ್ನು ಬಲವಾಗಿ ವಿರೋಧಿಸುತ್ತಿದ್ದಾರೆ.

ಈ ತಿದ್ದುಪಡಿ ಕಾಯ್ದೆಯು ಜಾತ್ಯತೀತತೆ ಮತ್ತು ಸಮಾನತೆಯ ಹಕ್ಕನ್ನು ಕಸಿದುಕೊಳ್ಳುತ್ತದೆ. ಇದರಿಂದ ಮುಸ್ಲಿಂ ಸೇರಿದಂತೆ ಪಟ್ಟಿಯಲ್ಲಿ ಪ್ರಸ್ತಾಪಿಸದ ಇತರೆ ಧರ್ಮದವರಿಗೆ ಧಕ್ಕೆ ಉಂಟಾಗುತ್ತದೆ.

ಲೋಕಸಭೆಯಲ್ಲಿ ಈ ಮಸೂದೆಗೆ 311 ಸದಸ್ಯರು ಪರವಾಗಿ ಮತ ಚಲಾಯಿಸಿದರೆ, 80 ಮಂದಿ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಈ ಮೂಲಕ ಲೋಕಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆತ್ತಿದ್ದು, ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಬೇಕಿದೆ.

ಒಟ್ಟಾರೆ ಕೇಂದ್ರ ಸರ್ಕಾರ ಮತ್ತೊಮ್ಮೆ ಮುಸ್ಲಿಮೇತರ ಧರ್ಮಗಳನ್ನು ತನ್ನತ್ತ ಸೆಳೆದುಕೊಳ್ಳುವ ಈ ಪ್ರಯತ್ನದಲ್ಲಿ ಮುನ್ನಡಿ ಇಟ್ಟಿದೆ. ಇದೊಂದು ಸೀಮಿತ ಸಮುದಾಯಗಳನ್ನು ತುಷ್ಠೀಕರಿಸುವ ಕ್ರಮವಾಗಿದ್ದು, ಮುಸ್ಲಿಂರು ಸೇರಿದಂತೆ ಮತ್ತಿತರೆ ಅಲ್ಪಸಂಖ್ಯಾತ ಧರ್ಮದವರನ್ನು ಗುರಿಯಾಗಿಸಿಕೊಂಡು ಮಾಡುತ್ತಿರುವ ತಿದ್ದುಪಡಿಯಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹಾಗಾದರೆ, ಕೇಂದ್ರ ಸರ್ಕಾರ ಅಕ್ರಮ ಮುಸ್ಲಿಂ ವಲಸಿಗರನ್ನು ಗಡೀಪಾರು ಮಾಡುತ್ತದೆಯೇ? ಅಥವಾ ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುತ್ತದೆಯೇ? ಎಂಬುದರ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ಐದಾರು ಧರ್ಮಗಳ ಅಕ್ರಮ ವಲಸಿಗರಿಗೆ ಭಾರತೀಯ ಪೌರತ್ವವನ್ನು ಕಲ್ಪಿಸಿಕೊಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ಹಿಂದಿನ ಕಾರ್ಯತಂತ್ರ ಈ ತಿದ್ದುಪಡಿ ಮಸೂದೆಯೊಂದಿಗೆ ಬಯಲಾದಂತಾಗಿದೆ.

Tags: AfghanistanBangladeshCitizenshipIndian nationalitylower HousePakistanpassedrefugeesಅಂಗೀಕಾರಅಫ್ಘಾನಿಸ್ತಾನಕೆಳಮನೆನಿರಾಶ್ರಿತರುಪಾಕಿಸ್ತಾನಪೌರತ್ವಬಾಂಗ್ಲಾದೇಶಭಾರತೀಯ ರಾಷ್ಟ್ರೀಯತೆ
Previous Post

ಕರ್ನಾಟಕ ರಾಷ್ಟ್ರೀಯ ಟ್ರೆಂಡ್ ಗೆ ವಿರುದ್ಧವೇಕೆ?

Next Post

ಶೀರ್ಘದಲ್ಲೇ ಜಿಎಸ್ಟಿ ತೆರಿಗೆ ಸ್ವರೂಪ ಮಾರ್ಪಾಡು; ಗ್ರಾಹಕರಿಗೆ ಕರ‘ಭಾರ’

Related Posts

Top Story

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

by ಪ್ರತಿಧ್ವನಿ
November 20, 2025
0

ಬೆಂಗಳೂರು: ಜಾಗತಿಕ ಸೆಮಿಕಂಡಕ್ಟರ್ ವಲಯದ ಮಾರುಕಟ್ಟೆ ಇನ್ನು ಮೂರು ವರ್ಷಗಳಲ್ಲಿ ಒಂದು ಲಕ್ಷ ಕೋಟಿ ಡಾಲರ್ (ಸುಮಾರು ರೂ 88 ಲಕ್ಷ ಕೋಟಿ) ಮೌಲ್ಯಕ್ಕೇರಲಿದ್ದು, ಭಾರತಕ್ಕೆ ಹೆಚ್ಚಿನ...

Read moreDetails

ಟೆಕ್ ಮೇಳದಲ್ಲಿ ಭವಿಷ್ಯದ ಇಂಧನ ಕ್ಷೇತ್ರ ಕುರಿತು ಸಂವಾದ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ..!!

November 20, 2025

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

November 20, 2025

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 20, 2025

Santhosh Lad: ಅಂಧರ ಬಾಳಿಗೆ ಹೊಸ ಬೆಳಕು ನೀಡಿದ ಸಂತೋಷ್‌ ಲಾಡ್‌ ಫೌಂಡೇಶನ್..!!

November 20, 2025
Next Post
ಶೀರ್ಘದಲ್ಲೇ ಜಿಎಸ್ಟಿ ತೆರಿಗೆ ಸ್ವರೂಪ ಮಾರ್ಪಾಡು; ಗ್ರಾಹಕರಿಗೆ  ಕರ‘ಭಾರ’

ಶೀರ್ಘದಲ್ಲೇ ಜಿಎಸ್ಟಿ ತೆರಿಗೆ ಸ್ವರೂಪ ಮಾರ್ಪಾಡು; ಗ್ರಾಹಕರಿಗೆ ಕರ‘ಭಾರ’

Please login to join discussion

Recent News

ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?
Top Story

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada