• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಕಾನೂನು ತರಲು ಸನ್ನದ್ದಗೊಂಡ ರಾಜಸ್ತಾನ, ಛತ್ತೀಸ್ಗಡ

by
October 22, 2020
in ದೇಶ
0
ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಕಾನೂನು ತರಲು ಸನ್ನದ್ದಗೊಂಡ ರಾಜಸ್ತಾನ
Share on WhatsAppShare on FacebookShare on Telegram

ಕಾಂಗ್ರೆಸ್‌ ಆಡಳಿತವಿರುವ ಛತ್ತೀಸಗಢ ಹಾಗೂ ರಾಜಸ್ತಾನವಸರ್ಕಾರಗಳು ಕೇಂದ್ರ ಸರ್ಕಾರ ತಂದಿರುವ ನೂತನ ಕೃಷಿ ಸಂಬಂಧಿತ ಮಸೂದೆಗಳನ್ನು ಎದುರಿಸಲು ರಾಜ್ಯ ಮಟ್ಟದಲ್ಲಿ ಹೊಸ ಕಾನೂನುಗಳನ್ನು ಅಂಗೀಕರಿಸಲು ತಯಾರಾಗಿವೆ.

ADVERTISEMENT

ಕಾಂಗ್ರೆಸ್‌ ಆಡಳಿತವಿರುವ ಪಂಜಾಬಿನಲ್ಲಿ ಈಗಾಗಲೇ ಇಂತಹ ಕಾನೂನುಗಳನ್ನು ಎದುರಿಸುವ ಹೊಸ ಮಸೂದೆಯನ್ನು ಅಂಗೀಕರಿಸಿದೆ. ಕೇಂದ್ರ ಸರ್ಕಾರ ತಂದಿರುವ ಕೃಷಿ ಸಂಬಂಧಿತ ಮೂರು ಕಾನೂನುಗಳನ್ನು ದೇಶವ್ಯಾಪಿ ರೈತರು ವಿರೋಧಿಸಿದ್ದರು. ಮುಖ್ಯವಾಗಿ ಹರ್ಯಾಣ, ಪಂಜಾಬ್‌ ಪ್ರಾಂತ್ಯದಲ್ಲಿ ತೀವ್ರತರವಾದ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ಎದುರಿಸಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹೊಸ ಕಾನೂನನ್ನು ಅಂಗೀಕರಿಸಲು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್‌ ಬಾಗೆಲ್, ಅಕ್ಟೋಬರ್‌ 27 ಮತ್ತ 28 ರಂದು ವಿಶೇಷ ವಿಧಾನ ಸಭೆಯನ್ನು ಕರೆಯಲು ಪ್ರಸ್ತಾವಣೆ ಸಲ್ಲಿಸಿದ್ದಾರೆ.

ರಾಜ್ಯ ಶಾಸಕಾಂಗ ಸಭೆಯ ವಿಶೇಷ ಅಧಿವೇಶನ ನಡೆಸಲು ಅವಕಾಶ ನೀಡುವಂತೆ ಭೂಪೇಶ್‌ ಬಾಗೆಲ್ ಸರ್ಕಾರ ಈಗಾಗಲೇ ರಾಜ್ಯಪಾಲ ಅನುಸೂಯಾ ಉಕೈ ಅವರನ್ನು ಕೋರಿದೆ. ಆದರೆ, ಸರ್ಕಾರದ ಪ್ರಸ್ತಾವನೆಯನ್ನು ರಾಜ್ಯಪಾಲರು ಹಿಂದಕ್ಕೆ ಕಳುಹಿಸಿದ್ದಾರೆ, ವಿಧಾನಸಭೆಯ ಮುಂಗಾರು ಅಧಿವೇಶನ ಮುಗಿದು ಕೇವಲ 58 ದಿನಗಳು ಕಳೆದಿವೆ ಎಂದು ಸೂಚಿಸಿದ ರಾಜ್ಯಪಾಲರು ಮತ್ತೊಂದು ಅಸೆಂಬ್ಲಿ ಅಧಿವೇಶನ ನಡೆಸಲು ಪ್ರಬಲ ಕಾರಣಗಳನ್ನು ಕೇಳಿದ್ದಾರೆ.

Also Read: ಕೃಷಿ ಮಸೂದೆ ವಿರೋಧಿ ರೈತರ ಆಕ್ರೋಶದ ಹಿಂದಿನ ಸಂದೇಶಗಳೇನು?

ರಾಜ್ಯಪಾಲರ ಕ್ರಮಕ್ಕೆ ಬಾಗೆಲ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಪೂರ್ಣ ಬಹುಮತ ಹೊಂದಿರುವ ಸರ್ಕಾರವನ್ನು ವಿಧಾನಸಭೆ ಅಧಿವೇಶನ ನಡೆಸದಂತೆ ತಡೆಯಲು ರಾಜ್ಯಪಾಲರಿಗೆ ಸಾಧ್ಯವಿಲ್ಲ ಎಂದು ಬಾಗೆಲ್ ಹೇಳಿದ್ದಾರೆ.

ವಿಧಾನಸಭೆಯನ್ನು ಕರೆಯಲು ಬಹುಮತವನ್ನು ಹೊಂದಿರುವ ಚುನಾಯಿತ ಸರ್ಕಾರವು ಕೋರಿದ ದಿನಾಂಕಗಳಲ್ಲಿ ರಾಜ್ಯಪಾಲರು ಯಾವುದೇ ಬದಲಾವಣೆಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ಛತ್ತೀಸ್‌ಗಡ ಕೃಷಿ ಮಂತ್ರಿ ರವೀಂದ್ರ ಚೌಬೆ ಹೇಳಿದ್ದಾರೆ.

ಮತ್ತೊಂದೆಡೆ, ಎನ್‌ಡಿಎ ಸರ್ಕಾರ ಅಂಗೀಕರಿಸಿದ “ರೈತ ವಿರೋಧಿ” ಕಾನೂನುಗಳನ್ನು ವಿರೋಧಿಸಲು ಶೀಘ್ರದಲ್ಲೇ ವಿಧಾನಸಭೆ ಅಧಿವೇಶನ ನಡೆಸಲಾಗುವುದು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ಪಷ್ಟವಾಗಿ ಹೇಳಿದ್ದಾರೆ.

ಕಾಂಗ್ರೆಸ್‌ ರೈತರೊಂದಿಗೆ ಧೃಢ ನಿಶ್ಚಯದಿಂದ ನಿಲ್ಲಲಿದ್ದು, ನೂತನ ಕೃಷಿ ಮಸೂದೆಯ ತಿದ್ದುಪಡಿಯನ್ನು ವಿರೋಧಿಸಲಿದೆ. ಪಂಜಾಬ್‌ ಸರ್ಕಾರದಂತೆ ರಾಜಸ್ತಾನ ಸರ್ಕಾರವೂ ನೂತನ ಕೃಷಿ ಸಂಬಂಧಿತ ಮಸೂದೆಗಳನ್ನು ಎದುರಿಸಲು ರಾಜ್ಯ ಮಟ್ಟದಲ್ಲಿ ಹೊಸ ಕಾನೂನುಗಳನ್ನು ತರಲಿದೆ ಎಂದು ಭರವಸೆ ನೀಡಿದ್ದಾರೆ.

ಕೇಂದ್ರ ತಂದಿರುವ ಕಾನೂನುಗಳನ್ನು ರಾಜ್ಯಗಳು ಮೀರಬಹುದೇ?

ಸಂವಿಧಾನದ 254 (2) ನೇ ವಿಧಿ ಅನ್ವಯ, ಏಳನೇ ವೇಳಾಪಟ್ಟಿಯ ಏಕಕಾಲೀನ ಪಟ್ಟಿಯಡಿಯಲ್ಲಿ ಸೇರ್ಪಡೆಗೊಂಡಿರುವ ಕೇಂದ್ರ ಶಾಸನಗಳಲ್ಲಿ ಬದಲಾವಣೆಗಳನ್ನು ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಕೃಷಿ, ಶಿಕ್ಷಣ ಮತ್ತು ಸಂಶೋಧನೆ, ಜಾನುವಾರು, ಮೀನುಗಾರಿಕೆ ಮತ್ತು ನೀರಾವರಿ ರಾಜ್ಯ ಪಟ್ಟಿಯಲ್ಲಿವೆ.

Also Read: ಕೃಷಿ ಮಸೂದೆ ತಿದ್ದುಪಡಿಯನ್ನು ತನ್ನ ಆಡಳಿತವಿರುವ ರಾಜ್ಯಗಳಲ್ಲಿ ತಡೆಯಲು ಕಾಂಗ್ರೆಸ್ ಯೋಜನೆ

ಕೇಂದ್ರ ಶಾಸನವನ್ನು ಎದುರಿಸಿ ರಾಜ್ಯ ಸರ್ಕಾರಗಳು ಅಂಗೀಕರಿಸಿದ ಮಸೂದೆಗಳನ್ನು ಕಾನೂನುಗಳಾಗಿ ಜಾರಿಗೆ ತರಲು ರಾಷ್ಟ್ರಪತಿಗಳ ಒಪ್ಪಿಗೆಯ ಅಗತ್ಯವಿದೆಯಾದರೂ, ಕಾಂಗ್ರೆಸ್ ಸರ್ಕಾರಗಳು ಕೃಷಿ ಮಸೂದೆಯ ವಿರುದ್ಧದ ಪ್ರತಿರೋಧದಲ್ಲಿ ಇನ್ನೂ ಅತ್ಯುತ್ತಮ ಹೆಜ್ಜೆಯನ್ನು ಮುಂದಿಡಲು ಬಯಸಿವೆ. ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ದಂಗೆಯ ಬಾವುಟ ಎತ್ತಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರಗಳು ಅಂಗೀಕರಿಸಿದ ಮಸೂದೆಗಳು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅನುಮೋದನೆಯನ್ನು ಪಡೆಯದಿದ್ದರೂ, ಕೃಷಿ ಕಾನೂನುಗಳನ್ನು ವಿರೋಧಿಸುವ ಮೂಲಕ ಪಕ್ಷವು ಬಲವಾದ ರಾಜಕೀಯ ಹೇಳಿಕೆಯನ್ನು ದಾಖಲಿಸಲು ಯಶಸ್ವಿಯಾಗುತ್ತದೆ.

ಕಳೆದ ತಿಂಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಪಕ್ಷದ ಆಡಳಿತದ ರಾಜ್ಯಗಳಿಗೆ ಕೇಂದ್ರ ಕಾನೂನುಗಳ ನಿಬಂಧನೆಗಳನ್ನು “ನಿರಾಕರಿಸುವ” ಆದೇಶ ನೀಡಿದ ಹಿನ್ನೆಲೆಯಲ್ಲಿ ಇದು ಬಂದಿದೆ.

Tags: Central Farm LawschhattisgarhPunjab StateRajasthan Stateಕಾಂಗ್ರೆಸ್‌ ಸರ್ಕಾರಕೃಷಿ ಮಸೂದೆರಾಜಸ್ತಾನರಾಜಸ್ತಾನ ಸರ್ಕಾರ
Previous Post

ಇಡಿ ಜಾಲದಲ್ಲಿ ಮಧುಕರ್‌ ಅಂಗೂರ್‌

Next Post

19 ಲಕ್ಷ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರಿಗೂ ಕರೋನಾ ಲಸಿಕೆ; ಬಿಹಾರ ಬಿಜೆಪಿಯ ಭರವಸೆ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
19 ಲಕ್ಷ ಉದ್ಯೋಗ ಸೃಷ್ಟಿ

19 ಲಕ್ಷ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರಿಗೂ ಕರೋನಾ ಲಸಿಕೆ; ಬಿಹಾರ ಬಿಜೆಪಿಯ ಭರವಸೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada