ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ರಲ್ಲಿನ ತ್ರಿಭಾಷಾ ಸೂತ್ರವು ಅತ್ಯಂತ ದುಃಖಕರವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಅವರು ಹೊಸ ನೀತಿಯನ್ನು ಜಾರಿಗೆ ತರುವುದಿಲ್ಲ ಎಂದು ಶಪಥ ಮಾಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಹಿಂದಿ ಹೇರುವಿಕೆಯನ್ನು ವಿರೋಧಿಸಲು ದಿವಂಗತ ಮುಖ್ಯಮಂತ್ರಿಗಳಾದ ಅನ್ನಾದುರೈ, ಎಂಜಿಆರ್ ಮತ್ತು ಜಯಲಲಿತಾ ಅವರ ಸ್ಥಿರ ನಿಲುವನ್ನು ಉಲ್ಲೇಖಿಸಿದ ಪಳನಿಸ್ವಾಮಿ, ಕೇಂದ್ರದ ತ್ರಿಭಾಷಾ ನೀತಿಯನ್ನು ತಮಿಳುನಾಡು ಎಂದಿಗೂ ಅನುಮತಿಸುವುದಿಲ್ಲ. ಹೊಸ ಶಿಕ್ಷಣ ನೀತಿಯಲ್ಲಿನ ತ್ರಿ ಭಾಷಾ ನೀತಿ ತೀವ್ರ ದುಃಖಕರವಾಗಿದೆ. ಪ್ರಧಾನಿ ನರೇಂದ್ರ ಮೋದಿ ತ್ರಿಭಾಷಾ ನೀತಿಯನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.
1965 ರಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಲು ಪ್ರಯತ್ನಿಸಿದಾಗ ತಮಿಳುನಾಡು ವಿದ್ಯಾರ್ಥಿಗಳು ನಡೆಸಿದ ಹಿಂದಿ ವಿರೋಧಿ ಆಂದೋಲನವನ್ನು ಕೂಡಾ ಅವರು ಉಲ್ಲೇಖಿಸಿದ್ದಾರೆ.
ತ್ರಿಭಾಷಾ ಅಳವಡಿಕೆ ನಿರ್ಧರಿಸಲು ರಾಜ್ಯಗಳಿಗೆ ಬಿಟ್ಟರೂ, ತಮಿಳುನಾಡಿನ ರಾಜಕೀಯ ಪಕ್ಷಗಳು ಇದನ್ನು ಹಿಂದಿ ಹೇರುವ ಕೇಂದ್ರದ ಪ್ರಯತ್ನವೆಂದು ಪರಿಗಣಿಸುತ್ತಿದೆ.
பொன் ராதாகிருஷ்ணன் ஜி, தமிழ்நாட்டில் தேசிய கல்விக் கொள்கை (NEP)-ஐ நடைமுறைப்படுத்துவதற்கான உங்கள் வழிகாட்டலை எதிர்பார்க்கிறோம். மத்திய அரசு, எந்தவொரு மாநிலத்தின் மீதும் எந்த மொழியையும் திணிக்காது என்பதை மீண்டும் வலியுறுத்த விரும்புகிறேன். https://t.co/YtiRZXtCpf
— Dr. Ramesh Pokhriyal Nishank (@DrRPNishank) August 2, 2020
ಕೇಂದ್ರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುವ ಪ್ರಯತ್ನ ಮಾಡುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ತಮಿಳು ಭಾಷೆಯಲ್ಲಿ ಟ್ವೀಟ್ ಮಾಡಿ ತಮಿಳುನಾಡಿನ ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ವರನ್ನು ಸಮಾಧನಿಸಲು ಯತ್ನಿಸಿದ್ದಾರೆ.
ಅದಕ್ಕೂ ಮೊದಲು, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಕೇಂದ್ರದ ಹೊಸ ನೀತಿಯನ್ನು ಬಲವಾಗಿ ವಿರೋಧಿಸಿದ್ದರು.
ತಮಿಳುನಾಡಿನಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವಲ್ಲಿ ಮಾಜಿ ಕೇಂದ್ರ ಸಚಿವರ ಮಾರ್ಗದರ್ಶನಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.
ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಮತ್ತು ತಮಿಳುನಾಡಿನ ಅನೇಕ ವಿರೋಧ ಪಕ್ಷಗಳು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿವೆ ಮತ್ತು ಅದು ಪ್ರಸ್ತಾಪಿಸಿರುವ ವ್ಯಾಪಕ ಸುಧಾರಣೆಗಳ ಪುನರ್ವಿಮರ್ಶೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ನೀತಿಯು ಹಿಂದಿ ಮತ್ತು ಸಂಸ್ಕೃತವನ್ನು ಹೇರುವ ಪ್ರಯತ್ನವಾಗಿದೆ ಎಂದು ಡಿಎಂಕೆ ಮುಖ್ಯಸ್ಥರು ಶನಿವಾರ ಹೇಳಿದ್ದಾರೆ ಹಾಗೂ ಸಮಾನ ಮನಸ್ಕ ರಾಜಕೀಯ ಪಕ್ಷಗಳು ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೈಜೋಡಿಸಿ ಅದರ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ.
1960 ರ ದಶಕದಲ್ಲಿ ಆಗಿನ ಕಾಂಗ್ರೆಸ್ ಸರ್ಕಾರ ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಲು ಪ್ರಯತ್ನಿಸಿದಾಗ ತಮಿಳುನಾಡು ಭಾರೀ ಹಿಂದಿ ವಿರೋಧಿ ಆಂದೋಲನಕ್ಕೆ ಸಾಕ್ಷಿಯಾಗಿತ್ತು.