ಈ ಬಾರಿಯ ಲೋಕಸಭಾ ಚುನಾವಣೆ ರಾಜ್ಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದೆ. ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಫೈನಲ್ ಆಗ್ತಾರೆ ಎಂಬ ಕುತೂಹಲ ಮೂರು ಪಕ್ಷದಲ್ಲೂ ಮನೆ ಮಾಡಿದೆ. ಅದರಲ್ಲೂ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿಗೆ ಟಿಕೆಟ್ ಮಿಸ್ ಆಗಬಹುದು ಎಂಬ ಚರ್ಚೆ ಜೋರಾಗಿದೆ.
![](https://pratidhvani.com/wp-content/uploads/2024/03/IMG_5768.jpeg)
ಇದೀಗ ಈ ಪಟ್ಟಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೆಸರು ಕೂಡ ವ್ಯಾಪಕವಾಗಿ ಕೇಳಿಬರ್ತಿದೆ. ಇದಕ್ಕೆ ಕಾರಣ ಕಾರ್ತಕರ್ತರ ವಿರೋಧ. ಈ ಬಾರಿ ಉಡುಪಿ ಕ್ಷೇತ್ರದಿಂದ ಯಾವುದೇ ಕಾರಣಕ್ಕೂ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಬಾರದು ಎಂದು ಕ್ಷೇತ್ರದ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
![](https://pratidhvani.com/wp-content/uploads/2024/03/IMG_5766.jpeg)
ಈ ಮುಂಚೆಯೇ ಗೋ ಬ್ಯಾಕ್ ಶೋಭಾ ಅಭಿಯಾನ ಆರಂಭಿಸಿದ್ದ ಕಾರ್ಯಕರ್ತರು ಈಗ ಅದನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಸಂಸದೆ ಕಳೆದ 5 ವರ್ಷದಲ್ಲಿ ಬೆರಳೆಣಿಕೆಯಷ್ಟು ಬಾರಿ ಮಾತ್ರ ಕ್ಷೇತ್ರಕ್ಕೆ ಬಂದಿದ್ದಾರೆ. ಜನರು ಮತ್ತು ಕಾರ್ಯಕರ್ತೋರೊಟ್ಟಿಗೆ ಸಂಪರ್ಕ ಇಟ್ಟೊಂಡಿಲ್ಲ. ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಕೆಲಸವೂ ಆಗಿಲ್ಲ . ನಮಗೆ ಮೋದಿ ಬೇಕು ಆದ್ರೆ ಶೋಭಾ ಬೇಡ ಎಂಬ ಅಭಿಯಾನ ನಡೆಸುತ್ತಿದ್ದಾರೆ.
![](https://pratidhvani.com/wp-content/uploads/2024/03/IMG_5767.jpeg)
ಸ್ವತಃ ಕಾರ್ಯಕರ್ತರೇ ವಿರೋಧಿಸುವುದರಿಂದ ಈ ಬಾರಿ ಶೋಭಾ ಕರಂದ್ಲಾಜೆಗೆ ಟಿಕೆಟ್ ಮಿಸ್ ಆಗೋದು ಖತೀಚ ಅಂತ ಬಿಜೆಪಿ ಮೂಲಗಳು ಅಂದಾಜಿಸಿವೆ.