• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿಗಳನ್ನು ವಿರೋಧಿಸಿ 'ಪರ್ಯಾಯ ಜನತಾ ಅಧಿವೇಶನ'

by
September 20, 2020
in ಕರ್ನಾಟಕ
0
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ  ನೀತಿಗಳನ್ನು ವಿರೋಧಿಸಿ 'ಪರ್ಯಾಯ ಜನತಾ ಅಧಿವೇಶನ'
Share on WhatsAppShare on FacebookShare on Telegram

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹಾಗೂ ಬಿ ಎಸ್‌ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಹೊಸ ನೀತಿಗಳನ್ನು ವಿರೋಧಿಸಿ ಕರ್ನಾಟಕ ರೈತ, ದಲಿತ, ಕಾರ್ಮಿಕ ಚಳುವಳಿಗಳು ಹಾಗೂ ಪ್ರಗತಿಪರ ಸಂಘಟನೆಗಳ ಜಂಟಿ ವೇದಿಕೆ ಸೆಪ್ಟಂಬರ್‌ 21ರಂದು ಬೆಂಗಳೂರಿನಲ್ಲಿ ಬೃಹತ್‌ ರ‍್ಯಾಲಿ ಹಾಗೂ ಚಳವಳಿಗಳ ಪರ್ಯಾಯ ಜನತಾ ಅಧಿವೇಶನವನ್ನು ಆಯೋಜಿಸಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತಂತೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಐಕ್ಯ ಹೋರಾಟ ಸಮಿತಿ, ರಾಜ್ಯ ಸರ್ಕಾರ ತನ್ನ ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಸುಗ್ರಿವಾಜ್ಞೆಗಳಿಗೆ ಸದನದ ಅಂಗೀಕಾರ ಪಡೆಯಲು ಸೆಪ್ಟೆಂಬರ್‌ 21 ರಂದು ಪ್ರಾರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ. ಿದರ ವಿರೋಧವಾಗಿ ಕರ್ನಾಟಕ ರೈತ, ದಲಿತ, ಕಾರ್ಮಿಕ ಚಳುವಳಿಗಳು ಹಾಗೂ ಪ್ರಗತಿಪರ ಸಂಘಟನೆಗಳು, ಅಖಿಲ ಭಾರತ ಕಿಸಾನ್‌ ಸಂಘರ್ಷ ಸಮಿತಿ ಹಾಗೂ ರಾಷ್ಟ್ರೀಯ ಕಿಸಾನ್‌ ಮಹಾಸಂಘ ಎಲ್ಲರೂ ಜಂಟಿಯಾಗಿ ಬೃಹತ್ ಸಮಾವೇಶವನ್ನು ಸೆಪ್ಟಂಬರ್‌ 21 ಕ್ಕೆ ಆಯೋಜಿಸಿದ್ದರು, ರ‍್ಯಾಲಿಬೆಳಗ್ಗೆ 11 ಕ್ಕೆ ನಗರದ ಸಿಟಿ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನಕ್ಕೆ ನಡೆಯಲಿದೆ ಎಂದು ಹೇಳಿದೆ.

ಕರ್ನಾಟಕದ ಜನರು ಎದುರಿಸುತ್ತಿರುವ ಸಮಸ್ಯೆಗಳ ಕೂಲಂಕುಶ ಚರ್ಚೆ ನಡೆಯುವ ʼಚಳವಳಿಗಳ ಪರ್ಯಾಯ ಜನತಾ ಅಧಿವೇಶನ ಸೆಪ್ಟಂಬರ್‌ 21 ರಿಂದ 30 ರವರೆಗೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಲಿದ್ದು, ಸಮಾವೇಶದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌ ಎಸ್‌ ದೊರೆಸ್ವಾಮಿ, ಯೋಗೇಂದ್ರ ಯಾದವ್‌, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌, ಕನ್ನಡದ ಹಿರಿಯ ಸಾಹಿತಿ ದೇವನೂರು ಮಹಾದೇವ ಮೊದಲಾದವರು ಉಪಸ್ಥಿತಿಯಲ್ಲಿರುತ್ತಾರೆ ಎಂದು ತಿಳಿಸಿದೆ.

ಮುಖ್ಯವಾಗಿ, ಭೂ ಸುಧಾರಣಾ ಮತ್ತು ಭೂ ಸ್ವಾಧೀನ ಕಾಯ್ದೆಗಳಿಗೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯಚ್ಛತ್ತಿ ಖಾಸಗೀಕರಣ, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ, ಸರ್ಕಾರಿ- ಸಹಕಾರಿ-ಸಾರ್ವಜನಿಕ ಉದ್ದಿಮೆಗಳು- ಬ್ಯಾಂಕ್‌ಗಳ ಮಾರಾಟ, ಜಿಎಸ್‌ಟಿ, ಸಿಎಎ, ಎನ್‌ಆರ್‌ಸಿ, ರಾಷ್ರೀಯ ಶಿಕ್ಷಣ ನೀತಿ 2020, ಮೇಲ್ವರ್ಗಕ್ಕೆ ಶೇ. 10 ಮೀಸಲಾತಿ, ಕಾರ್ಮಿಕರ ಉದ್ಯೋಗನಷ್ಟ, ಗುಂಪು ಥಳಿತ, ಮಹಿಳೆಯರ ಮೇಲೆ ಹಲ್ಲೆ, ದೌರ್ಜನ್ಯ, ಅತ್ಯಾಚಾರ, ದಲಿತರ ಕೊಲೆ, ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿರಾಕರಣೆ, ಕಾರ್ಪೊರೇಟ್‌ ಉದ್ದಿಮೆದಾರರ ಸಾಲ ಮನ್ನಾ ಮೊದಲಾದುವುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಯಲಿದೆ.

Previous Post

ಸಿದ್ದರಾಮಯ್ಯ ಆತ್ಮವಂಚಕ ರಾಜಕಾರಣಿ- ಎಚ್ ಡಿ ಕುಮಾರಸ್ವಾಮಿ

Next Post

ರೈತ ವಿರೋಧಿ ಮಸೂದೆಗಳ ಬಳಿಕ ಕಾರ್ಮಿಕ ವಿರೋಧಿ ಮಸೂದೆ ಮಂಡಿಸಿದ ಸರ್ಕಾರ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ರೈತ ವಿರೋಧಿ ಮಸೂದೆಗಳ ಬಳಿಕ ಕಾರ್ಮಿಕ ವಿರೋಧಿ ಮಸೂದೆ ಮಂಡಿಸಿದ ಸರ್ಕಾರ

ರೈತ ವಿರೋಧಿ ಮಸೂದೆಗಳ ಬಳಿಕ ಕಾರ್ಮಿಕ ವಿರೋಧಿ ಮಸೂದೆ ಮಂಡಿಸಿದ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada