• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೊಡಗಿನಲ್ಲಿ ಅಬ್ಬರದ ಮಳೆಗೆ  ಕಾಫಿ, ಕರಿಮೆಣಸಿಗೆ ಕೊಳೆ ರೋಗ

by
October 4, 2019
in ಕರ್ನಾಟಕ
0
ಕೊಡಗಿನಲ್ಲಿ ಅಬ್ಬರದ ಮಳೆಗೆ  ಕಾಫಿ
Share on WhatsAppShare on FacebookShare on Telegram

ಕಳೆದ ಎರಡು ತಿಂಗಳಿನಿಂದ ಕೊಡಗಿನಲ್ಲಿ ಸುರಿದಿರುವ ಭಾರಿ ಮಳೆಯಿಂದಾಗಿ ಕಾಫಿಗೆ ಕೊಳೆ ರೋಗ (ಕೊಳೆಯುವ ರೋಗ) ಬಾಧಿಸುತ್ತಿದೆ. ಕೆಲವು ತಗ್ಗು ಪ್ರದೇಶದಲ್ಲಿರುವ ತೋಟಗಳಲ್ಲಿ ನದಿ ನೀರು ತಿಂಗಳುಗಟ್ಟಲೆ ನಿಂತಿದ್ದರಿಂದ ಗಿಡಗಳು ಸಂಪೂರ್ಣ ಕೊಳೆತು ಹೋಗಿವೆ. ಒಂದೆಡೆ ಕಾಫಿ ದರ ಕುಸಿದು ಬೆಳೆಗಾರರು ಕಂಗಾಲಾಗಿರುವ ಸಮಯದಲ್ಲೇ ಗಿಡಗಳೂ ನಾಶವಾಗಿರುವುದು ಬೆಳೆಗಾರರನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದೆ.

ADVERTISEMENT

ಕೊಡಗಿನಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಸರಾಸರಿ ಮಳೆ 2685.96 ಮಿ.ಮೀ ಆಗಿದ್ದು ಕಳೆದ ವರ್ಷ ಇದೇ ಅವಧಿಯಲ್ಲಿ 3882.84 ಮಿ.ಮೀ ಮಳೆಯಾಗಿತ್ತು. ಕಳೆದ ವರ್ಷಕ್ಕಿಂತ ಕಡಿಮೆ ಮಳೆ ಆಗಿದ್ದರೂ ಕೂಡ ಕಾಫಿ ತೋಟಗಳಿಗೆ ಗಣನೀಯ ಪ್ರಮಾಣದಲ್ಲೇ ಹಾನಿಯಾಗಿದೆ. ಜಿಲ್ಲೆಯಲ್ಲಿ ಕಳೆದ ವರ್ಷವೇ ವಾಡಿಕೆ ಮಳೆಗಿಂತ ದುಪ್ಪಟ್ಟು ಮಳೆ ಆಗಿತ್ತು. ಆಗಲೂ ಕೃಷಿ ಬೆಳೆಗಳಿಗೆ ಅಪಾರ ಹಾನಿ ಸಂಭವಿಸಿತ್ತು.

ಕೊಡಗಿನಲ್ಲಿ ಈ ಬಾರಿ ವಾಡಿಕೆ ಮಳೆಗಿಂತಲೂ ಹೆಚ್ಚೇ ಮಳೆ ಆಗಿದ್ದು ಈಗಾಗಲೇ ಮನೆಗಳು ,ರಸ್ತೆ, ಸೇತುವೆ, ವಿದ್ಯುತ್ ಲೈನ್ ಗಳಿಗೆ ಮತ್ತು ಭತ್ತ , ಕಾಫಿ , ಕರಿ ಮೆಣಸು ಬೆಳೆಗಳಿಗೆ ಅಪಾರ ಪ್ರಮಾಣದ ಹಾನಿ ಆಗಿದೆ. ದೇಶದಲ್ಲಿ ವಾರ್ಷಿಕವಾಗಿ ಒಟ್ಟು 3.4 ಲಕ್ಷ ಟನ್‌ ಕಾಫಿ ಉತ್ಪಾದನೆ ಅಗುತಿದ್ದರೆ, ಜಿಲ್ಲೆಯ ಉತ್ಪಾದನೆ 1.2 ಲಕ್ಷ ಟನ್‌ ಗಳಷ್ಟಿದೆ. ಅಂದರೆ ದೇಶದಲ್ಲಿ ಉತ್ಪಾದನೆಯಾಗುವ ಒಟ್ಟು ಕಾಫಿ ಬೆಳೆಯ ಮೂರನೇ ಒಂದರಷ್ಟು ಪಾಲನ್ನು ಹೊಂದಿರುವ ಹೆಗ್ಗಳಿಕೆ ಜಿಲ್ಲೆಯದ್ದಾಗಿದೆ.

ಆದರೆ ಬೆಳೆಗಾರರು ಮಾತ್ರ ಇನ್ನೂ ಸಂಕಷ್ಟದಲ್ಲೇ ಇದ್ದಾರೆ. ಕಳೆದ ವರ್ಷದಿಂದ ಕಾಫಿಗೆ ದರ ಕುಸಿದಿದ್ದು 50 ಕೆಜಿ ರೋಬಸ್ಟಾ ಪಾರ್ಚ್‍ಮೆಂಟ್ ಕಾಫಿ ದರ 9,500 ರೂಪಾಯಿಗಳಿಂದ 7,000 ರೂಪಾಯಿಗಳ ಆಸು ಪಾಸಿಗೆ ಕುಸಿದಿದೆ. ಕಾಫಿಯ ಮಿಶ್ರ ಬೆಳೆ ಆಗಿರುವ ಕರಿಮೆಣಸಿನ ದರ ಕೂಡ ಪಾತಾಳ ಕಂಡಿದೆ. ಕೇವಲ ಎರಡು ವರ್ಷಗಳ ಹಿಂದೆ ಕೆಜಿಯೊಂದರ 8000 ರೂಪಾಯಿಗಳಿಗೆ ಮಾರಾಟವಾಗುತಿದ್ದ ಕರಿಮೆಣಸು ಇಂದಿನ ಮಾರುಕಟ್ಟೆಯ ದರ ಕೇವಲ 280 ರೂಪಾಯಿಗಳಾಗಿದೆ. ಹೀಗಾಗಿ ಕೊಡಗಿನ ರೈತ ಸಂಕಷ್ಟದಲ್ಲಿದ್ದಾನೆ.

ಜಿಲ್ಲೆಯ ಕಾಫಿ ಬೆಳೆಗೆ ವಾರ್ಷಿಕ ಸುಮಾರು 60 ರಿಂದ 80 ಇಂಚಿನಷ್ಟು ಮಳೆ ಅನುಕೂಲಕರವಾಗಿದೆ. ಆದರೆ ವಿಪರೀತ ಮಳೆಯಿಂದಾಗಿ ಕಾಫಿ ಬೆಳೆಗಾರರು ತತ್ತರಿಸಿಹೋಗಿದ್ದಾರೆ. ಮಡಿಕೇರಿ ತಾಲ್ಲೂಕು ನಾಪೋಕ್ಲು ಸಮೀಪದ ಬೇತು ಗ್ರಾಮದ ರೈತ ಪಿ ಎಂ ಬೋಪಯ್ಯ ಅವರನ್ನು ಮಾತಾಡಿಸಿದಾಗ ಚಿಂತೆಯೆ ಸರಮಾಲೆಯನ್ನೇ ತೆರೆದಿಟ್ಟರು. ಒಂದೆಡೆ ಕೊಡಗಿನಲ್ಲಿ ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರ ಕೊರತೆ ಇದ್ದು ಗಂಡಸರಿಗೆ ದಿನಕೂಲಿ 350-400 ರೂಪಾಯಿ ತಲುಪಿದೆ. ಆದರೆ ಕಾಫಿ ದರ ಮಾತ್ರ ಕುಸಿದಿದೆ. ಹೀಗಾದರೆ ತೋಟಗಳನ್ನು ನಿರ್ವಹಿಸುವುದೇ ಕಷ್ಟ ಎಂದರು.

ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಗ್ರಾಮದ ಸಣ್ಣ ರೈತ ಹೂವಯ್ಯ ಅವರನ್ನು ಮಾತಾಡಿಸಿದಾಗ ತೋಟಕ್ಕೆ ಬಳಸುವ ಗೊಬ್ಬರ , ಕ್ರಿಮಿನಾಶಕ, ರಾಸಾಯನಿಕ, ಎಲ್ಲಾ ವಸ್ತುಗಳ ಬೆಲೆ ಮೂರು ಪಟ್ಟು ಜಾಸ್ತಿಯಾಗಿದೆ ಅದರೆ ಉತ್ಪನ್ನಗಳ ಬೆಲೆ ಕುಸಿದಿರುವುದು ಶೋಚನೀಯ. ಕೇಂದ್ರ ಸರ್ಕಾರ ಕಾಫಿ ಹಾಗೂ ಕರಿಮೆಣಸಿಗೆ ಬೆಂಬಲ ಬೆಲೆ ನೀಡಿದರೆ ಮಾತ್ರ ತೋಟಗಳು ಉಳಿಯುತ್ತವೆ ಎಂದರು.

ಕಾಫಿ ಬೆಳೆಗಾರರ ಸಂಘದ ಅದ್ಯಕ್ಷ ಮೋಹನ್‌ ಬೋಪಣ್ಣ ಅವರು, “ಈಗಾಗಲೇ ಬೆಳೆಗಾರರ ನಿಯೋಗ ದೆಹಲಿಗೆ ತೆರಳಿ ವಾಣಿಜ್ಯ ಸಚಿವರಿಗೆ ನಮ್ಮ ಸಂಕಷ್ಟ ಮನದಟ್ಟು ಮಾಡಿದೆ. ಕೊಡಗು , ಹಾಸನ , ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಕಾಫಿ ಬೆಳೆಗಾರ ಸಂಘಗಳೂ ನಿರ್ಣಯವೊಂದನ್ನು ಮಾಡಿಕೊಂಡಿದ್ದು ಎಲ್ಲ ಕಾರ್ಮಿಕರಿಗೂ ದಿನಕ್ಕೆ ಎಂಟು ಗಂಟೆಗಳ ಕೆಲಸ ಮಾಡಲೇಬೆಕೆಂದು ಸೂಚಿಸಲಾಗಿದೆ. ಏಕೆಂದರೆ ಸರ್ಕಾರ ನಿಗದಿಪಡಿಸಿದ ದಿನ ಕೂಲಿಯನ್ನೇ ಎಲ್ಲರೂ ನೀಡುತ್ತಿದ್ದಾರೆ. ಹೀಗಿರುವಾಗ 8 ಘಂಟೆ ಕೆಲಸ ಮಾಡುವುದು ನ್ಯಾಯ ಸಮ್ಮತ ಎಂದರು. ಕೆಲವೆಡೆಗಳಲ್ಲಿ ಬೆಳಿಗ್ಗೆ 9.30 ಘಂಟೆಗೆ ಕೆಲಸಕ್ಕೆ ಬಂದು ಮೂರು ಗಂಟೆಗೇ ಹೋಗುತ್ತಾರೆ. ಇದರಿಂದ ಬೆಳೆಗಾರರು ಇನ್ನಷ್ಟು ನಷ್ಟ ಅನುಭವಿಸುತಿದ್ದಾರೆ,’’ ಎಂದರು.

ಕಾಫಿ ಮಂಡಳಿಯು ಪ್ರತೀ ವರ್ಷ ಉತ್ಪಾದನೆಯ ಅಂದಾಜನ್ನು ಮಾಡುತ್ತಿದ್ದು ಇದನ್ನು ವರ್ಷದಲ್ಲಿ ಎರಡು ಬಾರಿ, ಅಂದರೆ ಮಳೆಗೂ ಮುನ್ನ ಹಾಗೂ ಮಳೆಯ ನಂತರ ಮಾಡಲಾಗುತ್ತದೆ. ಕಳೆದ ವರ್ಷ ದೇಶದ ಒಟ್ಟು ಕಾಫಿ ಉತ್ಪಾದನೆ ಸುಮಾರು 3.19 ಲಕ್ಷ ಟನ್‌ ಗಳಿಗೆ ಕುಸಿದಿದೆ. ಕಾಫಿ ಮಂಡಳಿಯ ಈ ವರ್ಷದ ಬೆಳೆ ಅಂದಾಜಿನ ಪ್ರಕಾರ ದೇಶದ ಒಟ್ಟು ಉತ್ಪಾದನೆ 3 ಲಕ್ಷ ಟನ್‌ ಗಳನ್ನು ಮೀರುವುದಿಲ್ಲ. ಏಕೆಂದರೆ, ಕಳೆದ ವರ್ಷ ಕೊಡಗಿನಲ್ಲಿ ಮಾತ್ರ ಕಾಫಿ ಬೆಳೆ ನಾಶವಾಗಿತ್ತು. ಆದರೆ, ಈ ಬಾರಿ ಚಿಕ್ಕಮಗಳೂರಿನಲ್ಲಿಯೂ ಹೆಚ್ಚಿನ ನಷ್ಟ ಸಂಭವಿಸಿದೆ ಎನ್ನಲಾಗಿದೆ.

ಈ ಕುರಿತು ವೀರಾಜಪೇಟೆ ಉಪ ವಿಭಾಗದ ಕಾಫಿ ಮಂಡಳಿಯ ಉಪ ನಿರ್ದೇಶಕ ಸತೀಶ್‌ ಚಂದ್ರ ಅವರನ್ನು ಮಾತಾಡಿಸಿದಾಗ ವೀರಾಜಪೇಟೆ ತಾಲ್ಲೂಕು ಒಂದರಲ್ಲೇ ಈ ಬಾರಿ ಶೇಕಡಾ 25 ರಷ್ಟು ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದರು. ಕೊಡಗಿನಲ್ಲಿ ಈ ಬಾರಿ ಹೆಚ್ಚು ಭೂಕುಸಿತ ಮತ್ತು ಮಳೆ ಆಗಿದ್ದು ಕಳೆದ ವರ್ಷ ಮಡಿಕೇರಿಯಲ್ಲಿ ಹೆಚ್ಚು ಬೆಳೆ ನಷ್ಟ ಆಗಿತ್ತು ಎಂದರು. ಈ ಬಾರಿ ನದಿ ಪಕ್ಕದ ತೋಟಗಳಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ನೀರು ನಿಂತದ್ದರಿಂದ ಗಿಡಗಳೇ ಕೊಳೆತು ಹೋಗಿವೆ ಎಂದರು. ಅನೇಕ ತೋಟಗಳಲ್ಲಿ ಕಾಫಿಯು ಹಣ್ಣಾಗುವ ಮೊದಲೇ ಉದುರಿರುವುದೂ ನಷ್ಟದ ತೀವ್ರತೆ ಹೆಚ್ಚಿಸಲಿದೆ ಎಂದೂ ಅವರು ಅಭಿಪ್ರಾಯಿಸಿದರು. ಕೇಂದ್ರ ಸರ್ಕಾರ ಬೆಳೆಗಾರರ ನೋವಿಗೆ ಶೀಘ್ರ ಸ್ಪಂದಿಸುವುದೇ ಎಂದು ಕಾದು ನೋಡಬೇಕಷ್ಟೆ.

Tags: Central Coffee BoardCoffee Crop LossGovernment of IndiaGovernment of KarnatakaKodagu DistrictPepper Cropಕರಿಮೆಣಸು ಬೆಳೆಕರ್ನಾಟಕ ಸರ್ಕಾರಕಾಫಿ ಬೆಳೆ ನಾಶಕೇಂದ್ರ ಕಾಫಿ ಬೋರ್ಡ್ಕೊಡಗು ಜಿಲ್ಲೆಭಾರತ ಸರ್ಕಾರ
Previous Post

ಎನ್ಆರ್ ಸಿ ಅನ್ಯಾಯ: ಒಂದು ಲಕ್ಷಕ್ಕೂ ಹೆಚ್ಚು ಗೋರ್ಖಾ ಸಮುದಾಯ ಹೊರಗೆ

Next Post

ಬಿಜೆಪಿಯ ಪೊಳ್ಳು ಅಭಿವೃದ್ಧಿ ಅನಾವರಣಗೊಳಿಸಿದ ಉತ್ತರದ ‘ನೆರೆ‘

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
ಬಿಜೆಪಿಯ ಪೊಳ್ಳು ಅಭಿವೃದ್ಧಿ ಅನಾವರಣಗೊಳಿಸಿದ ಉತ್ತರದ ‘ನೆರೆ‘

ಬಿಜೆಪಿಯ ಪೊಳ್ಳು ಅಭಿವೃದ್ಧಿ ಅನಾವರಣಗೊಳಿಸಿದ ಉತ್ತರದ ‘ನೆರೆ‘

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada