• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೊಡಗಿನಲ್ಲಿ ಅಭಿವೃದ್ದಿ ಕಾರ್ಯಕ್ಕೆ ಪರಿಸರ ನಿಯಮಾವಳಿ ಮತ್ತು ಕಾಯ್ದೆಯ ಅಡ್ಡಿ

by
September 13, 2020
in ಕರ್ನಾಟಕ
0
ಕೊಡಗಿನಲ್ಲಿ ಅಭಿವೃದ್ದಿ ಕಾರ್ಯಕ್ಕೆ ಪರಿಸರ ನಿಯಮಾವಳಿ ಮತ್ತು ಕಾಯ್ದೆಯ ಅಡ್ಡಿ
Share on WhatsAppShare on FacebookShare on Telegram

ಪುಟ್ಟ ಜಿಲ್ಲೆ ಕೊಡಗು ಪಶ್ಚಿಮ ಘಟ್ಟಗಳ ಪರ್ವತ ಶ್ರೇಣೀಯಲ್ಲಿದ್ದು ಅಗಾಧ ಹಸಿರು ಸಂಪತ್ತನ್ನು ಹೊಂದಿರುವ ಪ್ರದೇಶವಾಗಿದೆ. ಅಗಣಿತ ಅರಣ್ಯ ಸಂಪತ್ತು ಇರುವುದರಿಂದ ಜಿಲ್ಲೆಯ ಹವಾಮಾನ ತಂಪಾಗಿಯೇ ಇದೆ. ಆದರೆ ಈ ಪ್ರಕೃತಿ ಸಂಪತ್ತಿನ ನಡುವೆ ಜನರೂ ಕೂಡ ಬದುಕಲೇ ಬೇಕಲ್ಲವೆ? ಬದುಕಬೇಕಾದರೆ ಮೂಲ ಸೌಕರ್ಯಗಳೂ ಬೇಕಲ್ಲವೆ? ಪುಟ್ಟ‌ ಜಿಲ್ಲೆ ಕೊಡಗಿಗೆ ಇಂದಿಗೂ ರೈಲ್ವೇ ಸಂಪರ್ಕವಿಲ್ಲ. ಜನತೆ ಅಗ್ಗದ ದರದ ಪ್ರಯಾಣದಿಂದ ವಂಚಿತವಾಗಿರುವ ರಾಜ್ಯದ ಏಕೈಕ ಜಿಲ್ಲೆ ಇದಾಗಿದೆ. ಇವತ್ತಿಗೂ ಕೊಡಗಿನಲ್ಲಿ ಜನತೆ ಮೂರು ತಿಂಗಳ ಮಳೆಗಾಲದ ಅವ್ಯವಸ್ಥೆ ತೊಂದರೆಗಳನ್ನು ಅನುಭವಿಸಬೇಕಾಗಿದೆ. ಹಾಗೆ ಅನುಭವಿಸಿದರೂ ಕೊಡಗಿನಲ್ಲಿ ಉತ್ಪತ್ತಿಯಾಗುವ ಮಳೆ ನೀರು ಬಹುತೇಕ ಕೊಡಗಿಗೆ ಅವಶ್ಯಕತೆ ಇಲ್ಲ. ಕೊಡಗಿನಲ್ಲಿ ಉತ್ಪತ್ತಿ ಆಗುವ ನೀರು ಕೆಅರ್‌ಎಸ್‌ ಸೇರಿ ರಾಜ್ಯ ಮತ್ತು ತಮಿಳುನಾಡಿನ ಲಕ್ಷಾಂತರ ರೈತರ ಬಾಳನ್ನು ಹಸನುಗೊಳಿಸಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲೆಯಲ್ಲಿ ಒಟ್ಟು 4.10 ಲಕ್ಷ ಹೆಕ್ಟೇರ್‌ ಭೂಮಿ ಇದ್ದರೆ ಅದರಲ್ಲಿ 1.35 ಲಕ್ಷ ಹೆಕ್ಟೇರ್‌ ಗಳಷ್ಟು ದಟ್ಟಾರಣ್ಯ ಇದೆ. ಈ ಅರಣ್ಯ ಇರುವುದರಿಂದ ಕಾಡಿನ ಮದ್ಯೆ ವಿದ್ಯುತ್‌ ಲೈನ್, ರಸ್ತೆ, ರೈಲು ಸೇತುವೆ ಇನ್ಯಾವುದೇ ರೀತಿಯ ಅಭಿವೃದ್ದಿ ಕಾರ್ಯ ಕೈಗೊಳ್ಳಲು ಅವಕಾಶವೇ ಇಲ್ಲ ಹಾಗಾಗಿ ಜನತೆ ಮೂಲ ಸೌಕರ್ಯಗಳಿಂದ ವಂಚಿತವಾಗಿ ಶ್ರಮ, ಹಣ ಹಾಗೂ ಸಮಯವನ್ನೂ ಹೆಚ್ಚಾಗಿ ವ್ಯಯಿಸಬೇಕಾಗಿದೆ. ಇದಲ್ಲದೆ ಅರಣ್ಯದೊಳಗೇ ವಾಸಿಸುತ್ತಿರುವ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳು ಇಂದಿಗೂ ಮೂಲ ಸೌಕರ್ಯ ದಿಂದ ವಂಚಿತರಾಗಿದ್ದಾರೆ. ಕೊಡಗು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಇಲ್ಲಿನ ಗ್ರಾಮೀಣ ಪ್ರದೇಶದಲ್ಲಿ ಬಯಲು ಸೀಮೆಯಂತೆ ಮನೆಗಳು ಗುಂಪು ಗುಂಪಾಗಿ ಇರುವುದಿಲ್ಲ. ದೂರಕ್ಕೆ ಅಲ್ಲೊಂದು ಇಲ್ಲೊಂದು ಇರುತ್ತವೆ. ಇಲ್ಲಿ ಬಸ್‌ ಸೌಕರ್ಯ ಕೂಡ ಸರಿಯಾಗಿ ಇರುವುದಿಲ್ಲ. ಬಹುತೇಕರು ಖಾಸಗೀ ವಾಹನಗಳನ್ನೆ ಹೊಂದಿರುತ್ತಾರೆ. ಅರಣ್ಯ ಜಾಸ್ತಿ ಇರುವುದರಿಂದ ಇಲ್ಲಿನ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಗಳ ಕಾಟ ಇದ್ದೇ ಇದೆ. ಇನ್ನು ಮನೆಗೆ ಹತ್ತಿರವಾಗುವ ರಸ್ತೆಗಳ ನಿರ್ಮಾಣಕ್ಕೆ ಅರಣ್ಯ ಕಾಯ್ದೆಗಳು ಅಡ್ಡಿಯಾಗಿವೆ. ಹೀಗಾಗಿ ಜನತೆ ಇಂದಿಗೂ ಸೂಕ್ತ ಸೌಕರ್ಯಗಳಿಲ್ಲದೆ ಹೈರಾಣಾಗಿದ್ದಾರೆ. ಅಂತಹ ಸೌಕರ್ಯ ವಂಚಿತ ಗ್ರಾಮವೊಂದರ ಕ(ವ್ಯ)ಥೆ ಇದಾಗಿದೆ.

ದಕ್ಷಿಣ ಕೊಡಗಿನ ವೀರಾಜಪೇಟೆ ತಾಲೂಕಿನ ಕೇರಳ ಗಡಿ ಪ್ರದೇಶವಾದ ಬಿರುನಾಣಿ ಗ್ರಾಮಕ್ಕೆ ಬಿಟ್ಟಂಗಾಲ ಕೂಟಿಯಾಲ ಮಾರ್ಗವಾಗಿ ರಸ್ತೆ ಸಂಪರ್ಕ ಕಲ್ಪಿಸುವ ಉತ್ತಮ ಯೋಜನೆಯೊಂದು ನೆನೆಗುದಿಗೆ ಬಿದ್ದಿದ್ದು, ಇದೀಗ ಸುಮಾರು 20 ವರ್ಷಗಳೇ ಕಳೆದು ಹೋಗಿವೆ. ಬಿ.ಶೆಟ್ಟಿಗೇರಿ – ಬಾಡಗರಕೇರಿ ಗ್ರಾಮದ ನಡುವೆ ಹರಿಯುವ ಬರಪೊಳೆಗೆ ಕೂಟಿಯಾಲ ಎಂಬಲ್ಲಿ ಸೇತುವೆಯನ್ನು ನಿರ್ಮಿಸಿ ರಸ್ತೆ ಸಂಪರ್ಕ ಕಲ್ಪಿಸಿದಲ್ಲಿ ಆ ವಿಭಾಗದ ಜನತೆಗೆ ಹೆಚ್ಚಿನ ಅನುಕೂಲ ಆಗುತಿತ್ತು. ಏಕೆಂದರೆ ಬಿರುನಾಣಿಯಿಂದ ವೀರಾಜಪೇಟೆ ತಾಲ್ಲೂಕು ಕೇಂದ್ರಕ್ಕೆ ಬರಲು ಜನರು 65 ಕಿಲೋಮೀಟರ್‌ ಪ್ರಯಾಣ ಮಾಡಬೇಕಾಗಿದೆ. ಈ ಉದ್ದೇಶಿತ ರಸ್ತೆ ನಿರ್ಮಾಣ ಅಗಿದ್ದಲ್ಲಿ ಅಂತರ 20 ಕಿಲೋಮೀಟರ್‌ ಗಳಷ್ಟು ಕಡಿಮೆ ಆಗುತಿತ್ತು. ಜನರು ಈಗ ರಸ್ತೆ ಇಲ್ಲದ ಕಾರಣಕ್ಕೆ 20 ಕಿಲೋಮೀಟರ್‌ ಹೆಚ್ಚಾಗಿ ಪ್ರಯಾಣ ಮಾಡಬೇಕಾಗಿದೆ.

ಜನರ ಒತ್ತಾಯದ ಮೇರೆಗೆ ಯಂ.ಸಿ.ನಾಣಯ್ಯ ಅವರು ಸಚಿವರಾಗಿದ್ದ ಸಂದರ್ಭ 1996ರಲ್ಲಿ ನಬಾರ್ಡ್ ಮೂಲಕ ಈ ರಸ್ತೆ ನಿರ್ಮಾಣ ಯೋಜನೆಯನ್ನು ಹಮ್ಮಿಕೊಳ್ಳಲಾಗಿತ್ತು. ಸೇತುವೆ ನಿರ್ಮಾಣಕ್ಕೆ ರೂ. 69.55 ಲಕ್ಷ ಅನುದಾನ ಮಂಜೂರಾಗಿದ್ದು, ಬೃಹತ್ ಸೇತುವೆ ಕೆಲಸ 2000ನೇ ಇಸವಿ ವೇಳೆಗೆ ಬಹುತೇಕ ಪೂರ್ಣಗೊಂಡಿದೆ. ಈಗಲೂ ಪೂರ್ಣ ಗೊಂಡಿರುವ ಈ ಸೇತುವೆ ಬರಪೊಳೆಯ ನಡುವೆ ಯಾವ ಪ್ರಯೋಜನಕ್ಕೂ ಇಲ್ಲದಂತೆ ನಿಂತಿರುವದನ್ನು ಕಾಣಬಹುದು. 69.55 ಲಕ್ಷ ವೆಚ್ಚದಲ್ಲಿ ಈ ಸೇತುವೆಯೇನೋ ನಿರ್ಮಾಣಗೊಂಡಿತಾದರೂ, ಎದುರಾಗಿದ್ದು ರಸ್ತೆಯ ವಿವಾದ. ಬಿ. ಶೆಟ್ಟಿಗೇರಿ ಕಡೆಯಿಂದ ಸೇತುವೆ ತನಕ ಸಮಸ್ಯೆ ಇಲ್ಲವಾದರೂ ಬಾಡಗರಕೇರಿ ಕಡೆಯಿಂದ ಬರುವ ಮಾರ್ಗ ಸುಮಾರು 600 ಮೀಟರ್ನಷ್ಟು ದೂರ ವನ್ಯಜೀವಿ ತಾಣದ ನಡುವೆ ಬರಲಿದೆ ಎಂಬ ಕಾರಣಕ್ಕಾಗಿ ಇದಕ್ಕೆ ತಡೆಯುಂಟಾಗಿತ್ತು. ಈ ಬಗ್ಗೆ ಸೂಕ್ತ ನಿಯಮ ಪಾಲಿಸಿಲ್ಲ ಎಂಬ ಕಾರಣವನ್ನು ಮುಂದಿಟ್ಟು ಕೆಲವು ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ನ್ಯಾಯಾಲಯದ ಮೆಟ್ಟಿಲನ್ನೂ ಏರಿದ್ದರು.

ಇದೇ ಸಂದರ್ಭದಲ್ಲಿ ಮಡಿಕೇರಿಯಿಂದ ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ಕಡಮಕಲ್ಲು ರಸ್ತೆ ವಿವಾದ, ದಬ್ಬಡ್ಕ ರಸ್ತೆ ವಿವಾದವೂ ಇದಕ್ಕೆ ಸೇರಿಕೊಂಡಿತ್ತು. ಪರಿಸರವಾದಿ ನಿವೃತ್ತ ಏರ್‌ ಮಾರ್ಷಲ್ ಕೆ.ಸಿ. ಕಾರ್ಯಪ್ಪ ಹಾಗೂ ಇತರರು ಅರಣ್ಯದೊಳಗೆ ರಸ್ತೆ ನಿರ್ಮಾಣದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್‌ ಅರ್ಜಿ ಸಲ್ಲಿಸುವ ಮೂಲಕ ಪ್ರಶ್ನಿಸಿದ್ದರು. ನಂತರ ಕೂಟಿಯಾಲ ರಸ್ತೆ ಕೆಲಸಕ್ಕೆ ಅಡಚಣೆಯಾಗಿ ಕೆಲಸ ಸ್ಥಗಿತಗೊಂಡಿದೆ. ಸೇತುವೆ ನಿರ್ಮಾಣದ ಬಳಿಕ ರಸ್ತೆ ಸಂಪರ್ಕಕ್ಕೆಂದು ಬಿ.ಶೆಟ್ಟಿಗೇರಿ ಕಡೆಯಿಂದ ರೂ. 1 ಕೋಟಿ ಹಣ ಮಂಜೂರಾಗಿ ಇದರಲ್ಲಿ ಸೇತುವೆ ತನಕ ಸುಮಾರು 18 ಲಕ್ಷದಲ್ಲಿ ಕಚ್ಚಾ ರಸ್ತೆಯೂ ನಿರ್ಮಾಣವಾಗಿದೆ. ಬಿರುನಾಣಿ ಕಡೆಯಿಂದ ರೂ. 1.17 ಕೋಟಿ ಅನುದಾನ ಮಂಜೂರಾತಿಯಾಗಿದ್ದರೂ ಅರಣ್ಯ ಪ್ರದೇಶದ ವಿವಾದದಿಂದಾಗಿ ಇದು ಟೆಂಡರ್ ಪ್ರಕ್ರಿಯೆಗಷ್ಟೇ ಸೀಮಿತವಾಗಿ ಯಾವದೇ ಕೆಲಸ ಮುಂದುವರಿಯಲಿಲ್ಲ.

ಲೋಕೋಪಯೋಗಿ ಇಲಾಖೆ ಮೂಲಕ ಒಡಂಬಡಿಕೆ (ಎಂಓಯು)ಯಂತೆ ಕೆಲಸ ಪ್ರಾರಂಭಿಸಲಾಗಿತ್ತು. ಆದರೆ ಲೋಕೋಪಯೋಗಿ ಇಲಾಖೆ ಅರಣ್ಯ ಪ್ರದೇಶದ ನಡುವೆ ರಸ್ತೆ ನಿರ್ಮಾಣಕ್ಕೆ ಅನುಸರಿಸಬೇಕಾಗಿದ್ದ ಸೂಕ್ತ ನಿಯಮವನ್ನು ಪಾಲಿಸಿಲ್ಲ ಎಂಬದು ವಿವಾದ ಆರಂಭವಾಗಲು ಕಾರಣವಾಗಿತ್ತು. ವಿವಾದದ ಬಳಿಕ ಆ ವ್ಯಾಪ್ತಿಯ ಸಾರ್ವಜನಿಕರು, ಜನಪ್ರತಿನಿಧಿಗಳು, ಇನ್ನಿತರ ಪ್ರಮುಖರು ಯೋಜನೆ ಕಾರ್ಯಗತಕ್ಕೆ ಸಾಕಷ್ಟು ಪ್ರಯತ್ನ ನಡೆಸಿದರಾದರೂ ಫಲಸಿಗಲಿಲ್ಲ. ಈ ವಿಚಾರ ವಿಧಾನಸಭೆ – ವಿಧಾನಪರಿಷತ್ ನಲ್ಲೂ ಪ್ರಸ್ತಾಪಗೊಂಡಿದೆ. ಹಲವು ಭರವಸೆಗಳು, ಸಲಹೆಗಳು ಬಂದಿವೆಯೇ ವಿನಹ ಸುಮಾರು 20 ಕಿ.ಮೀ. ಅಂತರ ಕಡಿಮೆ ಮಾಡುವ ಅಥವಾ ಈಗಾಗಲೇ ವೆಚ್ಚವಾಗಿ ಹೋಗಿರುವ ಸುಮಾರು 1 ಕೋಟಿ ಹಣದ ಕೆಲಸವನ್ನು ಸದ್ಭಳಕೆ ಮಾಡಿಕೊಳ್ಳುವ ಕುರಿತು ಜನಪ್ರತಿನಿಧಿಗಳು ಮೊನ್ನೆ ಮೊನ್ನೆಯ ತನಕ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದರು.

ಈಗಿನ ಈ ಕ್ಷೇತ್ರದ ಜಿ.ಪಂ. ಸದಸ್ಯೆ ಭವ್ಯ, ವೀರಾಜಪೇಟೆ ತಾ.ಪಂ. ಉಪಾಧ್ಯಕ್ಷ, ಬಿರುನಾಣಿಯವರೇ ಆಗಿರುವ ನೆಲ್ಲೀರ ಚಲನ್ . ವೀರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಕೆ.ಜಿ. ಬೋಪಯ್ಯ ಎಂಎಲ್ಸಿ ವೀಣಾ ಅಚ್ಚಯ್ಯ ಅವರು ಈ ಬಗ್ಗೆ ಜನತೆಯ ಬೇಡಿಕೆಗೆ ಸಹಮತದೊಂದಿಗೆ ನಡೆಸಿದ ಕೆಲವು ಪ್ರಯತ್ನವೂ ಪ್ರಯೋಜನ ಕಂಡಿಲ್ಲ. ಚುನಾಯಿತ ಪ್ರತಿನಿಧಿಗಳು ಪಕ್ಷ ಬೇಧ ಮರೆತು ರಾಜಕೀಯ ಇಚ್ಚಾ ಶಕ್ತಿ ಪ್ರದರ್ಶಿಸಿ ಒಮ್ಮತದಿಂದ ರಸ್ತೆ ನಿರ್ಮಾಣಕ್ಕೆ ಶ್ರಮಿಸುತಿದ್ದರೂ ಕಾನೂನಿನ ತೊಡಕಿನಿಂದಾಗಿ ಜನರು ರಸ್ತೆ ಸೌಲಭ್ಯದಿಂದ ವಂಚಿತರಾಗಬೇಕಾಗಿರುವುದು ನಿಜಕ್ಕೂ ವಿಷಾದನೀಯ.

Tags: ಕೊಡಗುಪರಿಸರ
Previous Post

ನ್ಯಾಯಾಂಗ ನಿಂದನೆ ಪ್ರಕರಣ: ಹೊಸ ಪೀಠದಲ್ಲಿ ವಿಚಾರಣೆ ಆರಂಭಿಸಲು ಅರ್ಜಿ ಸಲ್ಲಿಸಿದ ಪ್ರಶಾಂತ್‌ ಭೂಷಣ್‌

Next Post

ಸೈನಿಕರು ಮತ್ತು ಸೇನಾ ಅಧಿಕಾರಿಗಳ ನಡುವೆ ತಾರತಮ್ಯ: ರಾಹುಲ್ ಗಾಂಧಿ ಆರೋಪವನ್ನು ಒಪ್ಪಿದ ಕೇಂದ್ರ ಸರ್ಕಾರ

Related Posts

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
0

ಪದ್ಮಶ್ರೀ ಪ್ರಶಸ್ತಿ ವಿಜೇತ ಎಂ ಎಸ್ ಸತ್ಯು ರವರಿಗೆ ಜುಲೈ 6 ರಂದು 96ನೇ ಹುಟ್ಟುಹಬ್ಬದ ಸಂಭ್ರಮ. ಈ ಸಡಗರವನ್ನು "ಕೊರಗಜ್ಜ" ಸಿನಿಮಾದ ನಿರ್ದೇಶಕ ಸುಧೀರ್ ಅತ್ತಾವರ್...

Read moreDetails

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025
Next Post
ಸೈನಿಕರು ಮತ್ತು ಸೇನಾ ಅಧಿಕಾರಿಗಳ ನಡುವೆ ತಾರತಮ್ಯ: ರಾಹುಲ್ ಗಾಂಧಿ ಆರೋಪವನ್ನು ಒಪ್ಪಿದ ಕೇಂದ್ರ ಸರ್ಕಾರ

ಸೈನಿಕರು ಮತ್ತು ಸೇನಾ ಅಧಿಕಾರಿಗಳ ನಡುವೆ ತಾರತಮ್ಯ: ರಾಹುಲ್ ಗಾಂಧಿ ಆರೋಪವನ್ನು ಒಪ್ಪಿದ ಕೇಂದ್ರ ಸರ್ಕಾರ

Please login to join discussion

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada