• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡಾತಂಕದ ಮಧ್ಯೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಬೇಕಾಗಿತ್ತಾ? – ತೋಂಟದ ಸಿದ್ಧರಾಮ ಸ್ವಾಮಿ ಪ್ರಶ್ನೆ

by
November 17, 2020
in ಕರ್ನಾಟಕ
0
ಕೋವಿಡಾತಂಕದ ಮಧ್ಯೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಬೇಕಾಗಿತ್ತಾ? - ತೋಂಟದ ಸಿದ್ಧರಾಮ ಸ್ವಾಮಿ ಪ್ರಶ್ನೆ
Share on WhatsAppShare on FacebookShare on Telegram

ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರು ಇದೀಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಘೋಷಣೆ ಮಾಡಿದ್ದಾರೆ. ಅದಕ್ಕೆ ಹಲವರು ಆಕ್ಷೇಪವನ್ನು ಎತ್ತಿದ್ದು ಗದುಗಿನ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಇದಕ್ಕೆ ಯಾವುದೇ ಗೊತ್ತು ಗುರಿಗಳಾಗಲಿ, ಸ್ಪಷ್ಟತೆಯಾಗಲಿ ಕಂಡುಬರುತ್ತಿಲ್ಲ ಎಂದಿದ್ದಾರೆ.

ADVERTISEMENT

ಶ್ರೀಗಳ ಅಭಿಪ್ರಾಯವನ್ನು ಹಲವರು ಸಮರ್ಥಿಸಿಕೊಂಡಿದ್ದು, ಕೋವಿಡಾತಂಕವೂ ಇನ್ನು ಕೊನೆಯಾಗಿಲ್ಲ ಅದರ ಮಧ್ಯೆ ಇವೆಲ್ಲ ಘೋಷಣೆಗಳು ಯಾಕೆ? ಮತ ಓಲೈಕೆಗೋ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಶ್ರೀಗಳನ್ನು ಪ್ರತಿಧ್ವನಿ ತಂಡ ಮಾತನಾಡಿಸಿದಾಗ ಅವರು ಹೇಳಿದ್ದು ಹೀಗೆ:

ಈ ಅಭಿವೃದ್ಧಿ ನಿಗಮಕ್ಕೆ ಯಾವುದೇ ಅನುದಾನವನ್ನು ಘೋಷಿಸಿಲ್ಲ ಮತ್ತು ಬಿಡುಗಡೆ ಮಾಡಿಲ್ಲ. ಅಷ್ಟೇ ಅಲ್ಲದೆ ಇದರ ಪ್ರಯೋಜನ ಯಾರಿಗೆ? ಇದರ ಫಲಾನುಭವಿಗಳು ಯಾರು ಎಂಬುದು ಸಂದಿಗ್ಧವಾಗಿದೆ. ಇತ್ತೀಚೆಗೆ ಚುನಾವಣೆಯ ಸಂದರ್ಭದಲ್ಲಿ ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ಅದು ಗೊಲ್ಲ ಅಭಿವೃದ್ಧಿ ನಿಗಮವೊ? ಅಥವಾ ಕಾಡುಗೊಲ್ಲ ಅಭಿವೃದ್ಧಿ ನಿಗಮವೊ? ಎಂಬ ಸಂದೇಹ ಉಂಟಾಗಿ ಆ ಸಮುದಾಯದಲ್ಲಿ ಗೊಂದಲವನ್ನುಂಟು ಮಾಡಿದೆ. ಅದೇ ರೀತಿ ಈ ಅಭಿವೃದ್ಧಿ ನಿಗಮದ ಪ್ರಯೋಜನ ಯಾರಿಗೆ? ಇದು ವೀರಶೈವರಿಗೊ? ಲಿಂಗಾಯತರಿಗೊ? ಅಥವಾ ವೀರಶೈವ ಲಿಂಗಾಯತ ಎಂದು ಸ್ಪಷ್ಟವಾಗಿ ಪ್ರಮಾಣಪತ್ರ ಪಡೆದವರಿಗೊ? ಎಂಬುದು ತಿಳಿದಿಲ್ಲ. ಬಹಳಷ್ಟು ಲಿಂಗಾಯತರ ಜಾತಿ ಪ್ರಮಾಣಪತ್ರದಲ್ಲಿ ‘ಹಿಂದೂ ಲಿಂಗಾಯತ’ ಎಂದಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಪ್ರಯೋಜನ ಈ ಲಿಂಗಾಯತರಿಗೆ ದೊರೆಯಬಹುದೇ ಎಂಬುದು ಸಂದೇಹಾಸ್ಪದ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಚಿಸಿದ ಈ ನಿಗಮವನ್ನು ಕುರಿತು ಸಾರ್ವಜನಿಕ ಚರ್ಚೆಯ ಅಗತ್ಯವಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈಗಾಗಲೇ ಅನೇಕ ನಿಗಮ-ಮಂಡಳಿ, ಅಕಾಡೆಮಿಗಳನ್ನು ಸರ್ಕಾರ ಸ್ಥಾಪಿಸಿದೆ. ಅನೇಕ ನಿಗಮ-ಮಂಡಳಿಗಳು ಅನುದಾನ ಕೊರತೆಯಿಂದ ನಲುಗುತ್ತಿವೆ. ಕೆಲವು ಸರ್ಕಾರಕ್ಕೆ ಬಿಳೆಯಾನೆಯಂತಾಗಿವೆ. ಅವುಗಳ ನಿರ್ವಹಣೆಯೆ ಕಷ್ಟವಾಗಿದೆ. ಮೇಲಾಗಿ ಅಭಿವೃದ್ಧಿ ನಿಗಮಗಳಿಂದ ಸಣ್ಣ-ಪುಟ್ಟ ಸಮುದಾಯಗಳಿಗೆ ಮಾತ್ರ ಪ್ರಯೋಜನವಾಗಬಹುದು. ಈ ಹಿನ್ನೆಲೆಯಲ್ಲಿ ಈ ಅಭಿವೃದ್ಧಿ ನಿಗಮವು ಬಹುಸಂಖ್ಯಾತ ಲಿಂಗಾಯತರಿಗೆ ಎಷ್ಟು ಪ್ರಯೋಜನಕಾರಿಯಾದೀತು ಎಂಬುದನ್ನು ಕಾಯ್ದು ನೋಡಬೇಕಾಗಿದೆ. ಲಿಂಗಾಯತರು ಕರ್ನಾಟಕದಲ್ಲಿ ಬಹುಸಂಖ್ಯಾತ ಸಮುದಾಯವಾಗಿದ್ದು, ಅವರಿಗೆ ಹೆಚ್ಚಿನ ಮೀಸಲಾತಿಯ ಅವಶ್ಯಕತೆ ಇದೆ. ನೆರೆಯ ಮಹಾರಾಷ್ಟ್ರದಲ್ಲಿ ಸರ್ಕಾರ ಅಲ್ಲಿಯ ಬಹುಸಂಖ್ಯಾತ ಮರಾಠಾ ಸಮುದಾಯಕ್ಕೆ ಪ್ರತಿಶತ 16 ರಷ್ಟು ಮೀಸಲಾತಿ ಘೋಷಿಸಿದಂತೆ ಲಿಂಗಾಯತರಿಗೆ ಮೀಸಲಾತಿ ಘೋಷಿಸಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಸರ್ಕಾರವನ್ನು ಆಗ್ರಹಿಸಿದರು.

ಉತ್ತರ ಕರ್ನಾಟಕದ ಹಲವು ನಗರ ಮತ್ತು ಗ್ರಾಮೀಣ ಭಾಗದಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದ್ದು ಈ ನಿಗಮ ಸದ್ಯ ಬೇಕಾಗಿತ್ತಾ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಅದರ ಮಧ್ಯೆ ಬಿಜೆಪಿಯ ಶಾಸಕರು ಟ್ವೀಟರ್ ನಲ್ಲಿ ಮುಖ್ಯಮಂತ್ರಿಗಳ ಘೋಷಣೆಯನ್ನು ಸ್ವಾಗತಿಸಿದರೆ ಹಲವು ಜನರು ಪಕ್ಷಾತೀತವಾಗಿ ಇದರ ಬಗ್ಗೆ ಅಸಮ್ಮತಿ ವ್ಯಕ್ತಪಡಿಸುತ್ತಿದ್ದಾರೆ.

Previous Post

ಕರ್ನಾಟಕ: 1336 ಹೊಸ ಕರೋನಾ ಪ್ರಕರಣಗಳು ಪತ್ತೆ

Next Post

ಸಂಪುಟ ಪುನರ್ ರಚನೆ ನೆಪದಲ್ಲಿ ಕುರ್ಚಿ ಮತ್ತು ಪುತ್ರನ ಉಳಿವಿಗಾಗಿ BSY ದೆಹಲಿ ಯಾತ್ರೆ

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ಸಂಪುಟ ಪುನರ್ ರಚನೆ ನೆಪದಲ್ಲಿ ಕುರ್ಚಿ ಮತ್ತು ಪುತ್ರನ ಉಳಿವಿಗಾಗಿ BSY ದೆಹಲಿ ಯಾತ್ರೆ

ಸಂಪುಟ ಪುನರ್ ರಚನೆ ನೆಪದಲ್ಲಿ ಕುರ್ಚಿ ಮತ್ತು ಪುತ್ರನ ಉಳಿವಿಗಾಗಿ BSY ದೆಹಲಿ ಯಾತ್ರೆ

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada