• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್-19 ಧೂಮಪಾನಿಗಳಿಗೆ ಹೆಚ್ಚು ಅಪಾಯಕಾರಿಯಾಗುವ ಸಾಧ್ಯತೆ: ಆರೋಗ್ಯ ಸಚಿವಾಲಯ

by
July 31, 2020
in ಕರ್ನಾಟಕ
0
ಕೋವಿಡ್-19 ಧೂಮಪಾನಿಗಳಿಗೆ ಹೆಚ್ಚು ಅಪಾಯಕಾರಿಯಾಗುವ ಸಾಧ್ಯತೆ: ಆರೋಗ್ಯ ಸಚಿವಾಲಯ
Share on WhatsAppShare on FacebookShare on Telegram

ಧೂಮಪಾನಿಗಳು, ಗುಟ್ಕಾ ಬಳಕೆದಾರರು ಸಿಗರೇಟ್‌, ತಂಬಾಕು ಬಳಸುವಾಗ ಕೈಬೆರಳುಗಳು ನೇರವಾಗಿ ತುಟಿ, ಬಾಯಿಗಳಿಗೆ ಸ್ಪರ್ಷವಾಗುವುದರಿಂದ ಕರೋನಾ ಸೋಂಕು ತಗುಲುವ ಸಾಧ್ಯತೆ ಹೆಚ್ಚಿದೆಯೆಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ADVERTISEMENT

ಧೂಮಪಾನಿಗಳ ಶ್ವಾಸಕೋಶಗಳು, ಶ್ವಾಸನಾಳಗಳು ಆರೋಗ್ಯವಂತರ ಶ್ವಾಸಕೋಶ, ಶ್ವಾಸನಾಳಗಳಷ್ಟು ಕಾರ್ಯಕ್ಷಮತೆ ಹೊಂದಿರುವುದಿಲ್ಲ. ನಿಕೋಟಿನ್‌ ಹೊಗೆಯನ್ನು ಸತತವಾಗಿ ಸೇವಿಸುವುದರಿಂದ ಈ ಅಂಗಾಂಗಗಳು ಸೋಂಕಿನ ವಿರುದ್ಧ ಹೋರಾಡುವ ಶಕ್ತಿಯನ್ನು ಕಳೆದುಕೊಂಡಿರುತ್ತದೆ. ಹಾಗಾಗಿ ಸೋಂಕಿಗೆ ಬಲಿಯಾಗುವ ಅಥವಾ ಹೆಚ್ಚು ರೋಗಲಕ್ಷಣ ಕಂಡುಬರುವ ಸಾಧ್ಯತೆ ಇದೆಯೆಂದು ಆರೋಗ್ಯ ಸಚಿವಾಲಯದ ತಜ್ಞರೊಬ್ಬರು ಹೇಳಿದ್ದಾರೆ.

ಕರೋನಾ ಸೋಂಕು ಧೂಮಪಾನಿಗಳಲ್ಲಿ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇದೆಯೆಂದು ಅರೋಗ್ಯ ತಜ್ಞರು ಅಭಿಪ್ರಾಯಿಸಿದ್ದಾರೆ. ಹಾಗೂ ಸಿಗರೇಟ್‌, ಹುಕ್ಕಾ ನಳಿಕೆ ಹಂಚುವುದರಿಂದಲೂ ಕರೋನಾ ಹರಡಲು ಸುಲಭ ದಾರಿ ಮಾಡಿಕೊಡಲಾಗುತ್ತದೆ ಎಂದು ಅಧ್ಯಯನವೊಂದು ಹೇಳಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಜಗಿಯುವ ತಂಬಾಕು ಉತ್ಪನ್ನಗಳು(ಖೈನಿ, ಗುಟ್ಕಾ, ಪಾನ್‌, ಝರ್ದಾ ಮೊದಲಾದವು) ಬಳಕೆದಾರರಲ್ಲಿ ಉಗುಳುವಿಕೆಯನ್ನು ಬಯಸುತ್ತದೆ. ಸಾಂಕ್ರಾಮಿಕ ರೋಗ ಹರಡಲು ಇದು ಕೂಡ ಕಾರಣವಾಗುತ್ತದೆ. ಆದ್ದರಿಂದ ಸಾರ್ವಜನಿಕವಾಗಿ ಉಗಿಯುವಂತಹ ತಂಬಾಕು ಬಳಕೆ ಮಾಡುವುದನ್ನು ವರ್ಜಿಸಲು ಹಾಗೂ ನಿಯಂತ್ರಿಸಲು ಸಾಂಕ್ರಾಮಿಕ ರೋಗ ತಜ್ಞರು ಸಲಹೆ ನೀಡಿದ್ದಾರೆ.

ಧೂಮಪಾನವು COVID-19 ಗೆ ಅಪಾಯವನ್ನು ಹೆಚ್ಚಿಸಿದೆ ಮತ್ತು ವೈರಸ್ ಸೋಂಕಿಗೆ ಒಳಗಾದ ಜನರಲ್ಲಿ ಫಲಿತಾಂಶವನ್ನು ಇನ್ನಷ್ಟು ಹದಗೆಡಿಸಿದೆ ಎಂಬುವುದಕ್ಕೆ ಪುರಾವೆಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ತಿಳಿಸಿದ್ದಾರೆ.

ಆಲ್ಕೋಹಾಲ್‌ ಸೇವನೆ

ದೇಶದಲ್ಲಿ ಮಾದಕ ದ್ರವ್ಯ ಮತ್ತು ನಡವಳಿಕೆಯ ಚಟವನ್ನು ನಿಭಾಯಿಸುವ ಗುರಿಯನ್ನುಹೊಂದಿರುವ ಸ್ಟಾಂಡರ್ಡ್‌ ಟ್ರೀಟ್‌ಮೆಂಟ್‌ ಗೈಡ್‌ಲೈನ್ಸ್‌ ಫಾರ್‌ ದಿ ಮಾನೇಜ್‌ಮೆಂಟ್‌ ಆಫ್‌ ಸಬ್ಸ್ಟಾಂಸ್‌ ಯೂಸ್‌ ಡಿಸಾರ್ಡರ್ಸ್‌ ಆಂಡ್‌ ಬಿಹೇವಿಯರಲ್‌ ಅಡಿಕ್ಷನ್‌ (Standard Treatment Guidelines for the Management of Substance Use Disorders and Behavioural Addictions) ಎಂಬ ಪುಸ್ತಕವನ್ನು ಬಿಡುಗಡೆಗೊಳಿಸುವ ಸಂಧರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ, ಆಲ್ಕೋಹಾಲ್‌ ಸೇವನೆ ದೇಹದಲ್ಲಿ ಮಾದಕತೆಯನ್ನು ಉಂಟುಮಾಡುತ್ತದೆ. ಇದು ರೋಗದ ವಿರುದ್ಧ ಹೋರಾಡುವ ರೋಗ ನಿರೋಧ ಶಕ್ತಿಯನ್ನು ಕಡಿಮೆ ಮಾಡುವುದು ಸೇರಿದಂತೆ ಇನ್ನಿತರ ಅಪಾಯಗಳನ್ನು ತಂದೊಡ್ಡುವ ಸಾಧ್ಯತೆ ಇದೆಯೆಂದು ತಿಳಿಸಿದ್ದಾರೆ.

ಸಚಿವಾಲಯ ಹೊರಡಿಸಿದ ಎರಡು ಪುಟಗಳ ಸಲಹಹಾ ಕೈಪಿಡಿ ಪ್ರಕಾರ, “ಧೂಮಪಾನ, ಇ-ಸಿಗರೆಟ್‌ಗಳು, ತಂಬಾಕು, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳಿಂದ ಶ್ವಾಸನಾಳಗಳಿಗೆ ಹಾನಿಯಾಗುವುದರಿಂದ ಹಾಗೂ ಶ್ವಾಸಕೋಶದ ರೋಗನಿರೋಧಕ ಕ್ರಿಯೆಯಲ್ಲಿನ ಇಳಿಕೆಯಿಂದಾಗಿ ಶ್ವಾಸಕೋಶದ ಸೋಂಕಿನ ಅಪಾಯ ಮತ್ತು ತೀವ್ರತೆಯನ್ನು ಹೆಚ್ಚಿಸುತ್ತದೆ.”

ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್‌, ಮಧುಮೇಹ ಹಾಗೂ ದೀರ್ಘಕಾಲದ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸಾವಿನ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ಸಂಭಾವ್ಯ ಸಾಧ್ಯತೆಯಿದೆ. ಮುಖ್ಯವಾಗಿ ಸಾಂಕ್ರಾಮಿಕ ರೋಗದಂತಹ ಕಾಲದಲ್ಲಿ ಈ ಅಪಾಯ ಇನ್ನಷ್ಟು ಹೆಚ್ಚಿದೆ. ಭಾರತದಲ್ಲಿ ಸಂಭವಿಸುವ ಒಟ್ಟು ಸಾವುಗಳಲ್ಲಿ 63% ಸಾವುಗಳು ಇಂತಹ ಕಾಯಿಲೆಗಳಿಂದಲೇ ಸಂಭವಿಸುತ್ತದೆ ಎಂದು ಅಂದಾಜಿಸಲಾಗಿದೆ ಹಾಗು ಇವು ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ತಂಬಾಕು ಬಳಕೆಯು ಕ್ಷಯ ಮತ್ತು ಉಸಿರಾಟದ ಸೋಂಕುಗಳಂತಹ ಸಾಂಕ್ರಾಮಿಕ ಕಾಯಿಲೆಗಳಿಗೆ ಅಪಾಯಕಾರಿ ಅಂಶವಾಗಿದೆ ದಿ ಹಿಂದೂ ವರದಿ ಮಾಡಿದೆ.

ತಂಬಾಕು ಸೇವನೆಯು ಶ್ವಾಸಕೋಶದ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಹಾಗೂ ಸೋಂಕುಗಳ ವಿರುದ್ಧ ಹೋರಾಡುವ ರೋಗ ಪ್ರತಿರೋಧಕ ಕಣಗಳ ಮೇಲೆ ಪರಿಣಾಮ ಬೀರುತ್ತದೆ. COVID-19 ಸಮಯದಲ್ಲಿ ಅಪಾಯಕಾರಿ ಅಂಶಗಳನ್ನು ಹೆಚ್ಚಿಸುವ ಇತರ ಕಾಯಿಲೆಗಳಿಗೆ ಧೂಮಪಾನವು ಕಾರಣವಾಗುತ್ತದೆ. ಸಾಂಕ್ರಾಮಿಕ ಸಮಯದಲ್ಲಿ ಹಾಗೂ ನಂತರ ದೇಶದ ಮೇಲೆ ಆರೋಗ್ಯ ವಲಯದ ಹೊರೆ ಕಡಿಮೆ ಮಾಡಲು ತಂಬಾಕು ಸೇವನೆಯನ್ನು ನಿಗ್ರಹಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಕ್ರಿಟಿಕಲ್ ಕೇರ್ & ಸ್ಲೀಪ್ ಮೆಡಿಸಿನ್ (Critical Care & Sleep Medicine, Fortis Memorial Research Institute) ವಿಭಾಗದ ಮುಖ್ಯಸ್ಥ ಮನೋಜ್ ಗೋಯೆಲ್ ಹೇಳಿದ್ದಾರೆ.

ಒಟ್ಟಿನಲ್ಲಿ ಕರೋನಾ ಸೋಂಕು ಹಲವು ವಿಧದ ಅವಾಂತರಗಳನ್ನು ತಂದಿಟ್ಟಿದೆ. ಸಾಮಾಜಿಕ ಅಂತರ, ಲಾಕ್‌ಡೌನ್‌ ಮುಂತಾದವುಗಳಿಂದ ತಮ್ಮ ಸ್ನೇಹ ವಲಯದೊಂದಿಗೆ ಸೇರಿಕೊಳ್ಳಲಾಗದ ಒಂಟಿತನ, ಉದ್ಯೋಗ ನಷ್ಟ, ಆರ್ಥಿಕ ನಷ್ಟ, ರೋಗ ಭಯ ಮುಂತಾದವುಗಳು ಜನರನ್ನು ಖಿನ್ನತೆಯೆಡೆಗೆ ದೂಡಿದೆ. ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ. ಒತ್ತಡ ಕಳೆಯಲು ತಂಬಾಕು, ಆಲ್ಕೊಹಾಲ್‌ ಮೊರೆ ಹೋಗುತ್ತಿದ್ದಾರೆ. ಇದೂ ಕೂಡಾ ಪರೋಕ್ಷವಾಗಿ ಆತ್ಮಹತ್ಯೆ ಸ್ವರೂಪದ್ದೇ ಕ್ರಿಯೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಎಚ್ಚರಿಕೆಯ ನಿಮಿತ್ತ ಅರ್ಥಮಾಡಿಕೊಳ್ಳಬಹುದು.

Tags: ಕರೋನಾಕೇಂದ್ರ ಆರೋಗ್ಯ ಸಚಿವಾಲಯಕೋವಿಡ್ಧೂಮಪಾನಮಧ್ಯಪಾನ
Previous Post

ಕರೋನಾ ತಡೆಯುವಲ್ಲಿ ನಾವು ಮುಂದಿದ್ದೇವೆ ಎಂದ ಮೋದಿ ಮಾತು ಎಷ್ಟು ನಿಜ?

Next Post

ಹೊಂದಾಣಿಕೆ ರಾಜಕಾರಣದ ಆರೋಪ; ನಿಜಕ್ಕೂ ಬಿಜೆಪಿ ವಿರುದ್ದ ದೃಢ ನಿಲುವು ತಾಳುವರೇ ಹೆಚ್‌ಡಿಕೆ?

Related Posts

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
0

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ...

Read moreDetails
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
Next Post
ಹೊಂದಾಣಿಕೆ ರಾಜಕಾರಣದ ಆರೋಪ; ನಿಜಕ್ಕೂ ಬಿಜೆಪಿ ವಿರುದ್ದ ದೃಢ ನಿಲುವು ತಾಳುವರೇ ಹೆಚ್‌ಡಿಕೆ?

ಹೊಂದಾಣಿಕೆ ರಾಜಕಾರಣದ ಆರೋಪ; ನಿಜಕ್ಕೂ ಬಿಜೆಪಿ ವಿರುದ್ದ ದೃಢ ನಿಲುವು ತಾಳುವರೇ ಹೆಚ್‌ಡಿಕೆ?

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada