• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಗದಗ್‌ನ 7 ವರ್ಷದ ಬಾಲಕಿಗೆ ಸಿಕ್ಕಿತು ಡಾಕ್ಟರೇಟ್

by
January 29, 2020
in ದೇಶ
0
ಗದಗ್‌ನ 7 ವರ್ಷದ ಬಾಲಕಿಗೆ ಸಿಕ್ಕಿತು ಡಾಕ್ಟರೇಟ್
Share on WhatsAppShare on FacebookShare on Telegram

ಅವಳಿನ್ನೂ ಎರಡನೆಯ ತರಗತಿ, ಆದರೂ ಗೌರವ ಡಾಕ್ಟರೇಟ್ ಪಡೆದಿದ್ದಾಳೆ. ಗದಗ್ ಜಿಲ್ಲೆಯ ನರಗುಂದ ಪಟ್ಟಣದ ಈ ಪುಟ್ಟ ಬಾಲಕಿ ಅತಿ ಚಿಕ್ಕ ವಯಸ್ಸಿನಲ್ಲೇ ಡಾಕ್ಟರ್ ಎನಿಸಿಕೊಂಡಿದ್ದಾಳೆ.

ADVERTISEMENT

ಹೌದು, ಮುದ್ರಣ ಕಾಶಿ ಗದಗ ಜಿಲ್ಲೆಯ 7 ವರ್ಷದ ಬಾಲಕಿಗೆ ತಮಿಳುನಾಡಿನ ಯೂನಿವರ್ಸಲ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಜಿಲ್ಲೆಯ ನರಗುಂದ ಪಟ್ಟಣದ ಸರ್ ಎಂ. ವಿಶ್ವೇಶ್ವರಯ್ಯ ಶಾಲೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವೈದೃತಿ ನಾಗರಾಜ ಕೋರಿಶೆಟ್ಟರ್ ಬಾಲಕಿಯಲ್ಲಿರುವ ಪ್ರತಿಭೆಯನ್ನು ಗುರುತಿಸಿ ಯೂನಿವರ್ಸಲ್ ವಿವಿ ಗೌರವ ಡಾಕ್ಟರೇಟ್ ನೀಡಿದೆ.

ಅಗಾಧ ಸ್ಮರಣ ಶಕ್ತಿ:

ಕೇವಲ 7 ವರ್ಷದವಳಾದ ವೈದೃತಿ ಆಗಾಧವಾದ ಜ್ಞಾನ ಹಾಗೂ ನೆನಪಿನ ಶಕ್ತಿ ಹೊಂದುವುದರೊಂದಿಗೆ ಎಲ್ಲರ ಗಮನ ಸೆಳೆದಿದ್ದಾಳೆ. ರಾಜಕೀಯ, ಅರ್ಥಶಾಸ್ತ್ರ, ಇತಿಹಾಸ, ಕನ್ನಡ, ಪ್ರಾದೇಶಿಕ ಹಾಗೂ ಅಂತರಾಷ್ಟ್ರ ಹೀಗೇ ವಿವಿಧ ವಿಷಯಗಳ ಸಂಬಂಧಪಟ್ಟಂತೆ ಅಪಾರ ಜ್ಞಾನ ಹೊಂದಿರುವ ಈ ಬಾಲಕಿಯು ಯಾವುದೇ ಪ್ರಶ್ನೇ ಕೇಳಿದರೂ ಪಟಪಟನೆ ಉತ್ತರ ನೀಡುತ್ತಾಳೆ. ಬಾಲಕಿಯು ಜನರು ಕೇಳುವ ಪ್ರಶ್ನೆಗೆ ತಟ್ ಅಂತ ಉತ್ತರಿಸುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಬಾರಿ ಮೆಚ್ಚುಗೆಗೆ ಪಾತ್ರವಾಗಿವೆ. ಈಗಾಗಲೇ ಹಲವು ಪ್ರಶಸ್ತಿಗಳನ್ನು ಬಾಚಿ ಕೊಂಡಿರುವ ವೈದೃತಿ ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಗೌರವ ಡಾಕ್ಟರೇಟ್ ಪಡೆದು ಗಮನ ಸೆಳೆದಿದ್ದಾಳೆ. ಮೂಲತ ಬಳ್ಳಾರಿ ಜಿಲ್ಲೆ, ಹಗರಿಬೊಮ್ಮನಹಳ್ಳಿಯವರಾದ ವೈದೃತಿ ಕುಟುಂಬದವರು ಸಧ್ಯ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ವಾಸವಾಗಿದ್ದಾರೆ. ತಾಯಿ ಭಾರತಿ ನರಗುಂದ ದಲ್ಲಿ ಸರ್ಕಾರಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ತಂದೆ ನಾಗರಾಜ ಖಾಸಗಿ ವೃತ್ತಿಯಲ್ಲಿ ತೊಡಗಿದ್ದು, ತಮ್ಮ ಮಗಳ ಈ ಸಾಧನೆಗೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ವೈದೃತಿ ಚಿಕ್ಕ ವಯಸ್ಸಿನಲ್ಲಿರುವಾಗಲೇ ಎಲ್ಲವನ್ನು ನೆನಪಿಟ್ಟುಕೊಳ್ಳುತ್ತಿದ್ದಳು. ಈ ವಿಶಿಷ್ಟ ಪ್ರತಿಭೆಯನ್ನು ಗುರುತಿಸಿದ ಪಾಲಕರು ಅವಳಿಗೆ ಪ್ರಸಕ್ತ ವಿದ್ಯಮಾನಗಳ ಬಗ್ಗೆ ತಿಳಿಸಿದರು. ಈಗ ಅವಳು ಕನ್ನಡದ ಜ್ಞಾನಪೀಠ ಪ್ರಶಸ್ತಿ ವಿಜೇತರ ಪಟ್ಟಿ, ಕರ್ನಾಟಕದ ಮುಖ್ಯಮಂತ್ರಿಗಳು ಹೆಸರು, ಕರ್ನಾಟಕದ ಜಿಲ್ಲೆಗಳು, ಭಾರತದ ಮಂತ್ರಿಗಳು ಹೀಗೆ ಎಲ್ಲ ಪ್ರಶ್ನೆಗಳಿಗೆ ುಸಿರು ಬಿಡದೇ ಉತ್ತರಿಸುತ್ತಾಳೆ.

ನಾಗರಾಜ ಕೋರಿಶೆಟ್ಟರ್, ವೈದೃತಿ ತಂದೆ, ಪ್ರತಿಧ್ವನಿ ತಂಡಕ್ಕೆ ಹೇಳಿದ್ದು ಹೀಗೆ, “ನನ್ನ ಮಗಳು ಇಷ್ಟು ಚಿಕ್ಕ ವಯಸ್ಸಿನಲ್ಲೇ ಡಾಕ್ಟರೇಟ್ ಪಡೆದಿದ್ದು ಖುಷಿ ತಂದಿದೆ. ಹೆಣ್ಣು ಮಕ್ಕಳು ಏನು ಬೇಕಾದದ್ದನ್ನು ಸಾಧಿಸುತ್ತಾರೆ. ಹೆಣ್ಣೆಂದು ಹೀಯಾಳಿಸದಿರಿ. ಇವತ್ತು ನಾನು ವೈದೃತಿ ತಂದೆ ಎಂದು ಎಲ್ಲರೂ ಗುರುತಿಸುತ್ತಾರೆ. ಮುಂದೆ ಅವಳು ಯು.ಪಿ.ಎಸ್. ಸಿ. ಪರೀಕ್ಷೆಗೆ ತಯಾರಿ ನಡೆಸಿ ದೊಡ್ಡ ಹುದ್ದೆ ಪಡೆದು ಸಮಾಜ ಮುಖಿ ಕೆಲಸ ಮಾಡಲಿ ಎಂಬುದು ನಮ್ಮ ಹಾರೈಕೆ. ವೈದೃತಿಯ ಸ್ಮರಣ ಶಕ್ತಿ ಅವಳಿಗೆ ವರವಾಗಿ ಪರಿಣಮಿಸಿದೆ. ಇದೀಗ ಹತ್ತು ಹಲವು ಪ್ರಶಸ್ತಿಗಳು ಸನ್ಮಾನಗಳು ಅವಳ ಮುಡಿಗೇರಿದ್ದು, ಈಗ ಡಾಕ್ಟರೇಟ್ ಸಿಕ್ಕಿದೆ. ನಾವಷ್ಟೇ ಅಲ್ಲ, ನರಗುಂದ ಹಾಗೂ ಗದಗ್ ಜಿಲ್ಲೆಯೇ ಈ ಸಂತೋಷವನ್ನು ಸಂಭ್ರಮಿಸುತ್ತಿದೆ. ಒಬ್ಬ ತಂದೆಯಾಗಿ ನನಗೆ ಇನ್ನೇನು ಬೇಕು”.

ಮುತ್ತಣ್ಣ ತಿರ್ಲಾಪುರ, ನರಗುಂದ ಗಾಂಧಿ ವೇಷಧಾರಿ ಎಂದೇ ಪರಿಚಿತರು ಹೇಳಿದ್ದು, “ವೈದೃತಿಯನ್ನು ನಾನು ಮೂರು ವರ್ಷಗಳಿಂದ ನೋಡುತ್ತಿದ್ದೇನೆ. ಅವಳು ಶಾಲೆಯಲ್ಲಿ ಉತ್ತಮ ವಿದ್ಯಾರ್ಥಿ ಹಾಗೂ ಅನೇಕ ಕಡೆಗೆ ಅತಿಥಿಯಾಗಿ ಪಾಲ್ಗೊಂಡಿದ್ದಳೆ ಹಾಗೂ ಸನ್ಮಾನಗಳಂತೂ ಲೆಕ್ಕವೇ ಇಲ್ಲ. ಈಗ ಮದುರೈಗೆ ಹೋಗಿ ಡಾಕ್ಟರೇಟ್ ತಂದಿದ್ದು ಕೇಳಿದ ಕೂಡಲೇ ಖುಷಿ ತಡೆಯದೇ ಅವಳ ಮನೆಗೆ ಹೋಗಿ ಶುಭಾಶಯ ತಿಳಿಸಿದೆ, ಇವಳು ಗದಗ್ ಜಿಲ್ಲೆಗೆ ಹೆಮ್ಮೆ”.

ಫಾರೂಕ್, ಸರ್ ಎಂ. ವಿಶ್ವೇಶ್ವರಯ್ಯ ಶಾಲೆಯ ಮುಖ್ಯ ಶಿಕ್ಷಕರು ಅಭಿಪ್ರಾಯ ಹಂಚಿಕೊಂಡರು, “ವೈದೃತಿ ಡಾಕ್ಟರೇಟ್ ಹಲವು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದೆ. ಏನಾದರೂ ಸಾಧನೆ ಮಾಡಬೇಕು ಎಂಬ ಛಲವನ್ನು ಬಿತ್ತಿದೆ. ಅವಳು ನಮ್ಮ ಶಾಲೆಉ ವಿದ್ಯಾರ್ಥಿ ಎಂದು ಹೇಳುವುದಕ್ಕೆ ಅತೀವ ಸಂತೋಷವೆನಿಸುತ್ತದೆ. ಅವಳು ಇನ್ನೂ ಹಲವು ಪ್ರಶಸ್ತಿ ಪಡೆಯಲಿ, ಉತ್ತಮ ಭವಿಷ್ಯ ಪಡೆಯಲಿ ಎಂದು ತುಂಬು ಹೃದಯದೊಂದಿಗೆ ಹಾರೈಸುತ್ತೇವೆ”.

Tags: 7 year old7 ವರ್ಷದ ಬಾಲಕಿChennai UniversityGadagGadag-Betageri City Municipal Councilಗದಗ್‌ಡಾಕ್ಟರೇಟ್
Previous Post

ಯಾವುದು ಪ್ರಚೋದನೆ? ಯಾವುದು ದೇಶದ್ರೋಹ? ದೇಶದಲ್ಲಿ ಶುರುವಾಯ್ತಾ ಭಯದ ವಾತಾವರಣ?

Next Post

ಐರೋಪ್ಯ ಸಂಸತ್‌ನಲ್ಲಿ ಮೋದಿಗೆ ‘ಪೌರತ್ವ’ ಚರ್ಚೆ ಒಡ್ಡಬಹುದಾದ ಸವಾಲುಗಳೇನು?

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಐರೋಪ್ಯ  ಸಂಸತ್‌ನಲ್ಲಿ ಮೋದಿಗೆ ‘ಪೌರತ್ವ’ ಚರ್ಚೆ ಒಡ್ಡಬಹುದಾದ ಸವಾಲುಗಳೇನು?

ಐರೋಪ್ಯ ಸಂಸತ್‌ನಲ್ಲಿ ಮೋದಿಗೆ ‘ಪೌರತ್ವ’ ಚರ್ಚೆ ಒಡ್ಡಬಹುದಾದ ಸವಾಲುಗಳೇನು?

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada