• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗೂಂಡಾ ರಾಜಕಾರಣವನ್ನು ಮತದಾರರು ಸೋಲಿಸಬೇಕು – ದಿನೇಶ್ ಗುಂಡೂರಾವ್

by
October 28, 2020
in ಕರ್ನಾಟಕ
0
ಗೂಂಡಾ ರಾಜಕಾರಣವನ್ನು ಮತದಾರರು ಸೋಲಿಸಬೇಕು – ದಿನೇಶ್ ಗುಂಡೂರಾವ್
Share on WhatsAppShare on FacebookShare on Telegram

ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್‌ ಮಾಜಿ ಶಾಸಕ ಮುನಿರತ್ನ ಅವರನ್ನು ಸೋಲಿಸಲೇಬೇಕೆಂದು ಕಾಂಗ್ರೆಸ್‌ ಪಕ್ಷ ಪಣ ತೊಟ್ಟು ನಿಂತಿದೆ. ಆರ್‌ಆರ್‌ ನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಪರ ಕಾಂಗ್ರೆಸ್‌ ನಾಯಕರ ಬಿರುಸಿನ ಪ್ರಚಾರ ಕಾರ್ಯ ನಡೆಯುತ್ತಿದೆ.

ADVERTISEMENT

ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ದಿನೇಶ್‌ ಗುಂಡೂರಾವ್‌, ಮುನಿರತ್ನ ಅವರನ್ನು ಬೆಳೆಸಿದ ಕಾಂಗ್ರೆಸ್‌ ಪಕ್ಷಕ್ಕೆ ಮೋಸ ಮಾಡಿದ್ದಾರೆ, ಕ್ಷೇತ್ರದಲ್ಲಿ ಗೂಂಡಾಗಿರಿ, ಬೆದರಿಕೆ ಮೂಲಕ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಮುನಿರತ್ನ ರೀತಿಯ ಗೂಂಡಾ ರಾಜಕೀಯವನ್ನು ಸೋಲಿಸಬೇಕು ಎಂದು ಗುಂಡೂರಾವ್‌ ಹೇಳಿದ್ದಾರೆ.

ಮುನಿರತ್ನ ಅವರನ್ನು ಬೆಳೆಸಿದ್ದು ನಮ್ಮ ಪಕ್ಷ, ಸಿದ್ದರಾಮಯ್ಯ ಸರ್ಕಾರ ರಾಜರಾಜೇಶ್ವರಿ ನಗರ ದೊಡ್ಡ ಕ್ಷೇತ್ರವೆಂದು ಈ ಕ್ಷೇತ್ರಕ್ಕೆ ಅನುದಾನ ನೀಡಿದೆ, ಮುನಿರತ್ನ ಅವರೇ ಅನುದಾನ ತಂದಿದ್ದಾರೆಂಬಂತೆ ಬಿಂಬಿಸುತ್ತಿದ್ದಾರೆ. ಅವರು ಅವರ ಜೇಬಿನಿಂದ ಅನುದಾನ ತಂದಿದ್ದಾರೆಯೇ ಎಂದು ಗುಂಡೂರಾವ್‌ ಪ್ರಶ್ನಿಸಿದ್ದಾರೆ.

ಈ ಹಿಂದೆ, ಕಾಂಗ್ರೆಸ್‌ ಪಕ್ಷವನ್ನು ಅರ್ಧದಲ್ಲಿ ಬಿಟ್ಟು ಹೋಗಿರುವ ಮುನಿರತ್ನ ವಿರುದ್ಧ ಕಾಂಗ್ರೆಸ್‌ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದರು. ಮಾತೃ ಪಕ್ಷವನ್ನು ಬಿಟ್ಟು ಬಿಜೆಪಿ ಹಣಕ್ಕಾಗಿ ಮಾರಾಟ ಆದ ಮುನಿರತ್ನ ತನ್ನ ತಾಯಿಯನ್ನು ಮಾರಿದಂತೆ ಎಂದು ಕಾಂಗ್ರೆಸ್‌ ನಾಯಕರು ಕಿಡಿಕಾರಿದ್ದರು.

Also Read: ಮುನಿರತ್ನ ಗೂಂಡಾಗಿರಿಗೆ ನಾವು ಹೆದರುವುದಿಲ್ಲ, ಹುಷಾರ್!- ಸಿದ್ದರಾಮಯ್ಯ

ಇದಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ಅಭ್ಯರ್ಥಿ ಮುನಿರತ್ನ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದರು. ನನ್ನ ತಾಯಿ ಬಗ್ಗೆ ನೀವು ಮಾತನಾಡಿದ್ದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರು ಧರಣಿ ಮಾಡಿದ್ದಾರೆ. ಆದರೆ ಹಲ್ಲೆ ಮಾಡಿಲ್ಲ. ತಾಯಿಯನ್ನು ಮಾರಾಟ ಮಾಡಿದ್ದೇನೆ ಅಂದಿರುವುದು ತಪ್ಪು ಎಂದು ನಮ್ಮ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಶಾಂತಿಕದಡುವ ಯತ್ನ ಮಾಡಿಲ್ಲ ಎಂದು ಹೇಳಿದ್ದರು.

ಕಾಂಗ್ರೆಸ್‌ನವರೇ ನೀವು ನನ್ನ ಬಗ್ಗೆ ಎಷ್ಟು ಬೇಕಾದರೂ ದೂಷಿಸಿ, ಮಾತನಾಡಿ. ನಿಮಗೆ ಸ್ವಾತಂತ್ರ್ಯ ಇದೆ. ಆದರೆ 25 ವರ್ಷದ ಹಿಂದೆ ತೀರಿಹೋಗಿರುವ ನನ್ನ ತಾಯಿಯ ಬಗ್ಗೆ ಮಾತ್ರ ಮಾತನಾಡಬೇಡಿ. ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಭಾವುಕರಾಗಿ ಹೇಳಿದ್ದರು. ಮುನಿರತ್ನ ನಾಯ್ಡು ಕಣ್ಣೀರಿಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ದಿನೇಶ್ ಗುಂಡೂರಾವ್, ಚಿತ್ರರಂಗದಲ್ಲಿದ್ದ ಮುನಿರತ್ನ ನಾಯ್ಡು ನವರಸಗಳನ್ನು ಅರೆದು ಕುಡಿದಿದ್ದಾರೆ. ಹಾಗಾಗಿ ನಟನೆ ಅವರಿಗೆ ಹೊಸದಲ್ಲ. ಇಂದು ಕಣ್ಣೀರು ಹಾಕಿ ‘ಕರುಣಾ’ ರಸವನ್ನು ಹೊರ ಹಾಕಿ ನಟಿಸಿದ್ದಾರೆ. ಈಗಾಗಲೇ ಮುನಿರತ್ನರ ‘ಭೀಭತ್ಸ’, ‘ರೌದ್ರ’ ಮತ್ತು ‘ಭಯಾನಕ’ ರಸಗಳು ಕ್ಷೇತ್ರದಲ್ಲಿ ಪ್ರಯೋಗವಾಗಿದೆ. ಫಲಿತಾಂಶ ಬಂದ ನಂತರ ‘ಶಾಂತ’ ರಸ ಹೊರಬರಲಿದೆ ಎಂದು ಗುಂಡೂರಾವ್ ಹೇಳಿದ್ದಾರೆ.

Tags: ದಿನೇಶ್ ಗುಂಡೂರಾವ್ಮುನಿರತ್ನರಾಜರಾಜೇಶ್ವರಿ ನಗರ ಉಪಚುನಾವಣೆ
Previous Post

ಮುನಿರತ್ನ ಗೂಂಡಾಗಿರಿಗೆ ನಾವು ಹೆದರುವುದಿಲ್ಲ, ಹುಷಾರ್!- ಸಿದ್ದರಾಮಯ್ಯ

Next Post

ಹಣದ ಬಗ್ಗೆ ಕಾಳಜಿ ವಹಿಸುವವರು ಅಂಬೇಡ್ಕರ್‌ರನ್ನು ಲಾಭಕ್ಕಾಗಿ ಬಳಸುತ್ತಿದ್ದಾರೆ- ಚೇತನ್

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಹಣದ ಬಗ್ಗೆ ಕಾಳಜಿ ವಹಿಸುವವರು ಅಂಬೇಡ್ಕರ್‌ರನ್ನು ಲಾಭಕ್ಕಾಗಿ ಬಳಸುತ್ತಿದ್ದಾರೆ- ಚೇತನ್

ಹಣದ ಬಗ್ಗೆ ಕಾಳಜಿ ವಹಿಸುವವರು ಅಂಬೇಡ್ಕರ್‌ರನ್ನು ಲಾಭಕ್ಕಾಗಿ ಬಳಸುತ್ತಿದ್ದಾರೆ- ಚೇತನ್

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada