• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗ್ರಾಮ ಪಂಚಾಯಿತಿ ಚುನಾವಣೆ: 3,440 ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ

by
December 30, 2020
in ಕರ್ನಾಟಕ
0
ಗ್ರಾಮ ಪಂಚಾಯಿತಿ ಚುನಾವಣೆ: 3
Share on WhatsAppShare on FacebookShare on Telegram

ಡಿ. 22 ಮತ್ತು ಡಿ. 27 ರಂದು ಎರಡು ಹಂತದಲ್ಲಿ ನಡೆಸಲಾದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ರಾಜ್ಯದ 226 ತಾಲೂಕುಗಳ 5,728 ಗ್ರಾಮಪಂಚಾಯಿತಿಯ 72,000 ಸ್ಥಾನಗಳಿಗೆ ಚುನಾವಣೆ ನಡೆಸಲಾಗಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಿದ್ದ 2.22 ಲಕ್ಷ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ADVERTISEMENT

ಈಗಾಗಲೇ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 3440 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಮುನ್ನಡೆಗೆ ಬಂದಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು‌ 1590 ಪಂಚಾಯಿತಿಗಳಲ್ಲಿ ಹಾಗೂ 600 ಕ್ಕೂ ಹೆಚ್ಚು ಪಂಚಾಯಿತಿಗಳಲ್ಲಿ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಬಾರಿ ಶೇಕಡಾ 80 ಕ್ಕೂ ಹೆಚ್ಚು ಮತದಾನವಾಗಿದ್ದು, 2,22,814 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ 8074 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಿ30 ಬುಧವಾರ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಸಂಜೆಯ ವೇಳೆಗೆ ಸಂಪೂರ್ಣ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.

ಬೀದರ್ ಜಿಲ್ಲೆಯಲ್ಲಿ ಮಾತ್ರ ಮತದಾನಕ್ಕೆ ಇವಿಎಂ ಬಳಕೆ ಮಾಡಲಾಗಿತ್ತು. ಉಳಿದೆಡೆ ಬ್ಯಾಲೆಟ್ ಪೇಪರ್ ಬಳಸಲಾಗಿದೆ. ಇದರಿಂದ ಮತ ಏಣಿಕೆ ಕಾರ್ಯ ನಿಧಾನವಾಗಿ ಸಾಗಿ ಫಲಿತಾಂಶದ ಪ್ರಕಟಣೆ ತಡರಾತ್ರಿ ಹೊರಬೀಳುವ ಸಾಧ್ಯತೆಯಿದೆ. ಜಿಲ್ಲೆಯ ತಾಲೂಕು ಪ್ರಧಾನ ಕಚೇರಿಯಲ್ಲಿ ಮತ ಏಣಿಕೆ ಕಾರ್ಯ ನಡೆಯುತ್ತಿದ್ದು, ಜಿಲ್ಲೆಯ ಉಪ ಆಯುಕ್ತ, ಜಿಲ್ಲಾ ಆಡಳಿತ ಮಂಡಳಿ ಅಧಿಕಾರಿಗಳು ಮತ ಎಣಿಕೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಪಕ್ಷಾತೀತ ಚುನಾವಣೆ ಆಗಿದ್ದರೂ ರಾಜ್ಯದಲ್ಲಿ ಗ್ರಾಮಮಟ್ಟದಲ್ಲಿ ನೆಲೆಗಟ್ಟಿಗೊಳಿಸಿಕೊಳ್ಳಲು ಪಕ್ಷಗಳು ಅಭ್ಯರ್ಥಿಗಳನ್ನು ಬೆಂಬಲಿಸಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಈ ಚುನಾವಣೆ ಫಲಿತಾಂಶ ಅತ್ಯಂತ ಮಹತ್ವದ್ದಾಗಿದೆ.

Previous Post

ಭಾರತದಲ್ಲಿನ ಒಟ್ಟು ಕೋವಿಡ್ ಮರಣಗಳಲ್ಲಿ 70% ಪುರುಷರು: ಆರೋಗ್ಯ ಸಚಿವಾಲಯ

Next Post

ಕಡೆಯ ಅವಕಾಶವನ್ನೂ ಕಳೆದುಕೊಂಡ ರಜನಿಕಾಂತ್

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

by ಪ್ರತಿಧ್ವನಿ
April 16, 2026
0

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಕಡೆಯ ಅವಕಾಶವನ್ನೂ ಕಳೆದುಕೊಂಡ ರಜನಿಕಾಂತ್

ಕಡೆಯ ಅವಕಾಶವನ್ನೂ ಕಳೆದುಕೊಂಡ ರಜನಿಕಾಂತ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada