• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಚಿನ್ನದ ಮೊಟ್ಟೆಯ ಕೋಳಿಗಳನ್ನು ಏಕೆ ಕಳೆದುಕೊಂಡಿತು ಕಾಂಗ್ರೆಸ್‌..?

by
July 18, 2020
in ರಾಜಕೀಯ
0
ಚಿನ್ನದ ಮೊಟ್ಟೆಯ ಕೋಳಿಗಳನ್ನು ಏಕೆ ಕಳೆದುಕೊಂಡಿತು ಕಾಂಗ್ರೆಸ್‌..?
Share on WhatsAppShare on FacebookShare on Telegram

ಕಾಂಗ್ರೆಸ್‌ನಲ್ಲಿ ಇತ್ತೀಚಿನ ದಿನಗಳಲ್ಲಿ ಪಕ್ಷ ತೊರೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಎಲ್ಲಾ ರಾಜ್ಯಗಳಲ್ಲೂ ಆಪರೇಷನ್‌ಕಮಲ ಎನ್ನುವ ಸಂವಿಧಾನ ವಿರೋಧಿ ನಿಲುವುಗಳು ಪ್ರಕಟಗೊಳ್ಳುತ್ತಲೇ ಇವೆ. ಕಾಂಗ್ರೆಸ್‌ ತನ್ನ ಪಕ್ಷದಲ್ಲೇ ಬೆಳೆದು ಉತ್ತಮ ನಾಯಕರಾದವರನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿಲ್ಲ. ಇತ್ತೀಚಿಗೆ ಮಧ್ಯಪ್ರದೇಶದಲ್ಲಿ ಜೋತಿರಾಧಿತ್ಯ ಸಿಂಧಿಯಾ ಹಾಗೂ ಇದೀಗ ರಾಜಸ್ಥಾನದಲ್ಲಿ ಸಚಿನ್‌ ಪೈಲಟ್‌ ಕಾಂಗ್ರೆಸ್‌ ಪಕ್ಷವನ್ನು ಬಿಟ್ಟು ಜಾರಿ ಹೋಗುತ್ತಿದ್ದಾರೆ. ಇದು ಕಾಂಗ್ರೆಸ್‌ ಪಕ್ಷಕ್ಕೆ ದುಬಾರಿಯಾದರೂ ಚಿನ್ನದ ಮೊಟ್ಟೆಯನ್ನಿಡುವ ಕೋಳಿಗಳ ರಕ್ಷಣೆ ಮಾಡುವಲ್ಲಿ ಕಾಂಗ್ರೆಸ್‌ ನಾಯಕರು ವಿಫಲರಾಗುತ್ತಿದ್ದಾರೆ.

ADVERTISEMENT

ರಾಹುಲ್‌ ಗಾಂಧಿ ಕಾಂಗ್ರೆಸ್‌ ಅಧ್ಯಕ್ಷರಾಗುತ್ತಿದ್ದಂತೆ ಯುವ ಪಡೆಯನ್ನೇ ಕಟ್ಟಲು ಮುಂದಾಗಿದ್ದರು. ಅದೇ ಯೋಜನೆಯಲ್ಲಿ ಎಲ್ಲಾ ರಾಜ್ಯಗಳಲ್ಲೂ ತಂದೆ ರಾಜೀವ್‌ ಗಾಂಧಿಯಂತೆಯೇ ಯುವ ಸೇನೆ ಕಟ್ಟಲು ಮುಂದಾಗಿದ್ದರು. ಯುವ ನಾಯಕರನ್ನು ಆಯ್ಕೆ ಮಾಡಿಕೊಂಡು, ಕಾಂಗ್ರೆಸ್‌ನಲ್ಲಿ ನೂತನ ಪಡೆ ರಚಿಸಲು ಮುಂದಾಗಿದ್ದರು. ಆದರೆ ರಾಹುಲ್‌ ಗಾಂಧಿ ಯೋಜನೆಗೆ ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕರ ಅಪಸ್ವರ ಉಂಟಾಗಿತ್ತು. ಆದರೂ ನಾಯಕರ ಒತ್ತಡಕ್ಕೆ ಮಣಿಯದೆ ಯುವಕರನ್ನು ಮುನ್ನಲೆಗೆ ತರುವ ಕೆಲಸ ಮಾಡಿದ್ರು.

ಸಚಿನ್‌ ಪೈಲಟ್‌, ಜೋತಿರಾಧಿತ್ಯ ಸಿಂಧಿಯಾ ಎರಡು ಕಣ್ಣು..!

ಕಾಂಗ್ರೆಸ್‌ನಲ್ಲಿ ರಾಹುಲ್‌ಗಾಂಧಿ ಅತ್ಯಾಪ್ತರಲ್ಲಿ ಸಚಿನ್‌ಪೈಲಟ್‌ಹಾಗೂ ಜೋತಿರಾಧಿತ್ಯ ಸಿಂಧಿಯಾ ಎರಡು ಕಣ್ಣುಗಳಿದ್ದಂತೆ. ಕಳೆದ ಎರಡು ಲೋಕಸಭಾ ಚುನಾವಣೆ ಸೇರಿದಂತೆ ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್‌ ಗಾಂಧಿ ಬೆನ್ನೆಲುಬು ಆಗಿದ್ದವರು. ರಾಹುಲ್‌ಗಾಂಧಿ ರಚಿಸಿದ್ದ ಪ್ಲ್ಯಾನಿಂಗ್‌ ಟೀಂನಲ್ಲಿ ಈ ಇಬ್ಬರು ನಾಯಕರು ಸ್ಥಾನ ಪಡೆದುಕೊಂಡಿದ್ದರು. ಅದೇ ಕಾರಣದಿಂದ ಸಾಕಷ್ಟು ವೇಗವಾಗಿ ಬೆಳೆದುಕೊಂಡ ಈ ಇಬ್ಬರು ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ರಾಜ್ಯ ಪ್ರವಾಸ ಮಾಡಿ ಕಾಂಗ್ರೆಸ್‌ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು. ಆದರೆ ಮುಖ್ಯಮಂತ್ರಿ ಆಗಬೇಕಿದ್ದ ನಾಯಕರನ್ನು ಕೈಬಿಟ್ಟ ಕಾಂಗ್ರೆಸ್‌ಪಕ್ಷ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿದ್ದ ನಾಯಕರು ಎನ್ನುವ ಕಾರಣಕ್ಕೆ ಹಿರಿಯ ನಾಯಕರಿಗೆ ಮಣೆ ಹಾಕಲಾಯ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರಾಹುಲ್‌ ಗಾಂಧಿ ಮಧ್ಯಪ್ರವೇಶದಿಂದ ಬಂಡಾಯಕ್ಕೆ ಬ್ರೇಕ್‌..!

ಮಧ್ಯಪ್ರದೇಶ ಹಾಗೂ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅತ್ಯಧಿಕ ಸ್ಥಾನಗಳನ್ನು ಗಳಿಸಿದ ಬಳಿಕ ಗೆಲುವಿನ ಶ್ರೇಯಕ್ಕೆ ಪಾತ್ರರಾಗಬೇಕಿದ್ದ ಸಚಿನ್‌ ಪೈಲಟ್‌ ಹಾಗೂ ಜೋತಿರಾಧಿತ್ಯ ಸಿಂಧಿಯಾ ಅಧಿಕಾರಯುತವಾಗಿ ಮುಖ್ಯಮಂತ್ರಿ ಹುದ್ದೆಗೆ ಏರಬೇಕಿತ್ತು. ಆದರೆ ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕರಾದ ಕಮಲನಾಥ್‌ ಹಾಗೂ ಅಶೋಕ್‌ ಗೆಹ್ಲೋಟ್‌ಗೆ ಮುಖ್ಯಮಂತ್ರಿ ಸ್ಥಾನ ಕರುಣಿಸಲಾಯ್ತು. ಇದೊಂದು ಬಾರಿ ಅಧಿಕಾರ ತ್ಯಾಗಕ್ಕೆ ಮನಸ್ಸು ಮಾಡಿ, ಮುಂದಿನ ದಿನಗಳಲ್ಲಿ ಇಡೀ ಪಕ್ಷ ನಿಮ್ಮ ಪರವಾಗಿ ನಿಲ್ಲಲಿದ್ದು, ಸಾಕಷ್ಟು ಅವಕಾಶಗಳು ಒಲಿದು ಬರಲಿದೆ ಎಂದು ಸ್ವತಃ ರಾಹುಲ್‌ಗಾಂಧಿ ಮಧ್ಯಸ್ಥಿಕೆ ವಹಿಸಿ ಬಂಡಾಯದ ಬಾವುಟವನ್ನು ಕೆಳಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇಷ್ಟು ದಿನ ಹಿರಿಯರು ಎಂಬ ಕಾರಣಕ್ಕೆ ಒಪ್ಪಿಕೊಂಡಿದ್ದ ನಾಯಕರ ಬಿರುದ್ಧ ಯುವಕರು ಸಿಡಿದೆದ್ದಿದ್ದಾರೆ. ಅದರಲ್ಲಿ ಮೊದಲಿಗನಾಗಿದ್ದು, ಜೋತಿರಾಧಿತ್ಯ ಸಿಂಧಿಯಾ. ಇದೀಗ ಸಚಿನ್ ‌ಪೈಲಟ್‌.

ಕರ್ನಾಟಕದಲ್ಲೂ ಎದುರಾಗುತ್ತಾ ರಾಜಸ್ಥಾನ ರಾಜಕೀಯ..!

ಕರ್ನಾಟಕಕ್ಕೂ ಮಧ್ಯಪ್ರದೇಶ ಹಾಗೂ ರಾಜಸ್ಥಾನ ರಾಜಕೀಯಕ್ಕೂ ಸಾಮ್ಯತೆಯಿದೆ. ಕಾಂಗ್ರೆಸ್‌ಯುವ ಅಧ್ಯಕ್ಷನಾಗಿದ್ದ ಡಿ,ಕೆ ಶಿವಕುಮಾರ್‌, ಇದೀಗ ಬಹಳ ಮಹತ್ವಾಕಾಂಕ್ಷೆಯಿಂದ ಕಾಂಗ್ರೆಸ್‌ಅಧ್ಯಕ್ಷನಾಗಿದ್ದಾರೆ. ಮುಂದಿನ ಬಾರಿ ಚುನಾವಣೆಗೂ ಮೊದಲು ರಾಜ್ಯಾದ್ಯಂತ ಕಾಂಗ್ರೆಸ್‌ಪಕ್ಷವನ್ನು ಸಂಘಟನೆ ಮಾಡಿ, ಒಂದು ವೇಳೆ ಪಕ್ಷವನ್ನು ಅಧಿಕಾರಕ್ಕೆ ತಂದರೆ ಮುಖ್ಯಮಂತ್ರಿ ಸ್ಥಾನ ದಕ್ಕಬೇಕಿರುವುದು ಯಾರಿಗೆ..? ಪಕ್ಷವನ್ನು ಅಧಿಕಾರಕ್ಕೆ ತಂದ ಡಿ.ಕೆ ಶಿವಕುಮಾರ್‌ಅವರಿಗೆ. ಆದರೆ ಕಾಂಗ್ರೆಸ್‌ ಹೈಕಮಾಂಡ್‌ ಮಧ್ಯಪ್ರವೇಶ ಮಾಡಿ, ಕಾಂಗ್ರೆಸ್‌ನಲ್ಲಿ ಸಾಕಷ್ಟು ವರ್ಷಗಳಿಂದ ಇದ್ದರೂ ಮುಖ್ಯಮಂತ್ರಿ ಆಗಲು ಸಾಧ್ಯವಾಗಿಲ್ಲ ಎನ್ನುವ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆಯನ್ನು ಕರೆತಂದು ಮುಖ್ಯಮಂತ್ರಿ ಮಾಡಿಬಿಟ್ಟರೆ ಪರಿಸ್ಥಿತಿ ಹೇಗಾಗಬೇಕು. ಊಹೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್‌ ಮತ್ತೆ ನೆಲಕಚ್ಚಲಿದೆ ಎನ್ನುವುದು ನಿಶ್ಚಿತ.

ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲೂ ಆಗ್ತಿರೋದು ಇದೇ ಕಥೆ. ಕಾಂಗ್ರೆಸ್‌ನಲ್ಲಿ ಸಾಕಷ್ಟು ವರ್ಷಗಳಿಂದ ಇದ್ದಾರೆ ಎನ್ನುವ ಕಾರಣಕ್ಕೆ ಹುದ್ದೆ ಕೊಡುವುದು ನಿಲ್ಲದಿದ್ದರೆ ಯಾವುದೇ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಕಷ್ಟ. ಯಾವ ನಾಯಕನಿಗೆ ಜನ ಬೆಂಬಲ ಇದೆಯೋ..? ಯಾರು ಪಕ್ಷವನ್ನು ಮುನ್ನಡೆಸಲು ಸಮರ್ಥರಿದ್ದಾರೆಯೋ ಅಂತಹ ನಾಯಕರಿಗೆ ಅಧಿಕಾರ ಸಿಗಬೇಕಾದುದ್ದು ಧರ್ಮ. ಆ ಧರ್ಮವನ್ನು ಬಿಟ್ಟು ಗಾಂಧಿ ಕುಟುಂಬಕ್ಕೆ ಆಪ್ತರು ಎನ್ನುವ ಕಾರಣಕ್ಕೆ ಅಧಿಕಾರ ಕೊಡುತ್ತಾ ಹೋದರೆ ಅಧಿಕಾರಕ್ಕೆ ತರಲು ಶ್ರಮಿಸಿದವರ ಕಥೆ ಏನಾಗಬೇಕು..? ಈ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಚಿಂತಿಸಬೇಕಿದೆ. ಅಧ್ಯಕ್ಷ ಸ್ಥಾನವನ್ನೂ ಅಷ್ಟೇ, ಸೋನಿಯಾ ಗಾಂಧಿ ಅಥವಾ ರಾಹುಲ್‌ಗಾಂಧಿಯೇ ಇರಬೇಕು ಎನ್ನುವುದು ಸೂಕ್ತವಲ್ಲ. ಪಕ್ಷವನ್ನು ಅಧಿಕಾರದತ್ತ ತರುವ ನಾಯಕರಿಗೆ ಸೂಕ್ತ ಸ್ಥಾನ ಮಾನ ಸಿಗಬೇಕು. ಆಗಲೇ ದೇಶದಲ್ಲಿ ಪ್ರಬಲ ಪಕ್ಷವಾಗಿ ಹೊರಹೊಮ್ಮುವುದಕ್ಕೆ ಸಾಧ್ಯ. ಇಲ್ಲದಿದ್ದರೆ, ಇದೇ ಕಥೆ ಚಿನ್ನದ ಮೊಟ್ಟೆಯನ್ನಿಡುವ ಕೊಳಿಗಳು ಕಾಂಗ್ರೆಸ್‌ ಪಕ್ಷವನ್ನು ತೊರೆದು ಬೇರೆಡೆಗೆ ಹೋಗುವುದು ಮುಂದುವರಿಯುತ್ತದೆ ಅಷ್ಟೆ.

Tags: jyotiraditya scindiaSachin pilotಕಾಂಗ್ರೆಸ್ಗಾಂಧಿ ಕುಟುಂಬ
Previous Post

ವರ್ಷದೊಳಗೆ ತನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು; ಸಚಿನ್ ಪೈಲಟ್ ತಾಕೀತು

Next Post

ಬಿಬಿಎಂಪಿ ಆಯುಕ್ತರಾಗಿ ಮತ್ತೆ ಮಂಜುನಾಥ್‌ ಪ್ರಸಾದ್‌ ನೇಮಕ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ಬಿಬಿಎಂಪಿ ಆಯುಕ್ತರಾಗಿ ಮತ್ತೆ ಮಂಜುನಾಥ್‌ ಪ್ರಸಾದ್‌ ನೇಮಕ

ಬಿಬಿಎಂಪಿ ಆಯುಕ್ತರಾಗಿ ಮತ್ತೆ ಮಂಜುನಾಥ್‌ ಪ್ರಸಾದ್‌ ನೇಮಕ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada