• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣಾ ಪ್ರಚಾರ ರ‍್ಯಾಲಿ ವಿಚಾರದಲ್ಲಿ ಬಯಲಾದ ಡಾ. ಸುಧಾಕರ್‌ ದ್ವಂದ್ವ ನೀತಿ

by
October 16, 2020
in ಕರ್ನಾಟಕ
0
ಚುನಾವಣಾ ಪ್ರಚಾರ ರ‍್ಯಾಲಿ ವಿಚಾರದಲ್ಲಿ ಬಯಲಾದ ಡಾ. ಸುಧಾಕರ್‌ ದ್ವಂದ್ವ ನೀತಿ
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಉಪ ಚುಣಾವಣೆಯ ಕಾವು ಜೋರಾಗಿ ಹಬ್ಬುತ್ತಿದೆ. ಇದರ ನಡುವೆ, ಬಿಜೆಪಿ ಮತ್ತು ಕಾಂಗ್ರೆಸ್‌ನ ನಾಯಕರ ಮಾತಿನ ಸಮರ ಈಗಲೇ ತಾರಕಕ್ಕೇರಿದೆ. ಅದರಲ್ಲೂ ಹೊಸತಾಗಿ ಆರೋಗ್ಯ ಮಂತ್ರಿಯಾಗಿ ನೇಮಕವಾಗಿರುವ ಡಾ. ಸುಧಾಕರ್‌ ಅವರ ದ್ವಂದ್ವ ನೀತಿ ಈ ಬಾರಿಯ ಚುನಾವಣೆಯಲ್ಲಿ ಜಗಜ್ಜಾಹೀರಾಗಿದೆ.

ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್‌ ನಾಯಕರು ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಿ ರ‍್ಯಾಲಿ ನಡೆಸಿದ್ದನ್ನು ಟೀಕಿಸಿದ್ದ ಡಾ. ಸುಧಾಕರ್‌ ಅವರಿಗೆ ತಮ್ಮದೇ ಪಕ್ಷದ ನಾಯಕರ ಜೊತೆಗಿದ್ದ ಜನಸ್ತೋಮ ಕಣ್ಣಿಗೆ ಕಾಣಿಸಲಿಲ್ಲ. ಕಾಂಗ್ರೆಸ್‌ ನಾಯಕರ ವಿರುದ್ದ ಮಾಡಿದ್ದ ಟ್ವೀಟ್‌ ಅನ್ನು ಚುನಾವಣಾ ಆಯೊಗಕ್ಕೂ ಟ್ಯಾಗ್‌ ಮಾಡಿರುವ ಸುಧಾಕರ್‌ ಅವರು, ಕಾಂಗ್ರೆಸ್‌ನ ರ‍್ಯಾಲಿಯ ಕುರಿತು ತಕರಾರು ಎತ್ತಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಕರೋನಾ ಸಂದರ್ಭದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆಗಳನ್ನು ಗಾಳಿಗೆ ತೂರಿ ಇಂದು ಕಾಂಗ್ರೆಸ್ ಪಕ್ಷ ಶಿರಾದಲ್ಲಿ ನಡೆಸಿರುವ ಪ್ರಚಾರ ರ‍್ಯಾಲಿ ಚುನಾವಣಾ ಆಯೋಗದ ನಿಯಮಗಳ ಉಲ್ಲಂಘನೆಯಾಗಿದೆ. ಅಷ್ಟೇ ಅಲ್ಲದೆ, ಈ ಬೇಜವಾಬ್ದಾರಿ ನಡೆಯಿಂದ ಕಾಂಗ್ರೆಸ್ ಪಕ್ಷ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಅಪಾಯಕ್ಕೆ ದೂಡಿದೆ,” ಎಂದು ಡಾ. ಸುಧಾಕರ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದರು.

ಕೊರೊನಾ ಸಂದರ್ಭದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆಗಳನ್ನು ಗಾಳಿಗೆ ತೂರಿ ಇಂದು ಕಾಂಗ್ರೆಸ್ ಪಕ್ಷ ಶಿರಾದಲ್ಲಿ ನಡೆಸಿರುವ ಪ್ರಚಾರ ರ‍್ಯಾಲಿ ಚುನಾವಣಾ ಆಯೋಗದ ನಿಯಮಗಳ ಉಲ್ಲಂಘನೆಯಾಗಿದೆ. ಅಷ್ಟೇ ಅಲ್ಲದೆ, ಈ ಬೇಜವಾಬ್ದಾರಿ ನಡೆಯಿಂದ ಕಾಂಗ್ರೆಸ್ ಪಕ್ಷ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಅಪಾಯಕ್ಕೆ ದೂಡಿದೆ.@ECISVEEP pic.twitter.com/Fo14l8WWQt

— Dr Sudhakar K (@mla_sudhakar) October 15, 2020


ಟ್ವೀಟ್‌ನೊಂದಿಗೆ ಕಾಂಗ್ರೆಸ್‌ ಕಾರ್ಯಕರ್ತರು ತಂಡೋಪತಂಡವಾಗಿ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತಿರುವ ಚಿತ್ರವನ್ನು ಕೂಡಾ ಹಾಕಲಾಗಿತ್ತು.

ಈ ಟ್ವೀಟ್‌ ಮಾಡಿ ಗಂಟೆ ಆಗಿವ ಮೊದಲೇ, ಉಪ ಮುಖ್ಯಮಂತ್ರಿ ಡಾ. ಅಶ್ವಥನಾರಾಯಣ ಹಾಗೂ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಸಿಎಂ ಮಗ ಬಿ ವೈ ವಿಜಯೇಂದ್ರ ಅವರು ತಮ್ಮ ವೈಯಕ್ತಿಕ ಟ್ವಿಟರ್‌ ಖಾತೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್‌ ಗೌಡ ಅವರ ನಾಮಪತ್ರ ಸಲ್ಲಿಕೆಯ ಫೋಟೋವನ್ನು ಪೋಸ್ಟ್‌ ಮಾಡಿದ್ದರು. ಇಬ್ಬರು ಹಾಕಿರುವ ಫೋಟೋಗಳಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿರುವುದು ಕಂಡು ಬಂದಿದೆ.

ವಿಜಯೇಂದ್ರ ಅವರು ಮಾಡಿರುವ ಟ್ವೀಟ್‌ನಲ್ಲಿ “ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರು ನಾಮಪತ್ರ ಸಲ್ಲಿಸುವ ವೇಳೆ ರ‍್ಯಾಲಿಯಲ್ಲಿ ಭಾಗವಹಿಸಿದ್ದೆ. ಕ್ಷೇತ್ರದ ಜನತೆಯ ಅಭೂತಪೂರ್ವ ಬೆಂಬಲ ನಮ್ಮ ಪಕ್ಷದ ಮೇಲೆ ಹಾಗೂ ಅಭಿವೃದ್ಧಿಯ ಪರವಾದ ಅಲೆಯಿದ್ದು ವಿಜಯ ನಮ್ಮದಾಗಲಿದೆ,” ಎಂದು ಬರೆದುಕೊಂಡಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರು ನಾಮಪತ್ರ ಸಲ್ಲಿಸುವ ವೇಳೆ ರ‍್ಯಾಲಿಯಲ್ಲಿ ಭಾಗವಹಿಸಿದ್ದೆ. ಕ್ಷೇತ್ರದ ಜನತೆಯ ಅಭೂತಪೂರ್ವ ಬೆಂಬಲ ನಮ್ಮ ಪಕ್ಷದ ಮೇಲೆ ಹಾಗೂ ಅಭಿವೃದ್ಧಿಯ ಪರವಾದ ಅಲೆಯಿದ್ದು ವಿಜಯ ನಮ್ಮದಾಗಲಿದೆ. pic.twitter.com/xXFC0Omfjv

— Vijayendra Yeddyurappa (@BYVijayendra) October 16, 2020


ಉಪ ಮುಖ್ಯಮಂತ್ರಿ ಡಾ. ಸಿ ಎನ್‌ ಅಶ್ವತ್ಥನಾರಾಯಣ ಅವರು “ಶಿರಾದಲ್ಲಿ ಕಮಲ ಅರಳಲಿದೆ! ಬಿಜೆಪಿ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಹಾಗೂ ಬಿ ವೈ ವಿಜಯೇಂದ್ರ ಅವರೊಂದಿಗೆ ರ‍್ಯಾಲಿಯಲ್ಲಿ ಪಾಲ್ಗೊಂಡೆ. ಜನತೆಯ ಅಭೂತಪೂರ್ವ ಬೆಂಬಲ ನಮಗಿದೆ,” ಎಂದು ಬರೆದುಕೊಂಡಿದ್ದಾರೆ.

ಶಿರಾದಲ್ಲಿ ಕಮಲ ಅರಳಲಿದೆ!@BJP4Karnataka ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ @GovindKarjol ಅವರು ಹಾಗೂ @BYVijayendra ಅವರೊಂದಿಗೆ ರ‍್ಯಾಲಿಯಲ್ಲಿ ಪಾಲ್ಗೊಂಡೆ. ಜನತೆಯ ಅಭೂತಪೂರ್ವ ಬೆಂಬಲ ನಮಗಿದೆ.#BJP4Sira pic.twitter.com/EWPBUBO1DR

— Dr. Ashwathnarayan C. N. (@drashwathcn) October 16, 2020


ADVERTISEMENT

ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದ್ದರೂ, ಇದು ಆರೋಗ್ಯ ಸಚಿವರ ಕಣ್ಣಿಗೆ ಕಾಣದೇ ಇರುವುದು ನಿಜಕ್ಕೂ ಆಶ್ಚರ್ಯವೇ ಸರಿ. ಕಾಂಗ್ರೆಸ್‌ ಕಾರ್ಯಕರ್ತರು ಸೇರಿರುವ ಕಡೆ ಚುನಾವಣಾ ಆಯೋಗದ ನಿಯಮಗಳ ಉಲ್ಲಂಘನೆ ಆಗುತ್ತದೆ. ಆದರೆ, ಅದೇ ನಿಯಮಗಳು ಆಡಳಿತರೂಢ ಬಿಜೆಪಿ ಪಕ್ಷದ ನಾಯಕರಿಗೆ ಅನ್ವಯವಾಗುವುದಿಲ್ಲ.

ಇನ್ನು ಕರೋನಾ ಸೋಂಕು ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಯಾವುದೇ ತಾರತಮ್ಯ ಮಾಡುವುದಿಲ್ಲ. ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಅಪಾಯಕ್ಕೆ ದೂಡುವ ಕೆಲಸ ಬಿಜೆಪಿ ನಾಯಕರಿಂದಲೂ ನಡೆದಿದೆ.

ಇಲ್ಲಿ ಕಾಂಗ್ರೆಸ್‌ ನಾಯಕರು ಮಾಡಿದ್ದು ಸರಿಯೋ? ಅಥವಾ ಬಿಜೆಪಿ ನಾಯಕರು ಮಾಡಿದ್ದು ಸರಿಯೋ? ಎಂಬುದು ಪ್ರಶ್ನೆಯಲ್ಲ. ಆದರೆ, ಆರೋಗ್ಯ ಸಚಿವರಾದವರಿಗೆ ತಮ್ಮ ಪಕ್ಷದ ನಾಯಕರು ಮಾಡಿದ ತಪ್ಪು ಕಣ್ಣಿಗೆ ಕಾಣದಿರುವುದು ಅಪಹಾಸ್ಯಕ್ಕೆ ಎಡೆ ಮಾಡಿಕೊಟ್ಟಂತಾಗಿದೆ. ಬಿಜೆಪಿ ನಾಯಕರ ದ್ವಂದ್ವ ನೀತಿ ಇದರಿಂದಾಗಿ ಬಟಾ ಬಯಲಾಗಿದೆ.

Tags: By-electionDr SudhakarSira By electionಕಾಂಗ್ರೆಸ್ಚುನಾವಣಾ ಪ್ರಚಾರಡಾ.ಸುಧಾಕರ್‌ಬಿಜೆಪಿ
Previous Post

ವರುಣಾಘಾತದಿಂದ ನಲುಗಿದ ಕಲ್ಯಾಣ ಕರ್ನಾಟಕ

Next Post

2018-19ರಲ್ಲಿ ರೂ. 698 ಕೋಟಿ ಕಾರ್ಪೊರೇಟ್‌ ದೇಣಿಗೆ ಪಡೆದ ಬಿಜೆಪಿ

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
2018-19ರಲ್ಲಿ ರೂ. 698 ಕೋಟಿ ಕಾರ್ಪೊರೇಟ್‌ ದೇಣಿಗೆ ಪಡೆದ ಬಿಜೆಪಿ

2018-19ರಲ್ಲಿ ರೂ. 698 ಕೋಟಿ ಕಾರ್ಪೊರೇಟ್‌ ದೇಣಿಗೆ ಪಡೆದ ಬಿಜೆಪಿ

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada