• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಜಮ್ಮು ಮತ್ತು ಕಾಶ್ಮೀರದಿಂದ ಜಿಯೋ ಚಾಟ್ ಹೊರಕ್ಕೆ

by
February 3, 2020
in ದೇಶ
0
ಜಮ್ಮು ಮತ್ತು ಕಾಶ್ಮೀರದಿಂದ ಜಿಯೋ ಚಾಟ್ ಹೊರಕ್ಕೆ
Share on WhatsAppShare on FacebookShare on Telegram

ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ತಿಂಗಳಿಂದ ನಿಷೇಧಿಸಲ್ಪಟ್ಟಿದ್ದ ಇಂಟರ್ನೆಟ್ ಅನ್ನು ಪುನಾರಂಭಿಸಲಾಗಿದೆ. ಕಳೆದ ವಾರ ಆಯ್ದ 300 ಕ್ಕೂ ಅಧಿಕ ವೆಬ್ ಸೈಟ್ ಗಳನ್ನು ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಆದರೆ, ಮೆಸೇಂಜರ್ ಆ್ಯಪ್ ಆಗಿದ್ದ ಮುಕೇಶ್ ಅಂಬಾನಿ ಮಾಲೀಕತ್ವದ ಜಿಯೋಚಾಟ್ ಅನ್ನು ಮಾತ್ರ ಬಳಕೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ಬಗ್ಗೆ ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಯೋ ಚಾಟ್ ಬಳಕೆಗೆ ನೀಡಲಾಗಿದ್ದ ಅನುಮತಿಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿದೆ.
ಇತ್ತೀಚಿಗೆ ಸರ್ಕಾರ ಪ್ರಕಟಿಸಿರುವ ಪರಿಷ್ಕೃತ ವೆಬ್ ಸೈಟ್ ಗಳ ಪಟ್ಟಿಯಲ್ಲಿ ಜಿಯೋಚಾಟ್ ಗೆ ಕೊಕ್ ನೀಡಲಾಗಿದೆ. ಇದುವರೆಗೆ ಆಯ್ದ 300 ವೆಬ್ ಸೈಟ್ ಗಳಿಗೆ ಅನುಮತಿ ನೀಡಲಾಗಿದ್ದು, ಇದೀಗ ಇನ್ನೂ ಹೆಚ್ಚು ಕಾಶ್ಮೀರಿ ವೆಬ್ ಸೈಟ್ ಗಳ ಬಳಕೆಗೆ ಅನುಮತಿ ನೀಡಲಾಗಿದೆ.

ADVERTISEMENT

ಕಳೆದ ವಾರ ಮೊಬೈಲ್ ಫೋನ್ ಮತ್ತು 2ಜಿ ಇಂಟರ್ನೆಟ್ ಸೇವೆಗಳನ್ನು ಪುನಾರಂಭಿಸಿದ ನಂತರ ಸರ್ಕಾರ 301 ವೆಬ್ ಸೈಟ್ ಗಳ ಸೇವೆಯನ್ನೂ ಪುನಾರಂಭ ಮಾಡಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370 ನೇ ವಿಧಿಯನ್ನು ವಾಪಸ್ ಪಡೆದಿದ್ದರಿಂದ ಕಣಿವೆ ರಾಜ್ಯದಲ್ಲಿ ಅಶಾಂತಿ ನೆಲೆಸಬಹುದು ಎಂಬ ಕಾರಣಕ್ಕೆ ಎಲ್ಲಾ ಮೊಬೈಲ್, ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಿತ್ತು. ಇದರಿಂದ ರಾಜ್ಯದ ಜನತೆ ತೀವ್ರ ಸಂಕಷ್ಟವನ್ನು ಎದುರಿಸಬೇಕಾಗಿ ಬಂದಿತು. ಸುಪ್ರೀಂಕೋರ್ಟ್ ಸಹ ಜನತೆಯ ಅವಿಭಾಜ್ಯ ಅಂಗವಾಗಿರುವ ಇಂಟರ್ನೆಟ್ ಮತ್ತು ಫೋನ್ ಸೇವೆಗಳನ್ನು ನಿಷೇಧಿಸಿರುವುದಕ್ಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಈ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಜಮ್ಮು ಮತ್ತು ಕಾಶ್ಮೀರ ಆಡಳಿತವು ಹಂತಹಂತವಾಗಿ ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಪುನಾರಂಭಿಸುತ್ತಾ ಬಂದಿದೆ. ಆದರೆ, ಕೇಂದ್ರ ಸರ್ಕಾರ ಜನವರಿ 24 ರಂದು ವ್ಯಕ್ತಿಯಿಂದ ವ್ಯಕ್ತಿಗೆ ಸಂಪರ್ಕ ಕಲ್ಪಿಸುವ ಸಾಮಾಜಿಕ ಮಾಧ್ಯಮ ಅಪ್ಲಿಕೇಷನ್ ಮೇಲೆ ಸಂಪೂರ್ಣ ನಿಷೇಧ ಹೇರಿತ್ತಾದರೂ, ಒಂದು ಗ್ರೂಪಿನಲ್ಲಿ 500 ಜನರನ್ನು ಸೇರಿಸಿಕೊಂಡು ಚಾಟ್ ಮಾಡಲು, ವಿಡಿಯೋ-ಫೋಟೋಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸುವ ಮುಕೇಶ್ ಅಂಬಾನಿ ಒಡೆತನದ ಜಿಯೋಚಾಟ್ ಅನ್ನು ವೈಟ್ ಲೀಸ್ಟ್ ನಲ್ಲಿ ಸೇರಿಸಿತ್ತು. ಅಂದರೆ ಜಿಯೋಚಾಟ್ ಹೊರತುಪಡಿಸಿ ಯಾವುದೇ ಇತರೆ ಸಾಮಾಜಿಕ ಮಾಧ್ಯಮಗಳಿಗೆ ಅನುಮತಿ ನೀಡಿರಲಿಲ್ಲ.

ಇತರೆ ಸಾಮಾಜಿಕ ಮಾಧ್ಯಮದ ಸೇವೆಗಳನ್ನು ಕಲ್ಪಿಸುವ ದೂರಸಂಪರ್ಕ ಕಂಪನಿಗಳ ಸೇವೆಗಳಲ್ಲಿ ಕೇವಲ 260-280 ಜನರ ಗ್ರೂಪ್ ಮಾಡಿಕೊಳ್ಳಲು ಅವಕಾಶವಿದೆ. ಆದರೆ, ಜಿಯೋಚಾಟ್ ನಲ್ಲಿ 500 ಜನರ ಗ್ರೂಪನ್ನು ಮಾಡಿಕೊಂಡು ಚರ್ಚೆಗಳನ್ನು ನಡೆಸಬಹುದು ಮತ್ತು ವಿಡಿಯೋ-ಫೋಟೋಗಳನ್ನು ಪರಸ್ಪರ ಹಂಚಿಕೊಳ್ಳಬಹುದಾಗಿದೆ. ಅಂದರೆ ಇತರೆ ಕಂಪನಿಗಳ ಸೇವೆಗಿಂತ ಕ್ಷಿಪ್ರವಾಗಿ ಮತ್ತು ಹೆಚ್ಚು ಮಂದಿಗೆ ಮಾಹಿತಿ ರವಾನೆಯಾಗುವುದು ಇದೇ ಜಿಯೋಚಾಟ್ ನಲ್ಲಿ. ಹೀಗಿರುವಾಗ ಜಿಯೋಚಾಟ್ ಗೆ ಅನುಮತಿ ನೀಡಿದ್ದ ಉದ್ದೇಶವಾದರೂ ಏನು? ಎಂದು ತಂತ್ರಜ್ಞಾನ ಪರಿಣತರು ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದರು.

ಮೊದಲು ಹೊರಡಿಸಲಾಗಿದ್ದ ಎರಡು ಲೀಸ್ಟ್ ಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರಮುಖ ದಿನಪತ್ರಿಕೆಗಳಿಗೆ ಅನುಮತಿ ನೀಡಲಾಗಿತ್ತು. ಆದರೆ, ಯಾವುದೇ ಸ್ಥಳೀಯ ಪೋರ್ಟಲ್ ಗಳನ್ನು ಹೆಸರಿಸಲಾಗಿರಲಿಲ್ಲ. ಇದೀಗ ಮತ್ತಷ್ಟು ಸುದ್ದಿ ಮಾಧ್ಯಮಗಳನ್ನು ಸೇರಿಸಿ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಿಂದ ಜಿಯೋ ಚಾಟ್ ಅನ್ನು ಹೊರಗಿಟ್ಟಿರುವುದು ಇದರ ವಿಶೇಷವಾಗಿದೆ.

ವರ್ಚುವಲ್ ಪ್ರೈವೇಟ್ ನೆಟ್ ವರ್ಕ್(ವಿಪಿಎನ್) ಅಕ್ಸೆಸ್ ಮಾಡುವ ಮೂಲಕ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಇಂಟರ್ನೆಟ್ ಅನ್ನು ದುರ್ಬಳಕೆ ಮಾಡುವ ಶಂಕೆಗಳು ಇವೆ. ಈ ಕಾರಣದಿಂದ ಜಿಯೋಚಾಟ್ ಅನ್ನು ಹೊರಗಿಡಲಾಗಿದೆ ಎಂದು ಗೃಹ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ಅಲ್ಲದೇ, ಇಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ವಿಚ್ಛಿದ್ರ ಶಕ್ತಿಗಳು ಭಯೋತ್ಪಾದನಾ ಕೃತ್ಯಗಳನ್ನು ನಡೆಸಲು ಅಥವಾ ಈ ಬಗ್ಗೆ ಪ್ರಚೋದನಾಕಾರಿ ವದಂತಿಗಳನ್ನು ಹಬ್ಬಿಸುವ ಸಾಧ್ಯತೆಗಳಿವೆ. ಅದೇ ರೀತಿ ಇಂತಹ ಮೆಸೇಜ್ ಗಳನ್ನು ರವಾನೆ ಮಾಡಲು ಬಳಸಿಕೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಿತದೃಷ್ಟಿಯಿಂದ ಜಿಯೋಚಾಟ್ ನಂತಹ ಸಾಮಾಜಿಕ ಮಾಧ್ಯಮದ ಅಪ್ಲಿಕೇಷನ್ ಅನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ.

ಇದೇ ವೇಳೆ, ಜಮ್ಮು ಲಿಂಕ್ಸ್ ಮತ್ತು ಸ್ಟ್ರೇಟ್ ಲೈನ್ ನ್ಯೂಸ್ ನಂತಹ ಪೋರ್ಟಲ್ ಗಳನ್ನೂ ಈ ಹಿಂದೆ ನಿಷೇಧಿಸಲಾಗಿತ್ತು. ಆದರೆ, ಸರ್ಕಾರ ಹೊರಡಿಸಿರುವ ಹೊಸ ಆದೇಶದಲ್ಲಿ ಇಂತಹ ಪೋರ್ಟಲ್ ಗಳನ್ನೂ ಸೇರ್ಪಡೆ ಮಾಡಲಾಗಿದೆ.

Tags: approvedGovernmentJammu and KashmirJioChatlatest listmessenger appMukesh AmbaniWebsitesಜಮ್ಮು ಮತ್ತು ಕಾಶ್ಮೀರಜಿಯೋ ಚಾಟ್ಮುಕೇಶ್ ಅಂಬಾನಿಮೆಸೆಂಜರ್ ಆ್ಯಪ್ವೆಬ್ ಸೈಟ್ ಗಳುಸರ್ಕಾರ
Previous Post

17ನೇ ಗ್ರಾನ್ ಸ್ಲಾಂ ಮುಡಿಗೇರಿಸಿಕೊಂಡ ಜೋಕೋವಿಚ್‌‌

Next Post

ಐದು ಸ್ಮಾರಕಗಳ ಸಂರಕ್ಷಣೆಗೆ ಸಂಕಲ್ಪ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

March 30, 2026
Next Post
ಐದು ಸ್ಮಾರಕಗಳ ಸಂರಕ್ಷಣೆಗೆ ಸಂಕಲ್ಪ

ಐದು ಸ್ಮಾರಕಗಳ ಸಂರಕ್ಷಣೆಗೆ ಸಂಕಲ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada