• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜೂನಿಯರ್‌ ರಾಜ್‌ಕುಮಾರ್‌, ಕೊಡಗನೂರು ಜಯಕುಮಾರ್‌ ನಿಧನ

by
October 6, 2020
in ಕರ್ನಾಟಕ
0
ಜೂನಿಯರ್‌ ರಾಜ್‌ಕುಮಾರ್‌
Share on WhatsAppShare on FacebookShare on Telegram

ರಂಗಭೂಮಿ, ಸಿನಿಮಾ, ಕಿರುತೆರೆಯ ಹಿರಿಯ ಕಲಾವಿದ ಕೊಡಗನೂರು ಜಯಕುಮಾರ್‌ (72 ವರ್ಷ) ಇಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆಯಲ್ಲಿ ಹೃದಯಾಘಾತದಿಂದ ಅಗಲಿದ್ದಾರೆ. ದಾವಣಗೆರೆ ಸಮೀಪ ಕೊಡಗನೂರು ಅವರ ಜನ್ಮಸ್ಥಳ. ವೃತ್ತಿರಂಗಭೂಮಿ ಜೊತೆ ಅವರದು ಸುಮಾರು ನಾಲ್ಕೂವರೆ ದಶಕಗಳ ಒಡನಾಟ. ಕನ್ನಡ ವೃತ್ತಿರಂಗಭೂಮಿಯಲ್ಲಿ ಅವರು ಜ್ಯೂನಿಯರ್ ರಾಜಕುಮಾರ್ ಎಂದೇ ಹೆಸರಾದವರು.

ADVERTISEMENT

ರಂಗಭೂಮಿ ತಜ್ಞರು ಹಾಗೂ ಹಿರಿಯ ಪತ್ರಕರ್ತರಾಗಿರುವ ಗುಡಿಹಳ್ಳಿ ನಾಗರಾಜು ಅವರು ಹೇಳುವ ಪ್ರಕಾರ, ಜಯಕುಮಾರ್‌ ಅವರು ವೃತ್ತಿರಂಗಭೂಮಿಯ ಹೆಸರಾಂತ ನಟ. ಅವರು ಕುಮಾರಸ್ವಾಮಿ ಕಂಪೆನಿ, ಗುಬ್ಬಿ ಕಂಪೆನಿ ಸೇರಿದಂತೆ ಹಲವಾರು ಕಂಪೆನಿಗಳಲ್ಲಿ ಎಲ್ಲಾ ರೀತಿಯ ಪಾತ್ರಗಳನ್ನು ಮಾಡಿದ್ದಾರೆ. ಕೆಲವರು ಹೀರೋ ಪಾತ್ರ ಮಾತ್ರ ಮಾಡಿದರೆ, ಇವರು ಸೇವಕನ ಪಾತ್ರ ಕೊಟ್ಟರೂ ಮಾಡುತ್ತಿದ್ದರು. ಐತಿಹಾಸಿಕ, ಪೌರಾಣಿಕ, ಸಾಮಾಜಿಕ ಹೀಗೆ ಎಲ್ಲಾ ರೀತಿಯ ನಾಟಕಗಳಲ್ಲಿ ಅವರು ಪಾತ್ರಗಳನ್ನು ಮಾಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ವರ ನೋಡು ಹೆಣ್ಣು ಕೊಡು, ಬದುಕು ಬಂಗಾರವಾಯಿತು ಜೊತೆಗೆ ಮದಕರಿ ನಾಯಕ ಎಚ್‌ ಎಂ ನಾಯಕ ಮತ್ತು ತಿಪ್ಪೇರುದ್ರಸ್ವಾಮಿ ಮಹಾತ್ಮೆ ಹೀಗೆ ಹಲವು ಪ್ರಮುಖ ನಾಟಕಗಳನ್ನು ಅವರು ಮಾಡಿದ್ದಾರೆ. ತಿಪ್ಪೇರುದ್ರಸ್ವಾಮಿಗೆ ಸೌಮ್ಯ ಪಾತ್ರ ಬೇಕು, ಮದಕರಿ ನಾಯಕ ಪಾತ್ರಕ್ಕೆ ವೀರಾವೇಷ ಬೇಕು. ಇವರ ಇನ್ನೊಂದು ಸಾಮಾಜಿಕ ನಾಟಕ ನೋಡಿದರೆ, ಇವರೇನಾ ಜಯಕುಮಾರ್‌ ಎಂದು ಸಂದೇಹ ಬರುತ್ತಿತ್ತು. ನಾವು ಪ್ರೀತಿಯಿಂದ ಜಯಣ್ಣ ಜಯಣ್ಣ ಎಂದು ಕರಿಯುತ್ತಿದ್ದೆವು.”

“ಹವ್ಯಾಸಿಗಳು, ವಿಶ್ಲೇಷಕರು ವೃತ್ತಿ ರಂಗಭುಮಿಯ ಬಗ್ಗೆ ತಾತ್ಸಾರದ ಮನೋಭಾವನೆ ತಾಳಿದ್ದಾರೆ. ಅದಕ್ಕೆ ಕಾರಣ ಇತ್ತೀಚಿನ 20-25 ವರ್ಷಗಳಲ್ಲಿ ರಂಗಭುಮಿ ಅಶ್ಲೀಲ ಸಂಭಾಷಣೆ ಹಾಗೂ ಹಾಸ್ಯಕ್ಕೆ ಸೀಮಿತವಾಗಿದೆ. ಇದರ ಹಿಂದೆಯೇ ಜಯಕುಮಾರ್‌ ಅವರು ರಂಗಭೂಮಿಗೆ ಸಾಕಷ್ಟು ಕೊಡುಗೆ ನೀಡಿದ್ದರು. ಸ್ವಾತಂತ್ರ್ಯೋತ್ಸವಕ್ಕೆ, ಏಕೀಕರಣಕ್ಕೆ, ಪೌರಾಣಿಕ ನಾಟಕಗಳನ್ನು ಜನಪ್ರಿಯಗೊಳಿಸಿದ್ದು ಈ ಎಲ್ಲಾ ಹಿನ್ನೆಲೆಯಿಂದ ಬಂದವರು ಜಯಕುಮಾರ್‌ ಅವರು.”

“ಡಾ. ರಾಜ್‌ಕುಮಾರ್‌ ಅವರನ್ನು ಅನುಕರಿಸುವುದರಲ್ಲಿ ಎಷ್ಟೇ ಜನರು ಪರಿಣಿತಿ ಹೊಂದಿದ್ದರೂ, ಜಯಕುಮಾರ್‌ ಅವರು ಪ್ರಸಿದ್ದಿ ಪಡೆದಿದ್ದು ತಮ್ಮ ಸ್ವಂತಿಕೆಯಿಂದ. ಅವರು ಯಾವುದಕ್ಕೂ ಸೀಮಿತವಾಗಿರಲಿಲ್ಲ. ಅದಕ್ಕೆ ಅವರು ದೊಡ್ಡ ನಟರಾದರು. ಎಲ್ಲಾ ರೀತಿಯ ಪಾತ್ರಗಳನ್ನೂ ಮಾಡಿದ್ದಾರೆ. ಇವರ ಅಭಿನಯದಲ್ಲಿ ಅಬ್ಬರವಿಲ್ಲ. ಹಿತಮಿತವಾದ ಅಭಿನಯದಿಂದಲೇ ದೊಡ್ಡನಟರಾಗಿ ಬೆಳೆದವರು,” ಎಂದು ಹೇಳಿದ್ದಾರೆ.

ಗುಬ್ಬಿ ಕಂಪನಿ, ಕೆಬಿಆರ್‌ ಕಂಪನಿ, ಕುಮಾರೇಶ್ವರ ನಾಟಕ ಸಂಘ, ಶ್ರೀ ಶೈಲ ಮಲ್ಲಿಕಾರ್ಜುನ ನಾಟ್ಯ ಸಂಘ, ಕರ್ನಾಟಕ ಕಲಾ ವೈಭವ ಸಂಘ, ಸಂಗಮೇಶ್ವರ ನಾಟಕ ಸಂಘಗಳ ಹಲವಾರು ನಾಟಕಗಳಲ್ಲಿ ಜಯಕುಮಾರ್ ಅಭಿನಯಿಸಿದ್ದಾರೆ. ಪೊಲೀಸನ ಮಗಳು, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಮಹಾತ್ಮೆ, ಮದಕರಿನಾಯಕ, ಮುದುಕನ ಮದುವೆ, ಟಿಪ್ಪು ಸುಲ್ತಾನ, ಗೋಮುಖ ವ್ಯಾಘ್ರ, ರಾಷ್ಟ್ರವೀರ ಎಚ್ಚಮ್ಮನಾಯಕ ಅವರಿಗೆ ಜನಪ್ರಿಯತೆ ತಂದುಕೊಟ್ಟ ನಾಟಕಗಳು.

ತಾಯಿಗೊಬ್ಬ ಕರ್ಣ, ಸತ್ಯನಾರಾಯಣ ಪೂಜಾಫಲ, ಸಾಂಗ್ಲಿಯಾನ-3, ಜನುಮದ ಜೋಡಿ, ಕಿಟ್ಟಿ, ಜಾಕಿ, ರಾಜ, ತಾಯಿ, ಶಬರಿ, ಮರಣದಂಡನೆ ಸೇರಿದಂತೆ 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಂಕ್ರಾಂತಿ, ಮಹಾಮಾಯೆ, ಅಪ್ಪ, ಕೆಳದಿ ಚನ್ನಮ್ಮ, ಭಾಗೀರಥಿ, ಶ್ರೀ ರಾಘವೇಂದ್ರ ವೈಭವ, ಪಾ.ಪ.ಪಾಂಡು, ಶ್ರೀ ಕಲಾಭೈರವ ಮಹಾತ್ಮೆ ಸೇರಿದಂತೆ 20ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಸುವರ್ಣ ಅಕಾಡೆಮಿ ಪ್ರಶಸ್ತಿ, ವರದಪ್ಪ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

Tags: ಕೊಡಗನೂರು ಜಯಕುಮಾರ್ಡಾ. ರಾಜ್‌ಕುಮಾರ್‌
Previous Post

ಉತ್ತರಪ್ರದೇಶದಲ್ಲಿ ಯೋಗಿ ಕಟ್ಟುತ್ತಿರುವ ‘ರಾಮರಾಜ್ಯ’ದ ಕರಾಳ ಇತಿಹಾಸ

Next Post

ಕರ್ನಾಟಕ: 9993 ಹೊಸ ಕರೋನಾ ಪ್ರಕರಣಗಳು ಪತ್ತೆ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಕರ್ನಾಟಕ: 9993 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ: 9993 ಹೊಸ ಕರೋನಾ ಪ್ರಕರಣಗಳು ಪತ್ತೆ

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada