ಕಾಂಗ್ರೆಸ್ ನ ರಾಹುಲ್ ಗಾಂಧಿ ಇಂದು ರಾಜಸ್ಥಾನದಲ್ಲಿ ನಡೆದ ಘಟನೆಗಳ ಬಗ್ಗೆ ಬಿಜೆಪಿ ವಿರುದ್ಧ ಜನರನ್ನು ಸಜ್ಜುಗೊಳಿಸಲು ಪ್ರಯತ್ನಿಸುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. #SpeakUpForDemocracy ಎಂಬ ಹ್ಯಾಶ್ಟ್ಯಾಗ್ ಬಳಸಿ, “ಪ್ರಜಾಪ್ರಭುತ್ವಕ್ಕಾಗಿ ಒಗ್ಗೂಡಿಸಿ ಮತ್ತು ಧ್ವನಿ ಎತ್ತಬೇಕು” ಎಂದು ಜನರಿಗೆ ಕರೆ ನೀಡಿದ್ದಾರೆ.
ಅಶೋಕ್ ಗೆಹ್ಲೋಟ್ ಸರ್ಕಾರವು ಉಳಿಯಲು ಹೆಣಗಾಡುತ್ತಿರುವ ರಾಜಸ್ಥಾನದ ಪರಿಸ್ಥಿತಿ ಕುರಿತು ಕಾಂಗ್ರೆಸ್ ಸೋಮವಾರ ದೇಶಾದ್ಯಂತ ಪ್ರತಿಭಟನೆ ನಡೆಸಲು ಯೋಜಿಸುತ್ತಿದೆ. ಅದರಂತೆ ಟ್ವಿಟರ್ನಲ್ಲಿ #SpeakUpForDemocracy ಎಂಬ ಆಂದೋಲನ ಶುರುವಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ, ಆಪರೇಶನ್ ಕಮಲ ವಿರೋಧಿಸುವ ಸಾಮಾಜಿಕ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡು ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ.
ಇನ್ನು #भारत_के_कण_कण_में_राम ಎಂಬ ಹ್ಯಾಷ್ಟ್ಯಾಗ್ ಎರಡನೇ ಸ್ಥಾನ ಪಡೆದುಕೊಂಡಿದೆ. ರಾಮ ಮಂದಿರದ ಭೂಮಿಪೂಜೆ ಸನ್ನಿಹಿತವಾಗಿರುವ ಹಿನ್ನಲೆಯಲ್ಲಿ ರಾಮಭಕ್ತರು ರಾಮನಾಮವನ್ನು ಟ್ವಿಟರ್ ಟ್ರೆಂಡ್ ಮಾಡುತ್ತಿದ್ದಾರೆ.